Homeಮುಖಪುಟ41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

41 ಕಾರ್ಮಿಕರ ರಕ್ಷಣೆ: ಸಿಎಂ ಬಹುಮಾನ ಹಣ ತಿರಸ್ಕರಿಸಿದ ರ‍್ಯಾಟ್ ಹೋಲ್ ಮೈನರ್ಸ್‌ ಮುಖ್ಯಸ್ಥ

- Advertisement -
- Advertisement -

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರ ಜೀವಗಳನ್ನು ರಕ್ಷಿಸಿದ ಬಳಿಕ ದೊಡ್ಡ ಮಟ್ಟದಲ್ಲಿ ಸುದ್ದಿಯಲ್ಲಿರುವ ಇಲಿ ಬಿಲ ಗಣಿಗಾರಿಕೆ ತಂಡವು ಮತ್ತೊಂದು ವಿಚಾರಕ್ಕೆ ಗಮನ ಸೆಳೆದಿದೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್ ಅವರು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಿಸಿದ್ದ ಬಹುಮಾನದ ಹಣವನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಕಾರ್ಮಿಕರ ರಕ್ಷಣೆಯಲ್ಲಿ ನಮ್ಮ ತಂಡದ ಎಲ್ಲರ ಒಗ್ಗಟ್ಟಿನ ಶ್ರಮವಿದೆ. ನನ್ನನ್ನು ಒಬ್ಬನನ್ನೇ ಹೀರೋ ಮಾಡುವುದು ಬೇಡ ಎಂದು ಅವರು ಹೇಳಿದ್ದಾರೆ.

ಇಲಿ ಬಿಲ ತಂಡದ ಮುಖ್ಯಸ್ಥ ವಕೀಲ್ ಹಸನ್‌ ಸೇರಿ 12 ಕಾರ್ಮಿಕರಿಗೆ ತಲಾ 50 ಸಾವಿರ ರೂಪಾಯಿ ನಗದು ಬಹುಮಾನವನ್ನು ಉತ್ತರಾಖಂಡ ಸಿಎಂ ಘೋಷಿಸಿದ್ದರು.

ಹಣಕ್ಕಿಂತ ವೃತ್ತಿಗೆ, ಮಾನವೀಯತೆಗೆ ಆದ್ಯತೆ ಕೊಟ್ಟಿರುವ ವಕೀಲ್ ಹಸನ್, ನಮ್ಮ ತಂಡದಲ್ಲಿ ಯಾರೋ ಒಬ್ಬರಿಂದ ಕಾರ್ಮಿಕರ ರಕ್ಷಣೆ ಆಗಿಲ್ಲ. ಹಿಂದೂ-ಮುಸ್ಲಿಂ ಧರ್ಮಗಳ ಕಾರ್ಮಿಕರು ಜಾತಿ, ಮತ, ಪಂಥವನ್ನು ಬದಿಗಿಟ್ಟು ಕೆಲಸ ಮಾಡಿದ್ದಾರೆ. ನಾವೆಲ್ಲರೂ ದ್ವೇಷದ ವಿಷ ಬಿಟ್ಟು ಸೌಹಾರ್ದತೆಯಿಂದ ಬಾಳೋಣ. ಇದೇ ನನ್ನ ಸಂದೇಶ ಎಂದು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ನಮ್ಮ ತಂಡದಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಇಬ್ಬರೂ ಇದ್ದಾರೆ. ಎರಡೂ ಧರ್ಮಗಳ ಜನರು 41 ಜೀವಗಳನ್ನು ಉಳಿಸಲು ಶ್ರಮಿಸಿದ್ದಾರೆ. ಅವರಲ್ಲಿ ಯಾರೂ ಇದನ್ನು ಒಬ್ಬರೇ ಮಾಡಲು ಸಾಧ್ಯವಿಲ್ಲ. ನಾವೆಲ್ಲರೂ ಸಾಮರಸ್ಯದಿಂದ ಬದುಕಬೇಕು. ದ್ವೇಷದ ವಿಷ ಹರಡಬಾರದು. ದೇಶಕ್ಕಾಗಿ ನಮ್ಮ 100 ಶೇಖಡ ಶ್ರಮ ಹಾಕಬೇಕು. ಇದು ನನ್ನ ಸಂದೇಶ, ದಯವಿಟ್ಟು ಇದನ್ನು ಎಲ್ಲರಿಗೂ ತಲುಪಿಸಿ” ಎಂದು ದೆಹಲಿ ಮೂಲದ ರಾಕ್‌ವೆಲ್ ಎಂಟರ್‌ಪ್ರೈಸಸ್ ಮಾಲೀಕರಾದ ವಕೀಲ್ ಹಸನ್ ಈ ಹಿಂದೆ ಹೇಳಿದ್ದರು.

ಕೊನೆಯ ಹಂತದ ಸುರಂಗ ಕೊರೆದ ಇಲಿ ಬಿಲ ತಂಡದಲ್ಲಿ ಹಸನ್, ಮುನ್ನಾ ಖುರೇಷಿ, ನಸೀಮ್ ಮಲಿಕ್, ಮೋನು ಕುಮಾರ್, ಸೌರಭ್, ಜತಿನ್ ಕುಮಾರ್, ಅಂಕುರ್, ನಾಸಿರ್ ಖಾನ್, ದೇವೇಂದ್ರ, ಫಿರೋಜ್ ಖುರೇಷಿ, ರಶೀದ್ ಅನ್ಸಾರಿ ಮತ್ತು ಇರ್ಷಾದ್ ಅನ್ಸಾರಿ ಎಂಬ 20 ರಿಂದ 45 ವರ್ಷ ವಯಸ್ಸಿನವರು ಇದ್ದರು.

ದೆಹಲಿ ಜಲ ಮಂಡಳಿಯಲ್ಲಿ ಪೈಪ್ ಅಳವಡಿಕೆ ಕೆಲಸ ಮಾಡುವ ವಕೀಲ್ ಹಸನ್ ಅವರ ತಂಡ ಇಲಿ ಬಿಲ ಸುರಂಗ ಕೊರೆಯುವುದರಲ್ಲಿ ಸಾಕಷ್ಟು ಅನುಭವ ಹೊಂದಿದೆ. ಆದರೆ, ಅವರು ಸಿಲ್ಕ್ಯಾರದಷ್ಟು ದೊಡ್ಡ ರಕ್ಷಣಾ ಕಾರ್ಯ ಮಾಡಿಲ್ಲ ಎನ್ನಲಾಗಿದೆ.

ಇಲಿ ಬಿಲ ಗಣಿಗಾರಿಕೆ ಎಂಬುವುದು ಈಶಾನ್ಯ ರಾಜ್ಯವಾದ ಮೇಘಾಲಯದಲ್ಲಿ ಕಲ್ಲಿದ್ದಲಿನ ತೆಳುವಾದ ಪದರಗಳನ್ನು ಹೊರತೆಗೆಯಲು ವ್ಯಾಪಕವಾಗಿ ಬಳಸಲಾಗುತ್ತಿದ್ದ ಅಪಾಯಕಾರಿ ಗಣಿಗಾರಿಕೆ ವಿಧಾನವಾಗಿದೆ. ಕಾರ್ಮಿಕರ ಸಾವು, ಪರಿಸರ ಹಾನಿಯ ಕಾರಣ ನೀಡಿ, ಹಸಿರು ನ್ಯಾಯಾಧೀಕರಣ 2014 ರಲ್ಲಿ ಇದನ್ನು ನಿಷೇಧ ಮಾಡಿದೆ.

ಇದನ್ನೂ ಓದಿ : ಜೀವ ರಕ್ಷಣೆಯ ಬಳಿಕ ಅತಂತ್ರ ಸ್ಥಿತಿಯಲ್ಲಿ ಸಿಲ್ಕ್ಯಾರ ಸುರಂಗ ಕಾರ್ಮಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...