Homeಮುಖಪುಟಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

ಉತ್ತರಪ್ರದೇಶ: ಮತ್ತೊಬ್ಬ ಮಹಿಳೆಗಾಗಿ ಹೆಂಡತಿ, ಪುಟ್ಟ ಮಕ್ಕಳನ್ನು ಕೊಂದು, ಮನೆಯಲ್ಲಿ ಹೂತು ಪರಾರಿಯಾಗಿದ್ದ ವ್ಯಕ್ತಿ ಬಂಧನ

- Advertisement -
- Advertisement -

ಪಶ್ಚಿಮ ಉತ್ತರಪ್ರದೇಶದ ಕಸ್ಗಂಜ್ ಜಿಲ್ಲೆಯ ಪೊಲೀಸರು 2018 ರಲ್ಲಿ ಪತ್ನಿ ಮತ್ತು ಮಕ್ಕಳನ್ನು ಕೊಲೆಗೈದು, ಮನೆಯಲ್ಲಿ ಹೂತು ಹಾಕಿ, ಅಪರಾಧದಿಂದ ತಪ್ಪಿಸಿಕೊಳ್ಳಲು ತಾನು ಸಾವನ್ನಪ್ಪಿರುವ ಹಾಗೆ ಮತ್ತೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಪತ್ನಿ ಮತ್ತು ಮಕ್ಕಳನ್ನು ಕೊಲೆ ಮಾಡಿ ಅವರ ಶವಗಳನ್ನು ಮನೆಯಲ್ಲಿಯೇ ಹೂತು ಹಾಕಿದ್ದರು. ಮೂರು ವರ್ಷಗಳ ಹಿಂದಿನ ಘೋರ ಅಪರಾಧ ಪ್ರಕರಣವನ್ನು ಶೋಧಿಸುವಲ್ಲಿ ಸಫಲರಾಗಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಹೇಳುವಂತೆ, 34 ವರ್ಷದ ರಾಕೇಶ್, 2018 ರಲ್ಲಿ ಗ್ರೇಟರ್ ನೋಯ್ಡಾದಲ್ಲಿರುವ ಖಾಸಗಿ ಪ್ರಯೋಗಾಲಯದಲ್ಲಿ ರೋಗಶಾಸ್ತ್ರಜ್ಞನಾಗಿ ಕೆಲಸ ಮಾಡುತ್ತಿದ್ದು, ಮತ್ತೊಬ್ಬ ಮಹಿಳೆಯೊಂದಿಗೆ ಸಂಬಂಧವಿದ್ದ ಕಾರಣ ತನ್ನ ಸಂಸಾರದ ಎಲ್ಲರನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳಡಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ತುಮಕೂರು: ದನ ಮೇಯಿಸಲು ಹೋಗಿದ್ದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ- ತನಿಖೆಗೆ ತಂಡ ರಚನೆ

ಆರೋಪಿ, ಆತನ ಕುಟುಂಬದ ಮೂವರು ಸದಸ್ಯರು ಹಾಗೂ ಮಹಿಳೆಯನ್ನು ಬಂಧಿಸಲಾಗಿದೆ. ಆರೋಪಿಯ ತಂದೆ ನಿವೃತ್ತ ಪೊಲೀಸ್ ಆಗಿದ್ದು, ಈ ಕೊಲೆಯ ವಿವಿಧ ಹಂತಗಳಲ್ಲಿ ಆರೋಪಿಯ ಕುಟುಂಬ ಆತನಿಗೆ ಸಹಾಯ ಮಾಡಿದೆ ಎಂದು ಪೊಲೀಸರು ಹೇಳಿದ್ದಾರೆ.

“ಆರೋಪಿ ರಾಕೇಶ್, ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು 2018 ರ ಫೆಬ್ರವರಿಯಲ್ಲಿ ಕೊಲೆ ಮಾಡಿದ್ದರು. ಮಕ್ಕಳಲ್ಲಿ ಒಂದು ಮಗುವಿಗೆ ಮೂರು ವರ್ಷ ಮತ್ತೊಂದು ಮಗುವಿಗೆ 18 ತಿಂಗಳು. ಕೊಲೆ ಮಾಡಿ ಶವಗಳನ್ನು ಮನೆಯಲ್ಲಿ ಹೂತು ಹಾಕಿ, ಅದರ ಮೇಲೆ ಸಿಮೆಂಟ್ ಕಾಂಕ್ರಿಟ್ ಹಾಕಿದ್ದರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಹೆಂಡತಿ, ತನ್ನ ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದರು” ಎಂದು ಕಸ್ಗಂಜ್ ಪೊಲೀಸ್ ಮುಖ್ಯಸ್ಥ ರೋಹನ್ ಪ್ರಮೋದ್ ಬೋತ್ರೆ ಹೇಳಿದ್ದಾರೆ.

“ಮಗಳು ನಾಪತ್ತೆಯಾದ ಕೆಲವು ತಿಂಗಳುಗಳ ನಂತರ, ರಾಕೇಶ್ ಅವರ ಮಾವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಪಹರಣ ಮತ್ತು ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ನೋಯ್ಡಾದಲ್ಲಿ ಪೋಲಿಸ್ ಕೇಸ್ ದಾಖಲಿಸಿದರು. ನೋಯ್ಡಾ ಪೊಲೀಸರು ಕಾಣೆಯಾದ ಪ್ರಕರಣ ಮತ್ತು ಮಾವ ದಾಖಲಿಸಿದ ಪ್ರಕರಣ ಎರಡನ್ನೂ ತನಿಖೆ ಮಾಡುತ್ತಿದ್ದರು, ಆದರೆ ಎರಡೂ ಪ್ರಕರಣಗಳಲ್ಲಿ ಯಾವುದೇ ಪ್ರಮುಖ ಸುಳಿವು ಸಿಕ್ಕಿರಲಿಲ್ಲ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಆಸ್ತಿ ಮಾರಾಟ, ಬೆಲೆ ಏರಿಕೆ: ಕರ್ನಾಟಕ ಕಾಂಗ್ರೆಸ್‌ನಿಂದ ’ಬಿಜೆಪಿಯ ಲೂಟಿಯ ವಿರುದ್ದ ಭಾರತ’ ಅಭಿಯಾನ

“ಈ ಅಪರಾಧಗಳಿಂದ ತಪ್ಪಿಸಿಕೊಳ್ಳಲು ಆರೋಪಿ ಮತ್ತು ಅವನ ಗೆಳತಿ ಸೇರಿಕೊಂಡು ಕಸ್ಗಂಜ್‌ನ ತನ್ನ ಹಳ್ಳಿಯಲ್ಲಿ ರಾಕೇಶ್‌ನನ್ನೇ ಹೋಲುತ್ತಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೊಲೆ ಮಾಡಿದ್ದರು. ಕೊಲೆ ಮಾಡಿ ಆತನ ತಲೆ ಮತ್ತು ಕೈಗಳನ್ನು ಕತ್ತರಿಸಿ ಬೇರೆಡೆ ಸುಟ್ಟುಹಾಕಿದರು. ನಂತರ ರಾಕೇಶ್ ಬಟ್ಟೆಗಳನ್ನು ಮೃತದೇಹಕ್ಕೆ ಹಾಕಿ, ತನ್ನ ಗುರುತಿನ ಚೀಟಿಯಲ್ಲಿ ಶವದ ಮೇಲೆ ಎಸೆದು ಹರಿಯಾಣಕ್ಕೆ ಪರಾರಿಯಾಗಿದ್ದರು” ಎಂದು ವಿವರಿಸಿದ್ದಾರೆ.

ಬಳಿಕ ಕಸ್ಗಂಜ್‌ನಲ್ಲಿ ಈ ಕೊಲೆಯ ಬಗ್ಗೆ ದೂರು ದಾಖಲಾಗಿ, ತಲೆಯಿಲ್ಲದ ಶವದ ಡಿಎನ್‌ಎ ಪರೀಕ್ಷೆ ನಡೆಸಿದ ಬಳಿಕ ಇದು ರಾಕೇಶ್ ಶವವಲ್ಲ ಎಂದು ತಿಳಿದು ಬಂದಿದೆ. ನಂತರ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಆತ ಹರಿಯಾಣದಲ್ಲಿ ದಿಲೀಪ್ ಶರ್ಮಾ ಎಂಬ ಹೆಸರಿನಲ್ಲಿ ವಾಸಿಸುತ್ತಿದ್ದು ಪತ್ತೆಯಾಗಿ ಪೊಲೀಸರು ಬಂಧಿಸಿದ್ದಾರೆ.

ಒಟ್ಟಾರೆ ಮೊದಲು ಮಾಡಿದ ಮೂರು ಕೊಲೆಗಳನ್ನು ಮುಚ್ಚಿಡಲು, ಮತ್ತೊಂದು ಕೊಲೆ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದಿನ ಪ್ರಕರಣ ಬಹಿರಂಗವಾಗಿದೆ. ಆದರೆ, ಈ ಘಟನೆಯಿಂದ ಗ್ರೆಟರ್‌ ನೋಯ್ಡಾದ ಜನ ಬೆಚ್ಚಿಬಿದ್ದಿದ್ದಾರೆ.


ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...