Homeರಾಜಕೀಯ‘ನಮ್ಮ ಹೋಂವರ್ಕ್‌ ಪರಿಶೀಲಿಸಲು ಅವರು ನಮ್ಮ ಹೆಡ್‌‌ಮಾಸ್ಟರ್‌‌‌ ಅಲ್ಲ: ಲೆಫ್ಟಿನೆಂಟ್‌ ಗವರ್ನರ್‌‌‌‌ ವಿರುದ್ಧ ದೆಹಲಿ ಸಿಎಂ...

‘ನಮ್ಮ ಹೋಂವರ್ಕ್‌ ಪರಿಶೀಲಿಸಲು ಅವರು ನಮ್ಮ ಹೆಡ್‌‌ಮಾಸ್ಟರ್‌‌‌ ಅಲ್ಲ: ಲೆಫ್ಟಿನೆಂಟ್‌ ಗವರ್ನರ್‌‌‌‌ ವಿರುದ್ಧ ದೆಹಲಿ ಸಿಎಂ ಆಕ್ರೋಶ

- Advertisement -
- Advertisement -

ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಸೇನಾ ಅವರು ರಾಜ್ಯ ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಅವರ ಮನೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದ್ದಾರೆ. ಶಾಲಾ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಕಳುಹಿಸುವ ದೆಹಲಿ ಸರ್ಕಾರದ ಪ್ರಸ್ತಾವನೆಯನ್ನು ಲೆಫ್ಟಿನೆಂಟ್‌ ಗವರ್ನರ್‌‌ ತಿರಸ್ಕರಿಸಿದ್ದು, ಕೇಜ್ರಿವಾಲ್ ಸರ್ಕಾರದ ನಡುವೆ ಮತ್ತೆ ಸಂಘರ್ಷ ಉಂಟು ಮಾಡಿದೆ.

ಲೆಫ್ಟಿನೆಂಟ್‌ ಗವರ್ನರ್‌‌‌ ವಿರುದ್ಧ ವಾಗ್ದಾಳಿ ನಡೆಸಿರುವ ಕೇಜ್ರಿವಾಲ್, “ದೆಹಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಬಯಸುತ್ತದೆ ಸರ್ವಾಧಿಕಾರವನ್ನು ಬಯಸುವುದಿಲ್ಲ ಆದರೆ . ಜನರ ಹಕ್ಕುಗಳಿಗಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವರ್ಗಾವಣೆಗೊಂಡ ವಿಷಯಗಳಲ್ಲಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಲೆಫ್ಟಿನೆಂಟ್‌ ಗವರ್ನರ್‌‌‌ಗೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ ಅವರು ಕೇಳುತ್ತಿಲ್ಲ. ಅವರು ನಿರ್ವಾಹಕರಾಗಿದ್ದು, ಸರ್ವೋಚ್ಚ ಅಧಿಕಾರವನ್ನು ಹೊಂದಿದ್ದಾರೆ. ಅದಕ್ಕಾಗಿ ತಾನು ಏನು ಬೇಕಾದರೂ ಮಾಡಬಹುದು ಎಂದು ಅವರು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ದೆಹಲಿ ಸರ್ಕಾರಿ ಶಾಲಾ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಕಳುಹಿಸುವ ಫೈಲ್ ಪ್ರಸ್ತಾವನೆಯನ್ನು ಲೆಫ್ಟಿನೆಂಟ್‌ ಗವರ್ನರ್‌‌‌ ಹಿಂತಿರುಗಿಸಿ, ವೆಚ್ಚದ ಲಾಭದ ವಿಶ್ಲೇಷಣೆಯನ್ನು ಮಾಡುವಂತೆ ಕೇಳಿದ್ದಾರೆ. ಅವರು ದೇಶದ ಒಳಗಡೆಯೆ ಎಲ್ಲಾದರೂ ಶಿಕ್ಷಕರಿಗೆ ತರಬೇತಿ ನೀಡಿ ಎಂದು ಹೇಳುತ್ತಿದ್ದಾರೆ. ಲೆಫ್ಟಿನೆಂಟ್‌ ಗವರ್ನರ್‌‌ ಮತ್ತು ಬಿಜೆಪಿ ನಮ್ಮ ಮಕ್ಕಳ ಶಿಕ್ಷಣವನ್ನು ಹಾಳು ಮಾಡಲು ಪ್ರಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಆರೋಪಿಸಿದ್ದಾರೆ.

ರಾಜಕೀಯ ಕಾರಣಗಳಿಗಾಗಿ ದೆಹಲಿ ಸರ್ಕಾರದ ಕಾರ್ಯಗಳನ್ನು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸಲಾಗುತ್ತಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದು, “ಲೆಫ್ಟಿನೆಂಟ್‌ ಗವರ್ನರ್‌ ಅವರು ನಮ್ಮ ಹೋಂ ವರ್ಕ್‌‌ಗಳನ್ನು ಪರಿಶೀಲಿಸಲು ಅವೇರೇನು ನಮ್ಮ ಮುಖ್ಯೋಪಾಧ್ಯಾಯರಲ್ಲ. ಅವರು ನಮ್ಮ ಪ್ರಸ್ತಾಪಗಳಿಗೆ ಹೌದು ಅಥವಾ ಇಲ್ಲ ಎಂದಷ್ಟೆ ಹೇಳಬೇಕು” ಎಂದು ತಿಳಿಸಿದ್ದಾರೆ.

“ಲೆಫ್ಟಿನೆಂಟ್‌ ಗವರ್ನರ್‌ ಸಾಹೇಬರೇ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ಹೋಗಲು ಬಿಡಿ” ಎಂಬ ಫಲಕಗಳನ್ನು ಮುಖ್ಯಮಂತ್ರಿ ಪ್ರತಿಭಟನಾ ರ್‍ಯಾಲಿಯಲ್ಲಿ ಹಿಡಿದಿದ್ದರು.

ಇದೇ ವೇಳೆ ಇಂದು ಆರಂಭವಾಗಬೇಕಿದ್ದ ದೆಹಲಿ ವಿಧಾನಸಭೆ ಅಧಿವೇಶನವನ್ನು ಜನವರಿ 17ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: ಗುತ್ತಿಗೆದಾರರಿಂದ ಬಿಜೆಪಿ ಶಾಸಕನ ವಿರುದ್ಧ ಮತ್ತೆ ಕಮೀಷನ್ ಆರೋಪ; ಆಡಿಯೋ ರಿಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...