Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...