Homeಮುಖಪುಟ‘ಹೆಡ್‌ ಬುಷ್‌’ ವಿಮರ್ಶೆ: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

‘ಹೆಡ್‌ ಬುಷ್‌’ ವಿಮರ್ಶೆ: ಜಯರಾಜ್‌ ದಾದಾಗಿರಿಯ ದಿನಗಳ ದರ್ಶನ

- Advertisement -
- Advertisement -

ಇತ್ತೀಚಿನ ದಿನಗಳಲ್ಲಿ ರೌಡಿಸಂ ಕಥೆಗಳು ಕನ್ನಡ ಚಿತ್ರರಂಗದಿಂದ ಸ್ವಲ್ಪ ಹಿಂದಕ್ಕೆ ಸರಿದಂತೆ ಕಾಣುತ್ತಿದ್ದವು. ದುನಿಯಾ ಸೂರಿ ನಿರ್ದೇಶನದ ‘ಪಾಪ್‌ ಕಾರ್ನ್‌ ಮಂಕಿ ಟೈಗರ್‌’, ‘ಕೆಜಿಎಫ್‌’ ನಂತರದಲ್ಲಿ ರೌಡಿಸಂ ಸಿನಿಮಾಗಳು ಇಳಿಮುಖವಾದಂತೆ ಕಾಣುತ್ತಿದ್ದವು. ಆದರೆ ಡಾಲಿ ಧನಂಜಯ್‌ ಅಭಿನಯದ ‘ಹೆಡ್‌ ಬುಷ್‌’ ಇಂತಹ ಸಿನಿಮಾಗಳಿಗೆ ಮರುಜೀವ ನೀಡಿದೆ.

‘ಆ ದಿನಗಳು’, ‘ಎದೆಗಾರಿಕೆ’, ‘ತಮಸ್ಸು’, ‘ಕಳ್ಳರ ಸಂತೆ’ ಸಿನಿಮಾಗಳ ಮೂಲಕ ರಾಜಕೀಯ, ರೌಡಿಸಂ ಆಧಾರಿತ ಚಿತ್ರಕಥೆಗಳಿಗೆ ಬೇರೊಂದು ಆಯಾಮ ನೀಡಿದವರು ಅಗ್ನಿ ಶ್ರೀಧರ್‌. ಅವರ ‘ದಾದಾಗಿರಿಯ ದಿನಗಳು’ ಕೃತಿಯು ರಾಜ್ಯ ಕಂಡ ಭೂಗತ ಜಗತ್ತಿನ ದಾಖಲೆಯಾಗಿಯೂ ಗುರುತಿಸಿಕೊಂಡಿದೆ. ಈ ಕೃತಿಯನ್ನು ಆಧಾರಿಸಿಯೇ ‘ಆ ದಿನಗಳು’ ತೆರೆಗೆ ಬಂದಿತ್ತು. ಇದೇ ಪುಸ್ತಕವನ್ನು ಆಧರಿಸಿ ‘ಹೆಡ್‌ ಬುಷ್‌’ ನಿರ್ದೇಶಿಸಿದ್ದಾರೆ ‘ಶೂನ್ಯ’.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರಿನ ಭೂಗತ ಪಾತಕಿ ಡಾನ್ ಜಯರಾಜ್‌ ಜೀವನದ ಸುತ್ತ ಸಾಗುವ ಶ್ರೀಧರ್‌ ಅವರ ಚಿತ್ರಕಥೆಯು, ಆ ಕಾಲದ ರಾಜಕಾರಣ, ರೌಡಿಸಂ, ಪಾತಕಿಗಳ ಪುಂಡಾಟ, ಪುಡಾರಿಗಳ ಒಳರಾಜಕಾರಣ, ಜನಜೀವನ ಒಂದರೊಳಗೊಂದು ಬೆಸೆದುಕೊಂಡಿರುವುದನ್ನು ಸರಳು ಸರಳಾಗಿ ಬಿಚ್ಚುತ್ತಾ ಹೋಗುತ್ತದೆ.

ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಮುಖ್ಯಮಂತ್ರಿ ದೇವರಾಜ ಅರಸು ಅವರ ಕಾಲದಲ್ಲಿನ ಬೆಂಗಳೂರು, ರಾಷ್ಟ್ರ ರಾಜಕಾರಣದ ಬಿಕ್ಕಟ್ಟುಗಳ ನಡುವೆ ಇಂದಿರಾ ಕಾಂಗ್ರೆಸ್‌ನ ಭಾಗವಾಗಿ ಹುಟ್ಟಿಕೊಂಡ ಇಂದಿರಾ ಬ್ರಿಗೇಡ್‌, ಅರಸು ಅವರ ಅಳಿಯ ಎಂ.ಡಿ.ನಟರಾಜ್‌ ಹಾಗೂ ಮಗಳಾದ ನಾಗರತ್ನ (ಸಿನಿಮಾದಲ್ಲಿ ರತ್ನಪ್ರಭಾ) ಅವರ ಒಡನಾಟಕ್ಕೆ ಬಂದ ಡಾನ್ ಜಯರಾಜ್‌, ರೌಡಿಗಳಿಗೆ ಸಿಕ್ಕ ಪ್ರಭುತ್ವದ ಪೋಷಣೆ, ಆ ಕಾಲದ ಬಡ್ಡಿ ದಂಧೆ, ಸೇಟುಗಳ ವ್ಯವಹಾರ, ಕಾಂಗ್ರೆಸ್‌ನೊಳಗಿನ ಒಳರಾಜಕಾರಣ ಇತ್ಯಾದಿಗಳೆಲ್ಲ ಕಥೆಯೊಳಗೆ ಬರುತ್ತವೆ. ಪಾತಕಿಗಳಿಗೆ ಪ್ರಭುತ್ವದ ಪೋಷಣೆ ಸಿಕ್ಕರೆ ಏನೆಲ್ಲ ಅನಾಹುತಗಳಾಗುತ್ತವೆ ಎಂಬುದನ್ನು ಇಲ್ಲಿ ಕಾಣಬಹುದು.

“ರಾಜಕೀಯ ಅಂದರೆ ಉಪಾಯವಾಗಿ ಇರೋರ್‌ ಅತ್ರ ತಗೊಂಡು ಇಲ್ಲದೆ ಇರೋರಿಗೆ ಕೊಡೋದು” ಎನ್ನುತ್ತಾರೆ ಅರಸು. ಈ ಪಾಲಿಸಿಯನ್ನು ಪಾಲಿಸುವ ಜಯರಾಜ್‌ ಗ್ಯಾಂಗ್‌ನ ಗೂಂಡಾಗಿರಿಗೆ ಮಾನವೀಯ ಸ್ಪರ್ಶ ನೀಡಲು ಯತ್ನಿಸಲಾಗಿದೆ. ರೌಡಿಗಳ ಅಟ್ಟಹಾಸದ ಹಿಂದೆ ಬಡವರ ಪರ ಕಾಳಜಿಯೂ ಇತ್ತು ಎಂಬ ನಿರೂಪಣೆಯನ್ನು ಆರಂಭದಲ್ಲಿ ನೀಡಲಾಗಿದೆ. ಆದರೆ ಭೂಗತ ಸಾಮ್ರಾಜ್ಯದಲ್ಲಿ ಮೇಲುಗೈ ಸಾಧಿಸಬೇಕೆಂದು ನಡೆಸುವ ಗ್ಯಾಂಗ್‌ವಾರ್‌, ಅದರೊಳಗಿನ ಪಿತೂರಿಗಳು, ಸನ್ನಿವೇಶಗಳು ಉಂಟು ಮಾಡುವ ವೈಷಮ್ಯ, ಪಾತಕಿಗಳಿಗೆ ಪ್ರಭುತ್ವದ ಬೆಂ‘ಬಲ’ ಸಿಕ್ಕರೆ ಆಗಬಹುದಾದ ಅನಾಹುತಗಳೆಲ್ಲ ಕಥೆಯೊಳಗೆ ಮುಖ್ಯಸ್ಥಾನ ಪಡೆದಿವೆ. ರೌಡಿಗಳ ವೈಯಕ್ತಿಕ ದ್ವೇಷ, ಅಸೂಯೆ, ಸೇಡು ತೀರಿಸಿಕೊಳ್ಳುವ ಹಪಾಹಪಿ, ರಾಜಕೀಯ, ಪೊಲೀಸ್ ವ್ಯವಸ್ಥೆ- ಇವುಗಳೇ ಮುಖ್ಯವಾಗುವುದನ್ನು ‘ಹೆಡ್‌ ಬುಷ್‌’ನಲ್ಲಿ ಕಾಣಬಹುದು.

‘ಹೆಡ್‌ಬುಷ್‌’ ಎಂಬ ಟೈಟಲ್‌ ಇಟ್ಟು, ಅದಕ್ಕೆ ಸಮರ್ಥನೆ ನೀಡಲೆಂದೇ ಎರಡು ದೃಶ್ಯಗಳನ್ನು ತರುಕಿದಂತಿದೆ. ಜಯರಾಜ್‌, ಗಂಗಾ ಹಾಗೂ ಇತರ ಸ್ನೇಹಿತರ ಬಾಲ್ಯವನ್ನು ತೋರಿಸುವಾಗ ‘ಹೆಡ್‌- ಬುಷ್‌’ (ಹೆಡ್‌ ಅಥವಾ ಟೈಲ್‌) ಜೂಜಿನ ಒಂದು ದೃಶ್ಯ ಬರುತ್ತದೆ. ಜಯರಾಜ್ ಗ್ಯಾಂಗ್ ಬಾರ್‌ನಲ್ಲಿ ಹೆಡ್‌ ಬುಷ್‌ ಆಡುತ್ತಿರುವ ಮತ್ತೊಂದು ದೃಶ್ಯ ಬರುತ್ತದೆ. ಈ ಸಂದರ್ಭದಲ್ಲಿ ಬರುವ ಪ್ರೊಫೆಸರ್‌ (ವಿ.ರವಿಚಂದ್ರನ್‌) ಹೆಡ್‌- ಬುಷ್‌ ಬಗ್ಗೆ ತತ್ವಜ್ಞಾನ ಹೊಡೆದು ಹೋಗುತ್ತಾರೆ. ಆ ಮೂಲಕ ಟೈಟಲ್‌ಗೊಂದು ಮಾನ್ಯತೆ ಕೊಡಲು ಶ್ರೀಧರ್‌ ಯತ್ನಿಸಿದ್ದಾರೆ.

ಅರಸು, ಎಂ.ಡಿ.ನಟರಾಜ್‌, ಜಯರಾ‌ಜ್‌, ಗಂಗಾ, ಖಾನ್‌, ಅರಸು, ರತ್ನಪ್ರಭಾ, ಕೊತ್ವಾಲ್‌ ರಾಮಚಂದ್ರ ರಾವ್, ಸಾಮ್ಸನ್‌, ಪೊಲೀಸ್ ಅಧಿಕಾರಿ ಗರುಡಾಚಾರ್‌ ಮೊದಲಾದ ಪಾತ್ರಗಳ ಸುತ್ತ ಸಾಗುವ ಹೆಡ್‌ಬುಷ್‌- ದಾದಾಗಿರಿಯ ದಿನಗಳನ್ನು ಢಾಳಾಗಿ ಚಿತ್ರಿಸಿದೆ.

ಈವರೆಗೆ ಬಂದಿರುವ ರೌಡಿಸಂ ಸಿನಿಮಾಗಳಿಗೆ ಹೋಲಿಸಿದರೆ ಇಲ್ಲಿನ ಕಾಸ್ಟ್ಯೂಮ್‌, ಮೇಕಿಂಗ್‌ ವಿಶಿಷ್ಟವಾಗಿದೆ. ಚರಣ್‌ ರಾಜ್‌ ಸಂಗೀತ ಇಷ್ಟವಾಗುತ್ತದೆ. ಆ ದಿನಗಳು, ಎದೆಗಾರಿಕೆಗಿಂತ ಹೆಚ್ಚಿನ ಸಿನಿಮೀಯತೆ ಹೆಡ್‌ಬುಷ್‌ನಲ್ಲಿದೆ. ಜಯರಾಜ್‌ನನ್ನು ವೈಭವೀಕರಿಸುವ ಹೊಡೆದಾಟದ ದೃಶ್ಯಗಳಿವೆ. ಎಪ್ಪತ್ತರ ದಶಕದ ಪಾತಕ ಲೋಕವನ್ನು ತೆರೆದಿಡಲಾಗಿದೆ. ತಾಂತ್ರಿಕವಾಗಿ ಸಿನಿಮಾ ಉತ್ತಮವಾಗಿದೆ. ಆದರೆ ‘ಎದೆಗಾರಿಕೆ’, ‘ಆ ದಿನಗಳು’ ಸಿನಿಮಾ ಕಥೆಯಲ್ಲಿ ಕಾಣುವಷ್ಟು ಕಲಾತ್ಮಕತೆ, ತೀವ್ರತೆ ಈ ಸಿನಿಮಾದಲ್ಲಿ ಇಲ್ಲ. ಮೊದಲೆರಡು ಸಿನಿಮಾಗಳಲ್ಲಿ ಪಾತಕ ಲೋಕದೊಳಗಿನ ತಲ್ಲಣಗಳಿಗೆ ಮಾನವೀಯ ಸ್ಪರ್ಶವನ್ನು ನೀಡಲಾಗಿದೆ. ಆದರೆ ಇಲ್ಲಿ ಗಂಡಸರ ತೋಳ್ಬಲ ಪ್ರದರ್ಶನ ರಾರಾಜಿಸಿದೆ.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

‘ಎ’ ಸರ್ಟಿಫಿಕೇಟ್‌ ಪಡೆದಿರುವ ಈ ಸಿನಿಮಾದಲ್ಲಿ ರೌಡಿಗಳ ಭಾಷೆಯನ್ನು ಹಸಿಹಸಿಯಾಗಿ ಬಳಸಲಾಗಿದೆ. ಗತಕಾಲದ ಕತೆಯ ನೆಪದಲ್ಲಿ ಲಿಂಗ ಸೂಕ್ಷ್ಮತೆಗಳನ್ನು ಅಣಕಿಸುವ ಸಂಭಾಷಣೆಗಳು ಸೇರಿಕೊಂಡಿವೆ. ಮೊದಲಾರ್ಧ ಜಯರಾಜ್ ಗ್ಯಾಂಗ್‌ನ ಪಾತಕಗಳ ವೈಭವೀಕರಣಕ್ಕೆ ಮೀಸಲಾದರೆ, ದ್ವಿತೀಯಾರ್ಧ ರೌಡಿಸಂ ಜಗತ್ತಿನ ಒಳ ಹೂರಣವನ್ನು ತೆರೆದಿಡುತ್ತದೆ.

ಭೂಗತ ಜಗತ್ತಿಗೆ ಇದ್ದವರಿಗೆ ಬಡವರ ಪರ ಕಾಳಜಿಯೂ ಇತ್ತು ಎಂದು ತೋರಿಸಲು ಯತ್ನಿಸಿರುವುದು ಅಸ್ವೀಕೃತ ಸಂಗತಿ. ಜಯರಾಜ್‌ ಥರದ ರೌಡಿಗಳು ಬಡವರಿಗೆ ತೊಂದರೆ ಕೊಡುತ್ತಿರಲಿಲ್ಲ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ. ಇಂತಹ ನಿರೂಪಣೆಯು ರೌಡಿಸಂಗೆ ಜನಪ್ರಿಯತೆಯನ್ನು ತಂದುಕೊಡುವ ಅಪಾಯವಿರುತ್ತದೆ. ಹೀಗಾಗಿ ನಾಯಕ ಪಾತ್ರವನ್ನು ವೈಭವೀಕರಿಸುವ ಭರದಲ್ಲಿ ಯಾವ ವಿಚಾರಕ್ಕೆ ಒತ್ತು ನೀಡುತ್ತಿದ್ದೇವೆ ಎಂಬ ಎಚ್ಚರಿಕೆಯೂ ಇರಬೇಕಾಗುತ್ತದೆ.

‘ಹಿಂದಿ ಹೇರಿಕೆ’ಯನ್ನು ಪ್ರಶ್ನಿಸುವ ಈ ಕಾಲದ ತುರ್ತಿನ ಭಾಗವಾಗಿ ದೃಶ್ಯವೊಂದನ್ನು ಸಿನಿಮಾದಲ್ಲಿ ಸೇರಿಸಲಾಗಿದೆ. ಹಿಂದಿಯನ್ನು ಗೌರವಿಸುತ್ತೇವೆ, ಆದರೆ ಕನ್ನಡ ನಮ್ಮ ಹೃದಯದ ಭಾಷೆ. ಹಿಂದಿ ಹೇರಿಕೆಯನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ಪರೋಕ್ಷವಾಗಿ ಹೆಡ್‌ಬುಷ್ ಚಿತ್ರ ತಂಡ ನೀಡಿದೆ.

ಜಯರಾಜ್‌ ಹೆಂಡತಿಯ ಪಾತ್ರದಲ್ಲಿ ಪಾಯಲ್‌ ರಜಪೂತ್ ಅಭಿನಯಿಸಿದ್ದಾರೆ. ಆದರೆ ಈ ಪಾತ್ರದ ಮಹತ್ವ ಅರ್ಥವಾಗುವುದಿಲ್ಲ. ಹೀಗೆ ಬಂದು, ಹಾಗೆ ಹೋದದಷ್ಟೇ ಎನಿಸುತ್ತದೆ.

ದಾದಾಗಿರಿಯ ದಿನಗಳನ್ನು ದೃಶ್ಯರೂಪದಲ್ಲಿ ನೋಡಬೇಕೆಂದು ಬಯಸುವವರಿಗೆ, ಡಾಲಿ ಧನಂಜಯ ಅವರ ಅಭಿನಯವನ್ನು ಕಣ್ತುಂಬಿಕೊಳ್ಳಲು ಬಯಸುವವರಿಗೆ ಹೆಡ್‌ ಬುಷ್‌ ಇಷ್ಟವಾಗಬಹುದು.

ದೇವರಾಜ್ (ದೇವರಾಜ ಅರಸು), ಪ್ರಕಾಶ್ ಬೆಳವಾಡಿ (ಗರುಡಾಚಾರ್‌), ಧನಂಜಯ (ಜಯರಾಜ್‌), ಶ್ರುತಿ ಹರಿಹರನ್‌ (ಅರಸು ಅವರ ಮಗಳಾದ ನಾಗರತ್ನ), ಲೂಸ್‌ ಮಾದ ಯೋಗಿ (ಗಂಗಾ), ವಶಿಷ್ಟ ಸಿಂಹ (ಕೊಲ್ವಾಲ್ ರಾಮಚಂದ್ರ), ಬಾಲನಾಗೇಂದ್ರ (ಸಾಮ್ಸನ್‌), ರಘು ಮುಖರ್ಜಿ (ನಟರಾಜ್‌), ಪಯಲ್ ರಜಪೂತ್‌ (ಜಯರಾಜ್ ಹೆಂಡತಿ) ಅವರು ಅಭಿನಯದಲ್ಲಿ ಮಿಂಚಿದ್ದಾರೆ. ಬಾದಲ್ ನಂಜುಂಡಸ್ವಾಮಿಯವರ ಕಲಾ ನಿರ್ದೇಶನ ಆ ಕಾಲವನ್ನು ಮರುಸೃಷ್ಟಿಸುವಲ್ಲಿ ಹೆಚ್ಚಿನ ಪಾತ್ರವನ್ನು ವಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...