Homeಕರ್ನಾಟಕ‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ.

- Advertisement -
- Advertisement -

ನಟ ರಾಕ್ಷಸ ಖ್ಯಾತಿಯ ಧನಂಜಯ ಅವರು ಅಭಿನಯಿಸಿ, ನಿರ್ಮಾಣ ಮಾಡಿರುವ ‘ಹೆಡ್‌ ಬುಷ್‌’ ಸಿನಿಮಾದಲ್ಲಿ ‘ವೀರಗಾಸೆ ಕಲೆಗೆ ಅಪಮಾನ ಎಸಗಲಾಗಿದೆ’ ಎಂದು ಹಿಂದುತ್ವವಾದಿಗಳು ದೂರು ನೀಡಿರುವ ಬೆನ್ನಲ್ಲೇ, ಹಳೆಯ ಸಿನಿಮಾ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗತೊಡಗಿವೆ.

‘ಹೆಡ್‌ ಬುಷ್‌’ನಲ್ಲಿ ವಿವಾದ ಸೃಷ್ಟಿಸಲಾಗಿದೆ ಎನ್ನುವವರು ‌ಈ ದೃಶ್ಯಗಳಿಗೆ ಹಿಂದೇಕೆ ಆಕ್ಷೇಪಗಳನ್ನು ವ್ಯಕ್ತಪಡಿಸಲಿಲ್ಲ. ಇಲ್ಲಿ ಯಾರು ಯಾವ ಸಿನಿಮಾವನ್ನು ಮಾಡಿದ್ದಾರೆ, ಸಿನಿಮಾ ಮಾಡಿದವರ ಸಾಮಾಜಿಕ ಹಿನ್ನೆಲೆ ಏನು ಮುಖ್ಯವಾಗುತ್ತಿದೆ ಎಂಬ ಟೀಕೆಗಳನ್ನು ಸಿನಿಮಾ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.

‘ನಟ ಉಪೇಂದ್ರ ಅವರ ಸಿನಿಮಾಗಳಲ್ಲಿ ಹಿಂದೂ ದೇವರುಗಳಿಗೆ ಅವಹೇಳನ ಮಾಡಲಾಗಿದೆ’ ಎಂಬ ಚರ್ಚೆಯ ಜೊತೆಗೆ ಹಲವು ಸಿನಿಮಾಗಳ ದೃಶ್ಯಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ. ಡಾಲಿ ಧನಂಜಯ ಅವರು ಇತ್ತೀಚೆಗೆ ನೀಡಿದ್ದ ‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ. ಆ ಮೂಲಕ ಡಾಲಿ ಧನಂಜಯ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ.

“ಮೊದಲು ಮಾನವನಾಗು” ಎಂದು ಡಾಲಿ ಧನಂಜಯ ಅವರು ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರಿಗೆ ಬುದ್ಧಿ ಹೇಳಿದ್ದರಿಂದ ಒಂದು ವರ್ಗದ ಜನರು ಧನಂಜಯ ವಿರುದ್ಧ ಹಗೆ ಸಾಧಿಸುತ್ತಿದ್ದಾರೆಂಬ ಪೋಸ್ಟ್‌ಗಳು ಹರಿದಾಡಿವೆ. ಅದರ ಜೊತೆಗೆ ಹಳೆಯ ಸಿನಿಮಾ  ದೃಶ್ಯಗಳು ಗಮನ ಸೆಳೆಯುತ್ತಿವೆ.

“ಉಪೇಂದ್ರ ‘ಗಣೇಶ’ನಿಗೆ ಗನ್‌ ಹಿಡಿದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಡೈರೆಕ್ಟರ್‌ ಗುರುಪ್ರಸಾದ್‌ ಮಠದೊಳಗೇ ಕಾವಿಧಾರಿಗಳು ಎಣ್ಣೆ ಹೊಡಿತಾರೆ ಅಂದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಧನಂಜಯ್‌ ಅವರಿಂದ ಅಪಚಾರಿ ಆಗ್ಬಿಟ್ಟಿದೆ ನೋಡಿ” ಎಂಬ ಪೋಸ್ಟರ್‌ ವೈರಲ್ ಆಗುತ್ತಿದೆ.

“ಇದು ಹಿಂದು ಧರ್ಮಕ್ಕೆ ಮಾಡಿದ ಅವಮಾನ ಅಲ್ವಾ?” ಎಂಬ ಮತ್ತೊಂದು ದೃಶ್ಯವನ್ನು ಉಪೇಂದ್ರ ಅವರ ಸಿನಿಮಾದಿಂದ ಆಯ್ದು ಹಂಚಿಕೊಳ್ಳಲಾಗುತ್ತಿದೆ.

ತುಳಸಿಕೃಷ್ಣ ಎಂಬವರು ಹಲವು ಸಿನಿಮಾ ದೃಶ್ಯಗಳನ್ನು ಪಟ್ಟಿ ಮಾಡಿದ್ದಾರೆ.

ಬೇಡರ ಕಣ್ಣಪ್ಪ: ಅಣ್ಣಾವ್ರು ಬೇಡರ ಕಣ್ಣಪ್ಪ ಪಾತ್ರಧಾರಿಯಾಗಿ ಶಿವಲಿಂಗದ ಮೇಲೆ ಕಾಲಿಡ್ತಾರೆ.
ಉಪೇಂದ್ರ: ಉಪೇಂದ್ರರವರು ಪುರೋಹಿತರಿಗೆ ಎಣ್ಣೆ ಕುಡಿಸಿ, ಗಣೇಶನನ್ನು ನೀರಿಗೆ ಎಸೀತಾರೆ.
A: ಉಪೇಂದ್ರ, I am God, God is great ಅಂತ ತಮ್ಮನ್ನು ತಾವೇ ದೇವರು ಅಂತಾರೆ.
ಅಪ್ಪಾಜಿ: ವೀರಗಾಸೆ ವೇಷಧಾರಿಯಾಗಿ ವಿಲನ್‌ಗಳು ಗೋವಿಂದ, ಗೋವಿಂದ ಅಂತ ಕ್ಯಾಪ್ಟನ್‌ರನ್ನು ಸಾಯಿಸುತ್ತಾರೆ.
ಉಳಿದವರು ಕಂಡಂತೆ: ಹುಲಿ ವೇಷಧಾರಿಯನ್ನು ರಕ್ಷಿತ್ ಶೆಟ್ಟಿ ಹೊಡೆಯುತ್ತಾರೆ.
ಗರುಡ ಗಮನ ವೃಷಭ ವಾಹನ: ಮಾದೇವನ ಹಾಡು ಬರುವಾಗ ರಾಜ್.ಬಿ.ಶೆಟ್ಟಿ ಕೊಲೆ ಮಾಡಿ ಕುಣಿಯುತ್ತಾರೆ.
ಕಾಂತಾರ: ವಿಲನ್ ದೈವದ ಕುತ್ತಿಗೆ ಹಿಸುಕಿ ಮೇಲಕ್ಕೆ ಎತ್ತುತ್ತಾನೆ.
ಜನುಮದ ಜೋಡಿ: ಓ ಊರ ದ್ಯಾವ್ರೆ ಹಾಡು.. ದೇವರಿಗೆ, ನೀ ಎಕ್ಕುಟ್ಟೋಗ, ನಿನ್ ಮನೆ ಕಾಯ್ವೋಗ, ನಿನ್ ತಲೆ ಹೊಡೆಯ, ಹಾಳಾದೋನೆ, ನೀನ್ ನೆಗುದ್ ಬೀಳ, ನಿಂಗ್ ಉಳ ಬೀಳ.

“ಇಂತಹ ಸಾವಿರ ಉದಾಹರಣೆಗಳು ಸಿಗುತ್ತವೆ. ನೀವು ಯಾವುದೇ ಚಿತ್ರ ಹೆಸರಿಸಿ, ಅದರಲ್ಲಿ ತಪ್ಪು ಹುಡುಕಬಹುದು. ಇವೆಲ್ಲವನ್ನು ಆ ಸಂದರ್ಭಕ್ಕೆ ಆ ಪಾತ್ರದ ರಿಯಾಕ್ಷನ್ ಅಂತ ಒಪ್ಪಿಕೊಂಡಿದ್ದೇವೆ. ಈಗ ಡಾಲಿ ವೀರಗಾಸೆ ವೇಷದಲ್ಲಿರುವ ವಿಲನ್‌ಗಳನ್ನು ಹೊಡೆದರೆ, ವೀರಗಾಸೆಗೆ ಅಪಮಾನ ಮಾಡುತ್ತಿರುವವರನ್ನು ಹೊಡೆದಂತೆ ಎಂದುಕೊಳ್ಳಬಹುದಲ್ಲವೆ. ಇಲ್ಲ, ಇಲ್ಲಿ ವಿರೋಧಿಸುತ್ತಿರುವವರಿಗೆ ವೀರಗಾಸೆ ಮುಖ್ಯವಲ್ಲ, ಅದರ ಮೇಲೆ ಪ್ರೀತಿಯು ಇಲ್ಲ, ಡಾಲಿ ಮೇಲಿನ ದ್ವೇಷ ಅಷ್ಟೆ” ಎಂದು ತುಳಸಿ ಕೃಷ್ಣ ತಿಳಿಸಿದ್ದಾರೆ.

May be an image of 3 people and text that says "'ಕಠಾರಿವೀರ ಸುರಸುಂದರಾಂಗಿ' ಸಿನಿಮಾದಲ್ಲಿ ಉಪೇಂದ್ರ ಹಿಂದೂ ದೇವರ ಪಾತ್ರಧಾರಿಗಳನ್ನು ಬೂಟುಕಾಲಲ್ಲಿ ಒದ್ದು ಫೈಟ್ ಮಾಡುವಾಗ.. ಈ ಧರ್ಮರಕ್ಷಕ ಪಡೆಗಳ ವೀರಾಧಿವೀರರು ಯಾವ ಇಲಿ ಬಿಲದೊಳಗೆ ಬೆಚ್ಚಗೆ ಮಲಗಿದ್ರು? 'ಬಡವರಮನೆ ಯಿಂದ ಬಂದ ಡಾಲಿ ಧನಂಜಯ್ ಮೇಲೆ ನಿಮ್ಮ ಪ್ರತಾಪ ತೋರಿಸ್ತ ಇದೀರ? ಯಾಕೆ ಬಡವರ ಮನೆ ಮಕ್ಳು HERO ಆಗ್ಬಾರ್ದ?"‘ಕಠಾರಿವೀರ ಸುರಸುಂದರಾಂಗ’ ಸಿನಿಮಾದ ಸಿನಿಮಾ ದೃಶ್ಯದ ಕುರಿತು ಚರ್ಚೆಯಾಗುತ್ತಿದೆ. ಉಪೇಂದ್ರ ಅವರು ಹಿಂದೂ ದೇವರುಗಳಿಗೆ ಬೂಟು ಕಾಲಲ್ಲಿ ಒದ್ದು ಫೈಟ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

May be an image of 6 people, people standing, fire and text that says 'ಶೂದ್ರರ ಹುಲಿವೇಷಧಾರಿಗೆ ಹೊಡೆದಾಗ ಧರ್ಮಕ್ಕೆ ಅಪಚಾರವಾಗಲಿಲ್ಲ!! ದಲಿತರ ಗುಳಿಗದೈವಕ್ಕೆ ಧಣಿಯ ಗುಲಾಮರು ಹೊಡೆದಾಗ ಧರ್ಮಕ್ಕೆ ಅಪಮಾನವಾಗಲಿಲ್ಲ. ವೀರಗಾಸೆ ವೇಷ ಧರಿಸಿ ಜಯರಾಜ್ ಕೊಲ್ಲಲು ಬಂದ ಖಳರಿಗೆ ನಾಯಕ ಹೊಡೆದಾಗ ಧರ್ಮಕ್ಕೆ ಅಪಮಾನವಾಗಿದೆ ನೋಡಿ. ಬಡವರ ಮಕ್ಕಳನ್ನ ಬೆಳೆಯೋಕೆಲ್ಲಿ ಬಿಡ್ತೀರ?'May be an image of 2 people and text that says 'ವಿಕ್ರಾಂತ್ ರೋಣ ಸಿನಿಮದಲ್ಲಿ ಕೋಲ ದೈವ ಪಾತ್ರಗಳಿಗೆ ನಾಮರ್ದ'ರು ಅಂದು, ನಾಯಕ ಬಡಿದು ಕೊಲ್ಲುತ್ತಾನೆ.. ಧರ್ಮರಕ್ಷಕ ಪುಡುಂಗಿಗಳು ಆವತ್ತು ಎಲ್ಲಿ ದನ ಮೇಯ್ಸೋಕೆ ಹೋಗಿದ್ರು? 'ಡಾಲಿ' ಬಡವರ ಮನೆಯಿಂದ ಬಂದ ಹುಡುಗ.. ಅದೇ ಉರಿ ನಿಮಗೆ.'‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ಹುಲಿ ವೇಷಧಾರಿ’ಗೆ ಹೊಡೆಯುವ ದೃಶ್ಯವನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

ಹೋರಾಟಗಾರ್ತಿ ನಜ್ಮಾ ಅವರು ಬರೆದಿರುವ ಟಿಪ್ಪಣಿಯನ್ನು ಅನೇಕರು ಶೇರ್‌ ಮಾಡಿದ್ದಾರೆ.

“ನಾನು ಹುಟ್ಟಿರದೆ ಆರಾಮಾಗಿರಕ್ಕೆ ಅನ್ಲಿಲ್ಲ ನಮ್ ಧನಂಜಯ,
ರಿಸ್ಕ್ ಎಷ್ಟಾದ್ರೂ ತಗೊಂಡು ಮುಂದುಕ್ ಹೋಗ್ಬೇಕು ಅಂದ;
ಕಾಸಿರೋರೆ ಜಗತ್ ಆಳ್ಬೇಕು ಅನ್ಲಿಲ್ಲ ನಮ್ ಧನಂಜಯ,
ಬಡವರ್ ಮನೆ ಮಕ್ಳು ಬೆಳೇಬೇಕು ಅಂದ,
ಜಾತಿ ಧರ್ಮ ಅಂತ ಕಿತ್ತಾಡಿ ಸಾಯ್ರಿ ಅನ್ಲಿಲ್ಲ ನಮ್ ಧನಂಜಯ,
ಏನಾದರೂ ಆಗು ಮೊದಲು ಮಾನವನಾಗು ಅಂದ,
ಕಂಡೋರ್ ಹೊಟ್ಟೆ ಮ್ಯಾಲೆ ಹೊಡೆದು ಸಂಪಾದ್ನೇ ಮಾಡು ಅನ್ಲಿಲ್ಲ ನಮ್ ಧನಂಜಯ,
ಕಷ್ಟ ಪಟ್ಟು ದುಡ್ಡು ಮುಂದೆ ಬನ್ನಿ ಅಂದ,
ಮೇಲು-ಕೀಳು, ದೊಡ್ಡೋರು-ಚಿಕ್ಕೋರು ಅನ್ಲಿಲ್ಲ ನಮ್ ಧನಂಜಯ,
ಎಲ್ರು ನಮ್ಮವ್ರು ಕಂತೆ ಒಟ್ಟಿಗೆ ನಡೀರ್ಲಾ ಅಂದ,
ಸಿನೆಮಾ ಅಂದ್ರೆ ಬರಿ ಬಣ್ಣ ಹಚ್ಚೋದಲ್ಲ ಅಂದ ನಮ್ಮ ಧನಂಜಯ,
ಸಿನ್ಮಾ ಅಂದ್ರೆ ಬದ್ಕು-ಬವಣೆ ಕನ್ರಲಾ ಅಂದ” ಎಂಬ ಸಾಲುಗಳನ್ನು ನಜ್ಮಾ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...