Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...