Homeಕರ್ನಾಟಕಸ್ವಕ್ಷೇತ್ರದಲ್ಲೇ ಹೆಚ್‌ಡಿಕೆಗೆ ಶಾಕ್!: ಮಾಜಿ ಶಾಸಕ ಸೇರಿ 300ಕ್ಕೂ ಹೆಚ್ಚು JDS ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಸ್ವಕ್ಷೇತ್ರದಲ್ಲೇ ಹೆಚ್‌ಡಿಕೆಗೆ ಶಾಕ್!: ಮಾಜಿ ಶಾಸಕ ಸೇರಿ 300ಕ್ಕೂ ಹೆಚ್ಚು JDS ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿವೆ. ಇದೀಗ ಜೆಡಿಎಸ್ ಪಕ್ಷ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎನ ಭಾಗವಾಗಿದೆ. ಆದರೆ, ಮೈತ್ರಿ ಬೆನ್ನಲ್ಲಿಯೇ ಜೆಡಿಎಸ್‌ನಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಮಾಜಿ ಶಾಸಕ ಎಂಸಿ ಅಶ್ವಥ್ ಹಾಗೂ ಚನ್ನಪಟ್ಟಣದ 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಸೋಮವಾರ ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ಪಕ್ಷಕ್ಕೆ ಸೇರ್ಪಡೆಗೊಂಡವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಬರಮಾಡಿಕೊಂಡರು.

ಆ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್‌, ”ಬಿಜೆಪಿ – ಜೆಡಿಎಸ್‌ನ ಮೈತ್ರಿಯನ್ನು ಸಹಿಸಿಕೊಳ್ಳಲು ಆಗದೇ ರಾಜ್ಯದ ವಿವಿಧ ಭಾಗದಿಂದ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು, ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತಿದ್ದಾರೆ. ಪ್ರತಿಯೊಂದು ವರ್ಗದ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜನಪರ ಸರ್ಕಾರದ ಕಾರ್ಯಕ್ರಮಗಳನ್ನು ಮೆಚ್ಚಿ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ನಿಮ್ಮೆಲ್ಲರಿಗೂ ಶುಭವಾಗಲಿ” ಎಂದರು.

”ಪೂಜನೀಯ ದೇವೇಗೌಡರೇ, ನಿಮ್ಮ ಸುಪುತ್ರರು ಪದೇ ಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು?” ಎಂದು ಜೆಡಿಎಸ್ ವರಿಷ್ಠ ದೇವೇಗೌಡರನ್ನು ಡಿಕೆಶಿ  ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: BJP-JDS ಮೈತ್ರಿ ಮುನಿಸು: ಸಿಎಂ ಇಬ್ರಾಹಿಂ ಮತ್ತೆ ಕಾಂಗ್ರೆಸ್‌ಗೆ ಮರಳುವ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...

ತೀವ್ರ ವಿರೋಧಗಳ ನಡುವೆ ಗಣರಾಜ್ಯೋತ್ಸವ ಆಚರಣೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರ್ಧರಿಸಿದ ಕೇಂದ್ರ ಸರ್ಕಾರ 

ಗಣರಾಜ್ಯೋತ್ಸವದ ಸಂದರ್ಭದಲ್ಲಿ 'ವಂದೇ ಮಾತರಂ' ಗೀತೆಯನ್ನು ಪ್ರಧಾನವಾಗಿ ಹಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಯುರೋಪಿಯನ್ ಒಕ್ಕೂಟದ ನಾಯಕರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಮತ್ತು ಆಂಟೋನಿಯೊ ಕೋಸ್ಟಾ ಮುಂದಿನ ತಿಂಗಳು ಭಾರತಕ್ಕೆ ಆಗಮಿಸುವ...

ಅಣು ವಿದ್ಯುತ್ ಯೋಜನೆ ಕುರಿತು ಯುಪಿ ಸರ್ಕಾರದೊಂದಿಗೆ ಅದಾನಿ ಗ್ರೂಪ್ ಮಾತುಕತೆ: ವರದಿ

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, ‘ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿದೆ. ಈ ಬೆನ್ನಲ್ಲೇ...

ಅನಧಿಕೃತ ಬುದ್ಧಿಮಾಂದ್ಯ ಶಾಲೆಯಲ್ಲಿ ಬುದ್ಧಿಮಾಂದ್ಯ ಬಾಲಕನ ಮೇಲೆ ಅಮಾನವೀಯ ಹಲ್ಲೆ: ದಂಪತಿಯನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ: ಬಾಗಲಕೋಟೆಯ ಅನಧಿಕೃತ ದಿವ್ಯಜ್ಯೋತಿ ಬುದ್ಧಿಮಾಂದ್ಯ ಶಾಲೆಯಲ್ಲಿ ಶಿಕ್ಷಕ ದಂಪತಿ ಬುದ್ಧಿಮಾಂದ್ಯನ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದು, ವೀಡಿಯೋ ವೈರಲ್ ಆದ ಬೆನ್ನಲ್ಲೇ ಘಟನೆಗೆ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಮುಧೋಳ ತಾಲೂಕಿನ ಮಂಟೂರು ಗ್ರಾಮದ 16...

ಜೆಫ್ರಿ ಎಪ್‌ಸ್ಟೀನ್ ಫೈಲ್ಸ್: ನ್ಯಾಯಾಂಗ ಇಲಾಖೆಯ ವೆಬ್ ಪುಟದಿಂದ ಟ್ರಂಪ್ ಫೋಟೋ ಸೇರಿದಂತೆ 16 ದಾಖಲೆಗಳು ಕಣ್ಮರೆ 

ನ್ಯೂಯಾರ್ಕ್: ಜೆಫ್ರಿ ಎಪ್‌ಸ್ಟೀನ್ ಗೆ ಸಂಬಂಧಿಸಿದ ದಾಖಲೆಗಳಿರುವ ಅಮೆರಿಕದ ನ್ಯಾಯ ಇಲಾಖೆಯ (Justice Department) ಸಾರ್ವಜನಿಕ ವೆಬ್‌ಪುಟದಿಂದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋಟೋ ಸೇರಿದಂತೆ ಕನಿಷ್ಟ 16 ದಾಖಲೆಗಳು ನಾಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಅಪ್ರಾಪ್ತ...

ಬಾಂಗ್ಲಾದೇಶದಲ್ಲಿ ಮುಂದುವರಿದ ಹಿಂಸಾಚಾರ| ಬಿಎನ್‌ಪಿ ನಾಯಕನ ಮನೆಗೆ ಬೆಂಕಿ : 7 ವರ್ಷದ ಮಗಳು ಸಜೀವ ದಹನ

ವಿದ್ಯಾರ್ಥಿ ನಾಯಕ ಹಾಗೂ ಸ್ವತಂತ್ರ ರಾಜಕಾರಣಿ ಷರೀಫ್ ಉಸ್ಮಾನ್ ಹಾದಿ ಅವರ ಸಾವಿನ ಬಳಿಕ ಬಾಂಗ್ಲಾ ದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾತ್ಮಕ ಪ್ರತಿಭಟನೆಯ ಮೂರನೇ ದಿನವಾದ ಶನಿವಾರ, ಪ್ರತಿಭಟನಾಕಾರರು ಬಾಂಗ್ಲಾದೇಶ್...

ದಕ್ಷಿಣ ಆಫ್ರಿಕಾದಲ್ಲಿ ಸಾರ್ವಜನಿಕರ ಮೇಲೆ ದಾಳಿಕೋರರು ನಡೆಸಿದ ಗುಂಡಿನ ದಾಳಿಯಲ್ಲಿ 9 ಜನರ ಸಾವು 

ಜೋಹಾನ್ಸ್‌ಬರ್ಗ್‌ನ ಹೊರಗಿನ ಬಾರ್‌ನಲ್ಲಿ ಭಾನುವಾರ ಮುಂಜಾನೆ ಅಪರಿಚಿತ ಬಂದೂಕುಧಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಗುಂಡಿನ ದಾಳಿ...

ಬೆಂಗಳೂರು : ಜಿಬಿಎ ಅಧಿಕಾರಿಗಳಿಂದ 200ರಷ್ಟು ಮನೆಗಳ ನೆಲಸಮ : ಬೀದಿಗೆ ಬಿದ್ದ ಬಡ ಜನರು

ಅತಿಕ್ರಮಣ ಆರೋಪದ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳು ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕೋಗಿಲು ಬಂಡೆ ಬಳಿಯ 5 ಎಕರೆ ಜಾಗದಲ್ಲಿದ್ದ ಸುಮಾರು 200ರಷ್ಟು ಮನೆಗಳನ್ನು ಶನಿವಾರ (ಡಿ.20)...