Homeಕರ್ನಾಟಕ‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

- Advertisement -
- Advertisement -

ಆಹಾರ ತಯಾರಿಸಲಿಲ್ಲ ಎಂಬ ಕಾರಣಕ್ಕೆ ಮದ್ಯ ಸೇವಿಸಿದ್ದ ತನ್ನ ಪತ್ನಿಯನ್ನು ಕೊಂದ ಪತಿಯನ್ನು ರಾಜ್ಯ ಹೈಕೋರ್ಟ್‌ ಬಿಡುಗಡೆಗೆ ಆದೇಶ ನೀಡಿದ್ದು, ಆರೋಪಿಯು ತನ್ನ ಪತ್ನಿಯನ್ನು ಪೂರ್ವ ಯೋಜಿತ ಗುರಿಯೊಂದಿಗೆ ಕೊಂದಿಲ್ಲ, ಆದ್ದರಿಂದ ಅದು ಮರ್ಡರ್‌ ಅಲ್ಲ ಎಂದು ಹೇಳಿದೆ.

ಆರೋಪಿಯು ತಪ್ಪಿತಸ್ಥ ನರಹತ್ಯೆ (Culpable Homicide) ಮಾಡಿದ್ದಾನೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಕೊಲೆ ಮಾಡುವ ಆರೋಪಿಯ ಉದ್ದೇಶವನ್ನು ವಿವರಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಕೆಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಯ ಆದೇಶವನ್ನು ಮಾರ್ಪಡಿಸಿದೆ. ಪ್ರಚೋದನೆಯಿಂದಾಗಿ ಆರೋಪಿಯು ತನ್ನ ಹೆಂಡತಿಯನ್ನು ಕೊಲೆ ಮಾಡುವಷ್ಟು ಕೋಪಗೊಂಡನು ಎಂದು ಹೈಕೋರ್ಟ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಘಟನೆಯ ದಿನದಂದು ಮಹಿಳೆ ಮನೆಯಲ್ಲಿ ಆಹಾರವನ್ನು ತಯಾರಿಸಲಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ಕಂಡುಬಂದಿದೆ. ಇದು ಆರೋಪಿಯನ್ನು ಕೆರಳಿಸಿದ್ದು, ಇದ್ದಕ್ಕಿದ್ದಂತೆ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

“ಇದರ ನಂತರ ಆರೋಪಿ ಮನೆಯಲ್ಲಿ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಶಿಕ್ಷೆಯ ಭಾಗವಾಗಿ ಗಾಯಗಳನ್ನು ಉಂಟುಮಾಡಿದನು. ಆದರೆ ಸಾವಿಗೆ ಕಾರಣವಾಗುವ ಉದ್ದೇಶವು ಆರೋಪಿಯ ಕಡೆಯಿಂದ ಇರಲಿಲ್ಲ. ಆದ್ದರಿಂದ, ಆರೋಪಿಯ ಆಪಾದಿತ ಕೃತ್ಯವು ಐಪಿಸಿಯ ಸೆಕ್ಷನ್ 300 ರ ವಿನಾಯಿತಿ -1 ರ ವ್ಯಾಪ್ತಿಯಲ್ಲಿ ಬರುತ್ತದೆ. ಮಹಿಳೆಯ ಸಾವು ತಪ್ಪಿತಸ್ಥ ನರಹತ್ಯೆ ಆಗಿದ್ದು, ಕೊಲೆಗೆ ಸಮನಾಗಿರುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ವ್ಯಕ್ತಿಯ ಸಾವಿಗೆ ಕೊಲೆ ಮಾಡಿರುವವರೇ ಕಾರಣವಾದರೂ, ಕೊಲೆಗಾರ ಆ ವ್ಯಕ್ತಿಯನ್ನು ಕೊಲ್ಲಬೇಕು ಎಂಬ ಉದ್ದೇಶದಿಂದ ಕೃತ್ಯ ಎಸಗಿರುವುದಿಲ್ಲ” ಇದನ್ನು ತಪ್ಪಿತಸ್ಥ ನರಹತ್ಯೆ (Culpable Homicide) ಎಂದು ಕರೆಯುತ್ತಾರೆ. ಇಂತಹ ಕೃತ್ಯದಲ್ಲಿ ಕೊಲೆಗಾರ ವ್ಯಕ್ತಿಯೊಬ್ಬರನ್ನು ಕೊಂದಿರುವುದಕ್ಕಾಗಿ ಕಾನೂನು ಅವರನ್ನು ಶಿಕ್ಷಿಸುತ್ತದೆ, ಆದರೆ ಕಠೋರವಾದ ಶಿಕ್ಷೆಯಿಂದ ವಿನಾಯಿತಿ ನೀಡುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಆರೋಪಿ ಸುರೇಶ ಎಂಬಾತ 2017ರಲ್ಲಿ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊಲೆ ಆರೋಪಿ ಎಂದು ತೀರ್ಪು ನೀಡಿ ಅದೇ ವರ್ಷ ನವೆಂಬರ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು ಮನವಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಗ ರಾಧಾ ಎಂಬವರೊಂದಿಗೆ ವಿವಾಹವಾದರು. ರಾಧಾ ಅವರು ತಮ್ಮ ಪತಿ ನಂಜಯ್ಯನಿಂದ ಬೇರ್ಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.

2016ರ ಒಂದು ದಿನ, ಹಬ್ಬದ ದಿನ ಕೆಲಸ ಮುಗಿಸಿ ಬಂದಿದ್ದ ಸುರೇಶನಿಗೆ ತನ್ನ ಪತ್ನಿ ರಾಧಾ ಕುಡಿದಿದ್ದು ಮತ್ತು  ಮನೆಯಲ್ಲಿ ಅಡುಗೆ ಮಾಡದೇ ಇರುವುದು ಕಂಡು ಬಂದಿತ್ತು. ಇದರಿಂದ ಕುಪಿತಗೊಂಡ ಸುರೇಶ ದೊಣ್ಣೆಯಿಂದ ಮಾರಣಾಂತಿಕವಾಗಿ ಹೊಡೆದಿದ್ದಾನೆ.

ವಿಚಾರಣಾ ನ್ಯಾಯಾಲಯದ ಶಿಕ್ಷೆ ಮತ್ತು ಶಿಕ್ಷೆಯ ಆದೇಶವನ್ನು ಮಾರ್ಪಡು ಮಾಡಿರುವ ಹೈಕೋರ್ಟ್, ಇದೀಗ ಐಪಿಸಿಯ ಸೆಕ್ಷನ್ 302 (ಕೊಲೆ) ಬದಲಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 (ಕೊಲೆಗೆ ಸಮನಾಗದ ತಪ್ಪಿತಸ್ಥ ನರಹತ್ಯೆ) ಅಡಿಯಲ್ಲಿ ಸುರೇಶನನ್ನು ದೋಷಿ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಐಪಿಸಿಯ ಸೆಕ್ಷನ್ 304 ಭಾಗ 1 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಆರೋಪಿಯು ಜೈಲಿನಲ್ಲಿ ಕಳೆದ ಆರು ವರ್ಷ ಮತ್ತು 22 ದಿನಗಳ ಅವಧಿಯು ಸಾಕಾಗುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಆರೋಪಿಯು ಬೇರೆ ಯಾವುದೇ ಪ್ರಕರಣದಲ್ಲಿ ಇಲ್ಲದಿದ್ದರೆ, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...