Homeಕರ್ನಾಟಕಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

ಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

- Advertisement -
- Advertisement -

ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲ ನೀಡಿದರೂ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ನಮಗೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ನೀಡಿಲ್ಲ ಎಂದು ಎಸ್‌ಡಿಪಿಐ ಮುಖಂಡ ಬಿ.ಆರ್‌.ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಪುಲಿಕೇಶಿನಗರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಭಾಸ್ಕರ್‌ ಪ್ರಸಾದ್‌ ಈ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿಯನ್ನು ಎಸ್‌ಡಿಪಿಐ ಬೆಂಬಲಿಸಿದೆ. ಆದರೆ ಪುಲಿಕೇಶಿನಗರದಲ್ಲಿ ನಮಗೆ ಒಂದು ಮಾತನ್ನೂ ಹೇಳದೆ, ಕಾಂಗ್ರೆಸ್ ಟಿಕೆಟ್ ವಂಚಿತ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಬಿಎಸ್‌ಪಿ ಟಿಕೆಟ್ ನೀಡಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಬಿ.ಆರ್‌.ಭಾಸ್ಕರ್‌ ಪ್ರಸಾದ್ ಹೇಳಿರುವುದೇನು?

“ನನಗೆ ಯಾರನ್ನೂ ದೂಷಿಸುವ ಮನಸ್ಸಿಲ್ಲ ಮತ್ತು ಅಗತ್ಯವೂ ಇಲ್ಲ. ಆದರೆ ಪ್ರತಿಯೊಂದು ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ನಾನು ಈ ವಿಚಾರವನ್ನು ನಿಮಗೆ ತಿಳಿಸದೆ ಹೋದರೆ ತಪ್ಪು ನನ್ನದಾಗಿ ಬಿಡುತ್ತದೆ. ಹಾಗಾಗಿ ವಿಷಯ ನಿಮಗೆ ಗೊತ್ತಿರಲಿ ಎಂದು ಮಾತ್ರ ಇಲ್ಲಿ ಈ ನಂಬಿಕೆ ದ್ರೋಹದ ಕಥೆಯನ್ನು ಹೇಳಿಕೊಳ್ಳುತ್ತಿದ್ದೇನೆ. ಬಿಎಸ್‌ಪಿ ವಿರುದ್ಧ ಎಸ್‌ಡಿಪಿಐ ಅಭ್ಯರ್ಥಿಯನ್ನು ಹಾಕುವುದು ಬೇಡ, ದಯಮಾಡಿ ನೀವು ನಮಗೆ ಸಹಾಯ ಮಾಡಿ ಎಂದು ಬಿಎಸ್ಪಿ ರಾಜ್ಯ ಸಮಿತಿ ನಮ್ಮನ್ನು ಕೇಳಿಕೊಂಡಿತ್ತು. ನಾವು ಅದರಂತೆ ನಮ್ಮ ರಾಜ್ಯ ಸಮಿತಿಯಲ್ಲಿ ಮಾತಾಡಿ ಒಂದು ಒಳ್ಳೆಯ ಉದ್ದೇಶದಿಂದ ನಮ್ಮ ಆರು ಜನ ಕೌನ್ಸಿಲರ್‌ಗಳು ಇರುವಂತಹ ಚಾಮರಾಜನಗರದಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಬಿಎಸ್‌ಪಿಯ ಹ ರಾ ಮಹೇಶ್ ಅವರಿಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದು ಅಲ್ಲದೆ ನಮ್ಮ ನೂರಾರು ಜನ ಕಾರ್ಯಕರ್ತರು BSP ಅಭ್ಯರ್ಥಿಯೊಂದಿಗೆ ಬಹಿರಂಗವಾಗಿ ಚುನಾವಣಾ ಕಣದಲ್ಲಿದ್ದು ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.”

“ಅದೇ ರೀತಿಯಾಗಿ ಪುಲಿಕೇಶಿ ನಗರದಲ್ಲಿ ನಾವು ಬಿಎಸ್‌ಪಿ ಅಭ್ಯರ್ಥಿಯನ್ನು ಹಾಕದೆ, ನನಗೆ ಬೆಂಬಲ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದರು. ಆದರೆ ನನಗೆ ಒಂದೇ ಒಂದು ಮಾತು ಹೇಳದೆ, ನನ್ನ ಗಮನಕ್ಕೂ ತರದೆ, ಅಥವಾ ನಮ್ಮ ಪಕ್ಷದ ಯಾವುದೇ ನಾಯಕರಿಗೂ ತಿಳಿಸದೆ ರಾತ್ರೋರಾತ್ರಿ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಬಿಎಸ್‌ಪಿ ಬಿ ಫಾರ್ಮ್ ನೀಡುವುದರ ಮೂಲಕ ಅವರನ್ನು ಕಣಕ್ಕೆ ಇಳಿಸಲಾಗಿದೆ.”

“ಇಷ್ಟಾದರೂ ನಮ್ಮ ರಾಜ್ಯ ಸಮಿತಿಯು ಹ ರಾ ಮಹೇಶ್ ಅವರಿಗೆ ನೀಡಿರುವ ಬೆಂಬಲವನ್ನು ಇದೇ ರೀತಿಯಾಗಿ ಸಂಪೂರ್ಣವಾಗಿ ಚುನಾವಣೆಯ ಅಂತಿಮ ಕ್ಷಣದವರೆಗೂ ನೀಡುತ್ತದೆ. ನಮಗೆ ಗೊತ್ತಿದೆ ಈ ದ್ರೋಹದಲ್ಲಿ ಹ ರಾ ಮಹೇಶ್ ಅವರ ಯಾವ ಪಾತ್ರವೂ ಇಲ್ಲ. ಅವರಿಗೂ ಈ ಸುದ್ದಿ ಆಘಾತವನ್ನು ತಂದಿದೆ. ಆ ಪಕ್ಷದ ಮುಖಂಡರು ಮಾಡಿರುವ ನಂಬಿಕೆ ದ್ರೋಹದ ಪ್ರತಿಫಲವನ್ನು ಅವರೇ ಊಟ ಮಾಡಲಿ. ನಮಗದರ ಗೊಡವೆ ಬೇಡ.
ನಮ್ಮ ಪಕ್ಷದ ನಾಯಕರ ಆಶೀರ್ವಾದ ನಮ್ಮ ಕಾರ್ಯಕರ್ತರ ಶಕ್ತಿ ನನ್ನ ಜೊತೆಗೆ ಇರುವವರೆಗೂ, ನಾವು ಯಾರಿಗೂ ಅವಲಂಬನೆಯಾಗಿ ನಿಲ್ಲುವ ತುರ್ತು ಇಲ್ಲ. ನಮ್ಮ ಪಕ್ಷವೇ ನನ್ನ ಆತ್ಮ, ಉಸಿರು, ಜೀವ,
ನನ್ನ ಗೆಲುವು ನನ್ನ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ.
ಎಲ್ಲರಿಗೂ ಧನ್ಯವಾದಗಳು”

-ಹೀಗೆ ಭಾಸ್ಕರ್‌ ಪ್ರಸಾದ್ ಬರೆದುಕೊಂಡಿದ್ದಾರೆ.

11 ಕಡೆ ಪರಸ್ಪರ ಸ್ಪರ್ಧೆ ಮಾಡಿದ್ದೇವೆ: ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸ್ಪಷ್ಟನೆ

ಭಾಸ್ಕರ್‌ ಪ್ರಸಾದ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, “ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್‌ಪಿಗೆ ಎಸ್‌ಡಿಪಿಐ ಬೆಂಬಲ ನೀಡುವುದು ಹಾಗೆಯೇ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐಗೆ ಬಿಎಸ್‌ಪಿ ಬೆಂಬಲ ನೀಡುವುದು ಎಂಬ ಒಪ್ಪಂದ ಮಾಡಿಕೊಂಡೆವು. ಎರಡು ಕಡೆಯಿಂದಲೂ ಪರಸ್ಪರ ಪತ್ರಿಕಾಗೋಷ್ಠಿಗಳನ್ನು ನಡೆಸಲಾಯಿತು. ಬೆಂಗಳೂರಿನಲ್ಲೂ ಈ ರೀತಿಯ ಮಾತುಕತೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಭಾಸ್ಕರ್‌ ಪ್ರಸಾದ್ ಅವರು ಚುನಾವಣಾ ಪ್ರಕ್ರಿಯೆಗಳಲ್ಲಿ ಉಳಿದರು. ಪುಲಿಕೇಶಿನಗರ ಮತ್ತು ಸರ್ವಜ್ಞನಗರದಲ್ಲಿ ಪರಸ್ಪರ ಬೆಂಬಲ ಘೋಷಿಸುವ ಉದ್ದೇಶಗಳಿದ್ದವು. ಆದರೆ ಸರಿಯಾದ ಮಾತುಕತೆಗಳಾಗದೆ ಪ್ರೆಸ್‌ಮೀಟ್‌ ಕೂಡ ಆಗಲಿಲ್ಲ” ಎಂದರು.

“ಕೊನೆ ಕ್ಷಣದಲ್ಲಿ ಪುಲಿಕೇಶಿನಗರದ ಹಾಲಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿಯವರು ಬಂದು ಬಿಎಸ್‌ಪಿ ಸೇರಿಕೊಂಡರು. ಹೀಗಾಗಿ ಬಿಎಸ್‌ಪಿ ಅವರಿಗೆ ಟಿಕೆಟ್ ನೀಡಿದೆ. ಬೆಂಗಳೂರಿನಲ್ಲಿ ಸರಿಯಾದ ಪ್ರಕ್ರಿಯೆಗಳು ನಡೆಯದೆ ಇದ್ದಿದ್ದರಿಂದ ಗೊಂದಲವಾಗಿದೆ. ನರಸಿಂಹರಾಜ, ಚಾಮರಾಜನಗರದಲ್ಲಿ ಆದಂತೆ ಪಟ್ಟು ಹಿಡಿದು ಪ್ರಕ್ರಿಯೆಗಳನ್ನು ಮುಗಿಸಿಕೊಂಡಿದ್ದರೆ ಬಿಎಸ್‌ಪಿ- ಎಸ್‌ಡಿಪಿಐ ಒಪ್ಪಂದವಿದೆ ಎಂದು ಅಖಂಡ ಅವರು ನಮ್ಮ ಬಳಿ ಬರುತ್ತಿರಲಿಲ್ಲ. ಪ್ರೆಸ್‌ಮೀಟ್ ಮಾಡಲೂ ಆಗಲಿಲ್ಲ. ಎರಡು ಪಕ್ಷಗಳ ನಡುವೆ ಗ್ಯಾಪ್‌ ಆದದ್ದರಿಂದ ಈ ಸಮಸ್ಯೆಯಾಗಿದೆ. ಎರಡೂ ಕಡೆಯಿಂದಲೂ ತಪ್ಪುಗಳಾದವು” ಎಂದು ಸ್ಪಷ್ಟನೆ ನೀಡಿದರು.

“ಎಸ್‌ಡಿಪಿಐನವರು 19 ಕಡೆ ಕ್ಯಾಂಡಿಡೇಟ್ ಹಾಕಿದ್ದಾರೆ. ಉಳಿದ ಕಡೆ ಸೌದಾರ್ಹಯುತವಾಗಿ ಫೈಟ್ ನಡೆಯುತ್ತಿದೆ. ಒಟ್ಟು ಹನ್ನೊಂದು ಕಡೆ ಎಸ್‌ಡಿಪಿಐ- ಬಿಎಸ್‌ಪಿ ಪರಸ್ಪರ ಸ್ಪರ್ಧಿಸಿವೆ. ಅದರಲ್ಲಿ ಪುಲಿಕೇಶಿನಗರವೂ ಒಂದು. ಮೈಸೂರು, ಚಾಮರಾಜನಗರಕ್ಕೆ ಮಾತ್ರ ಒಪ್ಪಂದವನ್ನು ಸೀಮಿತಗೊಳಿಸಿಕೊಂಡು ಸೌಹಾರ್ದಯುತವಾಗಿ ಚುನಾವಣೆ ಎದುರಿಸುವಂತಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಕೊಳ್ಳೇಗಾಲ: ನಾಮಪತ್ರ ಹಿಂಪಡೆದ ಬಿಎಸ್‌ಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...