Homeಕರ್ನಾಟಕ‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ.

- Advertisement -
- Advertisement -

ನಟ ರಾಕ್ಷಸ ಖ್ಯಾತಿಯ ಧನಂಜಯ ಅವರು ಅಭಿನಯಿಸಿ, ನಿರ್ಮಾಣ ಮಾಡಿರುವ ‘ಹೆಡ್‌ ಬುಷ್‌’ ಸಿನಿಮಾದಲ್ಲಿ ‘ವೀರಗಾಸೆ ಕಲೆಗೆ ಅಪಮಾನ ಎಸಗಲಾಗಿದೆ’ ಎಂದು ಹಿಂದುತ್ವವಾದಿಗಳು ದೂರು ನೀಡಿರುವ ಬೆನ್ನಲ್ಲೇ, ಹಳೆಯ ಸಿನಿಮಾ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗತೊಡಗಿವೆ.

‘ಹೆಡ್‌ ಬುಷ್‌’ನಲ್ಲಿ ವಿವಾದ ಸೃಷ್ಟಿಸಲಾಗಿದೆ ಎನ್ನುವವರು ‌ಈ ದೃಶ್ಯಗಳಿಗೆ ಹಿಂದೇಕೆ ಆಕ್ಷೇಪಗಳನ್ನು ವ್ಯಕ್ತಪಡಿಸಲಿಲ್ಲ. ಇಲ್ಲಿ ಯಾರು ಯಾವ ಸಿನಿಮಾವನ್ನು ಮಾಡಿದ್ದಾರೆ, ಸಿನಿಮಾ ಮಾಡಿದವರ ಸಾಮಾಜಿಕ ಹಿನ್ನೆಲೆ ಏನು ಮುಖ್ಯವಾಗುತ್ತಿದೆ ಎಂಬ ಟೀಕೆಗಳನ್ನು ಸಿನಿಮಾ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.

‘ನಟ ಉಪೇಂದ್ರ ಅವರ ಸಿನಿಮಾಗಳಲ್ಲಿ ಹಿಂದೂ ದೇವರುಗಳಿಗೆ ಅವಹೇಳನ ಮಾಡಲಾಗಿದೆ’ ಎಂಬ ಚರ್ಚೆಯ ಜೊತೆಗೆ ಹಲವು ಸಿನಿಮಾಗಳ ದೃಶ್ಯಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ. ಡಾಲಿ ಧನಂಜಯ ಅವರು ಇತ್ತೀಚೆಗೆ ನೀಡಿದ್ದ ‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ. ಆ ಮೂಲಕ ಡಾಲಿ ಧನಂಜಯ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ.

“ಮೊದಲು ಮಾನವನಾಗು” ಎಂದು ಡಾಲಿ ಧನಂಜಯ ಅವರು ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರಿಗೆ ಬುದ್ಧಿ ಹೇಳಿದ್ದರಿಂದ ಒಂದು ವರ್ಗದ ಜನರು ಧನಂಜಯ ವಿರುದ್ಧ ಹಗೆ ಸಾಧಿಸುತ್ತಿದ್ದಾರೆಂಬ ಪೋಸ್ಟ್‌ಗಳು ಹರಿದಾಡಿವೆ. ಅದರ ಜೊತೆಗೆ ಹಳೆಯ ಸಿನಿಮಾ  ದೃಶ್ಯಗಳು ಗಮನ ಸೆಳೆಯುತ್ತಿವೆ.

“ಉಪೇಂದ್ರ ‘ಗಣೇಶ’ನಿಗೆ ಗನ್‌ ಹಿಡಿದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಡೈರೆಕ್ಟರ್‌ ಗುರುಪ್ರಸಾದ್‌ ಮಠದೊಳಗೇ ಕಾವಿಧಾರಿಗಳು ಎಣ್ಣೆ ಹೊಡಿತಾರೆ ಅಂದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಧನಂಜಯ್‌ ಅವರಿಂದ ಅಪಚಾರಿ ಆಗ್ಬಿಟ್ಟಿದೆ ನೋಡಿ” ಎಂಬ ಪೋಸ್ಟರ್‌ ವೈರಲ್ ಆಗುತ್ತಿದೆ.

“ಇದು ಹಿಂದು ಧರ್ಮಕ್ಕೆ ಮಾಡಿದ ಅವಮಾನ ಅಲ್ವಾ?” ಎಂಬ ಮತ್ತೊಂದು ದೃಶ್ಯವನ್ನು ಉಪೇಂದ್ರ ಅವರ ಸಿನಿಮಾದಿಂದ ಆಯ್ದು ಹಂಚಿಕೊಳ್ಳಲಾಗುತ್ತಿದೆ.

ತುಳಸಿಕೃಷ್ಣ ಎಂಬವರು ಹಲವು ಸಿನಿಮಾ ದೃಶ್ಯಗಳನ್ನು ಪಟ್ಟಿ ಮಾಡಿದ್ದಾರೆ.

ಬೇಡರ ಕಣ್ಣಪ್ಪ: ಅಣ್ಣಾವ್ರು ಬೇಡರ ಕಣ್ಣಪ್ಪ ಪಾತ್ರಧಾರಿಯಾಗಿ ಶಿವಲಿಂಗದ ಮೇಲೆ ಕಾಲಿಡ್ತಾರೆ.
ಉಪೇಂದ್ರ: ಉಪೇಂದ್ರರವರು ಪುರೋಹಿತರಿಗೆ ಎಣ್ಣೆ ಕುಡಿಸಿ, ಗಣೇಶನನ್ನು ನೀರಿಗೆ ಎಸೀತಾರೆ.
A: ಉಪೇಂದ್ರ, I am God, God is great ಅಂತ ತಮ್ಮನ್ನು ತಾವೇ ದೇವರು ಅಂತಾರೆ.
ಅಪ್ಪಾಜಿ: ವೀರಗಾಸೆ ವೇಷಧಾರಿಯಾಗಿ ವಿಲನ್‌ಗಳು ಗೋವಿಂದ, ಗೋವಿಂದ ಅಂತ ಕ್ಯಾಪ್ಟನ್‌ರನ್ನು ಸಾಯಿಸುತ್ತಾರೆ.
ಉಳಿದವರು ಕಂಡಂತೆ: ಹುಲಿ ವೇಷಧಾರಿಯನ್ನು ರಕ್ಷಿತ್ ಶೆಟ್ಟಿ ಹೊಡೆಯುತ್ತಾರೆ.
ಗರುಡ ಗಮನ ವೃಷಭ ವಾಹನ: ಮಾದೇವನ ಹಾಡು ಬರುವಾಗ ರಾಜ್.ಬಿ.ಶೆಟ್ಟಿ ಕೊಲೆ ಮಾಡಿ ಕುಣಿಯುತ್ತಾರೆ.
ಕಾಂತಾರ: ವಿಲನ್ ದೈವದ ಕುತ್ತಿಗೆ ಹಿಸುಕಿ ಮೇಲಕ್ಕೆ ಎತ್ತುತ್ತಾನೆ.
ಜನುಮದ ಜೋಡಿ: ಓ ಊರ ದ್ಯಾವ್ರೆ ಹಾಡು.. ದೇವರಿಗೆ, ನೀ ಎಕ್ಕುಟ್ಟೋಗ, ನಿನ್ ಮನೆ ಕಾಯ್ವೋಗ, ನಿನ್ ತಲೆ ಹೊಡೆಯ, ಹಾಳಾದೋನೆ, ನೀನ್ ನೆಗುದ್ ಬೀಳ, ನಿಂಗ್ ಉಳ ಬೀಳ.

“ಇಂತಹ ಸಾವಿರ ಉದಾಹರಣೆಗಳು ಸಿಗುತ್ತವೆ. ನೀವು ಯಾವುದೇ ಚಿತ್ರ ಹೆಸರಿಸಿ, ಅದರಲ್ಲಿ ತಪ್ಪು ಹುಡುಕಬಹುದು. ಇವೆಲ್ಲವನ್ನು ಆ ಸಂದರ್ಭಕ್ಕೆ ಆ ಪಾತ್ರದ ರಿಯಾಕ್ಷನ್ ಅಂತ ಒಪ್ಪಿಕೊಂಡಿದ್ದೇವೆ. ಈಗ ಡಾಲಿ ವೀರಗಾಸೆ ವೇಷದಲ್ಲಿರುವ ವಿಲನ್‌ಗಳನ್ನು ಹೊಡೆದರೆ, ವೀರಗಾಸೆಗೆ ಅಪಮಾನ ಮಾಡುತ್ತಿರುವವರನ್ನು ಹೊಡೆದಂತೆ ಎಂದುಕೊಳ್ಳಬಹುದಲ್ಲವೆ. ಇಲ್ಲ, ಇಲ್ಲಿ ವಿರೋಧಿಸುತ್ತಿರುವವರಿಗೆ ವೀರಗಾಸೆ ಮುಖ್ಯವಲ್ಲ, ಅದರ ಮೇಲೆ ಪ್ರೀತಿಯು ಇಲ್ಲ, ಡಾಲಿ ಮೇಲಿನ ದ್ವೇಷ ಅಷ್ಟೆ” ಎಂದು ತುಳಸಿ ಕೃಷ್ಣ ತಿಳಿಸಿದ್ದಾರೆ.

May be an image of 3 people and text that says "'ಕಠಾರಿವೀರ ಸುರಸುಂದರಾಂಗಿ' ಸಿನಿಮಾದಲ್ಲಿ ಉಪೇಂದ್ರ ಹಿಂದೂ ದೇವರ ಪಾತ್ರಧಾರಿಗಳನ್ನು ಬೂಟುಕಾಲಲ್ಲಿ ಒದ್ದು ಫೈಟ್ ಮಾಡುವಾಗ.. ಈ ಧರ್ಮರಕ್ಷಕ ಪಡೆಗಳ ವೀರಾಧಿವೀರರು ಯಾವ ಇಲಿ ಬಿಲದೊಳಗೆ ಬೆಚ್ಚಗೆ ಮಲಗಿದ್ರು? 'ಬಡವರಮನೆ ಯಿಂದ ಬಂದ ಡಾಲಿ ಧನಂಜಯ್ ಮೇಲೆ ನಿಮ್ಮ ಪ್ರತಾಪ ತೋರಿಸ್ತ ಇದೀರ? ಯಾಕೆ ಬಡವರ ಮನೆ ಮಕ್ಳು HERO ಆಗ್ಬಾರ್ದ?"‘ಕಠಾರಿವೀರ ಸುರಸುಂದರಾಂಗ’ ಸಿನಿಮಾದ ಸಿನಿಮಾ ದೃಶ್ಯದ ಕುರಿತು ಚರ್ಚೆಯಾಗುತ್ತಿದೆ. ಉಪೇಂದ್ರ ಅವರು ಹಿಂದೂ ದೇವರುಗಳಿಗೆ ಬೂಟು ಕಾಲಲ್ಲಿ ಒದ್ದು ಫೈಟ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

May be an image of 6 people, people standing, fire and text that says 'ಶೂದ್ರರ ಹುಲಿವೇಷಧಾರಿಗೆ ಹೊಡೆದಾಗ ಧರ್ಮಕ್ಕೆ ಅಪಚಾರವಾಗಲಿಲ್ಲ!! ದಲಿತರ ಗುಳಿಗದೈವಕ್ಕೆ ಧಣಿಯ ಗುಲಾಮರು ಹೊಡೆದಾಗ ಧರ್ಮಕ್ಕೆ ಅಪಮಾನವಾಗಲಿಲ್ಲ. ವೀರಗಾಸೆ ವೇಷ ಧರಿಸಿ ಜಯರಾಜ್ ಕೊಲ್ಲಲು ಬಂದ ಖಳರಿಗೆ ನಾಯಕ ಹೊಡೆದಾಗ ಧರ್ಮಕ್ಕೆ ಅಪಮಾನವಾಗಿದೆ ನೋಡಿ. ಬಡವರ ಮಕ್ಕಳನ್ನ ಬೆಳೆಯೋಕೆಲ್ಲಿ ಬಿಡ್ತೀರ?'May be an image of 2 people and text that says 'ವಿಕ್ರಾಂತ್ ರೋಣ ಸಿನಿಮದಲ್ಲಿ ಕೋಲ ದೈವ ಪಾತ್ರಗಳಿಗೆ ನಾಮರ್ದ'ರು ಅಂದು, ನಾಯಕ ಬಡಿದು ಕೊಲ್ಲುತ್ತಾನೆ.. ಧರ್ಮರಕ್ಷಕ ಪುಡುಂಗಿಗಳು ಆವತ್ತು ಎಲ್ಲಿ ದನ ಮೇಯ್ಸೋಕೆ ಹೋಗಿದ್ರು? 'ಡಾಲಿ' ಬಡವರ ಮನೆಯಿಂದ ಬಂದ ಹುಡುಗ.. ಅದೇ ಉರಿ ನಿಮಗೆ.'‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ಹುಲಿ ವೇಷಧಾರಿ’ಗೆ ಹೊಡೆಯುವ ದೃಶ್ಯವನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

ಹೋರಾಟಗಾರ್ತಿ ನಜ್ಮಾ ಅವರು ಬರೆದಿರುವ ಟಿಪ್ಪಣಿಯನ್ನು ಅನೇಕರು ಶೇರ್‌ ಮಾಡಿದ್ದಾರೆ.

“ನಾನು ಹುಟ್ಟಿರದೆ ಆರಾಮಾಗಿರಕ್ಕೆ ಅನ್ಲಿಲ್ಲ ನಮ್ ಧನಂಜಯ,
ರಿಸ್ಕ್ ಎಷ್ಟಾದ್ರೂ ತಗೊಂಡು ಮುಂದುಕ್ ಹೋಗ್ಬೇಕು ಅಂದ;
ಕಾಸಿರೋರೆ ಜಗತ್ ಆಳ್ಬೇಕು ಅನ್ಲಿಲ್ಲ ನಮ್ ಧನಂಜಯ,
ಬಡವರ್ ಮನೆ ಮಕ್ಳು ಬೆಳೇಬೇಕು ಅಂದ,
ಜಾತಿ ಧರ್ಮ ಅಂತ ಕಿತ್ತಾಡಿ ಸಾಯ್ರಿ ಅನ್ಲಿಲ್ಲ ನಮ್ ಧನಂಜಯ,
ಏನಾದರೂ ಆಗು ಮೊದಲು ಮಾನವನಾಗು ಅಂದ,
ಕಂಡೋರ್ ಹೊಟ್ಟೆ ಮ್ಯಾಲೆ ಹೊಡೆದು ಸಂಪಾದ್ನೇ ಮಾಡು ಅನ್ಲಿಲ್ಲ ನಮ್ ಧನಂಜಯ,
ಕಷ್ಟ ಪಟ್ಟು ದುಡ್ಡು ಮುಂದೆ ಬನ್ನಿ ಅಂದ,
ಮೇಲು-ಕೀಳು, ದೊಡ್ಡೋರು-ಚಿಕ್ಕೋರು ಅನ್ಲಿಲ್ಲ ನಮ್ ಧನಂಜಯ,
ಎಲ್ರು ನಮ್ಮವ್ರು ಕಂತೆ ಒಟ್ಟಿಗೆ ನಡೀರ್ಲಾ ಅಂದ,
ಸಿನೆಮಾ ಅಂದ್ರೆ ಬರಿ ಬಣ್ಣ ಹಚ್ಚೋದಲ್ಲ ಅಂದ ನಮ್ಮ ಧನಂಜಯ,
ಸಿನ್ಮಾ ಅಂದ್ರೆ ಬದ್ಕು-ಬವಣೆ ಕನ್ರಲಾ ಅಂದ” ಎಂಬ ಸಾಲುಗಳನ್ನು ನಜ್ಮಾ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....