Homeಕರ್ನಾಟಕನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

ನೀಟ್‌ ವಿರುದ್ಧ ಎಚ್‌ಡಿಕೆ ಸರಣಿ ಟ್ವೀಟ್‌; ನಂತರ ಡಿಲೀಟ್‌- ಕಾರಣ ಸ್ವಾರಸ್ಯಕರ!

- Advertisement -
- Advertisement -

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ. ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಶಯ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಟ್ವೀಟ್‌ಗಳನ್ನು ಡಿಲೀಟ್ ಮಾಡಿದ್ದಾರೆ.

“ಸೊರಬ ತಾಲ್ಲೂಕಿನ ಚೆನ್ನಪಟ್ಟಣ ಗ್ರಾಮದ ಸಂಕಲ್ಪ ಎಂಬ ವಿದ್ಯಾರ್ಥಿನಿ ಸಾವಿಗೆ ಶರಣಾಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಹೀಗೆ ಜೀವವನ್ನು ಕೊನೆ ಮಾಡಿಕೊಂಡ ಆ ಯುವತಿಯ ದುರ್ಮರಣ ಎಲ್ಲರಿಗೂ ಪಾಠ ಆಗಬೇಕಿದೆ” ಎಂದು ‘ವಿಜಯವಾಣಿ’ಯಲ್ಲಿ ಪ್ರಕಟವಾದ ಸುದ್ದಿಯನ್ನು ಅವರು ಹಂಚಿಕೊಂಡಿದ್ದರು.

“ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಹಾಗೂ ಉನ್ನತ ಶಿಕ್ಷಣ ಬಡ, ಸಾಮಾನ್ಯ ಮಕ್ಕಳಿಗೂ ಸಿಗಬೇಕು ಎನ್ನುವ ಕಾಳಜಿಯ ಜತೆಗೆ, ಯಾರೇ ವಿದ್ಯಾರ್ಥಿಗಳು ಸೀಟು ಸಿಗಲಿಲ್ಲ ಎನ್ನುವ ಕಾರಣಕ್ಕೆ ಸಂಕಲ್ಪ ಅವರಂತೆ ಬದುಕನ್ನು ಕೊನೆ ಮಾಡಿಕೊಳ್ಳಬಾರದು” ಎಂದು ಹೇಳಿದ್ದರು.

“ಅವಕಾಶಗಳು ಆಕಾಶದಷ್ಟು ಇವೆ. ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಮಾರ್ಗಗಳು ಕೂಡ ಇವೆ. ದೃಢಸಂಕಲ್ಪದೊಂದಿಗೆ ಭವಿಷ್ಯ ಕಂಡುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸಂಕಲ್ಪ ಅವರಂತೆ ಜೀವ ತೆಗೆದುಕೊಳ್ಳಬಾರದು. ಇದು ನನ್ನ ಕಳಕಳಿಯ ಮನವಿ” ಎಂದು ಕೋರಿದ್ದರು.

“ನಮ್ಮ ಮಕ್ಕಳ ಜೀವದ ಜತೆ ಚೆಲ್ಲಾಟ ಆಡುತ್ತಿರುವ ನೀಟ್ ಪರೀಕ್ಷೆ ಬಗ್ಗೆ ನಾವು ಮರು ಆಲೋಚನೆ ಮಾಡಬೇಕಿದೆ. ಈಗಾಗಲೇ ತಮಿಳುನಾಡು ಸರಕಾರ ನೀಟ್ ವಿರುದ್ಧ ನಿರ್ಣಯ ಕೈಗೊಂಡಿದೆ. ನಮ್ಮ ಸರಕಾರವೂ ಇಂತಹ ನಿಲುವಿಗೆ ಬರಲಿ.  ರಾಜ್ಯದಲ್ಲಿ ಇನ್ನಷ್ಟು ವಿದ್ಯಾರ್ಥಿಗಳು ಸಂಕಲ್ಪ ಅವರ ಹಾದಿ ಹಿಡಿಯುವುದನ್ನು ತಪ್ಪಿಸಬೇಕು” ಎಂದು ಆಗ್ರಹಿಸಿದ್ದರು.


ಇದನ್ನೂ ಓದಿರಿ: ವಿವಾಹೇತರ ಸಂಬಂಧ ಆರೋಪ; ಮಹಿಳೆಯನ್ನು ಕಂಬಕ್ಕೆ ಕಟ್ಟಿ ಚಿತ್ರಹಿಂಸೆ- ವಿಡಿಯೊ ವೈರಲ್‌, ಪ್ರಕರಣ ದಾಖಲು


ನೀಟ್‌ ವಿರುದ್ಧ ಕುಮಾರಸ್ವಾಮಿಯವರು ಎತ್ತಿದ ಮಹತ್ವದ ಚರ್ಚೆಗೆ ಸಂಬಂಧಿಸಿದಂತೆ ವಿಜಯಕರ್ನಾಟಕ ವೆಬ್‌ಸೈಟ್‌ನಲ್ಲಿ ವರದಿ ಕೂಡ ಆಗಿದೆ. “ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ವೈದ್ಯೆಯಾಗುವ ಬಯಕೆಗೆ ತಕ್ಕಂತೆ ಸರ್ಕಾರಿ ಕೋಟಾದಲ್ಲಿ ಎಂಬಿಬಿಎಸ್ ಸೀಟು ಪಡೆದುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಕನ್ನಡಿಗರನ್ನು ಅವಕಾಶ ವಂಚಿತರನ್ನಾಗಿ ಮಾಡುತ್ತಿರುವ ನೀಟ್‌ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಮಾಡಿ, ಘಟನೆ ಬಗ್ಗೆ ಬೇಸರ ಹೊರಹಾಕಿದ್ದಾರೆ” ಎಂದು ವರದಿ ಹೇಳಿದೆ.

ನೀಟ್ ವಿರುದ್ಧ ದನಿ ಎತ್ತಿರುವುದು ನಿಜಕ್ಕೂ ಸ್ವಾಗತಾರ್ಹ ಸಂಗತಿ. ನೀಟ್‌ ಬಡ, ಮಧ್ಯಮ ವರ್ಗದ ಪ್ರತಿಭೆಗಳನ್ನು ಆತಂಕಕ್ಕೆ ತಳ್ಳುತ್ತಿರುವುದು ನಿಜ. ಹೀಗಾಗಿಯೇ ತಮಿಳುನಾಡು ಸರ್ಕಾರ ಮಹತ್ವದ ನಿರ್ಣಯವನ್ನು ಕೈಗೊಂಡಿರುವುದಕ್ಕೆ ಪ್ರಜ್ಞಾವಂತ ವಲಯದಿಂದ ಪ್ರಶಂಸೆಯ ಮಹಾಪೂರವೇ ಹರಿದುಬಂದಿದೆ. ಇಷ್ಟೊಂದು ಮಹತ್ವದ ಸಂಗತಿಯ ಕುರಿತು ಟ್ವೀಟ್ ಮಾಡಿದ ಕುಮಾರಸ್ವಾಮಿಯವರು ಡಿಲೀಟ್ ಮಾಡುವ ಪ್ರಮೇಯವೇನಿತ್ತು ಎಂಬ ಅನುಮಾನಗಳು ಮೂಡುತ್ತವೆ.

ಈ ಕುರಿತು ಫ್ಯಾಕ್ಟ್‌ ಚೆಕ್‌ ಮಾಡಿದಾಗ, ಕುಮಾರಸ್ವಾಮಿಯವರು ಹಂಚಿಕೊಂಡಿದ್ದ ಸುದ್ದಿಯು 2020ನೇ ಇಸವಿಯದ್ದಾಗಿದ್ದು, ಹೀಗಾಗಿ ಅವರು ಟ್ವೀಟ್‌ಗಳನ್ನು ಅಳಿಸಿ ಹಾಕಿದ್ದಾರೆಂದು ಭಾವಿಸಬಹುದಾಗಿದೆ.

ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿ ತುಣುಕು ‘ವಿಜಯವಾಣಿ’ ವೆಬ್‌ಸೈಟ್‌ದಾಗಿತ್ತು. ವಾಟ್ಸ್‌ಆಪ್‌ನಲ್ಲಿ ಬಂದ ಟ್ವಿಟರ್‌ ಲಿಂಕ್‌ನಲ್ಲಿ ಕುಮಾರಸ್ವಾಮಿಯವರು ಹಂಚಿಕೊಂಡಿರುವ ಸುದ್ದಿಯ ಸಾಲುಗಳನ್ನು ಗುರುತಿಸಬಹುದು.

“ಸಂಕಲ್ಪಗೆ 5ನೇ ತರಗತಿಯಲ್ಲಿದ್ದಾಗ ಹೃದಯಾಘಾತವಾಗಿ ಶಸ್ತ್ರಚಿಕಿತ್ಸೆಗೊಳಗಾಗಿ ಚೇತರಿಸಿಕೊಂಡಿದ್ದಳು. ಅಂದಿನಿಂದ ಡಾಕ್ಟರ್‌ ಆಗಬೇಕು ಎಂದು ಕನಸು ಕಟ್ಟಿಕೊಂಡಿದ್ದಳು. ದ್ವಿತೀಯ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ್ದರೂ ನೀಟ್‌ನಲ್ಲಿ ನಿರೀಕ್ಷಿತ ಅಂಕ ಗಳಿಸಲಾಗದ ಕಾರಣ ಸರ್ಕಾರಿ ಕೋಟಾದಲ್ಲಿ ಸೀಟು ಸಿಕ್ಕಿರಲಿಲ್ಲ..” ಎಂದು ಇರುವುದನ್ನು ಗಮನಿಸಬಹುದು.

ವಿಜಯವಾಣಿ ಸುದ್ದಿ ಜಾಲತಾಣದಲ್ಲಿ ಸುದ್ದಿಯನ್ನು ಹುಡುಕಿದಾಗ, ಈ ಮೇಲಿನ ಸಾಲುಗಳಿರುವ ಸುದ್ದಿಯು ಪತ್ತೆಯಾಯಿತು. “ಡಾಕ್ಟರ್‌ ಕನಸು ಕಟ್ಟಿದ್ದ ಯುವತಿ ಆತ್ಮಹತ್ಯೆ; ಶೇ. 96 ಅಂಕ ತೆಗೆದರೂ ಸಿಗದ ಸರ್ಕಾರಿ ಸೀಟು!’ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿದೆ. ಸುದ್ದಿ ಪ್ರಕಟವಾದ ದಿನಾಂಕವನ್ನು ಪರಿಶೀಲಿಸಿದಾಗ, 2020ರ ಡಿಸೆಂಬರ್‌‌ 28 ಎಂದಿರುವುದನ್ನು ಗಮನಿಸಬಹುದು.

ಹಳೆಯ ಸುದ್ದಿ ಎಂದು ಗಮನಿಸದೆ ನೀಟ್ ರದ್ದು ಪ್ರಸ್ತಾಪವನ್ನು ಮಾಡಿದ್ದರಿಂದ ಕುಮಾರಸ್ವಾಮಿಯವರು ಸರಣಿ ಟ್ವೀಟ್‌ಗಳನ್ನು ಡಿಲೀಟ್ ಮಾಡಿರಬಹುದು ಎಂದು ಊಹಿಸಬಹುದು. ಆದರೆ ನೀಟ್ ವಿರುದ್ಧ ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆ ಮಹತ್ವದ್ದು. ನೀಟ್‌ ಶೈಕ್ಷಣಿಕ ವ್ಯವಸ್ಥೆಗೆ ಅಪಾಯಕಾರಿ. ಯುವತಿಯ ಆತ್ಮಹತ್ಯೆ ಹಳೆಯ ಸುದ್ದಿ ಎಂಬುದನ್ನು ಬಿಟ್ಟರೆ, ನೀಟ್‌ ಬಡ ಮಧ್ಯಮ ವಿದ್ಯಾರ್ಥಿಗಳ ಕತ್ತು ಹಿಸುಕುತ್ತಿರುವುದು ಸುಳ್ಳಲ್ಲ. ಅದರ ವಿರುದ್ಧ ಕರ್ನಾಟಕ ಸರ್ಕಾರ ತಮಿಳುನಾಡು ಸರ್ಕಾರದಂತೆಯೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಆಗ್ರಹಿಸುವುದು ಮಹತ್ವದ್ದಾಗಿದೆ.


ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್: ಕೇರಳಲ್ಲಿ RSS ಕಾರ್ಯಕರ್ತನನ್ನು ಕೊಲ್ಲುತ್ತಿರುವ ವಿಡಿಯೊ ಎಂದು ಸುಳ್ಳು ಹರಡಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...