Homeಕರ್ನಾಟಕ‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

‘ಅವನು ಶಿಕ್ಷಿಸಲು ಮಾತ್ರ ಬಯಸಿದ್ದನು!’: ಹೈಕೋರ್ಟ್‌ನಿಂದ ಪತ್ನಿಯ ಕೊಂದ ವ್ಯಕ್ತಿಯ ಖುಲಾಸೆ

- Advertisement -
- Advertisement -

ಆಹಾರ ತಯಾರಿಸಲಿಲ್ಲ ಎಂಬ ಕಾರಣಕ್ಕೆ ಮದ್ಯ ಸೇವಿಸಿದ್ದ ತನ್ನ ಪತ್ನಿಯನ್ನು ಕೊಂದ ಪತಿಯನ್ನು ರಾಜ್ಯ ಹೈಕೋರ್ಟ್‌ ಬಿಡುಗಡೆಗೆ ಆದೇಶ ನೀಡಿದ್ದು, ಆರೋಪಿಯು ತನ್ನ ಪತ್ನಿಯನ್ನು ಪೂರ್ವ ಯೋಜಿತ ಗುರಿಯೊಂದಿಗೆ ಕೊಂದಿಲ್ಲ, ಆದ್ದರಿಂದ ಅದು ಮರ್ಡರ್‌ ಅಲ್ಲ ಎಂದು ಹೇಳಿದೆ.

ಆರೋಪಿಯು ತಪ್ಪಿತಸ್ಥ ನರಹತ್ಯೆ (Culpable Homicide) ಮಾಡಿದ್ದಾನೆ ಎಂದು ಹೈಕೋರ್ಟ್ ಕಂಡುಕೊಂಡಿದೆ. ಕೊಲೆ ಮಾಡುವ ಆರೋಪಿಯ ಉದ್ದೇಶವನ್ನು ವಿವರಿಸಲು ಪ್ರಾಸಿಕ್ಯೂಷನ್‌ಗೆ ಸಾಧ್ಯವಾಗಲಿಲ್ಲ ಎಂದು ಹೇಳಿರುವ ಹೈಕೋರ್ಟ್‌ ಕೆಳ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷಯ ಆದೇಶವನ್ನು ಮಾರ್ಪಡಿಸಿದೆ. ಪ್ರಚೋದನೆಯಿಂದಾಗಿ ಆರೋಪಿಯು ತನ್ನ ಹೆಂಡತಿಯನ್ನು ಕೊಲೆ ಮಾಡುವಷ್ಟು ಕೋಪಗೊಂಡನು ಎಂದು ಹೈಕೋರ್ಟ್‌ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಘಟನೆಯ ದಿನದಂದು ಮಹಿಳೆ ಮನೆಯಲ್ಲಿ ಆಹಾರವನ್ನು ತಯಾರಿಸಲಿಲ್ಲ ಎಂದು ಪ್ರಾಸಿಕ್ಯೂಷನ್ ಸಾಕ್ಷ್ಯದಿಂದ ಕಂಡುಬಂದಿದೆ. ಇದು ಆರೋಪಿಯನ್ನು ಕೆರಳಿಸಿದ್ದು, ಇದ್ದಕ್ಕಿದ್ದಂತೆ ಇಂತಹ ಕಠಿಣ ಕ್ರಮವನ್ನು ತೆಗೆದುಕೊಳ್ಳಲು ಪ್ರೇರೇಪಿಸಿತು” ಎಂದು ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: ವಾಮಾಚಾರಕ್ಕೆ ಮಹಿಳೆಯರಿಬ್ಬರ ನರಬಲಿ: ಅಘಾತ ವ್ಯಕ್ತಪಡಿಸಿದ ಕೇರಳ ಹೈಕೋರ್ಟ್‌‌

“ಇದರ ನಂತರ ಆರೋಪಿ ಮನೆಯಲ್ಲಿ ಇದ್ದ ದೊಣ್ಣೆಯನ್ನು ತೆಗೆದುಕೊಂಡು ಶಿಕ್ಷೆಯ ಭಾಗವಾಗಿ ಗಾಯಗಳನ್ನು ಉಂಟುಮಾಡಿದನು. ಆದರೆ ಸಾವಿಗೆ ಕಾರಣವಾಗುವ ಉದ್ದೇಶವು ಆರೋಪಿಯ ಕಡೆಯಿಂದ ಇರಲಿಲ್ಲ. ಆದ್ದರಿಂದ, ಆರೋಪಿಯ ಆಪಾದಿತ ಕೃತ್ಯವು ಐಪಿಸಿಯ ಸೆಕ್ಷನ್ 300 ರ ವಿನಾಯಿತಿ -1 ರ ವ್ಯಾಪ್ತಿಯಲ್ಲಿ ಬರುತ್ತದೆ. ಮಹಿಳೆಯ ಸಾವು ತಪ್ಪಿತಸ್ಥ ನರಹತ್ಯೆ ಆಗಿದ್ದು, ಕೊಲೆಗೆ ಸಮನಾಗಿರುವುದಿಲ್ಲ” ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ವ್ಯಕ್ತಿಯ ಸಾವಿಗೆ ಕೊಲೆ ಮಾಡಿರುವವರೇ ಕಾರಣವಾದರೂ, ಕೊಲೆಗಾರ ಆ ವ್ಯಕ್ತಿಯನ್ನು ಕೊಲ್ಲಬೇಕು ಎಂಬ ಉದ್ದೇಶದಿಂದ ಕೃತ್ಯ ಎಸಗಿರುವುದಿಲ್ಲ” ಇದನ್ನು ತಪ್ಪಿತಸ್ಥ ನರಹತ್ಯೆ (Culpable Homicide) ಎಂದು ಕರೆಯುತ್ತಾರೆ. ಇಂತಹ ಕೃತ್ಯದಲ್ಲಿ ಕೊಲೆಗಾರ ವ್ಯಕ್ತಿಯೊಬ್ಬರನ್ನು ಕೊಂದಿರುವುದಕ್ಕಾಗಿ ಕಾನೂನು ಅವರನ್ನು ಶಿಕ್ಷಿಸುತ್ತದೆ, ಆದರೆ ಕಠೋರವಾದ ಶಿಕ್ಷೆಯಿಂದ ವಿನಾಯಿತಿ ನೀಡುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಆರೋಪಿ ಸುರೇಶ ಎಂಬಾತ 2017ರಲ್ಲಿ ಮೇಲ್ಮನವಿ ಸಲ್ಲಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಕೊಲೆ ಆರೋಪಿ ಎಂದು ತೀರ್ಪು ನೀಡಿ ಅದೇ ವರ್ಷ ನವೆಂಬರ್‌ನಲ್ಲಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರಿದ್ದ ವಿಭಾಗೀಯ ಪೀಠವು ಮನವಿಯ ವಿಚಾರಣೆ ನಡೆಸಿತು.

ಇದನ್ನೂ ಓದಿ: ಗರ್ಭಪಾತಕ್ಕೆ ವಿವಾಹಿತ ಮತ್ತು ಅವಿವಾಹಿತ ಮಹಿಳೆ ಎಂಬ ಬೇಧವಿರಬಾರದು: ಸುಪ್ರೀಂ

ಸುರೇಶ ತನ್ನ ಮೊದಲ ಪತ್ನಿ ಮೀನಾಕ್ಷಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಾಗ ರಾಧಾ ಎಂಬವರೊಂದಿಗೆ ವಿವಾಹವಾದರು. ರಾಧಾ ಅವರು ತಮ್ಮ ಪತಿ ನಂಜಯ್ಯನಿಂದ ಬೇರ್ಪಟ್ಟಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು.

2016ರ ಒಂದು ದಿನ, ಹಬ್ಬದ ದಿನ ಕೆಲಸ ಮುಗಿಸಿ ಬಂದಿದ್ದ ಸುರೇಶನಿಗೆ ತನ್ನ ಪತ್ನಿ ರಾಧಾ ಕುಡಿದಿದ್ದು ಮತ್ತು  ಮನೆಯಲ್ಲಿ ಅಡುಗೆ ಮಾಡದೇ ಇರುವುದು ಕಂಡು ಬಂದಿತ್ತು. ಇದರಿಂದ ಕುಪಿತಗೊಂಡ ಸುರೇಶ ದೊಣ್ಣೆಯಿಂದ ಮಾರಣಾಂತಿಕವಾಗಿ ಹೊಡೆದಿದ್ದಾನೆ.

ವಿಚಾರಣಾ ನ್ಯಾಯಾಲಯದ ಶಿಕ್ಷೆ ಮತ್ತು ಶಿಕ್ಷೆಯ ಆದೇಶವನ್ನು ಮಾರ್ಪಡು ಮಾಡಿರುವ ಹೈಕೋರ್ಟ್, ಇದೀಗ ಐಪಿಸಿಯ ಸೆಕ್ಷನ್ 302 (ಕೊಲೆ) ಬದಲಿಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 (ಕೊಲೆಗೆ ಸಮನಾಗದ ತಪ್ಪಿತಸ್ಥ ನರಹತ್ಯೆ) ಅಡಿಯಲ್ಲಿ ಸುರೇಶನನ್ನು ದೋಷಿ ಎಂದು ತೀರ್ಪು ನೀಡಿದೆ.

ಇದನ್ನೂ ಓದಿ: ದೆಹಲಿ ಬೀದಿಯಲ್ಲಿ ಮಹಿಳೆಯ ಕೂದಲು ಹಿಡಿದು ಹೊಟ್ಟೆಗೆ ಒದ್ದ ದುಷ್ಕರ್ಮಿ: FIR ದಾಖಲಿಸುವಂತೆ ಒತ್ತಾಯಿಸಿದ ಮಹಿಳಾ ಆಯೋಗದ ಅಧ್ಯಕ್ಷೆ

ಐಪಿಸಿಯ ಸೆಕ್ಷನ್ 304 ಭಾಗ 1 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕೆ ಆರೋಪಿಯು ಜೈಲಿನಲ್ಲಿ ಕಳೆದ ಆರು ವರ್ಷ ಮತ್ತು 22 ದಿನಗಳ ಅವಧಿಯು ಸಾಕಾಗುತ್ತದೆ ಎಂದು ಹೈಕೋರ್ಟ್ ಹೇಳಿದ್ದು, ಆರೋಪಿಯು ಬೇರೆ ಯಾವುದೇ ಪ್ರಕರಣದಲ್ಲಿ ಇಲ್ಲದಿದ್ದರೆ, ಆತನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...