Homeಮುಖಪುಟಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

ಮೋದಿ ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ: ಚುನಾವಣಾ ಬಾಂಡ್‌ ಕುರಿತ ಪ್ರಧಾನಿ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

- Advertisement -
- Advertisement -

ಚುನಾವಣಾ ಬಾಂಡ್‌ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮೌನ ಮುರಿದ ಬೆನ್ನಲ್ಲಿ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ‘ರಾಷ್ಟ್ರಕ್ಕೆ ಸಂಪೂರ್ಣವಾಗಿ ಸುಳ್ಳು ಹೇಳಿದ್ದಾರೆ’ ಎಂದು ಆರೋಪಿಸಿದ್ದಾರೆ.

ತಮಿಳುನಾಡಿನ ‘ತಂತಿ ಟಿವಿ’ಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಮೋದಿ ಈ ವಿಷಯದ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನವನ್ನು ಭಾನುವಾರ ಪ್ರಸಾರ ಮಾಡಲಾಗಿತ್ತು.

ಪ್ರತಿದಿನವೂ, ಪ್ರಧಾನಮಂತ್ರಿ ಬೂಟಾಟಿಕೆಗಳನ್ನು ಮುಂದುವರಿಸುತ್ತಾರೆ ಮತ್ತು ಅಪ್ರಾಮಾಣಿಕತೆಯಲ್ಲಿ ಮತ್ತಷ್ಟು ಆಳಕ್ಕೆ ಇಳಿಯುತ್ತಾರೆ. ನಿಧಿ ಎಲ್ಲಿಂದ ಬಂದಿದೆ, ಹೇಗೆ ಬಳಕೆಯಾಗುತ್ತಿದೆ ಎಂಬುವುದು ಅವರೇ ಸ್ಥಾಪಿಸಿದ ಚುನಾವಣಾ ಬಾಂಡ್ ಯೋಜನೆಯಿಂದ ಗೊತ್ತಾಗಿದೆ ಎಂದು ಜೈರಾಮ್‌ ರಮೇಶ್ ಎಕ್ಸ್‌ನಲ್ಲಿ ಮಾಡಿದ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಎಲ್ಲಿಂದ ಹಣ ಬಂದಿದೆ ಎಂಬ ವಿವರಗಳನ್ನು ಸಾರ್ವಜನಿಕರಿಂದ ಮರೆಮಾಡಲು ಮೋದಿ ಬಯಸಿದ್ದರು, 2018ರಿಂದ 2024 ರವರೆಗೆ ಆರು ವರ್ಷಗಳ ಕಾಲ ಯಾವ ಪಕ್ಷಕ್ಕೆ ಯಾರು ದೇಣಿಗೆ ನೀಡಿದ್ದಾರೆ ಎಂದು  ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿಲ್ಲ ಎಂದು ಹೇಳಿದ್ದಾರೆ.

2018ರ ಜನವರಿಯಲ್ಲಿ ಮೋದಿ ಸರ್ಕಾರವು ಚುನಾವಣಾ ಬಾಂಡ್‌ಗಳನ್ನು ಪರಿಚಯಿಸಿದೆ. ಫೆಬ್ರವರಿ 2024ರಲ್ಲಿ ಸುಪ್ರೀಂ ಕೋರ್ಟ್ ಈ ಯೋಜನೆಯನ್ನು ‘ಅಸಂವಿಧಾನಿಕ’ ಎಂದು ತೀರ್ಪು ನೀಡಿ ರದ್ದುಗೊಳಿಸಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ(ಎಸ್‌ಬಿಐ) ಚುನಾವಣಾ ಬಾಂಡ್‌ ಖರೀದಿದಾರರ ಬಗ್ಗೆ ಸಂಫೂರ್ಣ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್‌ ನಿರ್ದೇಶಿಸಿದೆ. ಸುಪ್ರೀಂಕೋರ್ಟ್‌ನ ನಿರ್ದೇಶನದ ಮೇರೆಗೆ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಡೇಟಾವನ್ನು ಅಪ್‌ಲೋಡ್ ಮಾಡಲಾಗಿದೆ.

ರಮೇಶ್ ಅವರು ತಮ್ಮ ಪೋಸ್ಟ್‌ನಲ್ಲಿ, ‘ರಿಮೋಟ್ ಕಂಟ್ರೋಲ್’ ಎಸ್‌ಬಿಐ ನ್ಯಾಯಾಲಯಕ್ಕೆ ‘ಸುಳ್ಳು’ ಹೇಳುತ್ತಿದೆ ಎಂದು ಆರೋಪಿಸಿದ್ದಾರೆ. ರಾಜಕೀಯ ಪಕ್ಷಗಳೊಂದಿಗೆ ದಾನಿಗಳ ಡೇಟಾವನ್ನು ಹೊಂದಿಸಲು 3 ತಿಂಗಳ  ಕಾಲಾವಾಕಾಶವನ್ನು ಕೋರಿದಾಗ ಎಸ್‌ಬಿಐ ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ಹೇಳಿದೆ. ನಮ್ಮ ತಂಡವು ಪೈಥಾನ್ ಕೋಡ್‌ನ ಐದು ಸಾಲುಗಳನ್ನು ತೆಗೆದುಕೊಂಡಿದೆ ಮತ್ತು ಪ್ರತಿ ದಾನಿಯನ್ನು ಅವರು ದೇಣಿಗೆ ನೀಡಿದ ರಾಜಕೀಯ ಪಕ್ಷದೊಂದಿಗೆ ಹೊಂದಿಸಲು ಹದಿನೈದು ಸೆಕೆಂಡುಗಳಿಗಿಂತ ಕಡಿಮೆ ಸಮಯ ತೆಗೆದುಕೊಂಡಿದೆ ಎಂದು ಅವರು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಚುನಾವಣಾ ಬಾಂಡ್‌ಗಳಿಂದಾಗಿ ಆಡಳಿತಾರೂಢ ಬಿಜೆಪಿ ಹಿನ್ನೆಡೆಯನ್ನು ಕಾಣಲಿದೆ ಎಂಬುವುದನ್ನು ನಿರಾಕರಿಸುವ ಪ್ರಧಾನಿಗೆ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿದ್ದು,  8,000 ಕೋಟಿಗೂ ಹೆಚ್ಚು ಮೌಲ್ಯದ ದೇಣಿಗೆಯೊಂದಿಗೆ ಬಿಜೆಪಿಯು ಚುನಾವಣಾ ಬಾಂಡ್‌ ಯೋಜನೆಯ ಅತಿ ದೊಡ್ಡ ಫಲಾನುಭವಿಯಾಗಿದೆ. ಈ ದತ್ತಾಂಶವು ನಿಮ್ಮ ಪಕ್ಷ ಮತ್ತು ಸರ್ಕಾರದ ಬೃಹತ್ ಭ್ರಷ್ಟಾಚಾರವನ್ನು ಬಹಿರಂಗಪಡಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕೇಸ್‌ ದಾಖಲು: ‘ಮೋದಿ ಪರಿವಾರ’ದ ವಿರುದ್ಧ ಎಫ್‌ಐಆರ್ ಎಂದ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...