Homeಕರ್ನಾಟಕ‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

- Advertisement -
- Advertisement -

ಆಹಾರ ತಯಾರಿಸಲಿಲ್ಲ ಎಂಬ ಕಾರಣಕ್ಕೆ ಮದ್ಯ ಸೇವಿಸಿದ್ದ ತನ್ನ ಪತ್ನಿಯನ್ನು ಕೊಂದ ಪತಿಯನ್ನು ರಾಜ್ಯ ಹೈಕೋರ್ಟ್‌ ಬಿಡುಗಡೆಗೆ ಆದೇಶ ನೀಡಿದ್ದು, ಆರೋಪಿಯು ತನ್ನ ಪತ್ನಿಯನ್ನು ಪೂರ್ವ ಯೋಜಿತ ಗುರಿಯೊಂದಿಗೆ ಕೊಂದಿಲ್ಲ, ಆದ್ದರಿಂದ ಅದು ಮರ್ಡರ್‌ ಅಲ್ಲ ಎಂದು ಹೇಳಿದೆ.

ಆರೋಪಿಯು ತಪ್ಪಿತಸ್ಥ ನರಹತ್ಯೆ (Culpable Homicide) ಮಾಡಿದ್ದಾನೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಕೊಲೆ ಮಾಡುವ ಆರೋಪಿಯ ಉದ್ದೇಶವನ್ನು ವಿವರಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಕೆಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಯ ಆದೇಶವನ್ನು ಮಾರ್ಪಡಿಸಿದೆ. ಪ್ರಚೋದನೆಯಿಂದಾಗಿ ಆರೋಪಿಯು ತನ್ನ ಹೆಂಡತಿಯನ್ನು ಕೊಲೆ ಮಾಡುವಷ್ಟು ಕೋಪಗೊಂಡನು ಎಂದು ಹೈಕೋರ್ಟ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಘಟನೆಯ ದಿನದಂದು ಮಹಿಳೆ ಮನೆಯಲ್ಲಿ ಆಹಾರವನ್ನು ತಯಾರಿಸಲಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ಕಂಡುಬಂದಿದೆ. ಇದು ಆರೋಪಿಯನ್ನು ಕೆರಳಿಸಿದ್ದು, ಇದ್ದಕ್ಕಿದ್ದಂತೆ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

“ಇದರ ನಂತರ ಆರೋಪಿ ಮನೆಯಲ್ಲಿ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಶಿಕ್ಷೆಯ ಭಾಗವಾಗಿ ಗಾಯಗಳನ್ನು ಉಂಟುಮಾಡಿದನು. ಆದರೆ ಸಾವಿಗೆ ಕಾರಣವಾಗುವ ಉದ್ದೇಶವು ಆರೋಪಿಯ ಕಡೆಯಿಂದ ಇರಲಿಲ್ಲ. ಆದ್ದರಿಂದ, ಆರೋಪಿಯ ಆಪಾದಿತ ಕೃತ್ಯವು ಐಪಿಸಿಯ ಸೆಕ್ಷನ್ 300 ರ ವಿನಾಯಿತಿ -1 ರ ವ್ಯಾಪ್ತಿಯಲ್ಲಿ ಬರುತ್ತದೆ. ಮಹಿಳೆಯ ಸಾವು ತಪ್ಪಿತಸ್ಥ ನರಹತ್ಯೆ ಆಗಿದ್ದು, ಕೊಲೆಗೆ ಸಮನಾಗಿರುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ವ್ಯಕ್ತಿಯ ಸಾವಿಗೆ ಕೊಲೆ ಮಾಡಿರುವವರೇ ಕಾರಣವಾದರೂ, ಕೊಲೆಗಾರ ಆ ವ್ಯಕ್ತಿಯನ್ನು ಕೊಲ್ಲಬೇಕು ಎಂಬ ಉದ್ದೇಶದಿಂದ ಕೃತ್ಯ ಎಸಗಿರುವುದಿಲ್ಲ” ಇದನ್ನು ತಪ್ಪಿತಸ್ಥ ನರಹತ್ಯೆ (Culpable Homicide) ಎಂದು ಕರೆಯುತ್ತಾರೆ. ಇಂತಹ ಕೃತ್ಯದಲ್ಲಿ ಕೊಲೆಗಾರ ವ್ಯಕ್ತಿಯೊಬ್ಬರನ್ನು ಕೊಂದಿರುವುದಕ್ಕಾಗಿ ಕಾನೂನು ಅವರನ್ನು ಶಿಕ್ಷಿಸುತ್ತದೆ, ಆದರೆ ಕಠೋರವಾದ ಶಿಕ್ಷೆಯಿಂದ ವಿನಾಯಿತಿ ನೀಡುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಆರೋಪಿ ಸುರೇಶ ಎಂಬಾತ 2017ರಲ್ಲಿ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊಲೆ ಆರೋಪಿ ಎಂದು ತೀರ್ಪು ನೀಡಿ ಅದೇ ವರ್ಷ ನವೆಂಬರ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು ಮನವಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಗ ರಾಧಾ ಎಂಬವರೊಂದಿಗೆ ವಿವಾಹವಾದರು. ರಾಧಾ ಅವರು ತಮ್ಮ ಪತಿ ನಂಜಯ್ಯನಿಂದ ಬೇರ್ಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.

2016ರ ಒಂದು ದಿನ, ಹಬ್ಬದ ದಿನ ಕೆಲಸ ಮುಗಿಸಿ ಬಂದಿದ್ದ ಸುರೇಶನಿಗೆ ತನ್ನ ಪತ್ನಿ ರಾಧಾ ಕುಡಿದಿದ್ದು ಮತ್ತು  ಮನೆಯಲ್ಲಿ ಅಡುಗೆ ಮಾಡದೇ ಇರುವುದು ಕಂಡು ಬಂದಿತ್ತು. ಇದರಿಂದ ಕುಪಿತಗೊಂಡ ಸುರೇಶ ದೊಣ್ಣೆಯಿಂದ ಮಾರಣಾಂತಿಕವಾಗಿ ಹೊಡೆದಿದ್ದಾನೆ.

ವಿಚಾರಣಾ ನ್ಯಾಯಾಲಯದ ಶಿಕ್ಷೆ ಮತ್ತು ಶಿಕ್ಷೆಯ ಆದೇಶವನ್ನು ಮಾರ್ಪಡು ಮಾಡಿರುವ ಹೈಕೋರ್ಟ್, ಇದೀಗ ಐಪಿಸಿಯ ಸೆಕ್ಷನ್ 302 (ಕೊಲೆ) ಬದಲಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 (ಕೊಲೆಗೆ ಸಮನಾಗದ ತಪ್ಪಿತಸ್ಥ ನರಹತ್ಯೆ) ಅಡಿಯಲ್ಲಿ ಸುರೇಶನನ್ನು ದೋಷಿ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಐಪಿಸಿಯ ಸೆಕ್ಷನ್ 304 ಭಾಗ 1 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಆರೋಪಿಯು ಜೈಲಿನಲ್ಲಿ ಕಳೆದ ಆರು ವರ್ಷ ಮತ್ತು 22 ದಿನಗಳ ಅವಧಿಯು ಸಾಕಾಗುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಆರೋಪಿಯು ಬೇರೆ ಯಾವುದೇ ಪ್ರಕರಣದಲ್ಲಿ ಇಲ್ಲದಿದ್ದರೆ, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...