Homeಕರ್ನಾಟಕಎಫ್‌ಐಆರ್ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಹೆಚ್‌ಡಿಕೆ, ನಿಖಿಲ್

ಎಫ್‌ಐಆರ್ ರದ್ದುಕೋರಿ ಹೈಕೋರ್ಟ್ ಮೊರೆ ಹೋದ ಹೆಚ್‌ಡಿಕೆ, ನಿಖಿಲ್

- Advertisement -
- Advertisement -

ಲೋಕಾಯುಕ್ತ ಎಸ್‌ಐಟಿ ವಿಭಾಗದ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ಅವರು ನೀಡಿರುವ ದೂರು ಆಧರಿಸಿ ದಾಖಲಿಸಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ ಶಾಸಕ ಸುರೇಶ್ ಬಾಬು ಹೈಕೋರ್ಟ್ ಮೊರೆ ಹೋಗಿದ್ದಾರೆ.

ಕುಮಾರಸ್ವಾಮಿ ಹಾಗೂ ಇತರರು ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಮುಂದೆ ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಿದೆ.

ತಮ್ಮ ರಾಜಕೀಯ ಎದುರಾಳಿಗಳ ಪ್ರಚೋದನೆಗೆ ಒಳಗಾಗಿ ಚಂದ್ರಶೇಖರ್‌ ಅವರು ನಮ್ಮ ವಿರುದ್ದ ಆರೋಪ ಮಾಡಿ, ಘನತೆಗೆ ಹಾನಿ ಮಾಡಿದ್ದಾರೆ. ಹಲವು ರಾಜಕೀಯ ವಿರೋಧಿಗಳು ಚಂದ್ರಶೇಖರ್‌ ಅವರನ್ನು ಪ್ರಚೋದಿಸಿದ್ದು, ಅವರು ಬರೆದಿರುವ ಪತ್ರವನ್ನು ಪೊಲೀಸ್‌ ಇಲಾಖೆಯಲ್ಲಿ ಹಂಚಿಕೆ ಮಾಡಲಾಗಿದೆ. ಈಗ ದೂರಿನಲ್ಲಿ ಮಾಡಿರುವ ಆರೋಪಗಳು ಸೃಷ್ಟಿತವಾಗಿದ್ದು, ಎಫ್‌ಐಆರ್‌ ದಾಖಲಿಸುವ ಉದ್ದೇಶದಿಂದ ಮಾಡಲಾಗಿದೆ. ಹೀಗಾಗಿ, ಅದನ್ನು ವಜಾ ಮಾಡಬೇಕು ಎಂದು ಕುಮಾರಸ್ವಾಮಿ ಮತ್ತು ಇತರರು ಕೋರಿದ್ದಾರೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಕುಮಾರಸ್ವಾಮಿ ನನ್ನ ವಿರುದ್ದ ಸುಳ್ಳು ಹಾಗೂ ದುರುದ್ದೇಶಪೂರಿತ ಆರೋಪಗಳನ್ನು ಮಾಡಿ, ಬೆದರಿಕೆ ಹಾಕಿದ್ದಾರೆ. ಸುಳ್ಳು ವೈದ್ಯಕೀಯ ದಾಖಲಾತಿಯನ್ನು ಪಡೆದು ಕರ್ನಾಟಕ ಕೇಡರ್‌ನಲ್ಲಿ ಮುಂದುವರೆಯುತ್ತಿರುವುದಾಗಿಯೂ, ಲಂಚ ಪಡೆದಿದ್ದಾಗಿಯೂ ಆರೋಪಿಸಿದ್ದಾರೆ ಎಂದು ಚಂದ್ರಶೇಖರ್ ದೂರು ನೀಡಿದ್ದರು.

ದೂರು ಆಧರಿಸಿ ಎನ್‌ಸಿಆರ್ ದಾಖಲಿಸಿಕೊಂಡಿದ್ದ ಬೆಂಗಳೂರಿನ ಸಂಜಯ್‌ ನಗರ ಠಾಣೆ ಪೊಲೀಸರು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಆದೇಶ ಆಧರಿಸಿ, ನಿನ್ನೆ(ನ.5) ಕುಮಾರಸ್ವಾಮಿ, ನಿಖಿಲ್‌ ಮತ್ತು ಸುರೇಶ್‌ ಬಾಬು ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್‌ 224 (ಸರ್ಕಾರಿ ಅಧಿಕಾರಿಗೆ ಬೆದರಿಕೆ) ಅಡಿ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ | ಮುಡಾ ಪ್ರಕರಣ : ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...