Homeಮುಖಪುಟಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

- Advertisement -
- Advertisement -

ಅದು 2006ರ ಸಮಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದರೆ, ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ, ಆಗತಾನೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದ ಹೆಚ್‌.ಡಿ. ಕುಮಾರಸ್ವಾಮಿ ನಾಡಿನ ಹಿರಿಯ ರಾಜಕಾರಣಿ ಧರ್ಮಸಿಂಗ್‌ ಪಾಲಿಗೆ ಅಕ್ಷರಶಃ ದುಸ್ವಪ್ನದಂತೆ ಕಾಡಿದ್ದರು. ಕೊನೆಗೆ ಮೈತ್ರಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಜೊತೆಗೆ ಕೈಜೋಡಿಸಿ ಅಪವಿತ್ರ ಮೈತ್ರಿಗೆ ನಾಂದಿ ಹಾಡಿದ್ದರು.

ಕರ್ನಾಟಕ ರಾಜಕಾರಣದ ಪಾಲಿಗೆ ಈಗಲೂ ಇದೊಂದು ಅಪವಿತ್ರ ಮೈತ್ರಿ ಮತ್ತು ಜೆಡಿಎಸ್‌ ರಾಜಕೀಯ ಹಾದಿಯ ಒಂದು ಪ್ರಮಾದ ಎಂದೇ ಬಣ್ಣಿಸಲಾಗುತ್ತದೆ. ಅಂದು ಈ ಮೈತ್ರಿಯನ್ನು ಸುಲಭಕ್ಕೆ ಮುರಿಯಬಹುದಾದ ಶಕ್ತಿ ಮಾಜಿ ಪ್ರಧಾನಿ ದೇವೇಗೌಡರಿಗೆ ಇತ್ತು. ಆದರೆ, ಪುತ್ರ ವ್ಯಾಮೋಹ ಅವರ ಕೈಯನ್ನು ಕಟ್ಟಿಹಾಕಿತ್ತು. ದಶಕದ ಹಿಂದೆ ಹೀಗೆ ನಡೆದುಹೋದ ಒಂದು ರಾಜಕೀಯ ಪ್ರಮಾದಕ್ಕೆ ಈಗಲೂ ಜೆಡಿಎಸ್‌ ಬೆಲೆ ತೆರುತ್ತಲೇ ಇದೆ.

ದಶಕದ ಹಿಂದಿನ ಈ ರಾಜಕೀಯ ಇತಿಹಾಸವನ್ನು ಈಗ ನೆನೆಪು ಮಾಡಿಕೊಳ್ಳುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಮಗ ಸೂಪರ್‌ ಸಿಎಂ ಖ್ಯಾತಿಯ ಬಿ.ವೈ. ವಿಜಯೇಂದ್ರ.

ಕುಟುಂಬ ರಾಜಕಾರಣ ಮತ್ತು ಪುತ್ರ ವ್ಯಾಮೋಹ ಇಂದು ಜೆಡಿಎಸ್‌ ಪಕ್ಷಕ್ಕೆ ಮುಳುವಾಗಿರುವಂತೆಯೇ, ಇದೇ ಪುತ್ರ ವ್ಯಾಮೋಹ ಮತ್ತು ತನ್ನ ರಾಜಕೀಯ ಉತ್ತರಾಧಿಕಾರಿಯನ್ನು ಬಿಜೆಪಿಯಲ್ಲಿ ಉಳಿಸಿಹೋಗಬೇಕು ಎಂಬ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಅವರ ರಾಜಕೀಯ ಹಾದಿಗೆ ಮುಳ್ಳಾಗಲಿದೆಯೇ? ಎಂಬ ಮಹತ್ವದ ಪ್ರಶ್ನೆಗಳು ಇಂದು ರಾಜ್ಯ ರಾಜಕೀಯದಲ್ಲಿ ತಲೆ ಎತ್ತುತ್ತಿವೆ. ಇದಕ್ಕೆ ಕಾರಣಗಳೂ ಇಲ್ಲದೆ ಏನಿಲ್ಲ.

ಈತ ಶಾಸಕನೇನಲ್ಲ ಅದರೂ ಸೂಪರ್‌ ಸಿಎಂ ಹೆಸರು ವಿಜಯೇಂದ್ರ!

ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿ ಆಯ್ಕೆಯಾದವರು. ಒಂದು ಬಾರಿಯೂ ಸಹ ಪೂರ್ಣ ಪ್ರಮಾಣದ ಸಿಎಂ ಆಗಿ ಅಧಿಕಾರ ನಡೆಸದಿದ್ದರೂ ಸಹ ಈಗಲೂ ಬಿಜೆಪಿಯಲ್ಲಿ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಸಹ ಸಿಎಂ ಸ್ಥಾನದಲ್ಲಿ ಕಲ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಬಿಜೆಪಿಯಲ್ಲಿ 75 ವಯಸ್ಸಿನ ಮೇಲ್ಪಟ್ಟವರಿಗೆ ರಾಜಕೀಯ ನಿವೃತ್ತಿ ನೀಡಲಾಗುತ್ತಿದ್ದರೂ ಬಿಎಸ್‌ವೈ ಅವರನ್ನು ಮಾತ್ರ  ಹೈಕಮಾಂಡ್‌ ಏನೂ ಮಾಡಲು ಸಾಧ್ಯವಾಗಿಲ್ಲ.

ಕಳೆದ ಮೂರು ಅವಧಿಯಲ್ಲೂ ಸಹ ಯಡಿಯೂರಪ್ಪನವರಿಗೆ ಮಗ ವಿಜಯೇಂದ್ರ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿಯಾಗಿ ಬೆಳೆಸುವ ಯಾವುದೇ ಇರಾದೆ ಇರಲಿಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಯಡಿಯೂರಪ್ಪನವರ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಇದ್ದರು. ಶೋಭ ಅವರನ್ನೇ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿತ್ತು. ಆದರೆ, ಸಿಎಂ ಕುಟುಂಬದಲ್ಲಿ ನಡೆದ ಬಿಕ್ಕಟ್ಟಿನ ಕಾರಣಕ್ಕೆ ಇಂದು ಶೋಭಾ ಕರಂದ್ಲಾಜೆ ಅವರ ಜಾಗಕ್ಕೆ ಮಗ ವಿಜಯೇಂದ್ರ ಬಂದು ನಿಂತಿದ್ದಾರೆ. ಮತ್ತು ಇವರೇ ಯಡಿಯೂರಪ್ಪವರ ರಾಜಕೀಯ ಉತ್ತರಾಧಿಕಾರಿ ಎಂಬುದರಲ್ಲಿ ಎರಡು ಮಾತಿಲ್ಲ.

ವಿಜಯೇಂದ್ರ

ಈ ಬೆಳವಣಿಗೆ ಇಷ್ಟಕ್ಕೆ ಸೀಮಿತವಾಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ಇದನ್ನೂ ದಾಟಿ ವಿಜಯೇಂದ್ರ ಇಂದು ಅಕ್ಷರಶಃ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ವಿಜಯೇಂದ್ರ ಮೂಲತಃ  ಶಾಸಕರಲ್ಲ, ಇನ್ನೂ ಪಕ್ಷದಲ್ಲೂ ಅವರಿಗೆ ದೊಡ್ಡ ಸ್ಥಾನಮಾನವೇನೂ ಇಲ್ಲ. ಕೆ.ಆರ್‌ ಪೇಟೆ ಉಪ ಚುನಾವಣೆ ಗೆಲುವನ್ನು ಹೊರತುಪಡಿಸಿ ಬೇರೆ ಯಾವ ದಾಖಲೆಯೂ ಅವರ ಬೆನ್ನಿಗಿಲ್ಲ. ಆದರೂ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಬೇಕು ಎಂಬಲ್ಲಿಂದ ಸರ್ಕಾರದ ಮಹತ್ವದ ಯೋಜನೆ-ಕಾಮಗಾರಿಗಳವರೆಗೆ ಎಲ್ಲವೂ ವಿಜಯೇಂದ್ರ ಅವರ ಅಂಕೆಯಲ್ಲೇ ನಡೆಯುತ್ತಿದೆ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ.

ಯಡಿಯೂರಪ್ಪನವರಿಗೆ ಕಾದಿದೆಯಾ ಕಂಟಕ?

ಮೊದಲೇ ಹೇಳಿದಂತೆ ಬಿ.ಎಸ್‌. ಯಡಿಯೂರಪ್ಪ ನಾಲ್ಕು ಬಾರಿ ಈ ರಾಜ್ಯದ ಸಿಎಂ ಆದರೂ ಸಹ ಪೂರ್ಣ ಅವಧಿಯ ಅಧಿಕಾರವನ್ನು ಪೂರೈಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರಿಗೆ ಮುಂದಿನ ಮೂರು ವರ್ಷ ಸಿಎಂ ಆಗಿ ಮುಂದುವರೆಯುವ ಅವಕಾಶ ಇದೆ. ಈ ನಡುವೆ ಇಂತಹ ಸವರ್ಣಾವಕಾಶವನ್ನು ಸ್ವತಃ ಅವರೇ ತಮ್ಮ ಕೈಯಾರೆ ಹಾಳು ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಕಾರಣ ಪುತ್ರ ವ್ಯಾಮೋಹ.

ಇಂದು ರಾಜ್ಯ ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಸಹ ಪಕ್ಷದೊಳಗಿನ ಒಳ ಬೇಗುದಿ ಇನ್ನೂ ತಣ್ಣಗಾಗಿಲ್ಲ. ಒಂದೆದೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಹಿಡಿದ ಪಟ್ಟು ಇನ್ನೂ ಸಡಿಲಿಸಿಲ್ಲ ಮತ್ತೊಂದೆಡೆ ಸಚಿವ ಸ್ಥಾನಾಕಾಂಕ್ಷಿಗಳಾದ ಉಮೇಶ್‌ ಕತ್ತಿ, ರೇಣುಕಾಚಾರ್ಯ, ಮುರುಗೇಶ್‌ ನಿರಾಣಿಯಂತಹ ಹಿರಿಯ ಶಾಸಕರು ಯಡಿಯೂರಪ್ಪ ವಿರುದ್ಧ ತೆರೆಯ ಮರೆಯಲ್ಲೇ ಕತ್ತಿ ಮಸೆಯುತ್ತಿರುವುದೇನೂ ಇಂದು ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಯಡಿಯೂರಪ್ಪನವರ ಪುತ್ರ ವ್ಯಾಮೋಹ ಮತ್ತು ವಿಜಯೇಂದ್ರ ಅವರ ಸೂಪರ್‌ ಸಿಎಂ ನಡವಳಿಕೆ ಭವಿಷ್ಯದಲ್ಲಿ ಯಡಿಯೂರಪ್ಪವರಿಗೆ ದುಬಾರಿಯಾಗುವ ಎಲ್ಲಾ ಲಕ್ಷಣಗಳನ್ನೂ ಕಣ್ಣೆದುರು ತೆರೆದಿಟ್ಟಿದೆ.

ಪಕ್ಷದ ಹಿರಿಯ ಶಾಸಕರು ತಮ್ಮ ಕ್ಷೇತ್ರದ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಬಂದರೂ ಸಹ ಯಡಿಯೂರಪ್ಪ ಎಲ್ಲರಿಗೂ ವಿಜಯೇಂದ್ರ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲಾ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸದ್ದಿಲ್ಲದೆ ಸಿಎಂ ವಿರುದ್ಧ ಒಂದು ಗುಂಪು ಧೃವೀಕರಣಗೊಳ್ಳುತ್ತಿದೆ. ಉಮೇಶ್‌ ಕತ್ತಿ ಇದರ ನಾಯಕ ಎನ್ನಲಾಗುತ್ತಿದೆ.

ಉಮೇಶ್‌ ಕತ್ತಿ

ಇದಲ್ಲದೆ ಮೊನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವತಃ 15ಕ್ಕೂ ಹೆಚ್ಚು ಲಿಂಗಾಯತ ಸಮುದಾಯದ ಶಾಸಕರು ಈ ವಿಚಾರವನ್ನು ಎತ್ತಿದ್ದಾರೆ, ಬಿಎಸ್‌ವೈ ನಡೆಯನ್ನು ಖಂಡಿಸಿದ್ದಾರೆ. ವಿಜಯಪುರದ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಹ, “ನಾನು ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವನಾಗಿದ್ದವನು. ನನ್ನಂತವನು ಅನುದಾಕ್ಕಾಗಿ ಕೋರಿ ಶಾಸಕನಾಗಿ ವಿಧಾನಸಭೆಯನ್ನೂ ಪ್ರವೇಶಿಸದ ವಿಜಯೇಂದ್ರನ ಎದುರು ನಿಲ್ಲಬೇಕೆ?” ಎಂದು ಕಟುವಾಗಿ ಟೀಕಿಸಿದ್ದಾರೆ ಎನ್ನಲಾಗುತ್ತಿದೆ.

ಬಸನಗೌಡ ಪಾಟೀಲ ಯತ್ನಾಳ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ರಾಜ್ಯದ ಹಿರಿಯ ಬಿಜೆಪಿ ಶಾಸಕರು ಈಗಾಗಲೇ ಈ ಕುರಿತ ದೂರನ್ನು ತಲುಪಿಸಿದ್ದಾರೆ. ಅಲ್ಲದೆ, ಬಿಎಸ್‌ವೈ ವಿರುದ್ದ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸದ್ದಿಲ್ಲದೆ ಒಂದು ಬಣ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ. ಒಂದು ವೇಳೆ ಇದು ನಿಜವಾದರೆ ಮುಂದಿನ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದು ಖಚಿತ. ಆದರೆ, ಬಿಎಸ್‌ವೈ ಸಿಎಂ ಸ್ಥಾನ ಅನಿಶ್ಚಿತ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಸ್ತುತ ರಾಜ್ಯ ರಾಜಕೀಯದ ಎಲ್ಲಾ ಸನ್ನಿವೇಶಗಳನ್ನೂ ಹಿಂದಿನ ರಾಜಕೀಯ ಇತಿಹಾಸದ ಜೊತೆಗೆ ತಾಳೆ ಹಾಕಿ ನೋಡಿದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...