Homeಮುಖಪುಟ41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

- Advertisement -
- Advertisement -

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವಗಳನ್ನು ರಕ್ಷಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿರುವ ಇಲಿ ಬಿಲ ಗಣಿಗಾರಿಕೆ ತಂಡವು ಮತ್ತೊಂದು ವಿಚಾರಕ್ಕೆ ಗಮನ ಸೆಳೆದಿದೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್ ಅವರು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದ ಬಹುಮಾನದ ಹಣವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಕಾರ್ಮಿಕರ ರಕ್ಷಣೆಯಲ್ಲಿ ನಮ್ಮ ತಂಡದ ಎಲ್ಲರ ಒಗ್ಗಟ್ಟಿನ ಶ್ರಮವಿದೆ. ನನ್ನನ್ನು ಒಬ್ಬನನ್ನೇ ಹೀರೋ ಮಾಡುವುದು ಬೇಡ ಎಂದು ಅವರು ಹೇಳಿದ್ದಾರೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್‌ ಸೇರಿ 12 ಕಾರ್ಮಿಕರಿಗೆ ತಲಾ 50 ಸಾವಿರ ರೂಪಾಯಿ ನಗದು ಬಹುಮಾನವನ್ನು ಉತ್ತರಾಖಂಡ ಸಿಎಂ ಘೋಷಿಸಿದ್ದರು.

ಹಣಕ್ಕಿಂತ ವೃತ್ತಿಗೆ, ಮಾನವೀಯತೆಗೆ ಆದ್ಯತೆ ಕೊಟ್ಟಿರುವ ವಕೀಲ್ ಹಸನ್, ನಮ್ಮ ತಂಡದಲ್ಲಿ ಯಾರೋ ಒಬ್ಬರಿಂದ ಕಾರ್ಮಿಕರ ರಕ್ಷಣೆ ಆಗಿಲ್ಲ. ಹಿಂದೂ-ಮುಸ್ಲಿಂ ಧರ್ಮಗಳ ಕಾರ್ಮಿಕರು ಜಾತಿ, ಮತ, ಪಂಥವನ್ನು ಬದಿಗಿಟ್ಟು ಕೆಲಸ ಮಾಡಿದ್ದಾರೆ. ನಾವೆಲ್ಲರೂ ದ್ವೇಷದ ವಿಷ ಬಿಟ್ಟು ಸೌಹಾರ್ದತೆಯಿಂದ ಬಾಳೋಣ. ಇದೇ ನನ್ನ ಸಂದೇಶ ಎಂದು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕರಾದ ವಕೀಲ್ ಹಸನ್ ಈ ಹಿಂದೆ ಹೇಳಿದ್ದರು.

ಕೊನೆಯ ಹಂತದ ಸುರಂಗ ಕೊರೆದ ಇಲಿ ಬಿಲ ತಂಡದಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆ ಕೆಲಸ ಮಾಡುವ ವಕೀಲ್ ಹಸನ್ ಅವರ ತಂಡ ಇಲಿ ಬಿಲ ಸುರಂಗ ಕೊರೆಯುವುದರಲ್ಲಿ ಸಾಕಷ್ಟು ಅನುಭವ ಹೊಂದಿದೆ. ಆದರೆ, ಅವರು ಸಿಲ್ಕ್ಯಾರದಷ್ಟು ದೊಡ್ಡ ರಕ್ಷಣಾ ಕಾರ್ಯ ಮಾಡಿಲ್ಲ ಎನ್ನಲಾಗಿದೆ.

ಇಲಿ ಬಿಲ ಗಣಿಗಾರಿಕೆ ಎಂಬುವುದು ಈಶಾನ್ಯ ರಾಜ್ಯವಾದ ಮೇಘಾಲಯದಲ್ಲಿ ಕಲ್ಲಿದ್ದಲಿನ ತೆಳುವಾದ ಪದರಗಳನ್ನು ಹೊರತೆಗೆಯಲು ವ್ಯಾಪಕವಾಗಿ ಬಳಸಲಾಗುತ್ತಿದ್ದ ಅಪಾಯಕಾರಿ ಗಣಿಗಾರಿಕೆ ವಿಧಾನವಾಗಿದೆ. ಕಾರ್ಮಿಕರ ಸಾವು, ಪರಿಸರ ಹಾನಿಯ ಕಾರಣ ನೀಡಿ, ಹಸಿರು ನ್ಯಾಯಾಧೀಕರಣ 2014 ರಲ್ಲಿ ಇದನ್ನು ನಿಷೇಧ ಮಾಡಿದೆ.

ಇದನ್ನೂ ಓದಿ : ಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...