Homeಕರ್ನಾಟಕಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

ಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

- Advertisement -
- Advertisement -

ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲ ನೀಡಿದರೂ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ನಮಗೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ನೀಡಿಲ್ಲ ಎಂದು ಎಸ್‌ಡಿಪಿಐ ಮುಖಂಡ ಬಿ.ಆರ್‌.ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಪುಲಿಕೇಶಿನಗರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಭಾಸ್ಕರ್‌ ಪ್ರಸಾದ್‌ ಈ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿಯನ್ನು ಎಸ್‌ಡಿಪಿಐ ಬೆಂಬಲಿಸಿದೆ. ಆದರೆ ಪುಲಿಕೇಶಿನಗರದಲ್ಲಿ ನಮಗೆ ಒಂದು ಮಾತನ್ನೂ ಹೇಳದೆ, ಕಾಂಗ್ರೆಸ್ ಟಿಕೆಟ್ ವಂಚಿತ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಬಿಎಸ್‌ಪಿ ಟಿಕೆಟ್ ನೀಡಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಬಿ.ಆರ್‌.ಭಾಸ್ಕರ್‌ ಪ್ರಸಾದ್ ಹೇಳಿರುವುದೇನು?

“ನನಗೆ ಯಾರನ್ನೂ ದೂಷಿಸುವ ಮನಸ್ಸಿಲ್ಲ ಮತ್ತು ಅಗತ್ಯವೂ ಇಲ್ಲ. ಆದರೆ ಪ್ರತಿಯೊಂದು ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ನಾನು ಈ ವಿಚಾರವನ್ನು ನಿಮಗೆ ತಿಳಿಸದೆ ಹೋದರೆ ತಪ್ಪು ನನ್ನದಾಗಿ ಬಿಡುತ್ತದೆ. ಹಾಗಾಗಿ ವಿಷಯ ನಿಮಗೆ ಗೊತ್ತಿರಲಿ ಎಂದು ಮಾತ್ರ ಇಲ್ಲಿ ಈ ನಂಬಿಕೆ ದ್ರೋಹದ ಕಥೆಯನ್ನು ಹೇಳಿಕೊಳ್ಳುತ್ತಿದ್ದೇನೆ. ಬಿಎಸ್‌ಪಿ ವಿರುದ್ಧ ಎಸ್‌ಡಿಪಿಐ ಅಭ್ಯರ್ಥಿಯನ್ನು ಹಾಕುವುದು ಬೇಡ, ದಯಮಾಡಿ ನೀವು ನಮಗೆ ಸಹಾಯ ಮಾಡಿ ಎಂದು ಬಿಎಸ್ಪಿ ರಾಜ್ಯ ಸಮಿತಿ ನಮ್ಮನ್ನು ಕೇಳಿಕೊಂಡಿತ್ತು. ನಾವು ಅದರಂತೆ ನಮ್ಮ ರಾಜ್ಯ ಸಮಿತಿಯಲ್ಲಿ ಮಾತಾಡಿ ಒಂದು ಒಳ್ಳೆಯ ಉದ್ದೇಶದಿಂದ ನಮ್ಮ ಆರು ಜನ ಕೌನ್ಸಿಲರ್‌ಗಳು ಇರುವಂತಹ ಚಾಮರಾಜನಗರದಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಬಿಎಸ್‌ಪಿಯ ಹ ರಾ ಮಹೇಶ್ ಅವರಿಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದು ಅಲ್ಲದೆ ನಮ್ಮ ನೂರಾರು ಜನ ಕಾರ್ಯಕರ್ತರು BSP ಅಭ್ಯರ್ಥಿಯೊಂದಿಗೆ ಬಹಿರಂಗವಾಗಿ ಚುನಾವಣಾ ಕಣದಲ್ಲಿದ್ದು ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.”

“ಅದೇ ರೀತಿಯಾಗಿ ಪುಲಿಕೇಶಿ ನಗರದಲ್ಲಿ ನಾವು ಬಿಎಸ್‌ಪಿ ಅಭ್ಯರ್ಥಿಯನ್ನು ಹಾಕದೆ, ನನಗೆ ಬೆಂಬಲ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದರು. ಆದರೆ ನನಗೆ ಒಂದೇ ಒಂದು ಮಾತು ಹೇಳದೆ, ನನ್ನ ಗಮನಕ್ಕೂ ತರದೆ, ಅಥವಾ ನಮ್ಮ ಪಕ್ಷದ ಯಾವುದೇ ನಾಯಕರಿಗೂ ತಿಳಿಸದೆ ರಾತ್ರೋರಾತ್ರಿ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಬಿಎಸ್‌ಪಿ ಬಿ ಫಾರ್ಮ್ ನೀಡುವುದರ ಮೂಲಕ ಅವರನ್ನು ಕಣಕ್ಕೆ ಇಳಿಸಲಾಗಿದೆ.”

“ಇಷ್ಟಾದರೂ ನಮ್ಮ ರಾಜ್ಯ ಸಮಿತಿಯು ಹ ರಾ ಮಹೇಶ್ ಅವರಿಗೆ ನೀಡಿರುವ ಬೆಂಬಲವನ್ನು ಇದೇ ರೀತಿಯಾಗಿ ಸಂಪೂರ್ಣವಾಗಿ ಚುನಾವಣೆಯ ಅಂತಿಮ ಕ್ಷಣದವರೆಗೂ ನೀಡುತ್ತದೆ. ನಮಗೆ ಗೊತ್ತಿದೆ ಈ ದ್ರೋಹದಲ್ಲಿ ಹ ರಾ ಮಹೇಶ್ ಅವರ ಯಾವ ಪಾತ್ರವೂ ಇಲ್ಲ. ಅವರಿಗೂ ಈ ಸುದ್ದಿ ಆಘಾತವನ್ನು ತಂದಿದೆ. ಆ ಪಕ್ಷದ ಮುಖಂಡರು ಮಾಡಿರುವ ನಂಬಿಕೆ ದ್ರೋಹದ ಪ್ರತಿಫಲವನ್ನು ಅವರೇ ಊಟ ಮಾಡಲಿ. ನಮಗದರ ಗೊಡವೆ ಬೇಡ.
ನಮ್ಮ ಪಕ್ಷದ ನಾಯಕರ ಆಶೀರ್ವಾದ ನಮ್ಮ ಕಾರ್ಯಕರ್ತರ ಶಕ್ತಿ ನನ್ನ ಜೊತೆಗೆ ಇರುವವರೆಗೂ, ನಾವು ಯಾರಿಗೂ ಅವಲಂಬನೆಯಾಗಿ ನಿಲ್ಲುವ ತುರ್ತು ಇಲ್ಲ. ನಮ್ಮ ಪಕ್ಷವೇ ನನ್ನ ಆತ್ಮ, ಉಸಿರು, ಜೀವ,
ನನ್ನ ಗೆಲುವು ನನ್ನ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ.
ಎಲ್ಲರಿಗೂ ಧನ್ಯವಾದಗಳು”

-ಹೀಗೆ ಭಾಸ್ಕರ್‌ ಪ್ರಸಾದ್ ಬರೆದುಕೊಂಡಿದ್ದಾರೆ.

11 ಕಡೆ ಪರಸ್ಪರ ಸ್ಪರ್ಧೆ ಮಾಡಿದ್ದೇವೆ: ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸ್ಪಷ್ಟನೆ

ಭಾಸ್ಕರ್‌ ಪ್ರಸಾದ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, “ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್‌ಪಿಗೆ ಎಸ್‌ಡಿಪಿಐ ಬೆಂಬಲ ನೀಡುವುದು ಹಾಗೆಯೇ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐಗೆ ಬಿಎಸ್‌ಪಿ ಬೆಂಬಲ ನೀಡುವುದು ಎಂಬ ಒಪ್ಪಂದ ಮಾಡಿಕೊಂಡೆವು. ಎರಡು ಕಡೆಯಿಂದಲೂ ಪರಸ್ಪರ ಪತ್ರಿಕಾಗೋಷ್ಠಿಗಳನ್ನು ನಡೆಸಲಾಯಿತು. ಬೆಂಗಳೂರಿನಲ್ಲೂ ಈ ರೀತಿಯ ಮಾತುಕತೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಭಾಸ್ಕರ್‌ ಪ್ರಸಾದ್ ಅವರು ಚುನಾವಣಾ ಪ್ರಕ್ರಿಯೆಗಳಲ್ಲಿ ಉಳಿದರು. ಪುಲಿಕೇಶಿನಗರ ಮತ್ತು ಸರ್ವಜ್ಞನಗರದಲ್ಲಿ ಪರಸ್ಪರ ಬೆಂಬಲ ಘೋಷಿಸುವ ಉದ್ದೇಶಗಳಿದ್ದವು. ಆದರೆ ಸರಿಯಾದ ಮಾತುಕತೆಗಳಾಗದೆ ಪ್ರೆಸ್‌ಮೀಟ್‌ ಕೂಡ ಆಗಲಿಲ್ಲ” ಎಂದರು.

“ಕೊನೆ ಕ್ಷಣದಲ್ಲಿ ಪುಲಿಕೇಶಿನಗರದ ಹಾಲಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿಯವರು ಬಂದು ಬಿಎಸ್‌ಪಿ ಸೇರಿಕೊಂಡರು. ಹೀಗಾಗಿ ಬಿಎಸ್‌ಪಿ ಅವರಿಗೆ ಟಿಕೆಟ್ ನೀಡಿದೆ. ಬೆಂಗಳೂರಿನಲ್ಲಿ ಸರಿಯಾದ ಪ್ರಕ್ರಿಯೆಗಳು ನಡೆಯದೆ ಇದ್ದಿದ್ದರಿಂದ ಗೊಂದಲವಾಗಿದೆ. ನರಸಿಂಹರಾಜ, ಚಾಮರಾಜನಗರದಲ್ಲಿ ಆದಂತೆ ಪಟ್ಟು ಹಿಡಿದು ಪ್ರಕ್ರಿಯೆಗಳನ್ನು ಮುಗಿಸಿಕೊಂಡಿದ್ದರೆ ಬಿಎಸ್‌ಪಿ- ಎಸ್‌ಡಿಪಿಐ ಒಪ್ಪಂದವಿದೆ ಎಂದು ಅಖಂಡ ಅವರು ನಮ್ಮ ಬಳಿ ಬರುತ್ತಿರಲಿಲ್ಲ. ಪ್ರೆಸ್‌ಮೀಟ್ ಮಾಡಲೂ ಆಗಲಿಲ್ಲ. ಎರಡು ಪಕ್ಷಗಳ ನಡುವೆ ಗ್ಯಾಪ್‌ ಆದದ್ದರಿಂದ ಈ ಸಮಸ್ಯೆಯಾಗಿದೆ. ಎರಡೂ ಕಡೆಯಿಂದಲೂ ತಪ್ಪುಗಳಾದವು” ಎಂದು ಸ್ಪಷ್ಟನೆ ನೀಡಿದರು.

“ಎಸ್‌ಡಿಪಿಐನವರು 19 ಕಡೆ ಕ್ಯಾಂಡಿಡೇಟ್ ಹಾಕಿದ್ದಾರೆ. ಉಳಿದ ಕಡೆ ಸೌದಾರ್ಹಯುತವಾಗಿ ಫೈಟ್ ನಡೆಯುತ್ತಿದೆ. ಒಟ್ಟು ಹನ್ನೊಂದು ಕಡೆ ಎಸ್‌ಡಿಪಿಐ- ಬಿಎಸ್‌ಪಿ ಪರಸ್ಪರ ಸ್ಪರ್ಧಿಸಿವೆ. ಅದರಲ್ಲಿ ಪುಲಿಕೇಶಿನಗರವೂ ಒಂದು. ಮೈಸೂರು, ಚಾಮರಾಜನಗರಕ್ಕೆ ಮಾತ್ರ ಒಪ್ಪಂದವನ್ನು ಸೀಮಿತಗೊಳಿಸಿಕೊಂಡು ಸೌಹಾರ್ದಯುತವಾಗಿ ಚುನಾವಣೆ ಎದುರಿಸುವಂತಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಕೊಳ್ಳೇಗಾಲ: ನಾಮಪತ್ರ ಹಿಂಪಡೆದ ಬಿಎಸ್‌ಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...