Homeಕರ್ನಾಟಕ‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

- Advertisement -
- Advertisement -

ಆಹಾರ ತಯಾರಿಸಲಿಲ್ಲ ಎಂಬ ಕಾರಣಕ್ಕೆ ಮದ್ಯ ಸೇವಿಸಿದ್ದ ತನ್ನ ಪತ್ನಿಯನ್ನು ಕೊಂದ ಪತಿಯನ್ನು ರಾಜ್ಯ ಹೈಕೋರ್ಟ್‌ ಬಿಡುಗಡೆಗೆ ಆದೇಶ ನೀಡಿದ್ದು, ಆರೋಪಿಯು ತನ್ನ ಪತ್ನಿಯನ್ನು ಪೂರ್ವ ಯೋಜಿತ ಗುರಿಯೊಂದಿಗೆ ಕೊಂದಿಲ್ಲ, ಆದ್ದರಿಂದ ಅದು ಮರ್ಡರ್‌ ಅಲ್ಲ ಎಂದು ಹೇಳಿದೆ.

ಆರೋಪಿಯು ತಪ್ಪಿತಸ್ಥ ನರಹತ್ಯೆ (Culpable Homicide) ಮಾಡಿದ್ದಾನೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಕೊಲೆ ಮಾಡುವ ಆರೋಪಿಯ ಉದ್ದೇಶವನ್ನು ವಿವರಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಕೆಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಯ ಆದೇಶವನ್ನು ಮಾರ್ಪಡಿಸಿದೆ. ಪ್ರಚೋದನೆಯಿಂದಾಗಿ ಆರೋಪಿಯು ತನ್ನ ಹೆಂಡತಿಯನ್ನು ಕೊಲೆ ಮಾಡುವಷ್ಟು ಕೋಪಗೊಂಡನು ಎಂದು ಹೈಕೋರ್ಟ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಘಟನೆಯ ದಿನದಂದು ಮಹಿಳೆ ಮನೆಯಲ್ಲಿ ಆಹಾರವನ್ನು ತಯಾರಿಸಲಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ಕಂಡುಬಂದಿದೆ. ಇದು ಆರೋಪಿಯನ್ನು ಕೆರಳಿಸಿದ್ದು, ಇದ್ದಕ್ಕಿದ್ದಂತೆ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

“ಇದರ ನಂತರ ಆರೋಪಿ ಮನೆಯಲ್ಲಿ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಶಿಕ್ಷೆಯ ಭಾಗವಾಗಿ ಗಾಯಗಳನ್ನು ಉಂಟುಮಾಡಿದನು. ಆದರೆ ಸಾವಿಗೆ ಕಾರಣವಾಗುವ ಉದ್ದೇಶವು ಆರೋಪಿಯ ಕಡೆಯಿಂದ ಇರಲಿಲ್ಲ. ಆದ್ದರಿಂದ, ಆರೋಪಿಯ ಆಪಾದಿತ ಕೃತ್ಯವು ಐಪಿಸಿಯ ಸೆಕ್ಷನ್ 300 ರ ವಿನಾಯಿತಿ -1 ರ ವ್ಯಾಪ್ತಿಯಲ್ಲಿ ಬರುತ್ತದೆ. ಮಹಿಳೆಯ ಸಾವು ತಪ್ಪಿತಸ್ಥ ನರಹತ್ಯೆ ಆಗಿದ್ದು, ಕೊಲೆಗೆ ಸಮನಾಗಿರುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ವ್ಯಕ್ತಿಯ ಸಾವಿಗೆ ಕೊಲೆ ಮಾಡಿರುವವರೇ ಕಾರಣವಾದರೂ, ಕೊಲೆಗಾರ ಆ ವ್ಯಕ್ತಿಯನ್ನು ಕೊಲ್ಲಬೇಕು ಎಂಬ ಉದ್ದೇಶದಿಂದ ಕೃತ್ಯ ಎಸಗಿರುವುದಿಲ್ಲ” ಇದನ್ನು ತಪ್ಪಿತಸ್ಥ ನರಹತ್ಯೆ (Culpable Homicide) ಎಂದು ಕರೆಯುತ್ತಾರೆ. ಇಂತಹ ಕೃತ್ಯದಲ್ಲಿ ಕೊಲೆಗಾರ ವ್ಯಕ್ತಿಯೊಬ್ಬರನ್ನು ಕೊಂದಿರುವುದಕ್ಕಾಗಿ ಕಾನೂನು ಅವರನ್ನು ಶಿಕ್ಷಿಸುತ್ತದೆ, ಆದರೆ ಕಠೋರವಾದ ಶಿಕ್ಷೆಯಿಂದ ವಿನಾಯಿತಿ ನೀಡುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಆರೋಪಿ ಸುರೇಶ ಎಂಬಾತ 2017ರಲ್ಲಿ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊಲೆ ಆರೋಪಿ ಎಂದು ತೀರ್ಪು ನೀಡಿ ಅದೇ ವರ್ಷ ನವೆಂಬರ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು ಮನವಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಗ ರಾಧಾ ಎಂಬವರೊಂದಿಗೆ ವಿವಾಹವಾದರು. ರಾಧಾ ಅವರು ತಮ್ಮ ಪತಿ ನಂಜಯ್ಯನಿಂದ ಬೇರ್ಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.

2016ರ ಒಂದು ದಿನ, ಹಬ್ಬದ ದಿನ ಕೆಲಸ ಮುಗಿಸಿ ಬಂದಿದ್ದ ಸುರೇಶನಿಗೆ ತನ್ನ ಪತ್ನಿ ರಾಧಾ ಕುಡಿದಿದ್ದು ಮತ್ತು  ಮನೆಯಲ್ಲಿ ಅಡುಗೆ ಮಾಡದೇ ಇರುವುದು ಕಂಡು ಬಂದಿತ್ತು. ಇದರಿಂದ ಕುಪಿತಗೊಂಡ ಸುರೇಶ ದೊಣ್ಣೆಯಿಂದ ಮಾರಣಾಂತಿಕವಾಗಿ ಹೊಡೆದಿದ್ದಾನೆ.

ವಿಚಾರಣಾ ನ್ಯಾಯಾಲಯದ ಶಿಕ್ಷೆ ಮತ್ತು ಶಿಕ್ಷೆಯ ಆದೇಶವನ್ನು ಮಾರ್ಪಡು ಮಾಡಿರುವ ಹೈಕೋರ್ಟ್, ಇದೀಗ ಐಪಿಸಿಯ ಸೆಕ್ಷನ್ 302 (ಕೊಲೆ) ಬದಲಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 (ಕೊಲೆಗೆ ಸಮನಾಗದ ತಪ್ಪಿತಸ್ಥ ನರಹತ್ಯೆ) ಅಡಿಯಲ್ಲಿ ಸುರೇಶನನ್ನು ದೋಷಿ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಐಪಿಸಿಯ ಸೆಕ್ಷನ್ 304 ಭಾಗ 1 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಆರೋಪಿಯು ಜೈಲಿನಲ್ಲಿ ಕಳೆದ ಆರು ವರ್ಷ ಮತ್ತು 22 ದಿನಗಳ ಅವಧಿಯು ಸಾಕಾಗುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಆರೋಪಿಯು ಬೇರೆ ಯಾವುದೇ ಪ್ರಕರಣದಲ್ಲಿ ಇಲ್ಲದಿದ್ದರೆ, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...