Homeಮುಖಪುಟ41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

- Advertisement -
- Advertisement -

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವಗಳನ್ನು ರಕ್ಷಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿರುವ ಇಲಿ ಬಿಲ ಗಣಿಗಾರಿಕೆ ತಂಡವು ಮತ್ತೊಂದು ವಿಚಾರಕ್ಕೆ ಗಮನ ಸೆಳೆದಿದೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್ ಅವರು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದ ಬಹುಮಾನದ ಹಣವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಕಾರ್ಮಿಕರ ರಕ್ಷಣೆಯಲ್ಲಿ ನಮ್ಮ ತಂಡದ ಎಲ್ಲರ ಒಗ್ಗಟ್ಟಿನ ಶ್ರಮವಿದೆ. ನನ್ನನ್ನು ಒಬ್ಬನನ್ನೇ ಹೀರೋ ಮಾಡುವುದು ಬೇಡ ಎಂದು ಅವರು ಹೇಳಿದ್ದಾರೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್‌ ಸೇರಿ 12 ಕಾರ್ಮಿಕರಿಗೆ ತಲಾ 50 ಸಾವಿರ ರೂಪಾಯಿ ನಗದು ಬಹುಮಾನವನ್ನು ಉತ್ತರಾಖಂಡ ಸಿಎಂ ಘೋಷಿಸಿದ್ದರು.

ಹಣಕ್ಕಿಂತ ವೃತ್ತಿಗೆ, ಮಾನವೀಯತೆಗೆ ಆದ್ಯತೆ ಕೊಟ್ಟಿರುವ ವಕೀಲ್ ಹಸನ್, ನಮ್ಮ ತಂಡದಲ್ಲಿ ಯಾರೋ ಒಬ್ಬರಿಂದ ಕಾರ್ಮಿಕರ ರಕ್ಷಣೆ ಆಗಿಲ್ಲ. ಹಿಂದೂ-ಮುಸ್ಲಿಂ ಧರ್ಮಗಳ ಕಾರ್ಮಿಕರು ಜಾತಿ, ಮತ, ಪಂಥವನ್ನು ಬದಿಗಿಟ್ಟು ಕೆಲಸ ಮಾಡಿದ್ದಾರೆ. ನಾವೆಲ್ಲರೂ ದ್ವೇಷದ ವಿಷ ಬಿಟ್ಟು ಸೌಹಾರ್ದತೆಯಿಂದ ಬಾಳೋಣ. ಇದೇ ನನ್ನ ಸಂದೇಶ ಎಂದು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕರಾದ ವಕೀಲ್ ಹಸನ್ ಈ ಹಿಂದೆ ಹೇಳಿದ್ದರು.

ಕೊನೆಯ ಹಂತದ ಸುರಂಗ ಕೊರೆದ ಇಲಿ ಬಿಲ ತಂಡದಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆ ಕೆಲಸ ಮಾಡುವ ವಕೀಲ್ ಹಸನ್ ಅವರ ತಂಡ ಇಲಿ ಬಿಲ ಸುರಂಗ ಕೊರೆಯುವುದರಲ್ಲಿ ಸಾಕಷ್ಟು ಅನುಭವ ಹೊಂದಿದೆ. ಆದರೆ, ಅವರು ಸಿಲ್ಕ್ಯಾರದಷ್ಟು ದೊಡ್ಡ ರಕ್ಷಣಾ ಕಾರ್ಯ ಮಾಡಿಲ್ಲ ಎನ್ನಲಾಗಿದೆ.

ಇಲಿ ಬಿಲ ಗಣಿಗಾರಿಕೆ ಎಂಬುವುದು ಈಶಾನ್ಯ ರಾಜ್ಯವಾದ ಮೇಘಾಲಯದಲ್ಲಿ ಕಲ್ಲಿದ್ದಲಿನ ತೆಳುವಾದ ಪದರಗಳನ್ನು ಹೊರತೆಗೆಯಲು ವ್ಯಾಪಕವಾಗಿ ಬಳಸಲಾಗುತ್ತಿದ್ದ ಅಪಾಯಕಾರಿ ಗಣಿಗಾರಿಕೆ ವಿಧಾನವಾಗಿದೆ. ಕಾರ್ಮಿಕರ ಸಾವು, ಪರಿಸರ ಹಾನಿಯ ಕಾರಣ ನೀಡಿ, ಹಸಿರು ನ್ಯಾಯಾಧೀಕರಣ 2014 ರಲ್ಲಿ ಇದನ್ನು ನಿಷೇಧ ಮಾಡಿದೆ.

ಇದನ್ನೂ ಓದಿ : ಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....