Homeಮುಖಪುಟಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಪುತ್ರ ವ್ಯಾಮೋಹದ ಎಫೆಕ್ಟ್‌; ಮೂರು ವರ್ಷ ಬಿಜೆಪಿ ಅಧಿಕಾರದಲ್ಲಿರುವುದು ಖಚಿತ, ಬಿಎಸ್‌ವೈ ಸ್ಥಾನ ಅನಿಶ್ಚಿತ!

ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

- Advertisement -
- Advertisement -

ಅದು 2006ರ ಸಮಯ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿತ್ತು. ಧರ್ಮಸಿಂಗ್‌ ಮುಖ್ಯಮಂತ್ರಿಯಾಗಿದ್ದರೆ, ಸಿದ್ದರಾಮಯ್ಯ ಉಪ ಮುಖ್ಯಮಂತ್ರಿಯಾಗಿದ್ದರು. ಆದರೆ, ಆಗತಾನೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದ ಹೆಚ್‌.ಡಿ. ಕುಮಾರಸ್ವಾಮಿ ನಾಡಿನ ಹಿರಿಯ ರಾಜಕಾರಣಿ ಧರ್ಮಸಿಂಗ್‌ ಪಾಲಿಗೆ ಅಕ್ಷರಶಃ ದುಸ್ವಪ್ನದಂತೆ ಕಾಡಿದ್ದರು. ಕೊನೆಗೆ ಮೈತ್ರಿ ಸರ್ಕಾರವನ್ನೇ ಬೀಳಿಸಿ ಬಿಜೆಪಿ ಜೊತೆಗೆ ಕೈಜೋಡಿಸಿ ಅಪವಿತ್ರ ಮೈತ್ರಿಗೆ ನಾಂದಿ ಹಾಡಿದ್ದರು.

ಕರ್ನಾಟಕ ರಾಜಕಾರಣದ ಪಾಲಿಗೆ ಈಗಲೂ ಇದೊಂದು ಅಪವಿತ್ರ ಮೈತ್ರಿ ಮತ್ತು ಜೆಡಿಎಸ್‌ ರಾಜಕೀಯ ಹಾದಿಯ ಒಂದು ಪ್ರಮಾದ ಎಂದೇ ಬಣ್ಣಿಸಲಾಗುತ್ತದೆ. ಅಂದು ಈ ಮೈತ್ರಿಯನ್ನು ಸುಲಭಕ್ಕೆ ಮುರಿಯಬಹುದಾದ ಶಕ್ತಿ ಮಾಜಿ ಪ್ರಧಾನಿ ದೇವೇಗೌಡರಿಗೆ ಇತ್ತು. ಆದರೆ, ಪುತ್ರ ವ್ಯಾಮೋಹ ಅವರ ಕೈಯನ್ನು ಕಟ್ಟಿಹಾಕಿತ್ತು. ದಶಕದ ಹಿಂದೆ ಹೀಗೆ ನಡೆದುಹೋದ ಒಂದು ರಾಜಕೀಯ ಪ್ರಮಾದಕ್ಕೆ ಈಗಲೂ ಜೆಡಿಎಸ್‌ ಬೆಲೆ ತೆರುತ್ತಲೇ ಇದೆ.

ದಶಕದ ಹಿಂದಿನ ಈ ರಾಜಕೀಯ ಇತಿಹಾಸವನ್ನು ಈಗ ನೆನೆಪು ಮಾಡಿಕೊಳ್ಳುವುದಕ್ಕೂ ಒಂದು ಕಾರಣ ಇದೆ. ಅದೇನೆಂದರೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ಅವರ ಮಗ ಸೂಪರ್‌ ಸಿಎಂ ಖ್ಯಾತಿಯ ಬಿ.ವೈ. ವಿಜಯೇಂದ್ರ.

ಕುಟುಂಬ ರಾಜಕಾರಣ ಮತ್ತು ಪುತ್ರ ವ್ಯಾಮೋಹ ಇಂದು ಜೆಡಿಎಸ್‌ ಪಕ್ಷಕ್ಕೆ ಮುಳುವಾಗಿರುವಂತೆಯೇ, ಇದೇ ಪುತ್ರ ವ್ಯಾಮೋಹ ಮತ್ತು ತನ್ನ ರಾಜಕೀಯ ಉತ್ತರಾಧಿಕಾರಿಯನ್ನು ಬಿಜೆಪಿಯಲ್ಲಿ ಉಳಿಸಿಹೋಗಬೇಕು ಎಂಬ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆ ಅವರ ರಾಜಕೀಯ ಹಾದಿಗೆ ಮುಳ್ಳಾಗಲಿದೆಯೇ? ಎಂಬ ಮಹತ್ವದ ಪ್ರಶ್ನೆಗಳು ಇಂದು ರಾಜ್ಯ ರಾಜಕೀಯದಲ್ಲಿ ತಲೆ ಎತ್ತುತ್ತಿವೆ. ಇದಕ್ಕೆ ಕಾರಣಗಳೂ ಇಲ್ಲದೆ ಏನಿಲ್ಲ.

ಈತ ಶಾಸಕನೇನಲ್ಲ ಅದರೂ ಸೂಪರ್‌ ಸಿಎಂ ಹೆಸರು ವಿಜಯೇಂದ್ರ!

ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿ ಆಯ್ಕೆಯಾದವರು. ಒಂದು ಬಾರಿಯೂ ಸಹ ಪೂರ್ಣ ಪ್ರಮಾಣದ ಸಿಎಂ ಆಗಿ ಅಧಿಕಾರ ನಡೆಸದಿದ್ದರೂ ಸಹ ಈಗಲೂ ಬಿಜೆಪಿಯಲ್ಲಿ ಅವರನ್ನು ಹೊರತುಪಡಿಸಿ ಬೇರೆ ಯಾರನ್ನೂ ಸಹ ಸಿಎಂ ಸ್ಥಾನದಲ್ಲಿ ಕಲ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಇದೇ ಕಾರಣಕ್ಕೆ ಬಿಜೆಪಿಯಲ್ಲಿ 75 ವಯಸ್ಸಿನ ಮೇಲ್ಪಟ್ಟವರಿಗೆ ರಾಜಕೀಯ ನಿವೃತ್ತಿ ನೀಡಲಾಗುತ್ತಿದ್ದರೂ ಬಿಎಸ್‌ವೈ ಅವರನ್ನು ಮಾತ್ರ  ಹೈಕಮಾಂಡ್‌ ಏನೂ ಮಾಡಲು ಸಾಧ್ಯವಾಗಿಲ್ಲ.

ಕಳೆದ ಮೂರು ಅವಧಿಯಲ್ಲೂ ಸಹ ಯಡಿಯೂರಪ್ಪನವರಿಗೆ ಮಗ ವಿಜಯೇಂದ್ರ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿಯಾಗಿ ಬೆಳೆಸುವ ಯಾವುದೇ ಇರಾದೆ ಇರಲಿಲ್ಲ ಎಂದೇ ಹೇಳಲಾಗುತ್ತಿದೆ. ಏಕೆಂದರೆ ಯಡಿಯೂರಪ್ಪನವರ ಹಿಂದೆ ಸಂಸದೆ ಶೋಭಾ ಕರಂದ್ಲಾಜೆ ಇದ್ದರು. ಶೋಭ ಅವರನ್ನೇ ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದು ಬಿಂಬಿಸಲಾಗಿತ್ತು. ಆದರೆ, ಸಿಎಂ ಕುಟುಂಬದಲ್ಲಿ ನಡೆದ ಬಿಕ್ಕಟ್ಟಿನ ಕಾರಣಕ್ಕೆ ಇಂದು ಶೋಭಾ ಕರಂದ್ಲಾಜೆ ಅವರ ಜಾಗಕ್ಕೆ ಮಗ ವಿಜಯೇಂದ್ರ ಬಂದು ನಿಂತಿದ್ದಾರೆ. ಮತ್ತು ಇವರೇ ಯಡಿಯೂರಪ್ಪವರ ರಾಜಕೀಯ ಉತ್ತರಾಧಿಕಾರಿ ಎಂಬುದರಲ್ಲಿ ಎರಡು ಮಾತಿಲ್ಲ.

ವಿಜಯೇಂದ್ರ

ಈ ಬೆಳವಣಿಗೆ ಇಷ್ಟಕ್ಕೆ ಸೀಮಿತವಾಗಿದ್ದರೆ ಸಮಸ್ಯೆ ಇರುತ್ತಿರಲಿಲ್ಲವೇನೋ? ಆದರೆ, ಇದನ್ನೂ ದಾಟಿ ವಿಜಯೇಂದ್ರ ಇಂದು ಅಕ್ಷರಶಃ ಸೂಪರ್‌ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ವಿಜಯೇಂದ್ರ ಮೂಲತಃ  ಶಾಸಕರಲ್ಲ, ಇನ್ನೂ ಪಕ್ಷದಲ್ಲೂ ಅವರಿಗೆ ದೊಡ್ಡ ಸ್ಥಾನಮಾನವೇನೂ ಇಲ್ಲ. ಕೆ.ಆರ್‌ ಪೇಟೆ ಉಪ ಚುನಾವಣೆ ಗೆಲುವನ್ನು ಹೊರತುಪಡಿಸಿ ಬೇರೆ ಯಾವ ದಾಖಲೆಯೂ ಅವರ ಬೆನ್ನಿಗಿಲ್ಲ. ಆದರೂ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ನೀಡಬೇಕು ಎಂಬಲ್ಲಿಂದ ಸರ್ಕಾರದ ಮಹತ್ವದ ಯೋಜನೆ-ಕಾಮಗಾರಿಗಳವರೆಗೆ ಎಲ್ಲವೂ ವಿಜಯೇಂದ್ರ ಅವರ ಅಂಕೆಯಲ್ಲೇ ನಡೆಯುತ್ತಿದೆ ಎಂಬುದು ಇಂದು ಗುಟ್ಟಾಗೇನು ಉಳಿದಿಲ್ಲ.

ಯಡಿಯೂರಪ್ಪನವರಿಗೆ ಕಾದಿದೆಯಾ ಕಂಟಕ?

ಮೊದಲೇ ಹೇಳಿದಂತೆ ಬಿ.ಎಸ್‌. ಯಡಿಯೂರಪ್ಪ ನಾಲ್ಕು ಬಾರಿ ಈ ರಾಜ್ಯದ ಸಿಎಂ ಆದರೂ ಸಹ ಪೂರ್ಣ ಅವಧಿಯ ಅಧಿಕಾರವನ್ನು ಪೂರೈಸಿಲ್ಲ. ಆದರೆ, ಇದೇ ಮೊದಲ ಬಾರಿಗೆ ಅವರಿಗೆ ಮುಂದಿನ ಮೂರು ವರ್ಷ ಸಿಎಂ ಆಗಿ ಮುಂದುವರೆಯುವ ಅವಕಾಶ ಇದೆ. ಈ ನಡುವೆ ಇಂತಹ ಸವರ್ಣಾವಕಾಶವನ್ನು ಸ್ವತಃ ಅವರೇ ತಮ್ಮ ಕೈಯಾರೆ ಹಾಳು ಮಾಡಿಕೊಳ್ಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದೆ. ಇದಕ್ಕೆ ಕಾರಣ ಪುತ್ರ ವ್ಯಾಮೋಹ.

ಇಂದು ರಾಜ್ಯ ಬಿಜೆಪಿಯಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿ ಇದ್ದಂತೆ ಕಂಡುಬಂದರೂ ಸಹ ಪಕ್ಷದೊಳಗಿನ ಒಳ ಬೇಗುದಿ ಇನ್ನೂ ತಣ್ಣಗಾಗಿಲ್ಲ. ಒಂದೆದೆ ಡಿಸಿಎಂ ಸ್ಥಾನಕ್ಕೆ ಶ್ರೀರಾಮುಲು ಹಿಡಿದ ಪಟ್ಟು ಇನ್ನೂ ಸಡಿಲಿಸಿಲ್ಲ ಮತ್ತೊಂದೆಡೆ ಸಚಿವ ಸ್ಥಾನಾಕಾಂಕ್ಷಿಗಳಾದ ಉಮೇಶ್‌ ಕತ್ತಿ, ರೇಣುಕಾಚಾರ್ಯ, ಮುರುಗೇಶ್‌ ನಿರಾಣಿಯಂತಹ ಹಿರಿಯ ಶಾಸಕರು ಯಡಿಯೂರಪ್ಪ ವಿರುದ್ಧ ತೆರೆಯ ಮರೆಯಲ್ಲೇ ಕತ್ತಿ ಮಸೆಯುತ್ತಿರುವುದೇನೂ ಇಂದು ಗುಟ್ಟಾಗಿ ಉಳಿದಿಲ್ಲ. ಈ ನಡುವೆ ಯಡಿಯೂರಪ್ಪನವರ ಪುತ್ರ ವ್ಯಾಮೋಹ ಮತ್ತು ವಿಜಯೇಂದ್ರ ಅವರ ಸೂಪರ್‌ ಸಿಎಂ ನಡವಳಿಕೆ ಭವಿಷ್ಯದಲ್ಲಿ ಯಡಿಯೂರಪ್ಪವರಿಗೆ ದುಬಾರಿಯಾಗುವ ಎಲ್ಲಾ ಲಕ್ಷಣಗಳನ್ನೂ ಕಣ್ಣೆದುರು ತೆರೆದಿಟ್ಟಿದೆ.

ಪಕ್ಷದ ಹಿರಿಯ ಶಾಸಕರು ತಮ್ಮ ಕ್ಷೇತ್ರದ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಬಂದರೂ ಸಹ ಯಡಿಯೂರಪ್ಪ ಎಲ್ಲರಿಗೂ ವಿಜಯೇಂದ್ರ ಕಡೆಗೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಾಮಾನ್ಯವಾಗಿ ಎಲ್ಲಾ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಸದ್ದಿಲ್ಲದೆ ಸಿಎಂ ವಿರುದ್ಧ ಒಂದು ಗುಂಪು ಧೃವೀಕರಣಗೊಳ್ಳುತ್ತಿದೆ. ಉಮೇಶ್‌ ಕತ್ತಿ ಇದರ ನಾಯಕ ಎನ್ನಲಾಗುತ್ತಿದೆ.

ಉಮೇಶ್‌ ಕತ್ತಿ

ಇದಲ್ಲದೆ ಮೊನ್ನೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವತಃ 15ಕ್ಕೂ ಹೆಚ್ಚು ಲಿಂಗಾಯತ ಸಮುದಾಯದ ಶಾಸಕರು ಈ ವಿಚಾರವನ್ನು ಎತ್ತಿದ್ದಾರೆ, ಬಿಎಸ್‌ವೈ ನಡೆಯನ್ನು ಖಂಡಿಸಿದ್ದಾರೆ. ವಿಜಯಪುರದ ವಿವಾದಾತ್ಮಕ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಸಹ, “ನಾನು ವಾಜಪೇಯಿ ಕಾಲದಲ್ಲಿ ಕೇಂದ್ರ ಸಚಿವನಾಗಿದ್ದವನು. ನನ್ನಂತವನು ಅನುದಾಕ್ಕಾಗಿ ಕೋರಿ ಶಾಸಕನಾಗಿ ವಿಧಾನಸಭೆಯನ್ನೂ ಪ್ರವೇಶಿಸದ ವಿಜಯೇಂದ್ರನ ಎದುರು ನಿಲ್ಲಬೇಕೆ?” ಎಂದು ಕಟುವಾಗಿ ಟೀಕಿಸಿದ್ದಾರೆ ಎನ್ನಲಾಗುತ್ತಿದೆ.

ಬಸನಗೌಡ ಪಾಟೀಲ ಯತ್ನಾಳ್‌

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಬಳಿ ರಾಜ್ಯದ ಹಿರಿಯ ಬಿಜೆಪಿ ಶಾಸಕರು ಈಗಾಗಲೇ ಈ ಕುರಿತ ದೂರನ್ನು ತಲುಪಿಸಿದ್ದಾರೆ. ಅಲ್ಲದೆ, ಬಿಎಸ್‌ವೈ ವಿರುದ್ದ ಉಮೇಶ್‌ ಕತ್ತಿ ನೇತೃತ್ವದಲ್ಲಿ ಸದ್ದಿಲ್ಲದೆ ಒಂದು ಬಣ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬಂತಹ ಮಾಹಿತಿಗಳು ಲಭ್ಯವಾಗುತ್ತಿವೆ. ಒಂದು ವೇಳೆ ಇದು ನಿಜವಾದರೆ ಮುಂದಿನ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದು ಖಚಿತ. ಆದರೆ, ಬಿಎಸ್‌ವೈ ಸಿಎಂ ಸ್ಥಾನ ಅನಿಶ್ಚಿತ ಎನ್ನಲಾಗುತ್ತಿದೆ.

ಒಟ್ಟಾರೆ ಪ್ರಸ್ತುತ ರಾಜ್ಯ ರಾಜಕೀಯದ ಎಲ್ಲಾ ಸನ್ನಿವೇಶಗಳನ್ನೂ ಹಿಂದಿನ ರಾಜಕೀಯ ಇತಿಹಾಸದ ಜೊತೆಗೆ ತಾಳೆ ಹಾಕಿ ನೋಡಿದರೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಜೆಡಿಎಸ್‌ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದ ಅದೇ ಪುತ್ರ ವ್ಯಾಮೋಹ ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಭವಿಷ್ಯಕ್ಕೂ ಮುಳ್ಳಾಗಿರುವುದು ಬಹುತೇಕ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...