Homeಕರ್ನಾಟಕಸ್ವಕ್ಷೇತ್ರದಲ್ಲೇ ಹೆಚ್‌ಡಿಕೆಗೆ ಶಾಕ್!: ಮಾಜಿ ಶಾಸಕ ಸೇರಿ 300ಕ್ಕೂ ಹೆಚ್ಚು JDS ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಸ್ವಕ್ಷೇತ್ರದಲ್ಲೇ ಹೆಚ್‌ಡಿಕೆಗೆ ಶಾಕ್!: ಮಾಜಿ ಶಾಸಕ ಸೇರಿ 300ಕ್ಕೂ ಹೆಚ್ಚು JDS ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿವೆ. ಇದೀಗ ಜೆಡಿಎಸ್ ಪಕ್ಷ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎನ ಭಾಗವಾಗಿದೆ. ಆದರೆ, ಮೈತ್ರಿ ಬೆನ್ನಲ್ಲಿಯೇ ಜೆಡಿಎಸ್‌ನಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಸೋಮವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬರಮಾಡಿಕೊಂಡರು.

ಆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್‌, ”ಬಿಜೆಪಿ – ಜೆಡಿಎಸ್‌ನ ಮೈತ್ರಿಯನ್ನು ಸಹಿಸಿಕೊಳ್ಳಲು ಆಗದೇ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮೆಲ್ಲರಿಗೂ ಶುಭವಾಗಲಿ” ಎಂದರು.

”ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು?” ಎಂದು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಡಿಕೆಶಿ  ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...