Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...