Homeಕರ್ನಾಟಕಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

ಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕಲಬುರಗಿಯ ಮೌಲಾನಾ ಆಝಾದ್ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮತ್ತು ಮುಖ್ಯಶಿಕ್ಷಕಿ ನಿವಾಸದಲ್ಲಿ ತೋಟಗಾರಿಕೆ ಕೆಲಸವವನ್ನು ಮಾಡಲು ವಿದ್ಯಾರ್ಥಿಗಳ ಬಳಕೆ ಆರೋಪ ಕೇಳಿ ಬಂದಿತ್ತು, ಇದೀಗ ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿಯೋರ್ವನ ಪೋಷಕರ ದೂರಿನ ಮೇರೆಗೆ ಮೌಲಾನಾ ಆಜಾದ್ ಮಾದರಿ ಇಂಗ್ಲಿಷ್ ಮಾದ್ಯಮ  ಶಾಲೆಯ ಮುಖ್ಯೋಪಾಧ್ಯಾಯಿನಿ ಜೋಹರ್ ಜಬೀನಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳಲ್ಲಿ ಶಾಲೆಯ ಶೌಚಾಲಯಗಳನ್ನು ಶುಚಿ ಮಾಡಿಸುತ್ತಿದ್ದರು ಮತ್ತು ಪ್ರಾಂಶುಪಾಲೆಯ ನಿವಾಸದ ತೋಟದಲ್ಲಿ ಕೆಲಸ ಮಾಡಿಸುತ್ತಿದ್ದರು. ಮನೆಕೆಲಸಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳದಂತೆ ಮುಖ್ಯಶಿಕ್ಷಕಿಗೆ ಎಚ್ಚರಿಕೆ ನೀಡಿದರೂ ಸುಧಾರಿಸಲಿಲ್ಲ ಎಂದು ದೂರುದಾರ ಮಹಮ್ಮದ್ ಜಮೀರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ಜಮೀರ್ ನೀಡಿದ ದೂರಿನ ಮೇರೆಗೆ ನಾವು ಐಪಿಸಿ ಸೆಕ್ಷನ್ 506 ಮತ್ತು ಕರ್ನಾಟಕ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಮತ್ತು ಪುನರ್ವಸತಿ ಕಾಯಿದೆ 2013ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ರೋಜಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅನೀಸ್ ಮುಜಾವರ್ ತಿಳಿಸಿದ್ದಾರೆ. ಈ ಬಗ್ಗೆ ಶಾಲೆಗೆ ಭೇಟಿ ನೀಡಿ ಇತರೆ ವಿದ್ಯಾರ್ಥಿಗಳು  ಶೌಚಾಲಯ ಸ್ವಚ್ಛಗೊಳಿಸುತ್ತಿದ್ದರಾ ಅಥವಾ ಪ್ರಾಂಶುಪಾಲರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರಾ ಎಂಬ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಶನಿವಾರ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಗಳನ್ನು ತಲುಪಿದರೂ ನನ್ನ ಮಗ ಮಧ್ಯಾಹ್ನ ಮನೆಗೆ ಬಂದಿಲ್ಲ. ನಾನು ನನ್ನ ಮಗನನ್ನು ಹುಡುಕಿಕೊಂಡು ಶಾಲೆಗೆ ಹೋಗಿದ್ದೆ, ಆದರೆ ಅವನು ಶಾಲೆಯ ಮುಖ್ಯೋಪಾಧ್ಯಾಯಿನಿಯೊಂದಿಗೆ ಹೋಗಿದ್ದಾನೆ ಎಂದು ಬೇರೆಯವರು ನನಗೆ ಹೇಳಿದರು. ಅವರ ಮನೆಗೆ ಹೋಗಿ ನೋಡಿದಾಗ ನನ್ನ ಮಗ ಮುಖ್ಯೋಪಾಧ್ಯಾಯಿನಿ ಜೊಹರಾ ಜಬೀನ್ ಅವರ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿದ್ದುದನ್ನು ನಾನು ಕಂಡುಕೊಂಡೆ. ಈ ಬಗ್ಗೆ ನಾನು ತಕ್ಷಣ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು  ದೂರುದಾರ ಜಮೀರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆ ಡಿಸೆಂಬರ್‌ನಲ್ಲಿ ಈ ಕುರಿತು ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ಕೈಯ್ಯಲ್ಲಿ  ಶೌಚಾಲಯ ಸ್ವಚ್ಛಗೊಳಿಸುವುದನ್ನು ನಿಷೇಧಿಸಿದೆ. ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಳ್ಳುವಂತಿಲ್ಲ. ಶೌಚಾಲಯ ಸ್ವಚ್ಛತೆಗೆ ಬಳಸಿದರೆ ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದಕ್ಕೂ ಮೊದಲು ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಈ ಮೊದಲು ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿತ್ತು. ಘಟನೆಯ ಪೋಟೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮುಖ್ಯ ಶಿಕ್ಷಕ ಶಂಕರಪ್ಪ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದಲ್ಲದೆ ಬೆಂಗಳೂರು ಉತ್ತರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಘಟನೆಗೆ ಸಂಬಂಧಿಸಿ ಬಿಇಓ ಆಂಜನಪ್ಪ ಅವರ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಭಾರತದಲ್ಲಿ ಮುಸ್ಲಿಮ್‌ ವಿರೋಧಿ ಪ್ರಚಾರಕ್ಕೆ ಸಾಮಾಜಿಕ ಮಾದ್ಯಮವನ್ನು ಹೇಗೆ ಬಳಸಲಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...