Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...