Homeಕರ್ನಾಟಕಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

ಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

- Advertisement -
- Advertisement -

ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲ ನೀಡಿದರೂ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ನಮಗೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ನೀಡಿಲ್ಲ ಎಂದು ಎಸ್‌ಡಿಪಿಐ ಮುಖಂಡ ಬಿ.ಆರ್‌.ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಪುಲಿಕೇಶಿನಗರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಭಾಸ್ಕರ್‌ ಪ್ರಸಾದ್‌ ಈ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿಯನ್ನು ಎಸ್‌ಡಿಪಿಐ ಬೆಂಬಲಿಸಿದೆ. ಆದರೆ ಪುಲಿಕೇಶಿನಗರದಲ್ಲಿ ನಮಗೆ ಒಂದು ಮಾತನ್ನೂ ಹೇಳದೆ, ಕಾಂಗ್ರೆಸ್ ಟಿಕೆಟ್ ವಂಚಿತ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಬಿಎಸ್‌ಪಿ ಟಿಕೆಟ್ ನೀಡಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಬಿ.ಆರ್‌.ಭಾಸ್ಕರ್‌ ಪ್ರಸಾದ್ ಹೇಳಿರುವುದೇನು?

“ನನಗೆ ಯಾರನ್ನೂ ದೂಷಿಸುವ ಮನಸ್ಸಿಲ್ಲ ಮತ್ತು ಅಗತ್ಯವೂ ಇಲ್ಲ. ಆದರೆ ಪ್ರತಿಯೊಂದು ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ನಾನು ಈ ವಿಚಾರವನ್ನು ನಿಮಗೆ ತಿಳಿಸದೆ ಹೋದರೆ ತಪ್ಪು ನನ್ನದಾಗಿ ಬಿಡುತ್ತದೆ. ಹಾಗಾಗಿ ವಿಷಯ ನಿಮಗೆ ಗೊತ್ತಿರಲಿ ಎಂದು ಮಾತ್ರ ಇಲ್ಲಿ ಈ ನಂಬಿಕೆ ದ್ರೋಹದ ಕಥೆಯನ್ನು ಹೇಳಿಕೊಳ್ಳುತ್ತಿದ್ದೇನೆ. ಬಿಎಸ್‌ಪಿ ವಿರುದ್ಧ ಎಸ್‌ಡಿಪಿಐ ಅಭ್ಯರ್ಥಿಯನ್ನು ಹಾಕುವುದು ಬೇಡ, ದಯಮಾಡಿ ನೀವು ನಮಗೆ ಸಹಾಯ ಮಾಡಿ ಎಂದು ಬಿಎಸ್ಪಿ ರಾಜ್ಯ ಸಮಿತಿ ನಮ್ಮನ್ನು ಕೇಳಿಕೊಂಡಿತ್ತು. ನಾವು ಅದರಂತೆ ನಮ್ಮ ರಾಜ್ಯ ಸಮಿತಿಯಲ್ಲಿ ಮಾತಾಡಿ ಒಂದು ಒಳ್ಳೆಯ ಉದ್ದೇಶದಿಂದ ನಮ್ಮ ಆರು ಜನ ಕೌನ್ಸಿಲರ್‌ಗಳು ಇರುವಂತಹ ಚಾಮರಾಜನಗರದಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಬಿಎಸ್‌ಪಿಯ ಹ ರಾ ಮಹೇಶ್ ಅವರಿಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದು ಅಲ್ಲದೆ ನಮ್ಮ ನೂರಾರು ಜನ ಕಾರ್ಯಕರ್ತರು BSP ಅಭ್ಯರ್ಥಿಯೊಂದಿಗೆ ಬಹಿರಂಗವಾಗಿ ಚುನಾವಣಾ ಕಣದಲ್ಲಿದ್ದು ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.”

“ಅದೇ ರೀತಿಯಾಗಿ ಪುಲಿಕೇಶಿ ನಗರದಲ್ಲಿ ನಾವು ಬಿಎಸ್‌ಪಿ ಅಭ್ಯರ್ಥಿಯನ್ನು ಹಾಕದೆ, ನನಗೆ ಬೆಂಬಲ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದರು. ಆದರೆ ನನಗೆ ಒಂದೇ ಒಂದು ಮಾತು ಹೇಳದೆ, ನನ್ನ ಗಮನಕ್ಕೂ ತರದೆ, ಅಥವಾ ನಮ್ಮ ಪಕ್ಷದ ಯಾವುದೇ ನಾಯಕರಿಗೂ ತಿಳಿಸದೆ ರಾತ್ರೋರಾತ್ರಿ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಬಿಎಸ್‌ಪಿ ಬಿ ಫಾರ್ಮ್ ನೀಡುವುದರ ಮೂಲಕ ಅವರನ್ನು ಕಣಕ್ಕೆ ಇಳಿಸಲಾಗಿದೆ.”

“ಇಷ್ಟಾದರೂ ನಮ್ಮ ರಾಜ್ಯ ಸಮಿತಿಯು ಹ ರಾ ಮಹೇಶ್ ಅವರಿಗೆ ನೀಡಿರುವ ಬೆಂಬಲವನ್ನು ಇದೇ ರೀತಿಯಾಗಿ ಸಂಪೂರ್ಣವಾಗಿ ಚುನಾವಣೆಯ ಅಂತಿಮ ಕ್ಷಣದವರೆಗೂ ನೀಡುತ್ತದೆ. ನಮಗೆ ಗೊತ್ತಿದೆ ಈ ದ್ರೋಹದಲ್ಲಿ ಹ ರಾ ಮಹೇಶ್ ಅವರ ಯಾವ ಪಾತ್ರವೂ ಇಲ್ಲ. ಅವರಿಗೂ ಈ ಸುದ್ದಿ ಆಘಾತವನ್ನು ತಂದಿದೆ. ಆ ಪಕ್ಷದ ಮುಖಂಡರು ಮಾಡಿರುವ ನಂಬಿಕೆ ದ್ರೋಹದ ಪ್ರತಿಫಲವನ್ನು ಅವರೇ ಊಟ ಮಾಡಲಿ. ನಮಗದರ ಗೊಡವೆ ಬೇಡ.
ನಮ್ಮ ಪಕ್ಷದ ನಾಯಕರ ಆಶೀರ್ವಾದ ನಮ್ಮ ಕಾರ್ಯಕರ್ತರ ಶಕ್ತಿ ನನ್ನ ಜೊತೆಗೆ ಇರುವವರೆಗೂ, ನಾವು ಯಾರಿಗೂ ಅವಲಂಬನೆಯಾಗಿ ನಿಲ್ಲುವ ತುರ್ತು ಇಲ್ಲ. ನಮ್ಮ ಪಕ್ಷವೇ ನನ್ನ ಆತ್ಮ, ಉಸಿರು, ಜೀವ,
ನನ್ನ ಗೆಲುವು ನನ್ನ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ.
ಎಲ್ಲರಿಗೂ ಧನ್ಯವಾದಗಳು”

-ಹೀಗೆ ಭಾಸ್ಕರ್‌ ಪ್ರಸಾದ್ ಬರೆದುಕೊಂಡಿದ್ದಾರೆ.

11 ಕಡೆ ಪರಸ್ಪರ ಸ್ಪರ್ಧೆ ಮಾಡಿದ್ದೇವೆ: ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸ್ಪಷ್ಟನೆ

ಭಾಸ್ಕರ್‌ ಪ್ರಸಾದ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, “ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್‌ಪಿಗೆ ಎಸ್‌ಡಿಪಿಐ ಬೆಂಬಲ ನೀಡುವುದು ಹಾಗೆಯೇ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐಗೆ ಬಿಎಸ್‌ಪಿ ಬೆಂಬಲ ನೀಡುವುದು ಎಂಬ ಒಪ್ಪಂದ ಮಾಡಿಕೊಂಡೆವು. ಎರಡು ಕಡೆಯಿಂದಲೂ ಪರಸ್ಪರ ಪತ್ರಿಕಾಗೋಷ್ಠಿಗಳನ್ನು ನಡೆಸಲಾಯಿತು. ಬೆಂಗಳೂರಿನಲ್ಲೂ ಈ ರೀತಿಯ ಮಾತುಕತೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಭಾಸ್ಕರ್‌ ಪ್ರಸಾದ್ ಅವರು ಚುನಾವಣಾ ಪ್ರಕ್ರಿಯೆಗಳಲ್ಲಿ ಉಳಿದರು. ಪುಲಿಕೇಶಿನಗರ ಮತ್ತು ಸರ್ವಜ್ಞನಗರದಲ್ಲಿ ಪರಸ್ಪರ ಬೆಂಬಲ ಘೋಷಿಸುವ ಉದ್ದೇಶಗಳಿದ್ದವು. ಆದರೆ ಸರಿಯಾದ ಮಾತುಕತೆಗಳಾಗದೆ ಪ್ರೆಸ್‌ಮೀಟ್‌ ಕೂಡ ಆಗಲಿಲ್ಲ” ಎಂದರು.

“ಕೊನೆ ಕ್ಷಣದಲ್ಲಿ ಪುಲಿಕೇಶಿನಗರದ ಹಾಲಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿಯವರು ಬಂದು ಬಿಎಸ್‌ಪಿ ಸೇರಿಕೊಂಡರು. ಹೀಗಾಗಿ ಬಿಎಸ್‌ಪಿ ಅವರಿಗೆ ಟಿಕೆಟ್ ನೀಡಿದೆ. ಬೆಂಗಳೂರಿನಲ್ಲಿ ಸರಿಯಾದ ಪ್ರಕ್ರಿಯೆಗಳು ನಡೆಯದೆ ಇದ್ದಿದ್ದರಿಂದ ಗೊಂದಲವಾಗಿದೆ. ನರಸಿಂಹರಾಜ, ಚಾಮರಾಜನಗರದಲ್ಲಿ ಆದಂತೆ ಪಟ್ಟು ಹಿಡಿದು ಪ್ರಕ್ರಿಯೆಗಳನ್ನು ಮುಗಿಸಿಕೊಂಡಿದ್ದರೆ ಬಿಎಸ್‌ಪಿ- ಎಸ್‌ಡಿಪಿಐ ಒಪ್ಪಂದವಿದೆ ಎಂದು ಅಖಂಡ ಅವರು ನಮ್ಮ ಬಳಿ ಬರುತ್ತಿರಲಿಲ್ಲ. ಪ್ರೆಸ್‌ಮೀಟ್ ಮಾಡಲೂ ಆಗಲಿಲ್ಲ. ಎರಡು ಪಕ್ಷಗಳ ನಡುವೆ ಗ್ಯಾಪ್‌ ಆದದ್ದರಿಂದ ಈ ಸಮಸ್ಯೆಯಾಗಿದೆ. ಎರಡೂ ಕಡೆಯಿಂದಲೂ ತಪ್ಪುಗಳಾದವು” ಎಂದು ಸ್ಪಷ್ಟನೆ ನೀಡಿದರು.

“ಎಸ್‌ಡಿಪಿಐನವರು 19 ಕಡೆ ಕ್ಯಾಂಡಿಡೇಟ್ ಹಾಕಿದ್ದಾರೆ. ಉಳಿದ ಕಡೆ ಸೌದಾರ್ಹಯುತವಾಗಿ ಫೈಟ್ ನಡೆಯುತ್ತಿದೆ. ಒಟ್ಟು ಹನ್ನೊಂದು ಕಡೆ ಎಸ್‌ಡಿಪಿಐ- ಬಿಎಸ್‌ಪಿ ಪರಸ್ಪರ ಸ್ಪರ್ಧಿಸಿವೆ. ಅದರಲ್ಲಿ ಪುಲಿಕೇಶಿನಗರವೂ ಒಂದು. ಮೈಸೂರು, ಚಾಮರಾಜನಗರಕ್ಕೆ ಮಾತ್ರ ಒಪ್ಪಂದವನ್ನು ಸೀಮಿತಗೊಳಿಸಿಕೊಂಡು ಸೌಹಾರ್ದಯುತವಾಗಿ ಚುನಾವಣೆ ಎದುರಿಸುವಂತಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಕೊಳ್ಳೇಗಾಲ: ನಾಮಪತ್ರ ಹಿಂಪಡೆದ ಬಿಎಸ್‌ಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲಿಗಢ ಮುಸ್ಲಿಂ ವಿವಿ ಆವರಣದಲ್ಲಿ ಗುಂಡಿಕ್ಕಿ ಶಿಕ್ಷಕನ ಹತ್ಯೆ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ (ಎಎಂಯು)ದ ಶಿಕ್ಷಕರೊಬ್ಬರನ್ನು ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ (ಡಿ.24) ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಲ್ಲಿ ಭೀತಿ ಮೂಡಿಸಿದೆ. ಮೃತರನ್ನು ಎಎಂಯುನ ಎಬಿಕೆ ಯೂನಿಯನ್ ಹೈಸ್ಕೂಲ್‌ನ ಶಿಕ್ಷಕ...

ಮತ್ತೊಬ್ಬ ವಲಸೆ ಕಾರ್ಮಿಕನ ಗುಂಪು ಹತ್ಯೆ : ಆರು ಜನರ ಬಂಧನ

ಬುಧವಾರ (ಡಿ.24) ಒಡಿಶಾದ ಸಂಬಾಲ್‌ಪುರದಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 30 ವರ್ಷದ ವಲಸೆ ಕಾರ್ಮಿಕರೊಬ್ಬರನ್ನು ಗುಂಪು ಹತ್ಯೆ ಮಾಡಲಾಗಿದೆ. ಈ ಸಂಬಂಧ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...

ಉನ್ನಾವೋ ಅತ್ಯಾಚಾರ ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿರುವುದನ್ನು ಪ್ರಶ್ನಿಸಿ ಇಬ್ಬರು ಮಹಿಳಾ ವಕೀಲರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕುಲದೀಪ್ ಸಿಂಗ್ ಸೆಂಗಾರ್‌ಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಪಹಾಸ್ಯ : ಮಾಧ್ಯಮಗಳ ಮುಂದೆ ವ್ಯಂಗ್ಯವಾಗಿ ನಕ್ಕ ಯುಪಿ ಸಚಿವ

ದೆಹಲಿಯ ಇಂಡಿಯಾ ಗೇಟ್ ಬಳಿ ಪ್ರತಿಭಟಿಸಿದ ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಓಂ ಪ್ರಕಾಶ್ ರಾಜ್‌ಭರ್ ಅಪಹಾಸ್ಯ ಮಾಡಿದ್ದು, "ಆಕೆಯ ಮನೆ ಉನ್ನಾವೋದಲ್ಲಿರುವಾಗ ದೆಹಲಿಯಲ್ಲಿ ಏಕಿದ್ದಾಳೆ?"...

ಹತ್ಯೆಯ ಕೆಲವೇ ಗಂಟೆಗಳ ಮೊದಲು ನಾನು ಹಮಾಸ್ ಮುಖ್ಯಸ್ಥರನ್ನು ಭೇಟಿಯಾಗಿದ್ದೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಟೆಹ್ರಾನ್‌ನಲ್ಲಿ ಹಮಾಸ್‌ನ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯಾ ಅವರನ್ನು ಭೇಟಿಯಾಗಿದ್ದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ಅಧ್ಯಕ್ಷ...

ಕರ್ನಾಟಕ ಜನಶಕ್ತಿ ಸಕ್ರಿಯ ಕಾರ್ಯಕರ್ತೆ, ಹೋರಾಟದ ಒಡನಾಡಿ ಕೆ.ಪದ್ಮಾ ಇನ್ನಿಲ್ಲ

ಹಿರಿಯ ಹೋರಾಟಗಾರ್ತಿ, ಕರ್ನಾಟಕ ಜನಶಕ್ತಿ ಸಂಘಟನೆಯ ಸಕ್ರಿಯ ಕಾರ್ಯಕರ್ತೆ ಕೆ ಪದ್ಮಾ ಅವರು ಹೋರಾಟದ ಬದುಕನ್ನು ಮುಗಿಸಿದ್ದಾರೆ. ಬುಧವಾರ ರಾತ್ರಿ, ಬೆಂಗಳೂರಿನಲ್ಲಿ ಕೊನೆಯುಸಿಳೆದಿದ್ದಾರೆ. ಕಳೆದ ನಾಲ್ಕೈದು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ತಮ್ಮನ್ನು ಬಾಧಿಸುತ್ತಿದ್ದ...

ದೇಶದ ಹಲವೆಡೆ ಕ್ರೈಸ್ತರ ಮೇಲೆ ಮತಾಂಧ ಕೋಮುವಾದಿಗಳ ದಾಳಿ : ಕ್ರಿಸ್‌ಮಸ್ ಆಚರಣೆಗೆ ಅಡ್ಡಿ

ಪ್ರತಿ ವರ್ಷದಂತೆ ಈ ವರ್ಷವೂ ಡಿಸೆಂಬರ್ ತಿಂಗಳಲ್ಲಿ, ವಿಶೇಷವಾಗಿ ಡಿಸೆಂಬರ್ 25ರಂದು ಇಡೀ ಜಗತ್ತು ಕ್ರಿಸ್‌ಮಸ್ ಹಬ್ಬದ ಸಂಭ್ರಮದಲ್ಲಿದೆ. ಏಸು ಕ್ರಿಸ್ತನ ಜನ್ಮದಿನದ ಪ್ರಯುಕ್ತ ಜನರು ಗಡಿಗಳನ್ನು ಮೀರಿ ಪರಸ್ಪರ ಸಂತಸ ಹಂಚಿಕೊಳ್ಳುತ್ತಿದ್ದಾರೆ. ಈ...

ಹರಿಯಾಣ| ಕಳ್ಳತನ ಆರೋಪದ ಮೇಲೆ 12 ವರ್ಷದ ದಲಿತ ಬಾಲಕನಿಗೆ ಚಿತ್ರಹಿಂಸೆ; ಕಟ್ಟಿಹಾಕಿ ದೌರ್ಜನ್ಯ

12 ವರ್ಷದ ದಲಿತ ಬಾಲಕನ ಮೇಲೆ ಕಳ್ಳತನದ ಶಂಕೆಯಿಂದ ಹಲವಾರು ಗಂಟೆಗಳ ಕಾಲ ಚಿತ್ರಹಿಂಸೆ ನೀಡಿ ಅಕ್ರಮ ಬಂಧನದಲ್ಲಿಟ್ಟ ಆರೋಪದ ಮೇಲೆ ಕುಟುಂಬವೊಂದರ 10 ಸದಸ್ಯರ ವಿರುದ್ಧ ಹರಿಯಾಣದ ಪಲ್ವಾಲ್‌ನಲ್ಲಿ ಪೊಲೀಸರು ಪ್ರಕರಣ...

ಉನ್ನಾವೋ ಅತ್ಯಾಚಾರಿಯ ಶಿಕ್ಷೆ ಅಮಾನತು : ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲು ಮುಂದಾದ ಸಿಬಿಐ

ಉನ್ನಾವೋ ಅತ್ಯಾಚಾರ ಅಪರಾಧಿಯ ಶಿಕ್ಷೆ ಅಮಾನತಿನಲ್ಲಿಟ್ಟ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಕೇಂದ್ರ ತನಿಖಾ ದಳ (ಸಿಬಿಐ) ಮುಂದಾಗಿದೆ ಎಂದು ಬುಧವಾರ (ಡಿ.24) ವರದಿಯಾಗಿದೆ. ಸಿಬಿಐ ಈ ಪ್ರಕರಣದ ತನಿಖೆ...

ಚಿತ್ರದುರ್ಗ | ಹೊತ್ತಿ ಉರಿದ ಖಾಸಗಿ ಬಸ್​​​​ : 10ಕ್ಕೂ ಹೆಚ್ಚು ಜನರು ಸಜೀವ ದಹನ, ಹಲವರಿಗೆ ಗಾಯ

ಖಾಸಗಿ ಸ್ಲೀಪರ್ ಕೋಚ್ ಬಸ್ ಹೊತ್ತಿ ಉರಿದ ಪರಿಣಾಮ 10ಕ್ಕೂ ಹೆಚ್ಚು ಜನರು ಸಜೀವ ದಹನವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಗುರುವಾರ (ಡಿ.25) ನಡೆದಿದೆ. ರಾಷ್ಟ್ರೀಯ ಹೆದ್ದಾರಿ...