Homeಮುಖಪುಟಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

- Advertisement -
- Advertisement -

ಅದು 2006ರ ಸಮಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದರೆ, ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ, ಆಗತಾನೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದ ಹೆಚ್‌.ಡಿ. ಕುಮಾರಸ್ವಾಮಿ ನಾಡಿನ ಹಿರಿಯ ರಾಜಕಾರಣಿ ಧರ್ಮಸಿಂಗ್‌ ಪಾಲಿಗೆ ಅಕ್ಷರಶಃ ದುಸ್ವಪ್ನದಂತೆ ಕಾಡಿದ್ದರು. ಕೊನೆಗೆ ಮೈತ್ರಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಜೊತೆಗೆ ಕೈಜೋಡಿಸಿ ಅಪವಿತ್ರ ಮೈತ್ರಿಗೆ ನಾಂದಿ ಹಾಡಿದ್ದರು.

ಕರ್ನಾಟಕ ರಾಜಕಾರಣದ ಪಾಲಿಗೆ ಈಗಲೂ ಇದೊಂದು ಅಪವಿತ್ರ ಮೈತ್ರಿ ಮತ್ತು ಜೆಡಿಎಸ್‌ ರಾಜಕೀಯ ಹಾದಿಯ ಒಂದು ಪ್ರಮಾದ ಎಂದೇ ಬಣ್ಣಿಸಲಾಗುತ್ತದೆ. ಅಂದು ಈ ಮೈತ್ರಿಯನ್ನು ಸುಲಭಕ್ಕೆ ಮುರಿಯಬಹುದಾದ ಶಕ್ತಿ ಮಾಜಿ ಪ್ರಧಾನಿ ದೇವೇಗೌಡರಿಗೆ ಇತ್ತು. ಆದರೆ, ಪುತ್ರ ವ್ಯಾಮೋಹ ಅವರ ಕೈಯನ್ನು ಕಟ್ಟಿಹಾಕಿತ್ತು. ದಶಕದ ಹಿಂದೆ ಹೀಗೆ ನಡೆದುಹೋದ ಒಂದು ರಾಜಕೀಯ ಪ್ರಮಾದಕ್ಕೆ ಈಗಲೂ ಜೆಡಿಎಸ್‌ ಬೆಲೆ ತೆರುತ್ತಲೇ ಇದೆ.

ದಶಕದ ಹಿಂದಿನ ಈ ರಾಜಕೀಯ ಇತಿಹಾಸವನ್ನು ಈಗ ನೆನೆಪು ಮಾಡಿಕೊಳ್ಳುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಮಗ ಸೂಪರ್‌ ಸಿಎಂ ಖ್ಯಾತಿಯ ಬಿ.ವೈ. ವಿಜಯೇಂದ್ರ.

ಕುಟುಂಬ ರಾಜಕಾರಣ ಮತ್ತು ಪುತ್ರ ವ್ಯಾಮೋಹ ಇಂದು ಜೆಡಿಎಸ್‌ ಪಕ್ಷಕ್ಕೆ ಮುಳುವಾಗಿರುವಂತೆಯೇ, ಇದೇ ಪುತ್ರ ವ್ಯಾಮೋಹ ಮತ್ತು ತನ್ನ ರಾಜಕೀಯ ಉತ್ತರಾಧಿಕಾರಿಯನ್ನು ಬಿಜೆಪಿಯಲ್ಲಿ ಉಳಿಸಿಹೋಗಬೇಕು ಎಂಬ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಅವರ ರಾಜಕೀಯ ಹಾದಿಗೆ ಮುಳ್ಳಾಗಲಿದೆಯೇ? ಎಂಬ ಮಹತ್ವದ ಪ್ರಶ್ನೆಗಳು ಇಂದು ರಾಜ್ಯ ರಾಜಕೀಯದಲ್ಲಿ ತಲೆ ಎತ್ತುತ್ತಿವೆ. ಇದಕ್ಕೆ ಕಾರಣಗಳೂ ಇಲ್ಲದೆ ಏನಿಲ್ಲ.

ಈತ ಶಾಸಕನೇನಲ್ಲ ಅದರೂ ಸೂಪರ್‌ ಸಿಎಂ ಹೆಸರು ವಿಜಯೇಂದ್ರ!

ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿ ಆಯ್ಕೆಯಾದವರು. ಒಂದು ಬಾರಿಯೂ ಸಹ ಪೂರ್ಣ ಪ್ರಮಾಣದ ಸಿಎಂ ಆಗಿ ಅಧಿಕಾರ ನಡೆಸದಿದ್ದರೂ ಸಹ ಈಗಲೂ ಬಿಜೆಪಿಯಲ್ಲಿ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಸಹ ಸಿಎಂ ಸ್ಥಾನದಲ್ಲಿ ಕಲ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಬಿಜೆಪಿಯಲ್ಲಿ 75 ವಯಸ್ಸಿನ ಮೇಲ್ಪಟ್ಟವರಿಗೆ ರಾಜಕೀಯ ನಿವೃತ್ತಿ ನೀಡಲಾಗುತ್ತಿದ್ದರೂ ಬಿಎಸ್‌ವೈ ಅವರನ್ನು ಮಾತ್ರ  ಹೈಕಮಾಂಡ್‌ ಏನೂ ಮಾಡಲು ಸಾಧ್ಯವಾಗಿಲ್ಲ.

ಕಳೆದ ಮೂರು ಅವಧಿಯಲ್ಲೂ ಸಹ ಯಡಿಯೂರಪ್ಪನವರಿಗೆ ಮಗ ವಿಜಯೇಂದ್ರ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿಯಾಗಿ ಬೆಳೆಸುವ ಯಾವುದೇ ಇರಾದೆ ಇರಲಿಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಯಡಿಯೂರಪ್ಪನವರ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಇದ್ದರು. ಶೋಭ ಅವರನ್ನೇ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿತ್ತು. ಆದರೆ, ಸಿಎಂ ಕುಟುಂಬದಲ್ಲಿ ನಡೆದ ಬಿಕ್ಕಟ್ಟಿನ ಕಾರಣಕ್ಕೆ ಇಂದು ಶೋಭಾ ಕರಂದ್ಲಾಜೆ ಅವರ ಜಾಗಕ್ಕೆ ಮಗ ವಿಜಯೇಂದ್ರ ಬಂದು ನಿಂತಿದ್ದಾರೆ. ಮತ್ತು ಇವರೇ ಯಡಿಯೂರಪ್ಪವರ ರಾಜಕೀಯ ಉತ್ತರಾಧಿಕಾರಿ ಎಂಬುದರಲ್ಲಿ ಎರಡು ಮಾತಿಲ್ಲ.

ವಿಜಯೇಂದ್ರ

ಈ ಬೆಳವಣಿಗೆ ಇಷ್ಟಕ್ಕೆ ಸೀಮಿತವಾಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ಇದನ್ನೂ ದಾಟಿ ವಿಜಯೇಂದ್ರ ಇಂದು ಅಕ್ಷರಶಃ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ವಿಜಯೇಂದ್ರ ಮೂಲತಃ  ಶಾಸಕರಲ್ಲ, ಇನ್ನೂ ಪಕ್ಷದಲ್ಲೂ ಅವರಿಗೆ ದೊಡ್ಡ ಸ್ಥಾನಮಾನವೇನೂ ಇಲ್ಲ. ಕೆ.ಆರ್‌ ಪೇಟೆ ಉಪ ಚುನಾವಣೆ ಗೆಲುವನ್ನು ಹೊರತುಪಡಿಸಿ ಬೇರೆ ಯಾವ ದಾಖಲೆಯೂ ಅವರ ಬೆನ್ನಿಗಿಲ್ಲ. ಆದರೂ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಬೇಕು ಎಂಬಲ್ಲಿಂದ ಸರ್ಕಾರದ ಮಹತ್ವದ ಯೋಜನೆ-ಕಾಮಗಾರಿಗಳವರೆಗೆ ಎಲ್ಲವೂ ವಿಜಯೇಂದ್ರ ಅವರ ಅಂಕೆಯಲ್ಲೇ ನಡೆಯುತ್ತಿದೆ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ.

ಯಡಿಯೂರಪ್ಪನವರಿಗೆ ಕಾದಿದೆಯಾ ಕಂಟಕ?

ಮೊದಲೇ ಹೇಳಿದಂತೆ ಬಿ.ಎಸ್‌. ಯಡಿಯೂರಪ್ಪ ನಾಲ್ಕು ಬಾರಿ ಈ ರಾಜ್ಯದ ಸಿಎಂ ಆದರೂ ಸಹ ಪೂರ್ಣ ಅವಧಿಯ ಅಧಿಕಾರವನ್ನು ಪೂರೈಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರಿಗೆ ಮುಂದಿನ ಮೂರು ವರ್ಷ ಸಿಎಂ ಆಗಿ ಮುಂದುವರೆಯುವ ಅವಕಾಶ ಇದೆ. ಈ ನಡುವೆ ಇಂತಹ ಸವರ್ಣಾವಕಾಶವನ್ನು ಸ್ವತಃ ಅವರೇ ತಮ್ಮ ಕೈಯಾರೆ ಹಾಳು ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಕಾರಣ ಪುತ್ರ ವ್ಯಾಮೋಹ.

ಇಂದು ರಾಜ್ಯ ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಸಹ ಪಕ್ಷದೊಳಗಿನ ಒಳ ಬೇಗುದಿ ಇನ್ನೂ ತಣ್ಣಗಾಗಿಲ್ಲ. ಒಂದೆದೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಹಿಡಿದ ಪಟ್ಟು ಇನ್ನೂ ಸಡಿಲಿಸಿಲ್ಲ ಮತ್ತೊಂದೆಡೆ ಸಚಿವ ಸ್ಥಾನಾಕಾಂಕ್ಷಿಗಳಾದ ಉಮೇಶ್‌ ಕತ್ತಿ, ರೇಣುಕಾಚಾರ್ಯ, ಮುರುಗೇಶ್‌ ನಿರಾಣಿಯಂತಹ ಹಿರಿಯ ಶಾಸಕರು ಯಡಿಯೂರಪ್ಪ ವಿರುದ್ಧ ತೆರೆಯ ಮರೆಯಲ್ಲೇ ಕತ್ತಿ ಮಸೆಯುತ್ತಿರುವುದೇನೂ ಇಂದು ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಯಡಿಯೂರಪ್ಪನವರ ಪುತ್ರ ವ್ಯಾಮೋಹ ಮತ್ತು ವಿಜಯೇಂದ್ರ ಅವರ ಸೂಪರ್‌ ಸಿಎಂ ನಡವಳಿಕೆ ಭವಿಷ್ಯದಲ್ಲಿ ಯಡಿಯೂರಪ್ಪವರಿಗೆ ದುಬಾರಿಯಾಗುವ ಎಲ್ಲಾ ಲಕ್ಷಣಗಳನ್ನೂ ಕಣ್ಣೆದುರು ತೆರೆದಿಟ್ಟಿದೆ.

ಪಕ್ಷದ ಹಿರಿಯ ಶಾಸಕರು ತಮ್ಮ ಕ್ಷೇತ್ರದ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಬಂದರೂ ಸಹ ಯಡಿಯೂರಪ್ಪ ಎಲ್ಲರಿಗೂ ವಿಜಯೇಂದ್ರ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲಾ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸದ್ದಿಲ್ಲದೆ ಸಿಎಂ ವಿರುದ್ಧ ಒಂದು ಗುಂಪು ಧೃವೀಕರಣಗೊಳ್ಳುತ್ತಿದೆ. ಉಮೇಶ್‌ ಕತ್ತಿ ಇದರ ನಾಯಕ ಎನ್ನಲಾಗುತ್ತಿದೆ.

ಉಮೇಶ್‌ ಕತ್ತಿ

ಇದಲ್ಲದೆ ಮೊನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವತಃ 15ಕ್ಕೂ ಹೆಚ್ಚು ಲಿಂಗಾಯತ ಸಮುದಾಯದ ಶಾಸಕರು ಈ ವಿಚಾರವನ್ನು ಎತ್ತಿದ್ದಾರೆ, ಬಿಎಸ್‌ವೈ ನಡೆಯನ್ನು ಖಂಡಿಸಿದ್ದಾರೆ. ವಿಜಯಪುರದ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಹ, “ನಾನು ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವನಾಗಿದ್ದವನು. ನನ್ನಂತವನು ಅನುದಾಕ್ಕಾಗಿ ಕೋರಿ ಶಾಸಕನಾಗಿ ವಿಧಾನಸಭೆಯನ್ನೂ ಪ್ರವೇಶಿಸದ ವಿಜಯೇಂದ್ರನ ಎದುರು ನಿಲ್ಲಬೇಕೆ?” ಎಂದು ಕಟುವಾಗಿ ಟೀಕಿಸಿದ್ದಾರೆ ಎನ್ನಲಾಗುತ್ತಿದೆ.

ಬಸನಗೌಡ ಪಾಟೀಲ ಯತ್ನಾಳ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ರಾಜ್ಯದ ಹಿರಿಯ ಬಿಜೆಪಿ ಶಾಸಕರು ಈಗಾಗಲೇ ಈ ಕುರಿತ ದೂರನ್ನು ತಲುಪಿಸಿದ್ದಾರೆ. ಅಲ್ಲದೆ, ಬಿಎಸ್‌ವೈ ವಿರುದ್ದ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸದ್ದಿಲ್ಲದೆ ಒಂದು ಬಣ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ. ಒಂದು ವೇಳೆ ಇದು ನಿಜವಾದರೆ ಮುಂದಿನ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದು ಖಚಿತ. ಆದರೆ, ಬಿಎಸ್‌ವೈ ಸಿಎಂ ಸ್ಥಾನ ಅನಿಶ್ಚಿತ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಸ್ತುತ ರಾಜ್ಯ ರಾಜಕೀಯದ ಎಲ್ಲಾ ಸನ್ನಿವೇಶಗಳನ್ನೂ ಹಿಂದಿನ ರಾಜಕೀಯ ಇತಿಹಾಸದ ಜೊತೆಗೆ ತಾಳೆ ಹಾಕಿ ನೋಡಿದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...