Homeಮುಖಪುಟಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಚುನಾವಣಾ ಬಾಂಡ್‌ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ ಬೆನ್ನಲ್ಲಿ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ‘ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

ತಮಿಳುನಾಡಿನ ‘ತಂತಿ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನವನ್ನು ಭಾನುವಾರ ಪ್ರಸಾರ ಮಾಡಲಾಗಿತ್ತು.

ಪ್ರತಿದಿನವೂ, ಪ್ರಧಾನಮಂತ್ರಿ ಬೂಟಾಟಿಕೆಗಳನ್ನು ಮುಂದುವರಿಸುತ್ತಾರೆ ಮತ್ತು ಅಪ್ರಾಮಾಣಿಕತೆಯಲ್ಲಿ ಮತ್ತಷ್ಟು ಆಳಕ್ಕೆ ಇಳಿಯುತ್ತಾರೆ. ನಿಧಿ ಎಲ್ಲಿಂದ ಬಂದಿದೆ, ಹೇಗೆ ಬಳಕೆಯಾಗುತ್ತಿದೆ ಎಂಬುವುದು ಅವರೇ ಸ್ಥಾಪಿಸಿದ ಚುನಾವಣಾ ಬಾಂಡ್ ಯೋಜನೆಯಿಂದ ಗೊತ್ತಾಗಿದೆ ಎಂದು ಜೈರಾಮ್‌ ರಮೇಶ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಹಣ ಬಂದಿದೆ ಎಂಬ ವಿವರಗಳನ್ನು ಸಾರ್ವಜನಿಕರಿಂದ ಮರೆಮಾಡಲು ಮೋದಿ ಬಯಸಿದ್ದರು, 2018ರಿಂದ 2024 ರವರೆಗೆ ಆರು ವರ್ಷಗಳ ಕಾಲ ಯಾವ ಪಕ್ಷಕ್ಕೆ ಯಾರು ದೇಣಿಗೆ ನೀಡಿದ್ದಾರೆ ಎಂದು  ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ.

2018ರ ಜನವರಿಯಲ್ಲಿ ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದೆ. ಫೆಬ್ರವರಿ 2024ರಲ್ಲಿ ಸುಪ್ರೀಂ ಕೋರ್ಟ್ ಈ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ತೀರ್ಪು ನೀಡಿ ರದ್ದುಗೊಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ(ಎಸ್‌ಬಿಐ) ಚುನಾವಣಾ ಬಾಂಡ್‌ ಖರೀದಿದಾರರ ಬಗ್ಗೆ ಸಂಫೂರ್ಣ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್‌ ನಿರ್ದೇಶಿಸಿದೆ. ಸುಪ್ರೀಂಕೋರ್ಟ್‌ನ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಡೇಟಾವನ್ನು ಅಪ್‌ಲೋಡ್ ಮಾಡಲಾಗಿದೆ.

ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ, ‘ರಿಮೋಟ್ ಕಂಟ್ರೋಲ್’ ಎಸ್‌ಬಿಐ ನ್ಯಾಯಾಲಯಕ್ಕೆ ‘ಸುಳ್ಳು’ ಹೇಳುತ್ತಿದೆ ಎಂದು ಆರೋಪಿಸಿದ್ದಾರೆ. ರಾಜಕೀಯ ಪಕ್ಷಗಳೊಂದಿಗೆ ದಾನಿಗಳ ಡೇಟಾವನ್ನು ಹೊಂದಿಸಲು 3 ತಿಂಗಳ  ಕಾಲಾವಾಕಾಶವನ್ನು ಕೋರಿದಾಗ ಎಸ್‌ಬಿಐ ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ಹೇಳಿದೆ. ನಮ್ಮ ತಂಡವು ಪೈಥಾನ್ ಕೋಡ್‌ನ ಐದು ಸಾಲುಗಳನ್ನು ತೆಗೆದುಕೊಂಡಿದೆ ಮತ್ತು ಪ್ರತಿ ದಾನಿಯನ್ನು ಅವರು ದೇಣಿಗೆ ನೀಡಿದ ರಾಜಕೀಯ ಪಕ್ಷದೊಂದಿಗೆ ಹೊಂದಿಸಲು ಹದಿನೈದು ಸೆಕೆಂಡುಗಳಿಗಿಂತ ಕಡಿಮೆ ಸಮಯ ತೆಗೆದುಕೊಂಡಿದೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣಾ ಬಾಂಡ್‌ಗಳಿಂದಾಗಿ ಆಡಳಿತಾರೂಢ ಬಿಜೆಪಿ ಹಿನ್ನೆಡೆಯನ್ನು ಕಾಣಲಿದೆ ಎಂಬುವುದನ್ನು ನಿರಾಕರಿಸುವ ಪ್ರಧಾನಿಗೆ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿದ್ದು,  8,000 ಕೋಟಿಗೂ ಹೆಚ್ಚು ಮೌಲ್ಯದ ದೇಣಿಗೆಯೊಂದಿಗೆ ಬಿಜೆಪಿಯು ಚುನಾವಣಾ ಬಾಂಡ್‌ ಯೋಜನೆಯ ಅತಿ ದೊಡ್ಡ ಫಲಾನುಭವಿಯಾಗಿದೆ. ಈ ದತ್ತಾಂಶವು ನಿಮ್ಮ ಪಕ್ಷ ಮತ್ತು ಸರ್ಕಾರದ ಬೃಹತ್ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕೇಸ್‌ ದಾಖಲು: ‘ಮೋದಿ ಪರಿವಾರ’ದ ವಿರುದ್ಧ ಎಫ್‌ಐಆರ್ ಎಂದ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...