Homeಕರ್ನಾಟಕ‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

- Advertisement -
- Advertisement -

ಆಹಾರ ತಯಾರಿಸಲಿಲ್ಲ ಎಂಬ ಕಾರಣಕ್ಕೆ ಮದ್ಯ ಸೇವಿಸಿದ್ದ ತನ್ನ ಪತ್ನಿಯನ್ನು ಕೊಂದ ಪತಿಯನ್ನು ರಾಜ್ಯ ಹೈಕೋರ್ಟ್‌ ಬಿಡುಗಡೆಗೆ ಆದೇಶ ನೀಡಿದ್ದು, ಆರೋಪಿಯು ತನ್ನ ಪತ್ನಿಯನ್ನು ಪೂರ್ವ ಯೋಜಿತ ಗುರಿಯೊಂದಿಗೆ ಕೊಂದಿಲ್ಲ, ಆದ್ದರಿಂದ ಅದು ಮರ್ಡರ್‌ ಅಲ್ಲ ಎಂದು ಹೇಳಿದೆ.

ಆರೋಪಿಯು ತಪ್ಪಿತಸ್ಥ ನರಹತ್ಯೆ (Culpable Homicide) ಮಾಡಿದ್ದಾನೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಕೊಲೆ ಮಾಡುವ ಆರೋಪಿಯ ಉದ್ದೇಶವನ್ನು ವಿವರಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಕೆಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಯ ಆದೇಶವನ್ನು ಮಾರ್ಪಡಿಸಿದೆ. ಪ್ರಚೋದನೆಯಿಂದಾಗಿ ಆರೋಪಿಯು ತನ್ನ ಹೆಂಡತಿಯನ್ನು ಕೊಲೆ ಮಾಡುವಷ್ಟು ಕೋಪಗೊಂಡನು ಎಂದು ಹೈಕೋರ್ಟ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಘಟನೆಯ ದಿನದಂದು ಮಹಿಳೆ ಮನೆಯಲ್ಲಿ ಆಹಾರವನ್ನು ತಯಾರಿಸಲಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ಕಂಡುಬಂದಿದೆ. ಇದು ಆರೋಪಿಯನ್ನು ಕೆರಳಿಸಿದ್ದು, ಇದ್ದಕ್ಕಿದ್ದಂತೆ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

“ಇದರ ನಂತರ ಆರೋಪಿ ಮನೆಯಲ್ಲಿ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಶಿಕ್ಷೆಯ ಭಾಗವಾಗಿ ಗಾಯಗಳನ್ನು ಉಂಟುಮಾಡಿದನು. ಆದರೆ ಸಾವಿಗೆ ಕಾರಣವಾಗುವ ಉದ್ದೇಶವು ಆರೋಪಿಯ ಕಡೆಯಿಂದ ಇರಲಿಲ್ಲ. ಆದ್ದರಿಂದ, ಆರೋಪಿಯ ಆಪಾದಿತ ಕೃತ್ಯವು ಐಪಿಸಿಯ ಸೆಕ್ಷನ್ 300 ರ ವಿನಾಯಿತಿ -1 ರ ವ್ಯಾಪ್ತಿಯಲ್ಲಿ ಬರುತ್ತದೆ. ಮಹಿಳೆಯ ಸಾವು ತಪ್ಪಿತಸ್ಥ ನರಹತ್ಯೆ ಆಗಿದ್ದು, ಕೊಲೆಗೆ ಸಮನಾಗಿರುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ವ್ಯಕ್ತಿಯ ಸಾವಿಗೆ ಕೊಲೆ ಮಾಡಿರುವವರೇ ಕಾರಣವಾದರೂ, ಕೊಲೆಗಾರ ಆ ವ್ಯಕ್ತಿಯನ್ನು ಕೊಲ್ಲಬೇಕು ಎಂಬ ಉದ್ದೇಶದಿಂದ ಕೃತ್ಯ ಎಸಗಿರುವುದಿಲ್ಲ” ಇದನ್ನು ತಪ್ಪಿತಸ್ಥ ನರಹತ್ಯೆ (Culpable Homicide) ಎಂದು ಕರೆಯುತ್ತಾರೆ. ಇಂತಹ ಕೃತ್ಯದಲ್ಲಿ ಕೊಲೆಗಾರ ವ್ಯಕ್ತಿಯೊಬ್ಬರನ್ನು ಕೊಂದಿರುವುದಕ್ಕಾಗಿ ಕಾನೂನು ಅವರನ್ನು ಶಿಕ್ಷಿಸುತ್ತದೆ, ಆದರೆ ಕಠೋರವಾದ ಶಿಕ್ಷೆಯಿಂದ ವಿನಾಯಿತಿ ನೀಡುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಆರೋಪಿ ಸುರೇಶ ಎಂಬಾತ 2017ರಲ್ಲಿ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊಲೆ ಆರೋಪಿ ಎಂದು ತೀರ್ಪು ನೀಡಿ ಅದೇ ವರ್ಷ ನವೆಂಬರ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು ಮನವಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಗ ರಾಧಾ ಎಂಬವರೊಂದಿಗೆ ವಿವಾಹವಾದರು. ರಾಧಾ ಅವರು ತಮ್ಮ ಪತಿ ನಂಜಯ್ಯನಿಂದ ಬೇರ್ಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.

2016ರ ಒಂದು ದಿನ, ಹಬ್ಬದ ದಿನ ಕೆಲಸ ಮುಗಿಸಿ ಬಂದಿದ್ದ ಸುರೇಶನಿಗೆ ತನ್ನ ಪತ್ನಿ ರಾಧಾ ಕುಡಿದಿದ್ದು ಮತ್ತು  ಮನೆಯಲ್ಲಿ ಅಡುಗೆ ಮಾಡದೇ ಇರುವುದು ಕಂಡು ಬಂದಿತ್ತು. ಇದರಿಂದ ಕುಪಿತಗೊಂಡ ಸುರೇಶ ದೊಣ್ಣೆಯಿಂದ ಮಾರಣಾಂತಿಕವಾಗಿ ಹೊಡೆದಿದ್ದಾನೆ.

ವಿಚಾರಣಾ ನ್ಯಾಯಾಲಯದ ಶಿಕ್ಷೆ ಮತ್ತು ಶಿಕ್ಷೆಯ ಆದೇಶವನ್ನು ಮಾರ್ಪಡು ಮಾಡಿರುವ ಹೈಕೋರ್ಟ್, ಇದೀಗ ಐಪಿಸಿಯ ಸೆಕ್ಷನ್ 302 (ಕೊಲೆ) ಬದಲಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 (ಕೊಲೆಗೆ ಸಮನಾಗದ ತಪ್ಪಿತಸ್ಥ ನರಹತ್ಯೆ) ಅಡಿಯಲ್ಲಿ ಸುರೇಶನನ್ನು ದೋಷಿ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಐಪಿಸಿಯ ಸೆಕ್ಷನ್ 304 ಭಾಗ 1 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಆರೋಪಿಯು ಜೈಲಿನಲ್ಲಿ ಕಳೆದ ಆರು ವರ್ಷ ಮತ್ತು 22 ದಿನಗಳ ಅವಧಿಯು ಸಾಕಾಗುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಆರೋಪಿಯು ಬೇರೆ ಯಾವುದೇ ಪ್ರಕರಣದಲ್ಲಿ ಇಲ್ಲದಿದ್ದರೆ, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...