Homeಕರ್ನಾಟಕ‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಹೆಡ್‌ಬುಷ್‌‌’ ವೀರಗಾಸೆ ವಿವಾದ: ವೈರಲ್ ಆಗುತ್ತಿವೆ ಹಳೆಯ ಸಿನಿಮಾ ದೃಶ್ಯಗಳು

‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ.

- Advertisement -
- Advertisement -

ನಟ ರಾಕ್ಷಸ ಖ್ಯಾತಿಯ ಧನಂಜಯ ಅವರು ಅಭಿನಯಿಸಿ, ನಿರ್ಮಾಣ ಮಾಡಿರುವ ‘ಹೆಡ್‌ ಬುಷ್‌’ ಸಿನಿಮಾದಲ್ಲಿ ‘ವೀರಗಾಸೆ ಕಲೆಗೆ ಅಪಮಾನ ಎಸಗಲಾಗಿದೆ’ ಎಂದು ಹಿಂದುತ್ವವಾದಿಗಳು ದೂರು ನೀಡಿರುವ ಬೆನ್ನಲ್ಲೇ, ಹಳೆಯ ಸಿನಿಮಾ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗತೊಡಗಿವೆ.

‘ಹೆಡ್‌ ಬುಷ್‌’ನಲ್ಲಿ ವಿವಾದ ಸೃಷ್ಟಿಸಲಾಗಿದೆ ಎನ್ನುವವರು ‌ಈ ದೃಶ್ಯಗಳಿಗೆ ಹಿಂದೇಕೆ ಆಕ್ಷೇಪಗಳನ್ನು ವ್ಯಕ್ತಪಡಿಸಲಿಲ್ಲ. ಇಲ್ಲಿ ಯಾರು ಯಾವ ಸಿನಿಮಾವನ್ನು ಮಾಡಿದ್ದಾರೆ, ಸಿನಿಮಾ ಮಾಡಿದವರ ಸಾಮಾಜಿಕ ಹಿನ್ನೆಲೆ ಏನು ಮುಖ್ಯವಾಗುತ್ತಿದೆ ಎಂಬ ಟೀಕೆಗಳನ್ನು ಸಿನಿಮಾ ಪ್ರೇಕ್ಷಕರು ವ್ಯಕ್ತಪಡಿಸಿದ್ದಾರೆ.

‘ನಟ ಉಪೇಂದ್ರ ಅವರ ಸಿನಿಮಾಗಳಲ್ಲಿ ಹಿಂದೂ ದೇವರುಗಳಿಗೆ ಅವಹೇಳನ ಮಾಡಲಾಗಿದೆ’ ಎಂಬ ಚರ್ಚೆಯ ಜೊತೆಗೆ ಹಲವು ಸಿನಿಮಾಗಳ ದೃಶ್ಯಗಳನ್ನು ಜನರು ಹಂಚಿಕೊಳ್ಳುತ್ತಿದ್ದಾರೆ. ಡಾಲಿ ಧನಂಜಯ ಅವರು ಇತ್ತೀಚೆಗೆ ನೀಡಿದ್ದ ‘ಬಡವರ ಮಕ್ಳು ಬೆಳೀಬೇಕ್‌ ಕಣ್ರಯ್ಯ’ ಹೇಳಿಕೆ ವೈರಲ್‌ ಆಗುತ್ತಿತ್ತು, ಇದೇ ಹೇಳಿಕೆಯ ಪ್ರೊಫೈಲ್‌ ಫೋಟೋ ಈಗ ಟ್ರೆಂಡ್ ಆಗಿದೆ. ಆ ಮೂಲಕ ಡಾಲಿ ಧನಂಜಯ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ.

“ಮೊದಲು ಮಾನವನಾಗು” ಎಂದು ಡಾಲಿ ಧನಂಜಯ ಅವರು ಬಿಜೆಪಿ ಬೆಂಬಲಿಗ ಚಕ್ರವರ್ತಿ ಸೂಲಿಬೆಲೆಯವರಿಗೆ ಬುದ್ಧಿ ಹೇಳಿದ್ದರಿಂದ ಒಂದು ವರ್ಗದ ಜನರು ಧನಂಜಯ ವಿರುದ್ಧ ಹಗೆ ಸಾಧಿಸುತ್ತಿದ್ದಾರೆಂಬ ಪೋಸ್ಟ್‌ಗಳು ಹರಿದಾಡಿವೆ. ಅದರ ಜೊತೆಗೆ ಹಳೆಯ ಸಿನಿಮಾ  ದೃಶ್ಯಗಳು ಗಮನ ಸೆಳೆಯುತ್ತಿವೆ.

“ಉಪೇಂದ್ರ ‘ಗಣೇಶ’ನಿಗೆ ಗನ್‌ ಹಿಡಿದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಡೈರೆಕ್ಟರ್‌ ಗುರುಪ್ರಸಾದ್‌ ಮಠದೊಳಗೇ ಕಾವಿಧಾರಿಗಳು ಎಣ್ಣೆ ಹೊಡಿತಾರೆ ಅಂದಾಗ ಧರ್ಮಕ್ಕೆ ಅಪಚಾರ ಆಗಲಿಲ್ಲ. ಧನಂಜಯ್‌ ಅವರಿಂದ ಅಪಚಾರಿ ಆಗ್ಬಿಟ್ಟಿದೆ ನೋಡಿ” ಎಂಬ ಪೋಸ್ಟರ್‌ ವೈರಲ್ ಆಗುತ್ತಿದೆ.

“ಇದು ಹಿಂದು ಧರ್ಮಕ್ಕೆ ಮಾಡಿದ ಅವಮಾನ ಅಲ್ವಾ?” ಎಂಬ ಮತ್ತೊಂದು ದೃಶ್ಯವನ್ನು ಉಪೇಂದ್ರ ಅವರ ಸಿನಿಮಾದಿಂದ ಆಯ್ದು ಹಂಚಿಕೊಳ್ಳಲಾಗುತ್ತಿದೆ.

ತುಳಸಿಕೃಷ್ಣ ಎಂಬವರು ಹಲವು ಸಿನಿಮಾ ದೃಶ್ಯಗಳನ್ನು ಪಟ್ಟಿ ಮಾಡಿದ್ದಾರೆ.

ಬೇಡರ ಕಣ್ಣಪ್ಪ: ಅಣ್ಣಾವ್ರು ಬೇಡರ ಕಣ್ಣಪ್ಪ ಪಾತ್ರಧಾರಿಯಾಗಿ ಶಿವಲಿಂಗದ ಮೇಲೆ ಕಾಲಿಡ್ತಾರೆ.
ಉಪೇಂದ್ರ: ಉಪೇಂದ್ರರವರು ಪುರೋಹಿತರಿಗೆ ಎಣ್ಣೆ ಕುಡಿಸಿ, ಗಣೇಶನನ್ನು ನೀರಿಗೆ ಎಸೀತಾರೆ.
A: ಉಪೇಂದ್ರ, I am God, God is great ಅಂತ ತಮ್ಮನ್ನು ತಾವೇ ದೇವರು ಅಂತಾರೆ.
ಅಪ್ಪಾಜಿ: ವೀರಗಾಸೆ ವೇಷಧಾರಿಯಾಗಿ ವಿಲನ್‌ಗಳು ಗೋವಿಂದ, ಗೋವಿಂದ ಅಂತ ಕ್ಯಾಪ್ಟನ್‌ರನ್ನು ಸಾಯಿಸುತ್ತಾರೆ.
ಉಳಿದವರು ಕಂಡಂತೆ: ಹುಲಿ ವೇಷಧಾರಿಯನ್ನು ರಕ್ಷಿತ್ ಶೆಟ್ಟಿ ಹೊಡೆಯುತ್ತಾರೆ.
ಗರುಡ ಗಮನ ವೃಷಭ ವಾಹನ: ಮಾದೇವನ ಹಾಡು ಬರುವಾಗ ರಾಜ್.ಬಿ.ಶೆಟ್ಟಿ ಕೊಲೆ ಮಾಡಿ ಕುಣಿಯುತ್ತಾರೆ.
ಕಾಂತಾರ: ವಿಲನ್ ದೈವದ ಕುತ್ತಿಗೆ ಹಿಸುಕಿ ಮೇಲಕ್ಕೆ ಎತ್ತುತ್ತಾನೆ.
ಜನುಮದ ಜೋಡಿ: ಓ ಊರ ದ್ಯಾವ್ರೆ ಹಾಡು.. ದೇವರಿಗೆ, ನೀ ಎಕ್ಕುಟ್ಟೋಗ, ನಿನ್ ಮನೆ ಕಾಯ್ವೋಗ, ನಿನ್ ತಲೆ ಹೊಡೆಯ, ಹಾಳಾದೋನೆ, ನೀನ್ ನೆಗುದ್ ಬೀಳ, ನಿಂಗ್ ಉಳ ಬೀಳ.

“ಇಂತಹ ಸಾವಿರ ಉದಾಹರಣೆಗಳು ಸಿಗುತ್ತವೆ. ನೀವು ಯಾವುದೇ ಚಿತ್ರ ಹೆಸರಿಸಿ, ಅದರಲ್ಲಿ ತಪ್ಪು ಹುಡುಕಬಹುದು. ಇವೆಲ್ಲವನ್ನು ಆ ಸಂದರ್ಭಕ್ಕೆ ಆ ಪಾತ್ರದ ರಿಯಾಕ್ಷನ್ ಅಂತ ಒಪ್ಪಿಕೊಂಡಿದ್ದೇವೆ. ಈಗ ಡಾಲಿ ವೀರಗಾಸೆ ವೇಷದಲ್ಲಿರುವ ವಿಲನ್‌ಗಳನ್ನು ಹೊಡೆದರೆ, ವೀರಗಾಸೆಗೆ ಅಪಮಾನ ಮಾಡುತ್ತಿರುವವರನ್ನು ಹೊಡೆದಂತೆ ಎಂದುಕೊಳ್ಳಬಹುದಲ್ಲವೆ. ಇಲ್ಲ, ಇಲ್ಲಿ ವಿರೋಧಿಸುತ್ತಿರುವವರಿಗೆ ವೀರಗಾಸೆ ಮುಖ್ಯವಲ್ಲ, ಅದರ ಮೇಲೆ ಪ್ರೀತಿಯು ಇಲ್ಲ, ಡಾಲಿ ಮೇಲಿನ ದ್ವೇಷ ಅಷ್ಟೆ” ಎಂದು ತುಳಸಿ ಕೃಷ್ಣ ತಿಳಿಸಿದ್ದಾರೆ.

May be an image of 3 people and text that says "'ಕಠಾರಿವೀರ ಸುರಸುಂದರಾಂಗಿ' ಸಿನಿಮಾದಲ್ಲಿ ಉಪೇಂದ್ರ ಹಿಂದೂ ದೇವರ ಪಾತ್ರಧಾರಿಗಳನ್ನು ಬೂಟುಕಾಲಲ್ಲಿ ಒದ್ದು ಫೈಟ್ ಮಾಡುವಾಗ.. ಈ ಧರ್ಮರಕ್ಷಕ ಪಡೆಗಳ ವೀರಾಧಿವೀರರು ಯಾವ ಇಲಿ ಬಿಲದೊಳಗೆ ಬೆಚ್ಚಗೆ ಮಲಗಿದ್ರು? 'ಬಡವರಮನೆ ಯಿಂದ ಬಂದ ಡಾಲಿ ಧನಂಜಯ್ ಮೇಲೆ ನಿಮ್ಮ ಪ್ರತಾಪ ತೋರಿಸ್ತ ಇದೀರ? ಯಾಕೆ ಬಡವರ ಮನೆ ಮಕ್ಳು HERO ಆಗ್ಬಾರ್ದ?"‘ಕಠಾರಿವೀರ ಸುರಸುಂದರಾಂಗ’ ಸಿನಿಮಾದ ಸಿನಿಮಾ ದೃಶ್ಯದ ಕುರಿತು ಚರ್ಚೆಯಾಗುತ್ತಿದೆ. ಉಪೇಂದ್ರ ಅವರು ಹಿಂದೂ ದೇವರುಗಳಿಗೆ ಬೂಟು ಕಾಲಲ್ಲಿ ಒದ್ದು ಫೈಟ್‌ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

May be an image of 6 people, people standing, fire and text that says 'ಶೂದ್ರರ ಹುಲಿವೇಷಧಾರಿಗೆ ಹೊಡೆದಾಗ ಧರ್ಮಕ್ಕೆ ಅಪಚಾರವಾಗಲಿಲ್ಲ!! ದಲಿತರ ಗುಳಿಗದೈವಕ್ಕೆ ಧಣಿಯ ಗುಲಾಮರು ಹೊಡೆದಾಗ ಧರ್ಮಕ್ಕೆ ಅಪಮಾನವಾಗಲಿಲ್ಲ. ವೀರಗಾಸೆ ವೇಷ ಧರಿಸಿ ಜಯರಾಜ್ ಕೊಲ್ಲಲು ಬಂದ ಖಳರಿಗೆ ನಾಯಕ ಹೊಡೆದಾಗ ಧರ್ಮಕ್ಕೆ ಅಪಮಾನವಾಗಿದೆ ನೋಡಿ. ಬಡವರ ಮಕ್ಕಳನ್ನ ಬೆಳೆಯೋಕೆಲ್ಲಿ ಬಿಡ್ತೀರ?'May be an image of 2 people and text that says 'ವಿಕ್ರಾಂತ್ ರೋಣ ಸಿನಿಮದಲ್ಲಿ ಕೋಲ ದೈವ ಪಾತ್ರಗಳಿಗೆ ನಾಮರ್ದ'ರು ಅಂದು, ನಾಯಕ ಬಡಿದು ಕೊಲ್ಲುತ್ತಾನೆ.. ಧರ್ಮರಕ್ಷಕ ಪುಡುಂಗಿಗಳು ಆವತ್ತು ಎಲ್ಲಿ ದನ ಮೇಯ್ಸೋಕೆ ಹೋಗಿದ್ರು? 'ಡಾಲಿ' ಬಡವರ ಮನೆಯಿಂದ ಬಂದ ಹುಡುಗ.. ಅದೇ ಉರಿ ನಿಮಗೆ.'‘ಉಳಿದವರು ಕಂಡಂತೆ’ ಸಿನಿಮಾದಲ್ಲಿ ‘ಹುಲಿ ವೇಷಧಾರಿ’ಗೆ ಹೊಡೆಯುವ ದೃಶ್ಯವನ್ನು ಜನರು ಹಂಚಿಕೊಳ್ಳುತ್ತಿದ್ದಾರೆ.

ಹೋರಾಟಗಾರ್ತಿ ನಜ್ಮಾ ಅವರು ಬರೆದಿರುವ ಟಿಪ್ಪಣಿಯನ್ನು ಅನೇಕರು ಶೇರ್‌ ಮಾಡಿದ್ದಾರೆ.

“ನಾನು ಹುಟ್ಟಿರದೆ ಆರಾಮಾಗಿರಕ್ಕೆ ಅನ್ಲಿಲ್ಲ ನಮ್ ಧನಂಜಯ,
ರಿಸ್ಕ್ ಎಷ್ಟಾದ್ರೂ ತಗೊಂಡು ಮುಂದುಕ್ ಹೋಗ್ಬೇಕು ಅಂದ;
ಕಾಸಿರೋರೆ ಜಗತ್ ಆಳ್ಬೇಕು ಅನ್ಲಿಲ್ಲ ನಮ್ ಧನಂಜಯ,
ಬಡವರ್ ಮನೆ ಮಕ್ಳು ಬೆಳೇಬೇಕು ಅಂದ,
ಜಾತಿ ಧರ್ಮ ಅಂತ ಕಿತ್ತಾಡಿ ಸಾಯ್ರಿ ಅನ್ಲಿಲ್ಲ ನಮ್ ಧನಂಜಯ,
ಏನಾದರೂ ಆಗು ಮೊದಲು ಮಾನವನಾಗು ಅಂದ,
ಕಂಡೋರ್ ಹೊಟ್ಟೆ ಮ್ಯಾಲೆ ಹೊಡೆದು ಸಂಪಾದ್ನೇ ಮಾಡು ಅನ್ಲಿಲ್ಲ ನಮ್ ಧನಂಜಯ,
ಕಷ್ಟ ಪಟ್ಟು ದುಡ್ಡು ಮುಂದೆ ಬನ್ನಿ ಅಂದ,
ಮೇಲು-ಕೀಳು, ದೊಡ್ಡೋರು-ಚಿಕ್ಕೋರು ಅನ್ಲಿಲ್ಲ ನಮ್ ಧನಂಜಯ,
ಎಲ್ರು ನಮ್ಮವ್ರು ಕಂತೆ ಒಟ್ಟಿಗೆ ನಡೀರ್ಲಾ ಅಂದ,
ಸಿನೆಮಾ ಅಂದ್ರೆ ಬರಿ ಬಣ್ಣ ಹಚ್ಚೋದಲ್ಲ ಅಂದ ನಮ್ಮ ಧನಂಜಯ,
ಸಿನ್ಮಾ ಅಂದ್ರೆ ಬದ್ಕು-ಬವಣೆ ಕನ್ರಲಾ ಅಂದ” ಎಂಬ ಸಾಲುಗಳನ್ನು ನಜ್ಮಾ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...