Homeಮುಖಪುಟಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಚುನಾವಣಾ ಬಾಂಡ್‌ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ ಬೆನ್ನಲ್ಲಿ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ‘ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

ತಮಿಳುನಾಡಿನ ‘ತಂತಿ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನವನ್ನು ಭಾನುವಾರ ಪ್ರಸಾರ ಮಾಡಲಾಗಿತ್ತು.

ಪ್ರತಿದಿನವೂ, ಪ್ರಧಾನಮಂತ್ರಿ ಬೂಟಾಟಿಕೆಗಳನ್ನು ಮುಂದುವರಿಸುತ್ತಾರೆ ಮತ್ತು ಅಪ್ರಾಮಾಣಿಕತೆಯಲ್ಲಿ ಮತ್ತಷ್ಟು ಆಳಕ್ಕೆ ಇಳಿಯುತ್ತಾರೆ. ನಿಧಿ ಎಲ್ಲಿಂದ ಬಂದಿದೆ, ಹೇಗೆ ಬಳಕೆಯಾಗುತ್ತಿದೆ ಎಂಬುವುದು ಅವರೇ ಸ್ಥಾಪಿಸಿದ ಚುನಾವಣಾ ಬಾಂಡ್ ಯೋಜನೆಯಿಂದ ಗೊತ್ತಾಗಿದೆ ಎಂದು ಜೈರಾಮ್‌ ರಮೇಶ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಹಣ ಬಂದಿದೆ ಎಂಬ ವಿವರಗಳನ್ನು ಸಾರ್ವಜನಿಕರಿಂದ ಮರೆಮಾಡಲು ಮೋದಿ ಬಯಸಿದ್ದರು, 2018ರಿಂದ 2024 ರವರೆಗೆ ಆರು ವರ್ಷಗಳ ಕಾಲ ಯಾವ ಪಕ್ಷಕ್ಕೆ ಯಾರು ದೇಣಿಗೆ ನೀಡಿದ್ದಾರೆ ಎಂದು  ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ.

2018ರ ಜನವರಿಯಲ್ಲಿ ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದೆ. ಫೆಬ್ರವರಿ 2024ರಲ್ಲಿ ಸುಪ್ರೀಂ ಕೋರ್ಟ್ ಈ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ತೀರ್ಪು ನೀಡಿ ರದ್ದುಗೊಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ(ಎಸ್‌ಬಿಐ) ಚುನಾವಣಾ ಬಾಂಡ್‌ ಖರೀದಿದಾರರ ಬಗ್ಗೆ ಸಂಫೂರ್ಣ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್‌ ನಿರ್ದೇಶಿಸಿದೆ. ಸುಪ್ರೀಂಕೋರ್ಟ್‌ನ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಡೇಟಾವನ್ನು ಅಪ್‌ಲೋಡ್ ಮಾಡಲಾಗಿದೆ.

ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ, ‘ರಿಮೋಟ್ ಕಂಟ್ರೋಲ್’ ಎಸ್‌ಬಿಐ ನ್ಯಾಯಾಲಯಕ್ಕೆ ‘ಸುಳ್ಳು’ ಹೇಳುತ್ತಿದೆ ಎಂದು ಆರೋಪಿಸಿದ್ದಾರೆ. ರಾಜಕೀಯ ಪಕ್ಷಗಳೊಂದಿಗೆ ದಾನಿಗಳ ಡೇಟಾವನ್ನು ಹೊಂದಿಸಲು 3 ತಿಂಗಳ  ಕಾಲಾವಾಕಾಶವನ್ನು ಕೋರಿದಾಗ ಎಸ್‌ಬಿಐ ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ಹೇಳಿದೆ. ನಮ್ಮ ತಂಡವು ಪೈಥಾನ್ ಕೋಡ್‌ನ ಐದು ಸಾಲುಗಳನ್ನು ತೆಗೆದುಕೊಂಡಿದೆ ಮತ್ತು ಪ್ರತಿ ದಾನಿಯನ್ನು ಅವರು ದೇಣಿಗೆ ನೀಡಿದ ರಾಜಕೀಯ ಪಕ್ಷದೊಂದಿಗೆ ಹೊಂದಿಸಲು ಹದಿನೈದು ಸೆಕೆಂಡುಗಳಿಗಿಂತ ಕಡಿಮೆ ಸಮಯ ತೆಗೆದುಕೊಂಡಿದೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣಾ ಬಾಂಡ್‌ಗಳಿಂದಾಗಿ ಆಡಳಿತಾರೂಢ ಬಿಜೆಪಿ ಹಿನ್ನೆಡೆಯನ್ನು ಕಾಣಲಿದೆ ಎಂಬುವುದನ್ನು ನಿರಾಕರಿಸುವ ಪ್ರಧಾನಿಗೆ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿದ್ದು,  8,000 ಕೋಟಿಗೂ ಹೆಚ್ಚು ಮೌಲ್ಯದ ದೇಣಿಗೆಯೊಂದಿಗೆ ಬಿಜೆಪಿಯು ಚುನಾವಣಾ ಬಾಂಡ್‌ ಯೋಜನೆಯ ಅತಿ ದೊಡ್ಡ ಫಲಾನುಭವಿಯಾಗಿದೆ. ಈ ದತ್ತಾಂಶವು ನಿಮ್ಮ ಪಕ್ಷ ಮತ್ತು ಸರ್ಕಾರದ ಬೃಹತ್ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕೇಸ್‌ ದಾಖಲು: ‘ಮೋದಿ ಪರಿವಾರ’ದ ವಿರುದ್ಧ ಎಫ್‌ಐಆರ್ ಎಂದ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...