Homeಮುಖಪುಟದೇಶಕ್ಕೆ ಮೋದಿ, ದೆಹಲಿಗೆ ಕೇಜ್ರಿವಾಲ್ ಬೇಕು ಎಂದು ದೆಹಲಿ ತುಂಬಾ ಬ್ಯಾನರ್‌ ಹಾಕಿದ RSS ಕಾರ್ಯಕರ್ತ..!

ದೇಶಕ್ಕೆ ಮೋದಿ, ದೆಹಲಿಗೆ ಕೇಜ್ರಿವಾಲ್ ಬೇಕು ಎಂದು ದೆಹಲಿ ತುಂಬಾ ಬ್ಯಾನರ್‌ ಹಾಕಿದ RSS ಕಾರ್ಯಕರ್ತ..!

- Advertisement -
- Advertisement -

ದೇಶ್ ಮಾಂಗೆ ನರೇಂದ್ರ ಮೋದಿ, ದಿಲ್ಲಿ ಮಾಂಗೆ ಕೇಜ್ರಿವಾಲ್.. ದೇಶವು ನರೇಂದ್ರ ಮೋದಿಯನ್ನು ಬಯಸುತ್ತದೆ, ದೆಹಲಿಗೆ ಕೇಜ್ರಿವಾಲ್ ಬೇಕು ಎಂಬ ಸಂದೇಶವುಳ್ಳ ಬ್ಯಾನರ್‌ಗಳು ದೆಹಲಿ ತುಂಬಾ ಆವರಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಆಶ್ಚರ್‍ಯ ಮತ್ತು ಬಿಜೆಪಿಗೆ ತಲೆಬಿಸಿ ಉಂಟುಮಾಡಿವೆ.

ತಮ್ಮನ್ನು ಸ್ವಯಂ ಸೇವಕ ಅಥವಾ ಬಿಜೆಪಿಯ ಸೈದ್ಧಾಂತಿಕ ಪೋಷಕರಾದ ಆರ್‌ಎಸ್‌ಎಸ್‌ನ ಸ್ವಯಂಸೇವಕರಾಗಿ ಗುರುತಿಸಿಕೊಳ್ಳುವ ದೀಪಕ್ ಮದನ್ ಎಂಬ ವ್ಯಕ್ತಿಯೇ ಈ ಆಶ್ಚರ್‍ಯಕ್ಕೆ ಕಾರಣವಾಗಿದ್ದಾರೆ.

“ನಾನು ಆರ್‌ಎಸ್‌ಎಸ್‌ನ ಸದಸ್ಯ ಮತ್ತು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇನೆ. ಆದರೆ ಪಕ್ಷವು ನನ್ನನ್ನು ವ್ಯಾಖ್ಯಾನಿಸುವುದಿಲ್ಲ… ನಾನು ನನಗಾಗಿ ಮಾತನಾಡುತ್ತಿದ್ದೇನೆ. ಭಾರತಕ್ಕೆ ಶ್ರೇಷ್ಠ ನಾಯಕ ಪ್ರಧಾನಿ ನರೇಂದ್ರ ಮೋದಿಯಾದರೆ, ದೆಹಲಿಗೆ ಮುಖ್ಯಮಂತ್ರಿ ಕೇಜ್ರಿವಾಲ್ ಅತಿ ಎತ್ತರದ ರಾಜಕಾರಣಿ ಎಂದು ದೀಪಕ್ ಮದನ್ ತಿಳಿಸಿದ್ದಾರೆ.

“ನಾನು ಕೇಜ್ರಿವಾಲ್ ಅವರು ದೆಹಲಿಗಾಗಿ ಮಾಡಿದ ಕೆಲಸಗಳನ್ನು ನೋಡಿದ್ದೇನೆ. ಅವರು ಆರೋಗ್ಯ ವ್ಯವಸ್ಥೆಯನ್ನು ತುಂಬಾ ಸುಧಾರಿಸಿದ್ದಾರೆ… ನಾನು ಪಾಸ್ಚಿಮ್ ವಿಹಾರದಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ನಡೆಸುತ್ತಿದ್ದು ಪ್ರತಿನಿತ್ಯ ಜನರನ್ನು ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿದ್ದೇನೆ. ಆಸ್ಪತ್ರೆಗಳು ಈಗ ನೀಡುವಂತಹ ಉತ್ತಮ ಸೌಲಭ್ಯಗಳನ್ನು ನಾನು ನೋಡಿದ್ದೇನೆ” ಎಂದು ಮದನ್ ಹೇಳಿದರು.

ಎಎಪಿ ಆಡಳಿತದ ಐದು ವರ್ಷಗಳಲ್ಲಿ ದೆಹಲಿಯಲ್ಲಿ ಶಿಕ್ಷಣವು ಗಮನಾರ್ಹವಾಗಿ ಸುಧಾರಿಸಿದೆ. ಸರ್ಕಾರಿ ಶಾಲೆಗಳು ಈಗ ಸಾಕಷ್ಟು ಉತ್ತಮವಾಗಿವೆ, ಶಿಕ್ಷಕರು ವಿದ್ಯಾರ್ಥಿಗಳನ್ನು ಚೆನ್ನಾಗಿ ಅಧ್ಯಯನ ಮಾಡಲು ಪ್ರೇರೇಪಿಸುತ್ತಾರೆ. ಹಾಗಾಗಿ ನನ್ನ ಬೆಂಬಲ ಆಮ್‌ ಆದ್ಮಿ ಪಾರ್ಟಿಗೆ ಎಂದು ಅವರು ಹೇಳಿದ್ದಾರೆ.

ಪಾಸ್ಚಿಮ್ ವಿಹಾರ್, ಜ್ವಾಲಹೇರಿ ಚೌಕ್, ಮೀರಾ ಬಾಗ್ ಮತ್ತು ಪಶ್ಚಿಮ ದೆಹಲಿಯ ಇತರ ಭಾಗಗಳಲ್ಲಿ ಈಗಾಗಲೇ ಹೋರ್ಡಿಂಗ್‌ಗಳನ್ನು ಹಾಕಲಾಗಿದ್ದು, ಶೀಘ್ರದಲ್ಲೇ ರಾಜಧಾನಿಯಾದ್ಯಂತ ಹೆಚ್ಚಿನದನ್ನು ನಿರ್ಮಿಸಲು ಅವರು ಯೋಜಿಸಿದ್ದಾರೆ.

ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಎಎಪಿ ಸದಸ್ಯ ಅಭಿಷೇಕ್ ಗುಪ್ತಾ “ದೆಹಲಿಯಲ್ಲಿ ಕೇಜ್ರಿವಾಲ್ ಗೆಲ್ಲುತ್ತಾರೆ ಎಂದು ಆರ್‌ಎಸ್‌ಎಸ್ / ಬಿಜೆಪಿ ಹೇಳುತ್ತಿರುವಾಗ, ಗಾಳಿ ಯಾವ ರೀತಿಯಲ್ಲಿ ಬೀಸುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು.” ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಅನ್ನು ನೂರಾರು ಜನರು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...