Homeಕರ್ನಾಟಕಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

ಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

- Advertisement -
- Advertisement -

ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲ ನೀಡಿದರೂ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ನಮಗೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ನೀಡಿಲ್ಲ ಎಂದು ಎಸ್‌ಡಿಪಿಐ ಮುಖಂಡ ಬಿ.ಆರ್‌.ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಪುಲಿಕೇಶಿನಗರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಭಾಸ್ಕರ್‌ ಪ್ರಸಾದ್‌ ಈ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿಯನ್ನು ಎಸ್‌ಡಿಪಿಐ ಬೆಂಬಲಿಸಿದೆ. ಆದರೆ ಪುಲಿಕೇಶಿನಗರದಲ್ಲಿ ನಮಗೆ ಒಂದು ಮಾತನ್ನೂ ಹೇಳದೆ, ಕಾಂಗ್ರೆಸ್ ಟಿಕೆಟ್ ವಂಚಿತ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಬಿಎಸ್‌ಪಿ ಟಿಕೆಟ್ ನೀಡಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಬಿ.ಆರ್‌.ಭಾಸ್ಕರ್‌ ಪ್ರಸಾದ್ ಹೇಳಿರುವುದೇನು?

“ನನಗೆ ಯಾರನ್ನೂ ದೂಷಿಸುವ ಮನಸ್ಸಿಲ್ಲ ಮತ್ತು ಅಗತ್ಯವೂ ಇಲ್ಲ. ಆದರೆ ಪ್ರತಿಯೊಂದು ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ನಾನು ಈ ವಿಚಾರವನ್ನು ನಿಮಗೆ ತಿಳಿಸದೆ ಹೋದರೆ ತಪ್ಪು ನನ್ನದಾಗಿ ಬಿಡುತ್ತದೆ. ಹಾಗಾಗಿ ವಿಷಯ ನಿಮಗೆ ಗೊತ್ತಿರಲಿ ಎಂದು ಮಾತ್ರ ಇಲ್ಲಿ ಈ ನಂಬಿಕೆ ದ್ರೋಹದ ಕಥೆಯನ್ನು ಹೇಳಿಕೊಳ್ಳುತ್ತಿದ್ದೇನೆ. ಬಿಎಸ್‌ಪಿ ವಿರುದ್ಧ ಎಸ್‌ಡಿಪಿಐ ಅಭ್ಯರ್ಥಿಯನ್ನು ಹಾಕುವುದು ಬೇಡ, ದಯಮಾಡಿ ನೀವು ನಮಗೆ ಸಹಾಯ ಮಾಡಿ ಎಂದು ಬಿಎಸ್ಪಿ ರಾಜ್ಯ ಸಮಿತಿ ನಮ್ಮನ್ನು ಕೇಳಿಕೊಂಡಿತ್ತು. ನಾವು ಅದರಂತೆ ನಮ್ಮ ರಾಜ್ಯ ಸಮಿತಿಯಲ್ಲಿ ಮಾತಾಡಿ ಒಂದು ಒಳ್ಳೆಯ ಉದ್ದೇಶದಿಂದ ನಮ್ಮ ಆರು ಜನ ಕೌನ್ಸಿಲರ್‌ಗಳು ಇರುವಂತಹ ಚಾಮರಾಜನಗರದಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಬಿಎಸ್‌ಪಿಯ ಹ ರಾ ಮಹೇಶ್ ಅವರಿಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದು ಅಲ್ಲದೆ ನಮ್ಮ ನೂರಾರು ಜನ ಕಾರ್ಯಕರ್ತರು BSP ಅಭ್ಯರ್ಥಿಯೊಂದಿಗೆ ಬಹಿರಂಗವಾಗಿ ಚುನಾವಣಾ ಕಣದಲ್ಲಿದ್ದು ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.”

“ಅದೇ ರೀತಿಯಾಗಿ ಪುಲಿಕೇಶಿ ನಗರದಲ್ಲಿ ನಾವು ಬಿಎಸ್‌ಪಿ ಅಭ್ಯರ್ಥಿಯನ್ನು ಹಾಕದೆ, ನನಗೆ ಬೆಂಬಲ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದರು. ಆದರೆ ನನಗೆ ಒಂದೇ ಒಂದು ಮಾತು ಹೇಳದೆ, ನನ್ನ ಗಮನಕ್ಕೂ ತರದೆ, ಅಥವಾ ನಮ್ಮ ಪಕ್ಷದ ಯಾವುದೇ ನಾಯಕರಿಗೂ ತಿಳಿಸದೆ ರಾತ್ರೋರಾತ್ರಿ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಬಿಎಸ್‌ಪಿ ಬಿ ಫಾರ್ಮ್ ನೀಡುವುದರ ಮೂಲಕ ಅವರನ್ನು ಕಣಕ್ಕೆ ಇಳಿಸಲಾಗಿದೆ.”

“ಇಷ್ಟಾದರೂ ನಮ್ಮ ರಾಜ್ಯ ಸಮಿತಿಯು ಹ ರಾ ಮಹೇಶ್ ಅವರಿಗೆ ನೀಡಿರುವ ಬೆಂಬಲವನ್ನು ಇದೇ ರೀತಿಯಾಗಿ ಸಂಪೂರ್ಣವಾಗಿ ಚುನಾವಣೆಯ ಅಂತಿಮ ಕ್ಷಣದವರೆಗೂ ನೀಡುತ್ತದೆ. ನಮಗೆ ಗೊತ್ತಿದೆ ಈ ದ್ರೋಹದಲ್ಲಿ ಹ ರಾ ಮಹೇಶ್ ಅವರ ಯಾವ ಪಾತ್ರವೂ ಇಲ್ಲ. ಅವರಿಗೂ ಈ ಸುದ್ದಿ ಆಘಾತವನ್ನು ತಂದಿದೆ. ಆ ಪಕ್ಷದ ಮುಖಂಡರು ಮಾಡಿರುವ ನಂಬಿಕೆ ದ್ರೋಹದ ಪ್ರತಿಫಲವನ್ನು ಅವರೇ ಊಟ ಮಾಡಲಿ. ನಮಗದರ ಗೊಡವೆ ಬೇಡ.
ನಮ್ಮ ಪಕ್ಷದ ನಾಯಕರ ಆಶೀರ್ವಾದ ನಮ್ಮ ಕಾರ್ಯಕರ್ತರ ಶಕ್ತಿ ನನ್ನ ಜೊತೆಗೆ ಇರುವವರೆಗೂ, ನಾವು ಯಾರಿಗೂ ಅವಲಂಬನೆಯಾಗಿ ನಿಲ್ಲುವ ತುರ್ತು ಇಲ್ಲ. ನಮ್ಮ ಪಕ್ಷವೇ ನನ್ನ ಆತ್ಮ, ಉಸಿರು, ಜೀವ,
ನನ್ನ ಗೆಲುವು ನನ್ನ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ.
ಎಲ್ಲರಿಗೂ ಧನ್ಯವಾದಗಳು”

-ಹೀಗೆ ಭಾಸ್ಕರ್‌ ಪ್ರಸಾದ್ ಬರೆದುಕೊಂಡಿದ್ದಾರೆ.

11 ಕಡೆ ಪರಸ್ಪರ ಸ್ಪರ್ಧೆ ಮಾಡಿದ್ದೇವೆ: ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸ್ಪಷ್ಟನೆ

ಭಾಸ್ಕರ್‌ ಪ್ರಸಾದ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, “ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್‌ಪಿಗೆ ಎಸ್‌ಡಿಪಿಐ ಬೆಂಬಲ ನೀಡುವುದು ಹಾಗೆಯೇ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐಗೆ ಬಿಎಸ್‌ಪಿ ಬೆಂಬಲ ನೀಡುವುದು ಎಂಬ ಒಪ್ಪಂದ ಮಾಡಿಕೊಂಡೆವು. ಎರಡು ಕಡೆಯಿಂದಲೂ ಪರಸ್ಪರ ಪತ್ರಿಕಾಗೋಷ್ಠಿಗಳನ್ನು ನಡೆಸಲಾಯಿತು. ಬೆಂಗಳೂರಿನಲ್ಲೂ ಈ ರೀತಿಯ ಮಾತುಕತೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಭಾಸ್ಕರ್‌ ಪ್ರಸಾದ್ ಅವರು ಚುನಾವಣಾ ಪ್ರಕ್ರಿಯೆಗಳಲ್ಲಿ ಉಳಿದರು. ಪುಲಿಕೇಶಿನಗರ ಮತ್ತು ಸರ್ವಜ್ಞನಗರದಲ್ಲಿ ಪರಸ್ಪರ ಬೆಂಬಲ ಘೋಷಿಸುವ ಉದ್ದೇಶಗಳಿದ್ದವು. ಆದರೆ ಸರಿಯಾದ ಮಾತುಕತೆಗಳಾಗದೆ ಪ್ರೆಸ್‌ಮೀಟ್‌ ಕೂಡ ಆಗಲಿಲ್ಲ” ಎಂದರು.

“ಕೊನೆ ಕ್ಷಣದಲ್ಲಿ ಪುಲಿಕೇಶಿನಗರದ ಹಾಲಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿಯವರು ಬಂದು ಬಿಎಸ್‌ಪಿ ಸೇರಿಕೊಂಡರು. ಹೀಗಾಗಿ ಬಿಎಸ್‌ಪಿ ಅವರಿಗೆ ಟಿಕೆಟ್ ನೀಡಿದೆ. ಬೆಂಗಳೂರಿನಲ್ಲಿ ಸರಿಯಾದ ಪ್ರಕ್ರಿಯೆಗಳು ನಡೆಯದೆ ಇದ್ದಿದ್ದರಿಂದ ಗೊಂದಲವಾಗಿದೆ. ನರಸಿಂಹರಾಜ, ಚಾಮರಾಜನಗರದಲ್ಲಿ ಆದಂತೆ ಪಟ್ಟು ಹಿಡಿದು ಪ್ರಕ್ರಿಯೆಗಳನ್ನು ಮುಗಿಸಿಕೊಂಡಿದ್ದರೆ ಬಿಎಸ್‌ಪಿ- ಎಸ್‌ಡಿಪಿಐ ಒಪ್ಪಂದವಿದೆ ಎಂದು ಅಖಂಡ ಅವರು ನಮ್ಮ ಬಳಿ ಬರುತ್ತಿರಲಿಲ್ಲ. ಪ್ರೆಸ್‌ಮೀಟ್ ಮಾಡಲೂ ಆಗಲಿಲ್ಲ. ಎರಡು ಪಕ್ಷಗಳ ನಡುವೆ ಗ್ಯಾಪ್‌ ಆದದ್ದರಿಂದ ಈ ಸಮಸ್ಯೆಯಾಗಿದೆ. ಎರಡೂ ಕಡೆಯಿಂದಲೂ ತಪ್ಪುಗಳಾದವು” ಎಂದು ಸ್ಪಷ್ಟನೆ ನೀಡಿದರು.

“ಎಸ್‌ಡಿಪಿಐನವರು 19 ಕಡೆ ಕ್ಯಾಂಡಿಡೇಟ್ ಹಾಕಿದ್ದಾರೆ. ಉಳಿದ ಕಡೆ ಸೌದಾರ್ಹಯುತವಾಗಿ ಫೈಟ್ ನಡೆಯುತ್ತಿದೆ. ಒಟ್ಟು ಹನ್ನೊಂದು ಕಡೆ ಎಸ್‌ಡಿಪಿಐ- ಬಿಎಸ್‌ಪಿ ಪರಸ್ಪರ ಸ್ಪರ್ಧಿಸಿವೆ. ಅದರಲ್ಲಿ ಪುಲಿಕೇಶಿನಗರವೂ ಒಂದು. ಮೈಸೂರು, ಚಾಮರಾಜನಗರಕ್ಕೆ ಮಾತ್ರ ಒಪ್ಪಂದವನ್ನು ಸೀಮಿತಗೊಳಿಸಿಕೊಂಡು ಸೌಹಾರ್ದಯುತವಾಗಿ ಚುನಾವಣೆ ಎದುರಿಸುವಂತಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಕೊಳ್ಳೇಗಾಲ: ನಾಮಪತ್ರ ಹಿಂಪಡೆದ ಬಿಎಸ್‌ಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...