Homeಮುಖಪುಟಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ಅಮಿತ್ ಶಾ ಪ್ರಧಾನಿಯನ್ನು 'ಹುಚ್ಚ' ಎಂದು ಕರೆದಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವವರು ಪರಸ್ಪರ ತಿರಸ್ಕಾರದಿಂದ ಮಾತನಾಡುತ್ತಿದ್ದಾರೆ! ಮೋದಿಜಿ ಇದು ನಿಜವೇ? ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ರೈತರ ವಿಷಯವಾಗಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಹಿಂದೆ ಭೇಟಿ ಮಾಡಿದ್ದೆ. ಆಗ ಅವರು ಅಹಂಕಾರದಿಂದ ನಡೆದುಕೊಂಡಿದ್ದರು. ಪ್ರಧಾನಿ ಮೋದಿಯನ್ನು ಗೃಹ ಸಚಿವ ಅಮಿತ್‌ ಶಾ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು ಎಂದು ಮೇಘಾಲಯ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ ಭಾನುವಾರ ತಿಳಿಸಿದ್ದಾರೆ.

ಹರಿಯಾಣದ ದಾದ್ರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಮೋದಿ ಭೇಟಿ ವೇಳೆ 500ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ಕಳೆದುಕೊಳ್ಳಬೇಕಾಗಿದೆ ಎಂಬ ವಿಷಯ ಪ್ರಸ್ತಾಪಿಸಿದೆ. ಆಗ ಕುಪಿತರಾದ ಅವರು ರೈತರು ನನಗಾಗಿ ಸತ್ತರೆ ಎಂದು ಪ್ರಶ್ನಿಸಿದ್ದರು. ಹೌದು ನೀವು ರಾಜನಾದ ನಂತರ ಅವತು ಮೃತಪಟ್ಟಿದ್ದಾರೆ ಎಂದು ಉತ್ತರಿಸಿದ್ದೆ” ಎಂದು ಹೇಳಿದ್ದಾರೆ.

ಅವರೊಂದಿಗೆ ಮಾತುಕತೆ ಆರಂಭಿಸಿದ 5 ನಿಮಿಷದ ಒಳಗಾಗಿ ಅವರು ಬಹಳ ಅಹಂಕಾರದಿಂದ ನಡೆದುಕೊಂಡರು. ನಾನು ಜಗಳವಾಡುತ್ತಾ ಮಾತುಕತೆ ಮುಗಿಸಿದೆ. ನಂತರ ಅಮಿತ್‌ ಶಾರವರನ್ನು ಭೇಟಿಯಾಗಲು ತಿಳಿಸಿದರು. ಒಂದು ನಾಯಿ ಸತ್ತರು ಕೂಡ ಪ್ರಧಾನಿ ಸಂತಾಪ ಸೂಚಿಸುತ್ತಾರೆ ಆದರೆ ರೈತರ ಬಗ್ಗೆ ಕಾಳಜಿ ತೋರಲಿಲ್ಲ ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ನಂತರ ನಾನು ಅಮಿತ್‌ ಶಾರವರನ್ನು ಭೇಟಿಯಾಗಿ ಈ ವಿಷಯ ತಿಳಿಸಿದೆ. ಆಗ ಅವರು “ಸತ್ಯ, ಅವರು ಸ್ಥಿಮಿತತೆ ಕಳೆದುಕೊಂಡಿದ್ದಾರೆ. ನೀವು ಚಿಂತಸಬೇಡಿ ಮತ್ತು ನಮ್ಮೊಂದಿಗೆ ಸಂಪರ್ಕದಿಂದಿರಿ ಎಂದು ಹೇಳಿದರು. ಗೃಹ ಮಂತ್ರಿ ಅಮಿತ್‌ ಶಾರವರು ಪಿಎಂ ಮೋದಿಯನ್ನು ಈ ರೀತಿ ಉಲ್ಲೇಖಿಸಿದ್ದರು” ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ಅವರ ಈ ಹೇಳಿಕೆ ವೈರಲ್ ಆಗತೊಡಗಿದೆ. ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸತ್ಯಪಾಲ್ ಮಲಿಕ್ ಅವರು ಮಾತನಾಡಿರುವ ವೀಡಿಯೊವನ್ನು ಹಂಚಿಕೊಂಡಿದ್ದು, “ಸ್ವಪ್ರತಿಷ್ಠೆ… ಕ್ರೌರ್ಯ… ಅಸೂಕ್ಷ್ಮತೆ. ಪ್ರಧಾನಿ ಮೋದಿಯವರ ವ್ಯಕ್ತಿತ್ವದಲ್ಲಿ ಅಡಕವಾಗಿರುವ ಈ ಗುಣಗಳನ್ನು ಬಿಜೆಪಿ ರಾಜ್ಯಪಾಲರು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಇದು ಪ್ರಜಾಪ್ರಭುತ್ವಕ್ಕೆ ಕಳವಳಕಾರಿ ವಿಷಯ” ಎಂದು ಟೀಕಿಸಿದೆ.

ಮಲ್ಲಿಕಾರ್ಜುನ ಖರ್ಗೆಯವರು ಟ್ವೀಟ್ ಮಾಡಿ “ಮೇಘಾಲಯದ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ರೈತರ ವಿಷಯದಲ್ಲಿ ಪ್ರಧಾನಿ ‘ಅಹಂಕಾರಿ’ ಎಂದು ಹೇಳುತ್ತಿದ್ದಾರೆ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಧಾನಿಯನ್ನು ‘ಹುಚ್ಚ’ ಎಂದು ಕರೆದಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವವರು ಪರಸ್ಪರ ತಿರಸ್ಕಾರದಿಂದ ಮಾತನಾಡುತ್ತಿದ್ದಾರೆ! ಮೋದಿಜಿ ಇದು ನಿಜವೇ?” ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವು ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಮತ್ತು ಎಂಎಸ್‌ಪಿ ಜಾರಿಗೆ ಕಾನೂನು ರಚಿಸಬೇಕು. ಏಕೆಂದರೆ ರೈತ ಹೋರಾಟ ನಿಂತಿಲ್ಲ, ಅದು ತಾತ್ಕಾಲಿಕವಾಗಿ ಅಮಾನತ್ತಾಗಿದೆ ಅಷ್ಟೇ ಎಂದು ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರ ಮತ್ತು ಗೋವಾದ ನಂತರ ಮೇಘಾಲಯದ ರಾಜ್ಯಪಾಲರಾಗಿರುವ ಸತ್ಯಪಾಲ್ ಮಲ್ಲಿಕ್ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲನಾಗಿದ್ದ ವೇಳೆ ಎರಡು ಕಡತಗಳು ನನ್ನ ಮುಂದೆ ಬಂದಿದ್ದವು. ಒಂದು ಮುಖೇಶ್ ಅಂಬಾನಿಗೆ ಸೇರಿದ್ದರೆ ಮತ್ತೊಂದು ಆರ್‌ಎಸ್‌ಎಸ್‌ ನಾಯಕನಿಗೆ ಸೇರಿತ್ತು. ಅದಕ್ಕೆ ಸಹಿ ಹಾಕಿದರೆ 300 ಕೋಟಿ ಲಂಚ ಕೊಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಆ ಕೆಲಸ ಮಾಡಲಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯ ತಿಳಿಸಿದ್ದೆ ಎಂದು ಮಲ್ಲಿಕ್ ಹೇಳಿದ್ದರು.

“ನಾಯಿ ಕಚ್ಚಿ ಸತ್ತವರಿಗೂ ಸಂತಾಪ ಸೂಚಿಸುವವರಿಗೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಮಡಿದ 600ಕ್ಕೂ ಹೆಚ್ಚು ರೈತರು ಕಾಣದಿರುವುದು ದುರಂತ ಎಂದು ಮೋದಿ ವಿರುದ್ಧ 2021ರ ನವೆಂಬರ್‌ನಲ್ಲಿ ಕಿಡಿಕಾರಿದ್ದ ಅವರು, ಕೇಂದ್ರ ಸರ್ಕಾರದಲ್ಲಿ ಬಹಳಷ್ಟು ಮಂದಿ ರೈತರ ಪರವಾಗಿದ್ದಾರೆ. ಆದರೆ ಒಂದಿಬ್ಬರ ಅಹಂನಿಂದಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ” ಎಂದಿದ್ದರು.


ಇದನ್ನೂ ಓದಿ: ಒಂದಿಬ್ಬರ ಅಹಂನಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ: ಕೇಂದ್ರದ ವಿರುದ್ಧ ಕಿಡಿಕಾರಿದ ಮೇಘಾಲಯ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...