Homeಮುಖಪುಟದೇಶಕ್ಕೆ ಮೋದಿ, ದೆಹಲಿಗೆ ಕೇಜ್ರಿವಾಲ್ ಬೇಕು ಎಂದು ದೆಹಲಿ ತುಂಬಾ ಬ್ಯಾನರ್‌ ಹಾಕಿದ RSS ಕಾರ್ಯಕರ್ತ..!

ದೇಶಕ್ಕೆ ಮೋದಿ, ದೆಹಲಿಗೆ ಕೇಜ್ರಿವಾಲ್ ಬೇಕು ಎಂದು ದೆಹಲಿ ತುಂಬಾ ಬ್ಯಾನರ್‌ ಹಾಕಿದ RSS ಕಾರ್ಯಕರ್ತ..!

- Advertisement -
- Advertisement -

ದೇಶ್ ಮಾಂಗೆ ನರೇಂದ್ರ ಮೋದಿ, ದಿಲ್ಲಿ ಮಾಂಗೆ ಕೇಜ್ರಿವಾಲ್.. ದೇಶವು ನರೇಂದ್ರ ಮೋದಿಯನ್ನು ಬಯಸುತ್ತದೆ, ದೆಹಲಿಗೆ ಕೇಜ್ರಿವಾಲ್ ಬೇಕು ಎಂಬ ಸಂದೇಶವುಳ್ಳ ಬ್ಯಾನರ್‌ಗಳು ದೆಹಲಿ ತುಂಬಾ ಆವರಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷ (ಎಎಪಿ)ಕ್ಕೆ ಆಶ್ಚರ್‍ಯ ಮತ್ತು ಬಿಜೆಪಿಗೆ ತಲೆಬಿಸಿ ಉಂಟುಮಾಡಿವೆ.

ತಮ್ಮನ್ನು ಸ್ವಯಂ ಸೇವಕ ಅಥವಾ ಬಿಜೆಪಿಯ ಸೈದ್ಧಾಂತಿಕ ಪೋಷಕರಾದ ಆರ್‌ಎಸ್‌ಎಸ್‌ನ ಸ್ವಯಂಸೇವಕರಾಗಿ ಗುರುತಿಸಿಕೊಳ್ಳುವ ದೀಪಕ್ ಮದನ್ ಎಂಬ ವ್ಯಕ್ತಿಯೇ ಈ ಆಶ್ಚರ್‍ಯಕ್ಕೆ ಕಾರಣವಾಗಿದ್ದಾರೆ.

“ನಾನು ಆರ್‌ಎಸ್‌ಎಸ್‌ನ ಸದಸ್ಯ ಮತ್ತು ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದೇನೆ. ಆದರೆ ಪಕ್ಷವು ನನ್ನನ್ನು ವ್ಯಾಖ್ಯಾನಿಸುವುದಿಲ್ಲ… ನಾನು ನನಗಾಗಿ ಮಾತನಾಡುತ್ತಿದ್ದೇನೆ. ಭಾರತಕ್ಕೆ ಶ್ರೇಷ್ಠ ನಾಯಕ ಪ್ರಧಾನಿ ನರೇಂದ್ರ ಮೋದಿಯಾದರೆ, ದೆಹಲಿಗೆ ಮುಖ್ಯಮಂತ್ರಿ ಕೇಜ್ರಿವಾಲ್ ಅತಿ ಎತ್ತರದ ರಾಜಕಾರಣಿ ಎಂದು ದೀಪಕ್ ಮದನ್ ತಿಳಿಸಿದ್ದಾರೆ.

“ನಾನು ಕೇಜ್ರಿವಾಲ್ ಅವರು ದೆಹಲಿಗಾಗಿ ಮಾಡಿದ ಕೆಲಸಗಳನ್ನು ನೋಡಿದ್ದೇನೆ. ಅವರು ಆರೋಗ್ಯ ವ್ಯವಸ್ಥೆಯನ್ನು ತುಂಬಾ ಸುಧಾರಿಸಿದ್ದಾರೆ… ನಾನು ಪಾಸ್ಚಿಮ್ ವಿಹಾರದಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ನಡೆಸುತ್ತಿದ್ದು ಪ್ರತಿನಿತ್ಯ ಜನರನ್ನು ಆಸ್ಪತ್ರೆಗಳಿಗೆ ಕರೆದೊಯ್ಯುತ್ತಿದ್ದೇನೆ. ಆಸ್ಪತ್ರೆಗಳು ಈಗ ನೀಡುವಂತಹ ಉತ್ತಮ ಸೌಲಭ್ಯಗಳನ್ನು ನಾನು ನೋಡಿದ್ದೇನೆ” ಎಂದು ಮದನ್ ಹೇಳಿದರು.

ಎಎಪಿ ಆಡಳಿತದ ಐದು ವರ್ಷಗಳಲ್ಲಿ ದೆಹಲಿಯಲ್ಲಿ ಶಿಕ್ಷಣವು ಗಮನಾರ್ಹವಾಗಿ ಸುಧಾರಿಸಿದೆ. ಸರ್ಕಾರಿ ಶಾಲೆಗಳು ಈಗ ಸಾಕಷ್ಟು ಉತ್ತಮವಾಗಿವೆ, ಶಿಕ್ಷಕರು ವಿದ್ಯಾರ್ಥಿಗಳನ್ನು ಚೆನ್ನಾಗಿ ಅಧ್ಯಯನ ಮಾಡಲು ಪ್ರೇರೇಪಿಸುತ್ತಾರೆ. ಹಾಗಾಗಿ ನನ್ನ ಬೆಂಬಲ ಆಮ್‌ ಆದ್ಮಿ ಪಾರ್ಟಿಗೆ ಎಂದು ಅವರು ಹೇಳಿದ್ದಾರೆ.

ಪಾಸ್ಚಿಮ್ ವಿಹಾರ್, ಜ್ವಾಲಹೇರಿ ಚೌಕ್, ಮೀರಾ ಬಾಗ್ ಮತ್ತು ಪಶ್ಚಿಮ ದೆಹಲಿಯ ಇತರ ಭಾಗಗಳಲ್ಲಿ ಈಗಾಗಲೇ ಹೋರ್ಡಿಂಗ್‌ಗಳನ್ನು ಹಾಕಲಾಗಿದ್ದು, ಶೀಘ್ರದಲ್ಲೇ ರಾಜಧಾನಿಯಾದ್ಯಂತ ಹೆಚ್ಚಿನದನ್ನು ನಿರ್ಮಿಸಲು ಅವರು ಯೋಜಿಸಿದ್ದಾರೆ.

ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಎಎಪಿ ಸದಸ್ಯ ಅಭಿಷೇಕ್ ಗುಪ್ತಾ “ದೆಹಲಿಯಲ್ಲಿ ಕೇಜ್ರಿವಾಲ್ ಗೆಲ್ಲುತ್ತಾರೆ ಎಂದು ಆರ್‌ಎಸ್‌ಎಸ್ / ಬಿಜೆಪಿ ಹೇಳುತ್ತಿರುವಾಗ, ಗಾಳಿ ಯಾವ ರೀತಿಯಲ್ಲಿ ಬೀಸುತ್ತಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು.” ಎಂದು ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಅನ್ನು ನೂರಾರು ಜನರು ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...