Homeಕರ್ನಾಟಕನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

ನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

- Advertisement -
- Advertisement -

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಶಯ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ.

“ಸೊರಬ ತಾಲ್ಲೂಕಿನ ಚೆನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ” ಎಂದು ‘ವಿಜಯವಾಣಿ’ಯಲ್ಲಿ ಪ್ರಕಟವಾದ ಸುದ್ದಿಯನ್ನು ಅವರು ಹಂಚಿಕೊಂಡಿದ್ದರು.

“ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು” ಎಂದು ಹೇಳಿದ್ದರು.

“ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ” ಎಂದು ಕೋರಿದ್ದರು.

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ.  ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಗ್ರಹಿಸಿದ್ದರು.


ಇದನ್ನೂ ಓದಿರಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು


ನೀಟ್‌ ವಿರುದ್ಧ ಕುಮಾರಸ್ವಾಮಿಯವರು ಎತ್ತಿದ ಮಹತ್ವದ ಚರ್ಚೆಗೆ ಸಂಬಂಧಿಸಿದಂತೆ ವಿಜಯಕರ್ನಾಟಕ ವೆಬ್‌ಸೈಟ್‌ನಲ್ಲಿ ವರದಿ ಕೂಡ ಆಗಿದೆ. “ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ವೈದ್ಯೆಯಾಗುವ ಬಯಕೆಗೆ ತಕ್ಕಂತೆ ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಕನ್ನಡಿಗರನ್ನು ಅವಕಾಶ ವಂಚಿತರನ್ನಾಗಿ ಮಾಡುತ್ತಿರುವ ನೀಟ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಮಾಡಿ, ಘಟನೆ ಬಗ್ಗೆ ಬೇಸರ ಹೊರಹಾಕಿದ್ದಾರೆ” ಎಂದು ವರದಿ ಹೇಳಿದೆ.

ನೀಟ್ ವಿರುದ್ಧ ದನಿ ಎತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಸಂಗತಿ. ನೀಟ್‌ ಬಡ, ಮಧ್ಯಮ ವರ್ಗದ ಪ್ರತಿಭೆಗಳನ್ನು ಆತಂಕಕ್ಕೆ ತಳ್ಳುತ್ತಿರುವುದು ನಿಜ. ಹೀಗಾಗಿಯೇ ತಮಿಳುನಾಡು ಸರ್ಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿರುವುದಕ್ಕೆ ಪ್ರಜ್ಞಾವಂತ ವಲಯದಿಂದ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. ಇಷ್ಟೊಂದು ಮಹತ್ವದ ಸಂಗತಿಯ ಕುರಿತು ಟ್ವೀಟ್ ಮಾಡಿದ ಕುಮಾರಸ್ವಾಮಿಯವರು ಡಿಲೀಟ್ ಮಾಡುವ ಪ್ರಮೇಯವೇನಿತ್ತು ಎಂಬ ಅನುಮಾನಗಳು ಮೂಡುತ್ತವೆ.

ಈ ಕುರಿತು ಫ್ಯಾಕ್ಟ್‌ ಚೆಕ್‌ ಮಾಡಿದಾಗ, ಕುಮಾರಸ್ವಾಮಿಯವರು ಹಂಚಿಕೊಂಡಿದ್ದ ಸುದ್ದಿಯು 2020ನೇ ಇಸವಿಯದ್ದಾಗಿದ್ದು, ಹೀಗಾಗಿ ಅವರು ಟ್ವೀಟ್‌ಗಳನ್ನು ಅಳಿಸಿ ಹಾಕಿದ್ದಾರೆಂದು ಭಾವಿಸಬಹುದಾಗಿದೆ.

ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿ ತುಣುಕು ‘ವಿಜಯವಾಣಿ’ ವೆಬ್‌ಸೈಟ್‌ದಾಗಿತ್ತು. ವಾಟ್ಸ್‌ಆಪ್‌ನಲ್ಲಿ ಬಂದ ಟ್ವಿಟರ್‌ ಲಿಂಕ್‌ನಲ್ಲಿ ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿಯ ಸಾಲುಗಳನ್ನು ಗುರುತಿಸಬಹುದು.

“ಸಂಕಲ್ಪಗೆ 5ನೇ ತರಗತಿಯಲ್ಲಿದ್ದಾಗ ಹೃದಯಾಘಾತವಾಗಿ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಂಡಿದ್ದಳು. ಅಂದಿನಿಂದ ಡಾಕ್ಟರ್‌ ಆಗಬೇಕು ಎಂದು ಕನಸು ಕಟ್ಟಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ನೀಟ್‌ನಲ್ಲಿ ನಿರೀಕ್ಷಿತ ಅಂಕ ಗಳಿಸಲಾಗದ ಕಾರಣ ಸರ್ಕಾರಿ ಕೋಟಾದಲ್ಲಿ ಸೀಟು ಸಿಕ್ಕಿರಲಿಲ್ಲ..” ಎಂದು ಇರುವುದನ್ನು ಗಮನಿಸಬಹುದು.

ವಿಜಯವಾಣಿ ಸುದ್ದಿ ಜಾಲತಾಣದಲ್ಲಿ ಸುದ್ದಿಯನ್ನು ಹುಡುಕಿದಾಗ, ಈ ಮೇಲಿನ ಸಾಲುಗಳಿರುವ ಸುದ್ದಿಯು ಪತ್ತೆಯಾಯಿತು. “ಡಾಕ್ಟರ್‌ ಕನಸು ಕಟ್ಟಿದ್ದ ಯುವತಿ ಆತ್ಮಹತ್ಯೆ; ಶೇ. 96 ಅಂಕ ತೆಗೆದರೂ ಸಿಗದ ಸರ್ಕಾರಿ ಸೀಟು!’ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿದೆ. ಸುದ್ದಿ ಪ್ರಕಟವಾದ ದಿನಾಂಕವನ್ನು ಪರಿಶೀಲಿಸಿದಾಗ, 2020ರ ಡಿಸೆಂಬರ್‌‌ 28 ಎಂದಿರುವುದನ್ನು ಗಮನಿಸಬಹುದು.

ಹಳೆಯ ಸುದ್ದಿ ಎಂದು ಗಮನಿಸದೆ ನೀಟ್ ರದ್ದು ಪ್ರಸ್ತಾಪವನ್ನು ಮಾಡಿದ್ದರಿಂದ ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಡಿಲೀಟ್ ಮಾಡಿರಬಹುದು ಎಂದು ಊಹಿಸಬಹುದು. ಆದರೆ ನೀಟ್ ವಿರುದ್ಧ ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಮಹತ್ವದ್ದು. ನೀಟ್‌ ಶೈಕ್ಷಣಿಕ ವ್ಯವಸ್ಥೆಗೆ ಅಪಾಯಕಾರಿ. ಯುವತಿಯ ಆತ್ಮಹತ್ಯೆ ಹಳೆಯ ಸುದ್ದಿ ಎಂಬುದನ್ನು ಬಿಟ್ಟರೆ, ನೀಟ್‌ ಬಡ ಮಧ್ಯಮ ವಿದ್ಯಾರ್ಥಿಗಳ ಕತ್ತು ಹಿಸುಕುತ್ತಿರುವುದು ಸುಳ್ಳಲ್ಲ. ಅದರ ವಿರುದ್ಧ ಕರ್ನಾಟಕ ಸರ್ಕಾರ ತಮಿಳುನಾಡು ಸರ್ಕಾರದಂತೆಯೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುವುದು ಮಹತ್ವದ್ದಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...