Homeಮುಖಪುಟಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ಮೋದಿ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು: ಮೇಘಾಲಯ ರಾಜ್ಯಪಾಲರ ಸ್ಫೋಟಕ ಹೇಳಿಕೆ

ಅಮಿತ್ ಶಾ ಪ್ರಧಾನಿಯನ್ನು 'ಹುಚ್ಚ' ಎಂದು ಕರೆದಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವವರು ಪರಸ್ಪರ ತಿರಸ್ಕಾರದಿಂದ ಮಾತನಾಡುತ್ತಿದ್ದಾರೆ! ಮೋದಿಜಿ ಇದು ನಿಜವೇ? ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ರೈತರ ವಿಷಯವಾಗಿ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಈ ಹಿಂದೆ ಭೇಟಿ ಮಾಡಿದ್ದೆ. ಆಗ ಅವರು ಅಹಂಕಾರದಿಂದ ನಡೆದುಕೊಂಡಿದ್ದರು. ಪ್ರಧಾನಿ ಮೋದಿಯನ್ನು ಗೃಹ ಸಚಿವ ಅಮಿತ್‌ ಶಾ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದರು ಎಂದು ಮೇಘಾಲಯ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ ಭಾನುವಾರ ತಿಳಿಸಿದ್ದಾರೆ.

ಹರಿಯಾಣದ ದಾದ್ರಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಮೋದಿ ಭೇಟಿ ವೇಳೆ 500ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ಕಳೆದುಕೊಳ್ಳಬೇಕಾಗಿದೆ ಎಂಬ ವಿಷಯ ಪ್ರಸ್ತಾಪಿಸಿದೆ. ಆಗ ಕುಪಿತರಾದ ಅವರು ರೈತರು ನನಗಾಗಿ ಸತ್ತರೆ ಎಂದು ಪ್ರಶ್ನಿಸಿದ್ದರು. ಹೌದು ನೀವು ರಾಜನಾದ ನಂತರ ಅವತು ಮೃತಪಟ್ಟಿದ್ದಾರೆ ಎಂದು ಉತ್ತರಿಸಿದ್ದೆ” ಎಂದು ಹೇಳಿದ್ದಾರೆ.

ಅವರೊಂದಿಗೆ ಮಾತುಕತೆ ಆರಂಭಿಸಿದ 5 ನಿಮಿಷದ ಒಳಗಾಗಿ ಅವರು ಬಹಳ ಅಹಂಕಾರದಿಂದ ನಡೆದುಕೊಂಡರು. ನಾನು ಜಗಳವಾಡುತ್ತಾ ಮಾತುಕತೆ ಮುಗಿಸಿದೆ. ನಂತರ ಅಮಿತ್‌ ಶಾರವರನ್ನು ಭೇಟಿಯಾಗಲು ತಿಳಿಸಿದರು. ಒಂದು ನಾಯಿ ಸತ್ತರು ಕೂಡ ಪ್ರಧಾನಿ ಸಂತಾಪ ಸೂಚಿಸುತ್ತಾರೆ ಆದರೆ ರೈತರ ಬಗ್ಗೆ ಕಾಳಜಿ ತೋರಲಿಲ್ಲ ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ನಂತರ ನಾನು ಅಮಿತ್‌ ಶಾರವರನ್ನು ಭೇಟಿಯಾಗಿ ಈ ವಿಷಯ ತಿಳಿಸಿದೆ. ಆಗ ಅವರು “ಸತ್ಯ, ಅವರು ಸ್ಥಿಮಿತತೆ ಕಳೆದುಕೊಂಡಿದ್ದಾರೆ. ನೀವು ಚಿಂತಸಬೇಡಿ ಮತ್ತು ನಮ್ಮೊಂದಿಗೆ ಸಂಪರ್ಕದಿಂದಿರಿ ಎಂದು ಹೇಳಿದರು. ಗೃಹ ಮಂತ್ರಿ ಅಮಿತ್‌ ಶಾರವರು ಪಿಎಂ ಮೋದಿಯನ್ನು ಈ ರೀತಿ ಉಲ್ಲೇಖಿಸಿದ್ದರು” ಎಂದು ಸತ್ಯಪಾಲ್ ಮಲ್ಲಿಕ್ ಹೇಳಿದ್ದಾರೆ.

ಅವರ ಈ ಹೇಳಿಕೆ ವೈರಲ್ ಆಗತೊಡಗಿದೆ. ಕಾಂಗ್ರೆಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸತ್ಯಪಾಲ್ ಮಲಿಕ್ ಅವರು ಮಾತನಾಡಿರುವ ವೀಡಿಯೊವನ್ನು ಹಂಚಿಕೊಂಡಿದ್ದು, “ಸ್ವಪ್ರತಿಷ್ಠೆ… ಕ್ರೌರ್ಯ… ಅಸೂಕ್ಷ್ಮತೆ. ಪ್ರಧಾನಿ ಮೋದಿಯವರ ವ್ಯಕ್ತಿತ್ವದಲ್ಲಿ ಅಡಕವಾಗಿರುವ ಈ ಗುಣಗಳನ್ನು ಬಿಜೆಪಿ ರಾಜ್ಯಪಾಲರು ತಮ್ಮ ಹೇಳಿಕೆಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಇದು ಪ್ರಜಾಪ್ರಭುತ್ವಕ್ಕೆ ಕಳವಳಕಾರಿ ವಿಷಯ” ಎಂದು ಟೀಕಿಸಿದೆ.

ಮಲ್ಲಿಕಾರ್ಜುನ ಖರ್ಗೆಯವರು ಟ್ವೀಟ್ ಮಾಡಿ “ಮೇಘಾಲಯದ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ರೈತರ ವಿಷಯದಲ್ಲಿ ಪ್ರಧಾನಿ ‘ಅಹಂಕಾರಿ’ ಎಂದು ಹೇಳುತ್ತಿದ್ದಾರೆ ಮತ್ತು ಗೃಹ ಸಚಿವ ಅಮಿತ್ ಶಾ ಪ್ರಧಾನಿಯನ್ನು ‘ಹುಚ್ಚ’ ಎಂದು ಕರೆದಿದ್ದಾರೆ. ಸಾಂವಿಧಾನಿಕ ಸ್ಥಾನದಲ್ಲಿರುವವರು ಪರಸ್ಪರ ತಿರಸ್ಕಾರದಿಂದ ಮಾತನಾಡುತ್ತಿದ್ದಾರೆ! ಮೋದಿಜಿ ಇದು ನಿಜವೇ?” ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರವು ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಮತ್ತು ಎಂಎಸ್‌ಪಿ ಜಾರಿಗೆ ಕಾನೂನು ರಚಿಸಬೇಕು. ಏಕೆಂದರೆ ರೈತ ಹೋರಾಟ ನಿಂತಿಲ್ಲ, ಅದು ತಾತ್ಕಾಲಿಕವಾಗಿ ಅಮಾನತ್ತಾಗಿದೆ ಅಷ್ಟೇ ಎಂದು ಸತ್ಯಪಾಲ್ ಮಲ್ಲಿಕ್ ಎಚ್ಚರಿಕೆ ನೀಡಿದ್ದಾರೆ.

ಜಮ್ಮು ಕಾಶ್ಮೀರ ಮತ್ತು ಗೋವಾದ ನಂತರ ಮೇಘಾಲಯದ ರಾಜ್ಯಪಾಲರಾಗಿರುವ ಸತ್ಯಪಾಲ್ ಮಲ್ಲಿಕ್ ಕಳೆದ ಒಂದು ವರ್ಷದಿಂದ ನಿರಂತರವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ನಾನು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲನಾಗಿದ್ದ ವೇಳೆ ಎರಡು ಕಡತಗಳು ನನ್ನ ಮುಂದೆ ಬಂದಿದ್ದವು. ಒಂದು ಮುಖೇಶ್ ಅಂಬಾನಿಗೆ ಸೇರಿದ್ದರೆ ಮತ್ತೊಂದು ಆರ್‌ಎಸ್‌ಎಸ್‌ ನಾಯಕನಿಗೆ ಸೇರಿತ್ತು. ಅದಕ್ಕೆ ಸಹಿ ಹಾಕಿದರೆ 300 ಕೋಟಿ ಲಂಚ ಕೊಡುವುದಾಗಿ ಆಮಿಷವೊಡ್ಡಿದ್ದರು. ಆದರೆ ನಾನು ಆ ಕೆಲಸ ಮಾಡಲಿಲ್ಲ ಬದಲಿಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಈ ವಿಷಯ ತಿಳಿಸಿದ್ದೆ ಎಂದು ಮಲ್ಲಿಕ್ ಹೇಳಿದ್ದರು.

“ನಾಯಿ ಕಚ್ಚಿ ಸತ್ತವರಿಗೂ ಸಂತಾಪ ಸೂಚಿಸುವವರಿಗೆ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿ ಮಡಿದ 600ಕ್ಕೂ ಹೆಚ್ಚು ರೈತರು ಕಾಣದಿರುವುದು ದುರಂತ ಎಂದು ಮೋದಿ ವಿರುದ್ಧ 2021ರ ನವೆಂಬರ್‌ನಲ್ಲಿ ಕಿಡಿಕಾರಿದ್ದ ಅವರು, ಕೇಂದ್ರ ಸರ್ಕಾರದಲ್ಲಿ ಬಹಳಷ್ಟು ಮಂದಿ ರೈತರ ಪರವಾಗಿದ್ದಾರೆ. ಆದರೆ ಒಂದಿಬ್ಬರ ಅಹಂನಿಂದಾಗಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ” ಎಂದಿದ್ದರು.


ಇದನ್ನೂ ಓದಿ: ಒಂದಿಬ್ಬರ ಅಹಂನಿಂದ ಕೃಷಿ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ: ಕೇಂದ್ರದ ವಿರುದ್ಧ ಕಿಡಿಕಾರಿದ ಮೇಘಾಲಯ ರಾಜ್ಯಪಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...