Homeಮುಖಪುಟದೇಶಕ್ಕೆ ಮೋದಿ, ದೆಹಲಿಗೆ ಕೇಜ್ರಿವಾಲ್ ಬೇಕು ಎಂದು ದೆಹಲಿ ತುಂಬಾ ಬ್ಯಾನರ್‌ ಹಾಕಿದ RSS ಕಾರ್ಯಕರ್ತ..!

ದೇಶಕ್ಕೆ ಮೋದಿ, ದೆಹಲಿಗೆ ಕೇಜ್ರಿವಾಲ್ ಬೇಕು ಎಂದು ದೆಹಲಿ ತುಂಬಾ ಬ್ಯಾನರ್‌ ಹಾಕಿದ RSS ಕಾರ್ಯಕರ್ತ..!

- Advertisement -
- Advertisement -

ದೇಶ್ ಮಾಂಗೆ ನರೇಂದ್ರ ಮೋದಿ, ದಿಲ್ಲಿ ಮಾಂಗೆ ಕೇಜ್ರಿವಾಲ್.. ದೇಶವು ನರೇಂದ್ರ ಮೋದಿಯನ್ನು ಬಯಸುತ್ತದೆ, ದೆಹಲಿಗೆ ಕೇಜ್ರಿವಾಲ್ ಬೇಕು ಎಂಬ ಸಂದೇಶವುಳ್ಳ ಬ್ಯಾನರ್‌ಗಳು ದೆಹಲಿ ತುಂಬಾ ಆವರಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಆಶ್ಚರ್‍ಯ ಮತ್ತು ಬಿಜೆಪಿಗೆ ತಲೆಬಿಸಿ ಉಂಟುಮಾಡಿವೆ.

ತಮ್ಮನ್ನು ಸ್ವಯಂ ಸೇವಕ ಅಥವಾ ಬಿಜೆಪಿಯ ಸೈದ್ಧಾಂತಿಕ ಪೋಷಕರಾದ ಆರ್‌ಎಸ್‌ಎಸ್‌ನ ಸ್ವಯಂಸೇವಕರಾಗಿ ಗುರುತಿಸಿಕೊಳ್ಳುವ ದೀಪಕ್ ಮದನ್ ಎಂಬ ವ್ಯಕ್ತಿಯೇ ಈ ಆಶ್ಚರ್‍ಯಕ್ಕೆ ಕಾರಣವಾಗಿದ್ದಾರೆ.

“ನಾನು ಆರ್‌ಎಸ್‌ಎಸ್‌ನ ಸದಸ್ಯ ಮತ್ತು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇನೆ. ಆದರೆ ಪಕ್ಷವು ನನ್ನನ್ನು ವ್ಯಾಖ್ಯಾನಿಸುವುದಿಲ್ಲ… ನಾನು ನನಗಾಗಿ ಮಾತನಾಡುತ್ತಿದ್ದೇನೆ. ಭಾರತಕ್ಕೆ ಶ್ರೇಷ್ಠ ನಾಯಕ ಪ್ರಧಾನಿ ನರೇಂದ್ರ ಮೋದಿಯಾದರೆ, ದೆಹಲಿಗೆ ಮುಖ್ಯಮಂತ್ರಿ ಕೇಜ್ರಿವಾಲ್ ಅತಿ ಎತ್ತರದ ರಾಜಕಾರಣಿ ಎಂದು ದೀಪಕ್ ಮದನ್ ತಿಳಿಸಿದ್ದಾರೆ.

“ನಾನು ಕೇಜ್ರಿವಾಲ್ ಅವರು ದೆಹಲಿಗಾಗಿ ಮಾಡಿದ ಕೆಲಸಗಳನ್ನು ನೋಡಿದ್ದೇನೆ. ಅವರು ಆರೋಗ್ಯ ವ್ಯವಸ್ಥೆಯನ್ನು ತುಂಬಾ ಸುಧಾರಿಸಿದ್ದಾರೆ… ನಾನು ಪಾಸ್ಚಿಮ್ ವಿಹಾರದಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ನಡೆಸುತ್ತಿದ್ದು ಪ್ರತಿನಿತ್ಯ ಜನರನ್ನು ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿದ್ದೇನೆ. ಆಸ್ಪತ್ರೆಗಳು ಈಗ ನೀಡುವಂತಹ ಉತ್ತಮ ಸೌಲಭ್ಯಗಳನ್ನು ನಾನು ನೋಡಿದ್ದೇನೆ” ಎಂದು ಮದನ್ ಹೇಳಿದರು.

ಎಎಪಿ ಆಡಳಿತದ ಐದು ವರ್ಷಗಳಲ್ಲಿ ದೆಹಲಿಯಲ್ಲಿ ಶಿಕ್ಷಣವು ಗಮನಾರ್ಹವಾಗಿ ಸುಧಾರಿಸಿದೆ. ಸರ್ಕಾರಿ ಶಾಲೆಗಳು ಈಗ ಸಾಕಷ್ಟು ಉತ್ತಮವಾಗಿವೆ, ಶಿಕ್ಷಕರು ವಿದ್ಯಾರ್ಥಿಗಳನ್ನು ಚೆನ್ನಾಗಿ ಅಧ್ಯಯನ ಮಾಡಲು ಪ್ರೇರೇಪಿಸುತ್ತಾರೆ. ಹಾಗಾಗಿ ನನ್ನ ಬೆಂಬಲ ಆಮ್‌ ಆದ್ಮಿ ಪಾರ್ಟಿಗೆ ಎಂದು ಅವರು ಹೇಳಿದ್ದಾರೆ.

ಪಾಸ್ಚಿಮ್ ವಿಹಾರ್, ಜ್ವಾಲಹೇರಿ ಚೌಕ್, ಮೀರಾ ಬಾಗ್ ಮತ್ತು ಪಶ್ಚಿಮ ದೆಹಲಿಯ ಇತರ ಭಾಗಗಳಲ್ಲಿ ಈಗಾಗಲೇ ಹೋರ್ಡಿಂಗ್‌ಗಳನ್ನು ಹಾಕಲಾಗಿದ್ದು, ಶೀಘ್ರದಲ್ಲೇ ರಾಜಧಾನಿಯಾದ್ಯಂತ ಹೆಚ್ಚಿನದನ್ನು ನಿರ್ಮಿಸಲು ಅವರು ಯೋಜಿಸಿದ್ದಾರೆ.

ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಎಎಪಿ ಸದಸ್ಯ ಅಭಿಷೇಕ್ ಗುಪ್ತಾ “ದೆಹಲಿಯಲ್ಲಿ ಕೇಜ್ರಿವಾಲ್ ಗೆಲ್ಲುತ್ತಾರೆ ಎಂದು ಆರ್‌ಎಸ್‌ಎಸ್ / ಬಿಜೆಪಿ ಹೇಳುತ್ತಿರುವಾಗ, ಗಾಳಿ ಯಾವ ರೀತಿಯಲ್ಲಿ ಬೀಸುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು.” ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಅನ್ನು ನೂರಾರು ಜನರು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...