Homeಕರ್ನಾಟಕಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

ಬಿಎಸ್‌ಪಿಗೆ ಬೆಂಬಲಕೊಟ್ಟರೂ ಎಸ್‌ಡಿಪಿಐಗೆ ಅವರು ಬೆಂಬಲ ನೀಡಿಲ್ಲ: ಭಾಸ್ಕರ್‌ ಪ್ರಸಾದ್ ಆರೋಪ

- Advertisement -
- Advertisement -

ಸೋಷಿಯಲ್‌ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಂಬಲ ನೀಡಿದರೂ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ನಮಗೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲ ನೀಡಿಲ್ಲ ಎಂದು ಎಸ್‌ಡಿಪಿಐ ಮುಖಂಡ ಬಿ.ಆರ್‌.ಭಾಸ್ಕರ್‌ ಪ್ರಸಾದ್ ಆರೋಪಿಸಿದ್ದಾರೆ.

ಪುಲಿಕೇಶಿನಗರದಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿರುವ ಭಾಸ್ಕರ್‌ ಪ್ರಸಾದ್‌ ಈ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿಯನ್ನು ಎಸ್‌ಡಿಪಿಐ ಬೆಂಬಲಿಸಿದೆ. ಆದರೆ ಪುಲಿಕೇಶಿನಗರದಲ್ಲಿ ನಮಗೆ ಒಂದು ಮಾತನ್ನೂ ಹೇಳದೆ, ಕಾಂಗ್ರೆಸ್ ಟಿಕೆಟ್ ವಂಚಿತ ಅಖಂಡ ಶ್ರೀನಿವಾಸಮೂರ್ತಿಯವರಿಗೆ ಬಿಎಸ್‌ಪಿ ಟಿಕೆಟ್ ನೀಡಿದೆ” ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಬಿ.ಆರ್‌.ಭಾಸ್ಕರ್‌ ಪ್ರಸಾದ್ ಹೇಳಿರುವುದೇನು?

“ನನಗೆ ಯಾರನ್ನೂ ದೂಷಿಸುವ ಮನಸ್ಸಿಲ್ಲ ಮತ್ತು ಅಗತ್ಯವೂ ಇಲ್ಲ. ಆದರೆ ಪ್ರತಿಯೊಂದು ವಿಚಾರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ನಾನು ಈ ವಿಚಾರವನ್ನು ನಿಮಗೆ ತಿಳಿಸದೆ ಹೋದರೆ ತಪ್ಪು ನನ್ನದಾಗಿ ಬಿಡುತ್ತದೆ. ಹಾಗಾಗಿ ವಿಷಯ ನಿಮಗೆ ಗೊತ್ತಿರಲಿ ಎಂದು ಮಾತ್ರ ಇಲ್ಲಿ ಈ ನಂಬಿಕೆ ದ್ರೋಹದ ಕಥೆಯನ್ನು ಹೇಳಿಕೊಳ್ಳುತ್ತಿದ್ದೇನೆ. ಬಿಎಸ್‌ಪಿ ವಿರುದ್ಧ ಎಸ್‌ಡಿಪಿಐ ಅಭ್ಯರ್ಥಿಯನ್ನು ಹಾಕುವುದು ಬೇಡ, ದಯಮಾಡಿ ನೀವು ನಮಗೆ ಸಹಾಯ ಮಾಡಿ ಎಂದು ಬಿಎಸ್ಪಿ ರಾಜ್ಯ ಸಮಿತಿ ನಮ್ಮನ್ನು ಕೇಳಿಕೊಂಡಿತ್ತು. ನಾವು ಅದರಂತೆ ನಮ್ಮ ರಾಜ್ಯ ಸಮಿತಿಯಲ್ಲಿ ಮಾತಾಡಿ ಒಂದು ಒಳ್ಳೆಯ ಉದ್ದೇಶದಿಂದ ನಮ್ಮ ಆರು ಜನ ಕೌನ್ಸಿಲರ್‌ಗಳು ಇರುವಂತಹ ಚಾಮರಾಜನಗರದಲ್ಲಿ ನಾವು ನಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೆ ಬಿಎಸ್‌ಪಿಯ ಹ ರಾ ಮಹೇಶ್ ಅವರಿಗೆ ಸಂಪೂರ್ಣ ಬೆಂಬಲವನ್ನು ಘೋಷಿಸಿದ್ದು ಅಲ್ಲದೆ ನಮ್ಮ ನೂರಾರು ಜನ ಕಾರ್ಯಕರ್ತರು BSP ಅಭ್ಯರ್ಥಿಯೊಂದಿಗೆ ಬಹಿರಂಗವಾಗಿ ಚುನಾವಣಾ ಕಣದಲ್ಲಿದ್ದು ಅವರ ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.”

“ಅದೇ ರೀತಿಯಾಗಿ ಪುಲಿಕೇಶಿ ನಗರದಲ್ಲಿ ನಾವು ಬಿಎಸ್‌ಪಿ ಅಭ್ಯರ್ಥಿಯನ್ನು ಹಾಕದೆ, ನನಗೆ ಬೆಂಬಲ ಬೆಂಬಲ ನೀಡುವುದಾಗಿ ಅವರು ಘೋಷಿಸಿದ್ದರು. ಆದರೆ ನನಗೆ ಒಂದೇ ಒಂದು ಮಾತು ಹೇಳದೆ, ನನ್ನ ಗಮನಕ್ಕೂ ತರದೆ, ಅಥವಾ ನಮ್ಮ ಪಕ್ಷದ ಯಾವುದೇ ನಾಯಕರಿಗೂ ತಿಳಿಸದೆ ರಾತ್ರೋರಾತ್ರಿ ಅಖಂಡ ಶ್ರೀನಿವಾಸ್ ಮೂರ್ತಿ ಅವರಿಗೆ ಬಿಎಸ್‌ಪಿ ಬಿ ಫಾರ್ಮ್ ನೀಡುವುದರ ಮೂಲಕ ಅವರನ್ನು ಕಣಕ್ಕೆ ಇಳಿಸಲಾಗಿದೆ.”

“ಇಷ್ಟಾದರೂ ನಮ್ಮ ರಾಜ್ಯ ಸಮಿತಿಯು ಹ ರಾ ಮಹೇಶ್ ಅವರಿಗೆ ನೀಡಿರುವ ಬೆಂಬಲವನ್ನು ಇದೇ ರೀತಿಯಾಗಿ ಸಂಪೂರ್ಣವಾಗಿ ಚುನಾವಣೆಯ ಅಂತಿಮ ಕ್ಷಣದವರೆಗೂ ನೀಡುತ್ತದೆ. ನಮಗೆ ಗೊತ್ತಿದೆ ಈ ದ್ರೋಹದಲ್ಲಿ ಹ ರಾ ಮಹೇಶ್ ಅವರ ಯಾವ ಪಾತ್ರವೂ ಇಲ್ಲ. ಅವರಿಗೂ ಈ ಸುದ್ದಿ ಆಘಾತವನ್ನು ತಂದಿದೆ. ಆ ಪಕ್ಷದ ಮುಖಂಡರು ಮಾಡಿರುವ ನಂಬಿಕೆ ದ್ರೋಹದ ಪ್ರತಿಫಲವನ್ನು ಅವರೇ ಊಟ ಮಾಡಲಿ. ನಮಗದರ ಗೊಡವೆ ಬೇಡ.
ನಮ್ಮ ಪಕ್ಷದ ನಾಯಕರ ಆಶೀರ್ವಾದ ನಮ್ಮ ಕಾರ್ಯಕರ್ತರ ಶಕ್ತಿ ನನ್ನ ಜೊತೆಗೆ ಇರುವವರೆಗೂ, ನಾವು ಯಾರಿಗೂ ಅವಲಂಬನೆಯಾಗಿ ನಿಲ್ಲುವ ತುರ್ತು ಇಲ್ಲ. ನಮ್ಮ ಪಕ್ಷವೇ ನನ್ನ ಆತ್ಮ, ಉಸಿರು, ಜೀವ,
ನನ್ನ ಗೆಲುವು ನನ್ನ ಹಣೆಯಲ್ಲಿ ಬರೆದಿದ್ದರೆ ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ.
ಎಲ್ಲರಿಗೂ ಧನ್ಯವಾದಗಳು”

-ಹೀಗೆ ಭಾಸ್ಕರ್‌ ಪ್ರಸಾದ್ ಬರೆದುಕೊಂಡಿದ್ದಾರೆ.

11 ಕಡೆ ಪರಸ್ಪರ ಸ್ಪರ್ಧೆ ಮಾಡಿದ್ದೇವೆ: ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಸ್ಪಷ್ಟನೆ

ಭಾಸ್ಕರ್‌ ಪ್ರಸಾದ್ ಅವರ ಆರೋಪಗಳಿಗೆ ಸಂಬಂಧಿಸಿದಂತೆ ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಬಿಎಸ್‌ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ, “ಚಾಮರಾಜನಗರ ಕ್ಷೇತ್ರದಲ್ಲಿ ಬಿಎಸ್‌ಪಿಗೆ ಎಸ್‌ಡಿಪಿಐ ಬೆಂಬಲ ನೀಡುವುದು ಹಾಗೆಯೇ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಡಿಪಿಐಗೆ ಬಿಎಸ್‌ಪಿ ಬೆಂಬಲ ನೀಡುವುದು ಎಂಬ ಒಪ್ಪಂದ ಮಾಡಿಕೊಂಡೆವು. ಎರಡು ಕಡೆಯಿಂದಲೂ ಪರಸ್ಪರ ಪತ್ರಿಕಾಗೋಷ್ಠಿಗಳನ್ನು ನಡೆಸಲಾಯಿತು. ಬೆಂಗಳೂರಿನಲ್ಲೂ ಈ ರೀತಿಯ ಮಾತುಕತೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಭಾಸ್ಕರ್‌ ಪ್ರಸಾದ್ ಅವರು ಚುನಾವಣಾ ಪ್ರಕ್ರಿಯೆಗಳಲ್ಲಿ ಉಳಿದರು. ಪುಲಿಕೇಶಿನಗರ ಮತ್ತು ಸರ್ವಜ್ಞನಗರದಲ್ಲಿ ಪರಸ್ಪರ ಬೆಂಬಲ ಘೋಷಿಸುವ ಉದ್ದೇಶಗಳಿದ್ದವು. ಆದರೆ ಸರಿಯಾದ ಮಾತುಕತೆಗಳಾಗದೆ ಪ್ರೆಸ್‌ಮೀಟ್‌ ಕೂಡ ಆಗಲಿಲ್ಲ” ಎಂದರು.

“ಕೊನೆ ಕ್ಷಣದಲ್ಲಿ ಪುಲಿಕೇಶಿನಗರದ ಹಾಲಿ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿಯವರು ಬಂದು ಬಿಎಸ್‌ಪಿ ಸೇರಿಕೊಂಡರು. ಹೀಗಾಗಿ ಬಿಎಸ್‌ಪಿ ಅವರಿಗೆ ಟಿಕೆಟ್ ನೀಡಿದೆ. ಬೆಂಗಳೂರಿನಲ್ಲಿ ಸರಿಯಾದ ಪ್ರಕ್ರಿಯೆಗಳು ನಡೆಯದೆ ಇದ್ದಿದ್ದರಿಂದ ಗೊಂದಲವಾಗಿದೆ. ನರಸಿಂಹರಾಜ, ಚಾಮರಾಜನಗರದಲ್ಲಿ ಆದಂತೆ ಪಟ್ಟು ಹಿಡಿದು ಪ್ರಕ್ರಿಯೆಗಳನ್ನು ಮುಗಿಸಿಕೊಂಡಿದ್ದರೆ ಬಿಎಸ್‌ಪಿ- ಎಸ್‌ಡಿಪಿಐ ಒಪ್ಪಂದವಿದೆ ಎಂದು ಅಖಂಡ ಅವರು ನಮ್ಮ ಬಳಿ ಬರುತ್ತಿರಲಿಲ್ಲ. ಪ್ರೆಸ್‌ಮೀಟ್ ಮಾಡಲೂ ಆಗಲಿಲ್ಲ. ಎರಡು ಪಕ್ಷಗಳ ನಡುವೆ ಗ್ಯಾಪ್‌ ಆದದ್ದರಿಂದ ಈ ಸಮಸ್ಯೆಯಾಗಿದೆ. ಎರಡೂ ಕಡೆಯಿಂದಲೂ ತಪ್ಪುಗಳಾದವು” ಎಂದು ಸ್ಪಷ್ಟನೆ ನೀಡಿದರು.

“ಎಸ್‌ಡಿಪಿಐನವರು 19 ಕಡೆ ಕ್ಯಾಂಡಿಡೇಟ್ ಹಾಕಿದ್ದಾರೆ. ಉಳಿದ ಕಡೆ ಸೌದಾರ್ಹಯುತವಾಗಿ ಫೈಟ್ ನಡೆಯುತ್ತಿದೆ. ಒಟ್ಟು ಹನ್ನೊಂದು ಕಡೆ ಎಸ್‌ಡಿಪಿಐ- ಬಿಎಸ್‌ಪಿ ಪರಸ್ಪರ ಸ್ಪರ್ಧಿಸಿವೆ. ಅದರಲ್ಲಿ ಪುಲಿಕೇಶಿನಗರವೂ ಒಂದು. ಮೈಸೂರು, ಚಾಮರಾಜನಗರಕ್ಕೆ ಮಾತ್ರ ಒಪ್ಪಂದವನ್ನು ಸೀಮಿತಗೊಳಿಸಿಕೊಂಡು ಸೌಹಾರ್ದಯುತವಾಗಿ ಚುನಾವಣೆ ಎದುರಿಸುವಂತಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿರಿ: ಕೊಳ್ಳೇಗಾಲ: ನಾಮಪತ್ರ ಹಿಂಪಡೆದ ಬಿಎಸ್‌ಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...