Homeಮುಖಪುಟ'ಅವರು ಓಡಿ ಹೋದರು' | ಲೋಕಸಭಾ ಸ್ಪೀಕರ್ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

‘ಅವರು ಓಡಿ ಹೋದರು’ | ಲೋಕಸಭಾ ಸ್ಪೀಕರ್ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ

- Advertisement -
- Advertisement -

ಕೇಂದ್ರ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದ್ದು, ಕಳೆದ ಹಲವು ದಿನಗಳಿಂದ ಸದನದಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ. ಸಂಸತ್ತಿನಲ್ಲಿ ನಡೆಯುತ್ತಿರುವ ಗೊಂದಲಗಳು ಮತ್ತು ಬಿಸಿ ವಾಗ್ವಾದಗಳ ಮಧ್ಯೆ ಅವರು ಈ ಹೇಳಿಕೆ ನೀಡಿದ್ದಾರೆ. ಅವರು ಓಡಿ ಹೋದರು

“ಏನು ನಡೆಯುತ್ತಿದೆ ಎಂದು ನನಗೆ ತಿಳಿದಿಲ್ಲ… ನನಗೆ ಮಾತನಾಡಲು ಅವಕಾಶ ನೀಡುವಂತೆ ನಾನು ಅವರನ್ನು ವಿನಂತಿಸಿದೆ. ಆದರೆ ಅವರು (ಸ್ಪೀಕರ್) ಓಡಿಹೋದರು. ಸದನವನ್ನು ನಡೆಸುವ ಸರಿಯಾದ ಮಾರ್ಗ ಇದಲ್ಲ. ಸ್ಪೀಕರ್ ಅಲ್ಲಿಂದ ಹೊರಟುಹೋಗಿದ್ದು, ಅವರು ನನಗೆ ಮಾತನಾಡಲು ಬಿಡಲಿಲ್ಲ… ಅವರು ನನ್ನ ಬಗ್ಗೆ ಆಧಾರರಹಿತ ವಾದ ಮಾಡುತ್ತಿದ್ದಾರೆ… ಅವರು ಸದನವನ್ನು ಮುಂದೂಡಿದ್ದು, ಆದರೆ ಅದರ ಅಗತ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಅವರು ಓಡಿ ಹೋದರು

“ವಿರೋಧ ಪಕ್ಷದ ನಾಯಕನಿಗೆ ಮಾತನಾಡಲು ಅವಕಾಶ ನೀಡುವ ನಿಯಮವಿದೆ. ಆದಾಗ್ಯೂ, ನಾನು ಮಾತನಾಡಲು ನಿಂತಾಗಲೆಲ್ಲಾ ನನಗೆ ಅವಕಾಶ ನೀಡಲಾಗುತ್ತಿಲ್ಲ. ಸದನ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂದು ನನಗೆ ತಿಳಿದಿಲ್ಲ. ನಮಗೆ ಬೇಕಾದುದನ್ನು ಹೇಳಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ಪ್ರಜಾಪ್ರಭುತ್ವದ ಮನೋಭಾವದ ಜೊತೆಗೆ ಸಂಪೂರ್ಣ ರಾಜಿ ಮಾಡಿಕೊಳ್ಳಲಾಗುತ್ತಿದೆ. ನಾನು ಮೌನವಾಗಿ ಕುಳಿತಿದ್ದೇನೆ, ಆದರೆ ನನಗೆ ಮಾತನಾಡಲು ಅವಕಾಶ ನೀಡಲಾಗಿಲ್ಲ. ಸದನದಲ್ಲಿ ವಿರೋಧ ಪಕ್ಷಗಳಿಗೆ ಸ್ಥಳವಿಲ್ಲ… ಸರ್ಕಾರಕ್ಕೆ ಮಾತ್ರ ಅವಕಾಶ ಸಿಗುತ್ತಿದೆ. ಪ್ರಧಾನಿ ಕುಂಭಮೇಳದ ಬಗ್ಗೆ ಮಾತನಾಡಿದರು, ನನಗೂ ಮಾತನಾಡಲು ಇಷ್ಟವಿತ್ತು ಆದರೆ ಅವಕಾಶ ನಿರಾಕರಿಸಲಾಯಿತು.” ಎಂದು ಅವರು ಹೇಳಿದ್ದಾರೆ.

ಏತನ್ಮಧ್ಯೆ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಬುಧವಾರ ಸಭ್ಯತೆಯನ್ನು ಕಾಪಾಡಿಕೊಳ್ಳುವ ಮತ್ತು ಕಾರ್ಯವಿಧಾನದ ನಿಯಮಗಳನ್ನು ಪಾಲಿಸುವ ಮಹತ್ವದ ಬಗ್ಗೆ ಹೇಳಿದ್ದಾರೆ. ಅದಾಗ್ಯೂ, ಸ್ಪೀಕರ್ ಈ ಅಭಿಪ್ರಾಯವನ್ನು ನೀಡಲು ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ ಎಂದು ಪಿಟಿಐ ವರದಿ ಮಾಡಿದೆ.

“ಸದಸ್ಯರ ನಡವಳಿಕೆಯು ಸದನದಲ್ಲಿ ನಿರೀಕ್ಷಿಸಲಾದ ಉನ್ನತ ಗುಣಮಟ್ಟಕ್ಕೆ ಅನುಗುಣವಾಗಿಲ್ಲದ ಹಲವಾರು ನಿದರ್ಶನಗಳು ನನ್ನ ಗಮನಕ್ಕೆ ಬಂದಿವೆ” ಎಂದು ಸ್ಪೀಕರ್ ಹೇಳಿದ್ದಾರೆ.

ಸದಸ್ಯರು ಪಾಲಿಸಬೇಕಾದ ನಿಯಮಗಳನ್ನು ವಿವರಿಸುವ ನಿಯಮ 349 ಅನ್ನು ಅವರು ನಿರ್ದಿಷ್ಟವಾಗಿ ಉಲ್ಲೇಖಿಸಿದ್ದು, “ಈ ಸದನದಲ್ಲಿ, ತಂದೆ ಮತ್ತು ಮಗಳು, ತಾಯಿ ಮತ್ತು ಮಗಳು, ಗಂಡ ಮತ್ತು ಹೆಂಡತಿ ಸದಸ್ಯರಾಗಿದ್ದಾರೆ. ಈ ಸಂದರ್ಭದಲ್ಲಿ, ವಿರೋಧ ಪಕ್ಷದ ನಾಯಕರು ನಿಯಮಗಳಿಗೆ ಅನುಸಾರವಾಗಿ ವರ್ತಿಸುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

‘ಸ್ತನ ಹಿಡಿಯುವುದು ಅತ್ಯಾಚಾರವಲ್ಲ’; ಅಲಹಾಬಾದ್ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...