Homeಕರ್ನಾಟಕ‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

- Advertisement -
- Advertisement -

ಆಹಾರ ತಯಾರಿಸಲಿಲ್ಲ ಎಂಬ ಕಾರಣಕ್ಕೆ ಮದ್ಯ ಸೇವಿಸಿದ್ದ ತನ್ನ ಪತ್ನಿಯನ್ನು ಕೊಂದ ಪತಿಯನ್ನು ರಾಜ್ಯ ಹೈಕೋರ್ಟ್‌ ಬಿಡುಗಡೆಗೆ ಆದೇಶ ನೀಡಿದ್ದು, ಆರೋಪಿಯು ತನ್ನ ಪತ್ನಿಯನ್ನು ಪೂರ್ವ ಯೋಜಿತ ಗುರಿಯೊಂದಿಗೆ ಕೊಂದಿಲ್ಲ, ಆದ್ದರಿಂದ ಅದು ಮರ್ಡರ್‌ ಅಲ್ಲ ಎಂದು ಹೇಳಿದೆ.

ಆರೋಪಿಯು ತಪ್ಪಿತಸ್ಥ ನರಹತ್ಯೆ (Culpable Homicide) ಮಾಡಿದ್ದಾನೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಕೊಲೆ ಮಾಡುವ ಆರೋಪಿಯ ಉದ್ದೇಶವನ್ನು ವಿವರಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಕೆಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಯ ಆದೇಶವನ್ನು ಮಾರ್ಪಡಿಸಿದೆ. ಪ್ರಚೋದನೆಯಿಂದಾಗಿ ಆರೋಪಿಯು ತನ್ನ ಹೆಂಡತಿಯನ್ನು ಕೊಲೆ ಮಾಡುವಷ್ಟು ಕೋಪಗೊಂಡನು ಎಂದು ಹೈಕೋರ್ಟ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಘಟನೆಯ ದಿನದಂದು ಮಹಿಳೆ ಮನೆಯಲ್ಲಿ ಆಹಾರವನ್ನು ತಯಾರಿಸಲಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ಕಂಡುಬಂದಿದೆ. ಇದು ಆರೋಪಿಯನ್ನು ಕೆರಳಿಸಿದ್ದು, ಇದ್ದಕ್ಕಿದ್ದಂತೆ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

“ಇದರ ನಂತರ ಆರೋಪಿ ಮನೆಯಲ್ಲಿ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಶಿಕ್ಷೆಯ ಭಾಗವಾಗಿ ಗಾಯಗಳನ್ನು ಉಂಟುಮಾಡಿದನು. ಆದರೆ ಸಾವಿಗೆ ಕಾರಣವಾಗುವ ಉದ್ದೇಶವು ಆರೋಪಿಯ ಕಡೆಯಿಂದ ಇರಲಿಲ್ಲ. ಆದ್ದರಿಂದ, ಆರೋಪಿಯ ಆಪಾದಿತ ಕೃತ್ಯವು ಐಪಿಸಿಯ ಸೆಕ್ಷನ್ 300 ರ ವಿನಾಯಿತಿ -1 ರ ವ್ಯಾಪ್ತಿಯಲ್ಲಿ ಬರುತ್ತದೆ. ಮಹಿಳೆಯ ಸಾವು ತಪ್ಪಿತಸ್ಥ ನರಹತ್ಯೆ ಆಗಿದ್ದು, ಕೊಲೆಗೆ ಸಮನಾಗಿರುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ವ್ಯಕ್ತಿಯ ಸಾವಿಗೆ ಕೊಲೆ ಮಾಡಿರುವವರೇ ಕಾರಣವಾದರೂ, ಕೊಲೆಗಾರ ಆ ವ್ಯಕ್ತಿಯನ್ನು ಕೊಲ್ಲಬೇಕು ಎಂಬ ಉದ್ದೇಶದಿಂದ ಕೃತ್ಯ ಎಸಗಿರುವುದಿಲ್ಲ” ಇದನ್ನು ತಪ್ಪಿತಸ್ಥ ನರಹತ್ಯೆ (Culpable Homicide) ಎಂದು ಕರೆಯುತ್ತಾರೆ. ಇಂತಹ ಕೃತ್ಯದಲ್ಲಿ ಕೊಲೆಗಾರ ವ್ಯಕ್ತಿಯೊಬ್ಬರನ್ನು ಕೊಂದಿರುವುದಕ್ಕಾಗಿ ಕಾನೂನು ಅವರನ್ನು ಶಿಕ್ಷಿಸುತ್ತದೆ, ಆದರೆ ಕಠೋರವಾದ ಶಿಕ್ಷೆಯಿಂದ ವಿನಾಯಿತಿ ನೀಡುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಆರೋಪಿ ಸುರೇಶ ಎಂಬಾತ 2017ರಲ್ಲಿ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊಲೆ ಆರೋಪಿ ಎಂದು ತೀರ್ಪು ನೀಡಿ ಅದೇ ವರ್ಷ ನವೆಂಬರ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು ಮನವಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಗ ರಾಧಾ ಎಂಬವರೊಂದಿಗೆ ವಿವಾಹವಾದರು. ರಾಧಾ ಅವರು ತಮ್ಮ ಪತಿ ನಂಜಯ್ಯನಿಂದ ಬೇರ್ಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.

2016ರ ಒಂದು ದಿನ, ಹಬ್ಬದ ದಿನ ಕೆಲಸ ಮುಗಿಸಿ ಬಂದಿದ್ದ ಸುರೇಶನಿಗೆ ತನ್ನ ಪತ್ನಿ ರಾಧಾ ಕುಡಿದಿದ್ದು ಮತ್ತು  ಮನೆಯಲ್ಲಿ ಅಡುಗೆ ಮಾಡದೇ ಇರುವುದು ಕಂಡು ಬಂದಿತ್ತು. ಇದರಿಂದ ಕುಪಿತಗೊಂಡ ಸುರೇಶ ದೊಣ್ಣೆಯಿಂದ ಮಾರಣಾಂತಿಕವಾಗಿ ಹೊಡೆದಿದ್ದಾನೆ.

ವಿಚಾರಣಾ ನ್ಯಾಯಾಲಯದ ಶಿಕ್ಷೆ ಮತ್ತು ಶಿಕ್ಷೆಯ ಆದೇಶವನ್ನು ಮಾರ್ಪಡು ಮಾಡಿರುವ ಹೈಕೋರ್ಟ್, ಇದೀಗ ಐಪಿಸಿಯ ಸೆಕ್ಷನ್ 302 (ಕೊಲೆ) ಬದಲಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 (ಕೊಲೆಗೆ ಸಮನಾಗದ ತಪ್ಪಿತಸ್ಥ ನರಹತ್ಯೆ) ಅಡಿಯಲ್ಲಿ ಸುರೇಶನನ್ನು ದೋಷಿ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಐಪಿಸಿಯ ಸೆಕ್ಷನ್ 304 ಭಾಗ 1 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಆರೋಪಿಯು ಜೈಲಿನಲ್ಲಿ ಕಳೆದ ಆರು ವರ್ಷ ಮತ್ತು 22 ದಿನಗಳ ಅವಧಿಯು ಸಾಕಾಗುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಆರೋಪಿಯು ಬೇರೆ ಯಾವುದೇ ಪ್ರಕರಣದಲ್ಲಿ ಇಲ್ಲದಿದ್ದರೆ, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...