Homeಕರ್ನಾಟಕಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

ಐಐಟಿ ಬಾಂಬೆಯಲ್ಲಿನ ಜಾತಿ ಕಿರುಕುಳದ ಬಗ್ಗೆ ಸಾಯುವ ಮುನ್ನ ತಿಳಿಸಿದ್ದ; ದರ್ಶನ್ ಸೋಲಂಕಿ ಕುಟುಂಬ ಆರೋಪ

- Advertisement -
- Advertisement -

ಐಐಟಿ ಬಾಂಬೆಯಲ್ಲಿ 18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಘಾತಕಾರಿ ಸಂಗತಿಗಳು ಹೊರಬೀಳತೊಡಗಿವೆ. “ಜಾತಿಯ ಕಾರಣಕ್ಕಾಗಿ ತನ್ನ ಸ್ನೇಹಿತರಿಂದ ಆತ ಅವಮಾನಕ್ಕೀಡಾಗಿದ್ದ” ಎಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಪೋಷಕರು ಪ್ರತಿಕ್ರಿಯಿಸಿದ್ದಾರೆ.

‘ಎನ್‌ಡಿಟಿವಿ’ ಜೊತೆಯಲ್ಲಿ ಮಾತನಾಡಿರುವ ಕುಟುಂಬಸ್ಥರು, “ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳುತ್ತಿದ್ದಾರೆ. ಆದರೆ ಆತ್ಮಹತ್ಯೆ ಮಾಡಿಕೊಂಡಿರುವ ದರ್ಶನ್ ಸೋಲಂಕಿ, ತನಗಾಗುತ್ತಿರುವ ಜಾತಿ ಕಿರುಕುಳದ ಕುರಿತು ನಮ್ಮೊಂದಿಗೆ ಹೇಳಿಕೊಂಡಿದ್ದನು” ಎಂದು ಆರೋಪಿಸಿದ್ದಾರೆ.

“ಕಳೆದ ತಿಂಗಳು ದರ್ಶನ್‌ ಬಂದಿದ್ದಾಗ, ಬಾಂಬೆ ಐಐಟಿಯಲ್ಲಿ ಜಾತಿ ತಾರತಮ್ಯ ನಡೆಯುತ್ತಿದೆ ಎಂದು ನನಗೆ ಮತ್ತು ಅಮ್ಮ-ಅಪ್ಪನಿಗೆ ಹೇಳಿದ್ದನು. ದರ್ಶನ್‌ ಪರಿಶಿಷ್ಟ ಜಾತಿಗೆ ಸೇರಿದವನು ಎಂದು ಆತನ ಸ್ನೇಹಿತರಿಗೆ ತಿಳಿದಿತ್ತು, ಆದ್ದರಿಂದ ಸ್ನೇಹಿತರ ವರ್ತನೆಗಳು ಬದಲಾದವು. ದರ್ಶನ್‌ ಜೊತೆಯಲ್ಲಿ ಅವರು ಮಾತನಾಡುವುದನ್ನೂ ನಿಲ್ಲಿಸಿದರು. ಅವನೊಂದಿಗೆ ಸುತ್ತಾಡುವುದನ್ನೂ ನಿಲ್ಲಿಸಿದ್ದರು” ಎಂದು ದರ್ಶನ್‌ ಸಹೋದರಿ ಜಾನ್ವಿ ಸೋಲಂಕಿ ತಿಳಿಸಿದ್ದಾರೆ.

“ಆತ ಸಂಕಷ್ಟದಲ್ಲಿದ್ದನು. ಆತನಿಗೆ ಚಿತ್ರಹಿಂಸೆ ನೀಡುತ್ತಿದ್ದರು. ಅದಕ್ಕಾಗಿಯೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂದು ದರ್ಶನ್ ಅವರ ತಾಯಿ ತರ್ಲಿಕಾಬೆನ್ ಸೋಲಂಕಿ ದೂರಿದ್ದಾರೆ.

ದರ್ಶನ್ ಅವರ ಚಿಕ್ಕಮ್ಮ ದಿವ್ಯಾಬೆನ್ ಪ್ರತಿಕ್ರಿಯಿಸಿ, “ಒಂದು ತಿಂಗಳ ಹಿಂದೆ ಆತ ಇಲ್ಲಿಗೆ ಬಂದಿದ್ದಾಗ ಸಂಕಷ್ಟ ತೋಡಿಕೊಂಡಿದ್ದನು. ಉಚಿತವಾಗಿ ಓದುತ್ತಿದ್ದೀಯ ಎಂದು ಅನೇಕ ವಿದ್ಯಾರ್ಥಿಗಳು ಆತನನ್ನು ಹಂಗಿಸುತ್ತಿದ್ದರು, ಅಸೂಯೆ ಪಟ್ಟಿಕೊಳ್ಳುತ್ತಿದ್ದರು, ನಾವು ಸಾಕಷ್ಟು ಖರ್ಚು ಮಾಡುತ್ತಿರುವಾಗ ನೀವು ಏಕೆ ಉಚಿತವಾಗಿ ಓದುತ್ತಿದ್ದೀರಿ ಎಂದು ಅಣಕ ಮಾಡುತ್ತಿದ್ದರು, ಅನೇಕ ವಿದ್ಯಾರ್ಥಿಗಳು ನನ್ನ ಬಗ್ಗೆ ಅಸೂಯೆ ಹೊಂದಿದ್ದಾರೆ ಎಂದು ಆತ ತಿಳಿಸಿದ್ದನು. ಕೆಲವು ಸ್ನೇಹಿತರು ಮಾತನಾಡುವುದನ್ನೂ ನಿಲ್ಲಿಸಿದ್ದರು” ಎಂದು ವಿವರಿಸಿದ್ದಾರೆ.

ದರ್ಶನ್ ಸಾವಿಗೆ ಶರಣಾಗುವ ಕೆಲವೇ ಗಂಟೆಗಳ ಮೊದಲು ನನಗೆ ಕರೆ ಮಾಡಿದ್ದನು ಎಂದು ದರ್ಶನ್ ಅವರ ತಂದೆ ರಮೇಶ್ ಭಾಯ್ ಸೋಲಂಕಿ ಪ್ರತಿಕ್ರಿಯಿಸಿದ್ದಾರೆ.

“ಆತ್ಮಹತ್ಯೆಗೆ ಎರಡು ಗಂಟೆಗಳ ಮೊದಲು, ನಮಗೆ ಐಐಟಿಯಿಂದ ಕರೆ ಬಂದಿತು, ‘ಹೇಗಿದ್ದೀರಿ’ ಎಂದು ಆತ ಕೇಳಿದನು, ಆತ ಸಾಮಾನ್ಯವಾಗಿಯೇ ಮಾತನಾಡುತ್ತಿದ್ದನು, ನನ್ನ ಅಣ್ಣನ ಮಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲು ತಿಳಿಸಿದನು. ಇಂದು ಹೊರಗೆ ಹೋಗುತ್ತಿದ್ದೇನೆ ಎಂದನು. ನಾನು ಸ್ವಲ್ಪ ಹಣವನ್ನು ಕಳುಹಿಸಿದೆ. ನನ್ನ ಬಳಿ ಹಣವಿದೆ, ನನಗೆ ಹಣದ ಅಗತ್ಯವಿಲ್ಲ ಎಂದು ಆತ ತಿಳಿಸಿದ. ಅವನು ಹೆಚ್ಚು ಖರ್ಚು ಮಾಡುತ್ತಿರಲಿಲ್ಲ. ಆದರೆ ನಾನು ಇನ್ನೂ ಸ್ವಲ್ಪ ಹಣವನ್ನು ಕಳುಹಿಸುತ್ತಿದ್ದೆ. ಈ ರೀತಿಯಾಗಬಹುದು ಎಂದು ನನಗೆ ತಿಳಿದಿರಲಿಲ್ಲ” ಎಂದಿದ್ದಾರೆ ದರ್ಶನ್ ತಂದೆ.

ಇದನ್ನೂ ಓದಿರಿ: ಜಾತಿ ನಿಂದನೆ ಆರೋಪ; ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆ*ಹತ್ಯೆ

ದರ್ಶನ್ ಸೋಲಂಕಿ ಅವರು ವ್ಯವಸ್ಥಿತವಾಗಿ ತಾರತಮ್ಯವನ್ನು ಎದುರಿಸಿದ್ದಾರೆ ಎಂಬ ಆರೋಪವನ್ನು ಐಐಟಿ ಬಾಂಬೆ ತಳ್ಳಿಹಾಕಿದೆ. ಅವರ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.

“ಐಐಟಿ ಬಾಂಬೆಯ 1ನೇ ವರ್ಷದ ಬಿಟೆಕ್ ವಿದ್ಯಾರ್ಥಿಯ ದುರಂತ ಸಾವಿನ ಬಗ್ಗೆ ಆಗುತ್ತಿರುವ ಕೆಲವು ಸುದ್ದಿಗಳನ್ನು ನಾವು ನಿರಾಕರಿಸುತ್ತೇವೆ. ಸಾಂಸ್ಥಿಕ ಕೊಲೆ ಇದಾಗಿದೆ, ತಾರತಮ್ಯ ನಡೆದಿದೆ ಎಂಬುದು ಸುಳ್ಳು” ಎಂದು ಶಿಕ್ಷಣ ಸಂಸ್ಥೆ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಭಾನುವಾರ ಹಾಸ್ಟೆಲ್ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ದರ್ಶನ್ ಸಾವನ್ನಪ್ಪಿದ ನಂತರ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿದ್ದಾರೆ. ಅವರಿಗೆ ಇನ್ನೂ ಸೂಸೈಡ್ ನೋಟ್ ಸಿಕ್ಕಿಲ್ಲ, ಆದರೆ ಕ್ಯಾಂಪಸ್‌ನಲ್ಲಿ ದಲಿತ ವಿದ್ಯಾರ್ಥಿಗಳ ವಿರುದ್ಧ ಆಗುತ್ತಿರುವ ತಾರತಮ್ಯದಿಂದಾಗಿ ದರ್ಶನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿದ್ಯಾರ್ಥಿ ಸಂಘಟನೆಗಳು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...