Homeಮುಖಪುಟ‘ಹೆಡ್‌ ಬುಷ್‌’ ವಿಮರ್ಶೆ: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

‘ಹೆಡ್‌ ಬುಷ್‌’ ವಿಮರ್ಶೆ: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ರೌಡಿಸಂ ಕಥೆಗಳು ಕನ್ನಡ ಚಿತ್ರರಂಗದಿಂದ ಸ್ವಲ್ಪ ಹಿಂದಕ್ಕೆ ಸರಿದಂತೆ ಕಾಣುತ್ತಿದ್ದವು. ದುನಿಯಾ ಸೂರಿ ನಿರ್ದೇಶನದ ‘ಪಾಪ್‌ ಕಾರ್ನ್‌ ಮಂಕಿ ಟೈಗರ್‌’, ‘ಕೆಜಿಎಫ್‌’ ನಂತರದಲ್ಲಿ ರೌಡಿಸಂ ಸಿನಿಮಾಗಳು ಇಳಿಮುಖವಾದಂತೆ ಕಾಣುತ್ತಿದ್ದವು. ಆದರೆ ಡಾಲಿ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಇಂತಹ ಸಿನಿಮಾಗಳಿಗೆ ಮರುಜೀವ ನೀಡಿದೆ.

‘ಆ ದಿನಗಳು’, ‘ಎದೆಗಾರಿಕೆ’, ‘ತಮಸ್ಸು’, ‘ಕಳ್ಳರ ಸಂತೆ’ ಸಿನಿಮಾಗಳ ಮೂಲಕ ರಾಜಕೀಯ, ರೌಡಿಸಂ ಆಧಾರಿತ ಚಿತ್ರಕಥೆಗಳಿಗೆ ಬೇರೊಂದು ಆಯಾಮ ನೀಡಿದವರು ಅಗ್ನಿ ಶ್ರೀಧರ್‌. ಅವರ ‘ದಾದಾಗಿರಿಯ ದಿನಗಳು’ ಕೃತಿಯು ರಾಜ್ಯ ಕಂಡ ಭೂಗತ ಜಗತ್ತಿನ ದಾಖಲೆಯಾಗಿಯೂ ಗುರುತಿಸಿಕೊಂಡಿದೆ. ಈ ಕೃತಿಯನ್ನು ಆಧಾರಿಸಿಯೇ ‘ಆ ದಿನಗಳು’ ತೆರೆಗೆ ಬಂದಿತ್ತು. ಇದೇ ಪುಸ್ತಕವನ್ನು ಆಧರಿಸಿ ‘ಹೆಡ್‌ ಬುಷ್‌’ ನಿರ್ದೇಶಿಸಿದ್ದಾರೆ ‘ಶೂನ್ಯ’.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನ ಭೂಗತ ಪಾತಕಿ ಡಾನ್ ಜಯರಾಜ್‌ ಜೀವನದ ಸುತ್ತ ಸಾಗುವ ಶ್ರೀಧರ್‌ ಅವರ ಚಿತ್ರಕಥೆಯು, ಆ ಕಾಲದ ರಾಜಕಾರಣ, ರೌಡಿಸಂ, ಪಾತಕಿಗಳ ಪುಂಡಾಟ, ಪುಡಾರಿಗಳ ಒಳರಾಜಕಾರಣ, ಜನಜೀವನ ಒಂದರೊಳಗೊಂದು ಬೆಸೆದುಕೊಂಡಿರುವುದನ್ನು ಸರಳು ಸರಳಾಗಿ ಬಿಚ್ಚುತ್ತಾ ಹೋಗುತ್ತದೆ.

ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಮುಖ್ಯಮಂತ್ರಿ ದೇವರಾಜ ಅರಸು ಅವರ ಕಾಲದಲ್ಲಿನ ಬೆಂಗಳೂರು, ರಾಷ್ಟ್ರ ರಾಜಕಾರಣದ ಬಿಕ್ಕಟ್ಟುಗಳ ನಡುವೆ ಇಂದಿರಾ ಕಾಂಗ್ರೆಸ್‌ನ ಭಾಗವಾಗಿ ಹುಟ್ಟಿಕೊಂಡ ಇಂದಿರಾ ಬ್ರಿಗೇಡ್‌, ಅರಸು ಅವರ ಅಳಿಯ ಎಂ.ಡಿ.ನಟರಾಜ್‌ ಹಾಗೂ ಮಗಳಾದ ನಾಗರತ್ನ (ಸಿನಿಮಾದಲ್ಲಿ ರತ್ನಪ್ರಭಾ) ಅವರ ಒಡನಾಟಕ್ಕೆ ಬಂದ ಡಾನ್ ಜಯರಾಜ್‌, ರೌಡಿಗಳಿಗೆ ಸಿಕ್ಕ ಪ್ರಭುತ್ವದ ಪೋಷಣೆ, ಆ ಕಾಲದ ಬಡ್ಡಿ ದಂಧೆ, ಸೇಟುಗಳ ವ್ಯವಹಾರ, ಕಾಂಗ್ರೆಸ್‌ನೊಳಗಿನ ಒಳರಾಜಕಾರಣ ಇತ್ಯಾದಿಗಳೆಲ್ಲ ಕಥೆಯೊಳಗೆ ಬರುತ್ತವೆ. ಪಾತಕಿಗಳಿಗೆ ಪ್ರಭುತ್ವದ ಪೋಷಣೆ ಸಿಕ್ಕರೆ ಏನೆಲ್ಲ ಅನಾಹುತಗಳಾಗುತ್ತವೆ ಎಂಬುದನ್ನು ಇಲ್ಲಿ ಕಾಣಬಹುದು.

“ರಾಜಕೀಯ ಅಂದರೆ ಉಪಾಯವಾಗಿ ಇರೋರ್‌ ಅತ್ರ ತಗೊಂಡು ಇಲ್ಲದೆ ಇರೋರಿಗೆ ಕೊಡೋದು” ಎನ್ನುತ್ತಾರೆ ಅರಸು. ಈ ಪಾಲಿಸಿಯನ್ನು ಪಾಲಿಸುವ ಜಯರಾಜ್‌ ಗ್ಯಾಂಗ್‌ನ ಗೂಂಡಾಗಿರಿಗೆ ಮಾನವೀಯ ಸ್ಪರ್ಶ ನೀಡಲು ಯತ್ನಿಸಲಾಗಿದೆ. ರೌಡಿಗಳ ಅಟ್ಟಹಾಸದ ಹಿಂದೆ ಬಡವರ ಪರ ಕಾಳಜಿಯೂ ಇತ್ತು ಎಂಬ ನಿರೂಪಣೆಯನ್ನು ಆರಂಭದಲ್ಲಿ ನೀಡಲಾಗಿದೆ. ಆದರೆ ಭೂಗತ ಸಾಮ್ರಾಜ್ಯದಲ್ಲಿ ಮೇಲುಗೈ ಸಾಧಿಸಬೇಕೆಂದು ನಡೆಸುವ ಗ್ಯಾಂಗ್‌ವಾರ್‌, ಅದರೊಳಗಿನ ಪಿತೂರಿಗಳು, ಸನ್ನಿವೇಶಗಳು ಉಂಟು ಮಾಡುವ ವೈಷಮ್ಯ, ಪಾತಕಿಗಳಿಗೆ ಪ್ರಭುತ್ವದ ಬೆಂ‘ಬಲ’ ಸಿಕ್ಕರೆ ಆಗಬಹುದಾದ ಅನಾಹುತಗಳೆಲ್ಲ ಕಥೆಯೊಳಗೆ ಮುಖ್ಯಸ್ಥಾನ ಪಡೆದಿವೆ. ರೌಡಿಗಳ ವೈಯಕ್ತಿಕ ದ್ವೇಷ, ಅಸೂಯೆ, ಸೇಡು ತೀರಿಸಿಕೊಳ್ಳುವ ಹಪಾಹಪಿ, ರಾಜಕೀಯ, ಪೊಲೀಸ್ ವ್ಯವಸ್ಥೆ- ಇವುಗಳೇ ಮುಖ್ಯವಾಗುವುದನ್ನು ‘ಹೆಡ್‌ ಬುಷ್‌’ನಲ್ಲಿ ಕಾಣಬಹುದು.

‘ಹೆಡ್‌ಬುಷ್‌’ ಎಂಬ ಟೈಟಲ್‌ ಇಟ್ಟು, ಅದಕ್ಕೆ ಸಮರ್ಥನೆ ನೀಡಲೆಂದೇ ಎರಡು ದೃಶ್ಯಗಳನ್ನು ತರುಕಿದಂತಿದೆ. ಜಯರಾಜ್‌, ಗಂಗಾ ಹಾಗೂ ಇತರ ಸ್ನೇಹಿತರ ಬಾಲ್ಯವನ್ನು ತೋರಿಸುವಾಗ ‘ಹೆಡ್‌- ಬುಷ್‌’ (ಹೆಡ್‌ ಅಥವಾ ಟೈಲ್‌) ಜೂಜಿನ ಒಂದು ದೃಶ್ಯ ಬರುತ್ತದೆ. ಜಯರಾಜ್ ಗ್ಯಾಂಗ್ ಬಾರ್‌ನಲ್ಲಿ ಹೆಡ್‌ ಬುಷ್‌ ಆಡುತ್ತಿರುವ ಮತ್ತೊಂದು ದೃಶ್ಯ ಬರುತ್ತದೆ. ಈ ಸಂದರ್ಭದಲ್ಲಿ ಬರುವ ಪ್ರೊಫೆಸರ್‌ (ವಿ.ರವಿಚಂದ್ರನ್‌) ಹೆಡ್‌- ಬುಷ್‌ ಬಗ್ಗೆ ತತ್ವಜ್ಞಾನ ಹೊಡೆದು ಹೋಗುತ್ತಾರೆ. ಆ ಮೂಲಕ ಟೈಟಲ್‌ಗೊಂದು ಮಾನ್ಯತೆ ಕೊಡಲು ಶ್ರೀಧರ್‌ ಯತ್ನಿಸಿದ್ದಾರೆ.

ಅರಸು, ಎಂ.ಡಿ.ನಟರಾಜ್‌, ಜಯರಾ‌ಜ್‌, ಗಂಗಾ, ಖಾನ್‌, ಅರಸು, ರತ್ನಪ್ರಭಾ, ಕೊತ್ವಾಲ್‌ ರಾಮಚಂದ್ರ ರಾವ್, ಸಾಮ್ಸನ್‌, ಪೊಲೀಸ್ ಅಧಿಕಾರಿ ಗರುಡಾಚಾರ್‌ ಮೊದಲಾದ ಪಾತ್ರಗಳ ಸುತ್ತ ಸಾಗುವ ಹೆಡ್‌ಬುಷ್‌- ದಾದಾಗಿರಿಯ ದಿನಗಳನ್ನು ಢಾಳಾಗಿ ಚಿತ್ರಿಸಿದೆ.

ಈವರೆಗೆ ಬಂದಿರುವ ರೌಡಿಸಂ ಸಿನಿಮಾಗಳಿಗೆ ಹೋಲಿಸಿದರೆ ಇಲ್ಲಿನ ಕಾಸ್ಟ್ಯೂಮ್‌, ಮೇಕಿಂಗ್‌ ವಿಶಿಷ್ಟವಾಗಿದೆ. ಚರಣ್‌ ರಾಜ್‌ ಸಂಗೀತ ಇಷ್ಟವಾಗುತ್ತದೆ. ಆ ದಿನಗಳು, ಎದೆಗಾರಿಕೆಗಿಂತ ಹೆಚ್ಚಿನ ಸಿನಿಮೀಯತೆ ಹೆಡ್‌ಬುಷ್‌ನಲ್ಲಿದೆ. ಜಯರಾಜ್‌ನನ್ನು ವೈಭವೀಕರಿಸುವ ಹೊಡೆದಾಟದ ದೃಶ್ಯಗಳಿವೆ. ಎಪ್ಪತ್ತರ ದಶಕದ ಪಾತಕ ಲೋಕವನ್ನು ತೆರೆದಿಡಲಾಗಿದೆ. ತಾಂತ್ರಿಕವಾಗಿ ಸಿನಿಮಾ ಉತ್ತಮವಾಗಿದೆ. ಆದರೆ ‘ಎದೆಗಾರಿಕೆ’, ‘ಆ ದಿನಗಳು’ ಸಿನಿಮಾ ಕಥೆಯಲ್ಲಿ ಕಾಣುವಷ್ಟು ಕಲಾತ್ಮಕತೆ, ತೀವ್ರತೆ ಈ ಸಿನಿಮಾದಲ್ಲಿ ಇಲ್ಲ. ಮೊದಲೆರಡು ಸಿನಿಮಾಗಳಲ್ಲಿ ಪಾತಕ ಲೋಕದೊಳಗಿನ ತಲ್ಲಣಗಳಿಗೆ ಮಾನವೀಯ ಸ್ಪರ್ಶವನ್ನು ನೀಡಲಾಗಿದೆ. ಆದರೆ ಇಲ್ಲಿ ಗಂಡಸರ ತೋಳ್ಬಲ ಪ್ರದರ್ಶನ ರಾರಾಜಿಸಿದೆ.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

‘ಎ’ ಸರ್ಟಿಫಿಕೇಟ್‌ ಪಡೆದಿರುವ ಈ ಸಿನಿಮಾದಲ್ಲಿ ರೌಡಿಗಳ ಭಾಷೆಯನ್ನು ಹಸಿಹಸಿಯಾಗಿ ಬಳಸಲಾಗಿದೆ. ಗತಕಾಲದ ಕತೆಯ ನೆಪದಲ್ಲಿ ಲಿಂಗ ಸೂಕ್ಷ್ಮತೆಗಳನ್ನು ಅಣಕಿಸುವ ಸಂಭಾಷಣೆಗಳು ಸೇರಿಕೊಂಡಿವೆ. ಮೊದಲಾರ್ಧ ಜಯರಾಜ್ ಗ್ಯಾಂಗ್‌ನ ಪಾತಕಗಳ ವೈಭವೀಕರಣಕ್ಕೆ ಮೀಸಲಾದರೆ, ದ್ವಿತೀಯಾರ್ಧ ರೌಡಿಸಂ ಜಗತ್ತಿನ ಒಳ ಹೂರಣವನ್ನು ತೆರೆದಿಡುತ್ತದೆ.

ಭೂಗತ ಜಗತ್ತಿಗೆ ಇದ್ದವರಿಗೆ ಬಡವರ ಪರ ಕಾಳಜಿಯೂ ಇತ್ತು ಎಂದು ತೋರಿಸಲು ಯತ್ನಿಸಿರುವುದು ಅಸ್ವೀಕೃತ ಸಂಗತಿ. ಜಯರಾಜ್‌ ಥರದ ರೌಡಿಗಳು ಬಡವರಿಗೆ ತೊಂದರೆ ಕೊಡುತ್ತಿರಲಿಲ್ಲ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಇಂತಹ ನಿರೂಪಣೆಯು ರೌಡಿಸಂಗೆ ಜನಪ್ರಿಯತೆಯನ್ನು ತಂದುಕೊಡುವ ಅಪಾಯವಿರುತ್ತದೆ. ಹೀಗಾಗಿ ನಾಯಕ ಪಾತ್ರವನ್ನು ವೈಭವೀಕರಿಸುವ ಭರದಲ್ಲಿ ಯಾವ ವಿಚಾರಕ್ಕೆ ಒತ್ತು ನೀಡುತ್ತಿದ್ದೇವೆ ಎಂಬ ಎಚ್ಚರಿಕೆಯೂ ಇರಬೇಕಾಗುತ್ತದೆ.

‘ಹಿಂದಿ ಹೇರಿಕೆ’ಯನ್ನು ಪ್ರಶ್ನಿಸುವ ಈ ಕಾಲದ ತುರ್ತಿನ ಭಾಗವಾಗಿ ದೃಶ್ಯವೊಂದನ್ನು ಸಿನಿಮಾದಲ್ಲಿ ಸೇರಿಸಲಾಗಿದೆ. ಹಿಂದಿಯನ್ನು ಗೌರವಿಸುತ್ತೇವೆ, ಆದರೆ ಕನ್ನಡ ನಮ್ಮ ಹೃದಯದ ಭಾಷೆ. ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಹೆಡ್‌ಬುಷ್ ಚಿತ್ರ ತಂಡ ನೀಡಿದೆ.

ಜಯರಾಜ್‌ ಹೆಂಡತಿಯ ಪಾತ್ರದಲ್ಲಿ ಪಾಯಲ್‌ ರಜಪೂತ್ ಅಭಿನಯಿಸಿದ್ದಾರೆ. ಆದರೆ ಈ ಪಾತ್ರದ ಮಹತ್ವ ಅರ್ಥವಾಗುವುದಿಲ್ಲ. ಹೀಗೆ ಬಂದು, ಹಾಗೆ ಹೋದದಷ್ಟೇ ಎನಿಸುತ್ತದೆ.

ದಾದಾಗಿರಿಯ ದಿನಗಳನ್ನು ದೃಶ್ಯರೂಪದಲ್ಲಿ ನೋಡಬೇಕೆಂದು ಬಯಸುವವರಿಗೆ, ಡಾಲಿ ಧನಂಜಯ ಅವರ ಅಭಿನಯವನ್ನು ಕಣ್ತುಂಬಿಕೊಳ್ಳಲು ಬಯಸುವವರಿಗೆ ಹೆಡ್‌ ಬುಷ್‌ ಇಷ್ಟವಾಗಬಹುದು.

ದೇವರಾಜ್ (ದೇವರಾಜ ಅರಸು), ಪ್ರಕಾಶ್ ಬೆಳವಾಡಿ (ಗರುಡಾಚಾರ್‌), ಧನಂಜಯ (ಜಯರಾಜ್‌), ಶ್ರುತಿ ಹರಿಹರನ್‌ (ಅರಸು ಅವರ ಮಗಳಾದ ನಾಗರತ್ನ), ಲೂಸ್‌ ಮಾದ ಯೋಗಿ (ಗಂಗಾ), ವಶಿಷ್ಟ ಸಿಂಹ (ಕೊಲ್ವಾಲ್ ರಾಮಚಂದ್ರ), ಬಾಲನಾಗೇಂದ್ರ (ಸಾಮ್ಸನ್‌), ರಘು ಮುಖರ್ಜಿ (ನಟರಾಜ್‌), ಪಯಲ್ ರಜಪೂತ್‌ (ಜಯರಾಜ್ ಹೆಂಡತಿ) ಅವರು ಅಭಿನಯದಲ್ಲಿ ಮಿಂಚಿದ್ದಾರೆ. ಬಾದಲ್ ನಂಜುಂಡಸ್ವಾಮಿಯವರ ಕಲಾ ನಿರ್ದೇಶನ ಆ ಕಾಲವನ್ನು ಮರುಸೃಷ್ಟಿಸುವಲ್ಲಿ ಹೆಚ್ಚಿನ ಪಾತ್ರವನ್ನು ವಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...