Homeಕರ್ನಾಟಕಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

ಕಲಬುರಗಿ: ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಪ್ರಕರಣ; ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕಲಬುರಗಿಯ ಮೌಲಾನಾ ಆಝಾದ್ ಮಾದರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮತ್ತು ಮುಖ್ಯಶಿಕ್ಷಕಿ ನಿವಾಸದಲ್ಲಿ ತೋಟಗಾರಿಕೆ ಕೆಲಸವವನ್ನು ಮಾಡಲು ವಿದ್ಯಾರ್ಥಿಗಳ ಬಳಕೆ ಆರೋಪ ಕೇಳಿ ಬಂದಿತ್ತು, ಇದೀಗ ಶಾಲಾ ಮುಖ್ಯ ಶಿಕ್ಷಕಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲಾ ವಿದ್ಯಾರ್ಥಿಯೋರ್ವನ ಪೋಷಕರ ದೂರಿನ ಮೇರೆಗೆ ಮೌಲಾನಾ ಆಜಾದ್ ಮಾದರಿ ಇಂಗ್ಲಿಷ್ ಮಾದ್ಯಮ  ಶಾಲೆಯ ಮುಖ್ಯೋಪಾಧ್ಯಾಯಿನಿ ಜೋಹರ್ ಜಬೀನಾ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮುಖ್ಯೋಪಾಧ್ಯಾಯಿನಿ ವಿದ್ಯಾರ್ಥಿಗಳಲ್ಲಿ ಶಾಲೆಯ ಶೌಚಾಲಯಗಳನ್ನು ಶುಚಿ ಮಾಡಿಸುತ್ತಿದ್ದರು ಮತ್ತು ಪ್ರಾಂಶುಪಾಲೆಯ ನಿವಾಸದ ತೋಟದಲ್ಲಿ ಕೆಲಸ ಮಾಡಿಸುತ್ತಿದ್ದರು. ಮನೆಕೆಲಸಕ್ಕೆ ವಿದ್ಯಾರ್ಥಿಗಳನ್ನು ಬಳಸಿಕೊಳ್ಳದಂತೆ ಮುಖ್ಯಶಿಕ್ಷಕಿಗೆ ಎಚ್ಚರಿಕೆ ನೀಡಿದರೂ ಸುಧಾರಿಸಲಿಲ್ಲ ಎಂದು ದೂರುದಾರ ಮಹಮ್ಮದ್ ಜಮೀರ್ ದೂರಿನಲ್ಲಿ ಉಲ್ಲೇಖಿಸಿದ್ದರು.

ಜಮೀರ್ ನೀಡಿದ ದೂರಿನ ಮೇರೆಗೆ ನಾವು ಐಪಿಸಿ ಸೆಕ್ಷನ್ 506 ಮತ್ತು ಕರ್ನಾಟಕ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಮತ್ತು ಪುನರ್ವಸತಿ ಕಾಯಿದೆ 2013ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ ಎಂದು ರೋಜಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅನೀಸ್ ಮುಜಾವರ್ ತಿಳಿಸಿದ್ದಾರೆ. ಈ ಬಗ್ಗೆ ಶಾಲೆಗೆ ಭೇಟಿ ನೀಡಿ ಇತರೆ ವಿದ್ಯಾರ್ಥಿಗಳು  ಶೌಚಾಲಯ ಸ್ವಚ್ಛಗೊಳಿಸುತ್ತಿದ್ದರಾ ಅಥವಾ ಪ್ರಾಂಶುಪಾಲರ ಮನೆಯಲ್ಲಿ ಕೆಲಸ ಮಾಡುತ್ತಿದ್ದಾರಾ ಎಂಬ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

ಶನಿವಾರ ಎಲ್ಲಾ ವಿದ್ಯಾರ್ಥಿಗಳು ತಮ್ಮ ಮನೆಗಳನ್ನು ತಲುಪಿದರೂ ನನ್ನ ಮಗ ಮಧ್ಯಾಹ್ನ ಮನೆಗೆ ಬಂದಿಲ್ಲ. ನಾನು ನನ್ನ ಮಗನನ್ನು ಹುಡುಕಿಕೊಂಡು ಶಾಲೆಗೆ ಹೋಗಿದ್ದೆ, ಆದರೆ ಅವನು ಶಾಲೆಯ ಮುಖ್ಯೋಪಾಧ್ಯಾಯಿನಿಯೊಂದಿಗೆ ಹೋಗಿದ್ದಾನೆ ಎಂದು ಬೇರೆಯವರು ನನಗೆ ಹೇಳಿದರು. ಅವರ ಮನೆಗೆ ಹೋಗಿ ನೋಡಿದಾಗ ನನ್ನ ಮಗ ಮುಖ್ಯೋಪಾಧ್ಯಾಯಿನಿ ಜೊಹರಾ ಜಬೀನ್ ಅವರ ಮನೆಯ ತೋಟದಲ್ಲಿ ಕೆಲಸ ಮಾಡುತ್ತಿದ್ದುದನ್ನು ನಾನು ಕಂಡುಕೊಂಡೆ. ಈ ಬಗ್ಗೆ ನಾನು ತಕ್ಷಣ ಪೊಲೀಸರಿಗೆ ದೂರು ನೀಡಿದ್ದೇನೆ ಎಂದು  ದೂರುದಾರ ಜಮೀರ್ ಹೇಳಿದ್ದಾರೆ.

ಶಿಕ್ಷಣ ಇಲಾಖೆ ಡಿಸೆಂಬರ್‌ನಲ್ಲಿ ಈ ಕುರಿತು ಆದೇಶವನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ಕೈಯ್ಯಲ್ಲಿ  ಶೌಚಾಲಯ ಸ್ವಚ್ಛಗೊಳಿಸುವುದನ್ನು ನಿಷೇಧಿಸಿದೆ. ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಳ್ಳುವಂತಿಲ್ಲ. ಶೌಚಾಲಯ ಸ್ವಚ್ಛತೆಗೆ ಬಳಸಿದರೆ ಎಫ್‍ಐಆರ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಇದಕ್ಕೂ ಮೊದಲು ಕೋಲಾರದ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯೊಂದರಲ್ಲಿ ಈ ಮೊದಲು ಶಾಲಾ ವಿದ್ಯಾರ್ಥಿಗಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ ಮಾಡಿಸಲಾಗಿತ್ತು. ಘಟನೆಯ ಪೋಟೋ ವೈರಲ್‌ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮುಖ್ಯ ಶಿಕ್ಷಕ ಶಂಕರಪ್ಪ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಇದಲ್ಲದೆ ಬೆಂಗಳೂರು ಉತ್ತರದ ಅಂದ್ರಹಳ್ಳಿಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛತೆ ಮಾಡುವ ವಿಡಿಯೋ ವೈರಲ್‌ ಆಗಿತ್ತು. ಘಟನೆಗೆ ಸಂಬಂಧಿಸಿ ಬಿಇಓ ಆಂಜನಪ್ಪ ಅವರ ದೂರಿನ ಮೇರೆಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದರು.

ಇದನ್ನು ಓದಿ: ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಭಾರತದಲ್ಲಿ ಮುಸ್ಲಿಮ್‌ ವಿರೋಧಿ ಪ್ರಚಾರಕ್ಕೆ ಸಾಮಾಜಿಕ ಮಾದ್ಯಮವನ್ನು ಹೇಗೆ ಬಳಸಲಾಗಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ನಾಯಕರನ್ನು ಗುರಿಯಾಗಿಸುವ ಇಸ್ರೇಲ್ ಬೆದರಿಕೆಗೆ ಚೀನಾ ವಿರೋಧ

ಇರಾನ್‌ನಲ್ಲಿ ಸರ್ವೋಚ್ಛ ನಾಯಕರಾಗಿ ಯಾರೇ ಆಯ್ಕೆಯಾದರು ಅವರು ನಮ್ಮ ಮುಂದಿನ ಗುರಿಯಾಗಿರುತ್ತಾರೆ ಎಂದು ಬೆದರಿಕೆ ಹಾಕಿದ್ದ ಇಸ್ರೇಲ್ ನಡೆಯನ್ನು ಚೀನಾ ಖಂಡಿಸಿದೆ. ಸದ್ಯ ಸರ್ವೋಚ್ಛ ನಾಯಕರಾಗಿ ನೇಮಕವಾಗಿರುವ ಅಲಿ ಖಮೇನಿ ಅವರ ಪುತ್ರ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಒತ್ತಾಯ : ಸಂಸತ್ ಆವರಣದಲ್ಲಿ ವಿಪಕ್ಷ ಸಂಸದರಿಂದ ಪ್ರತಿಭಟನೆ

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಣಾಯಕ ವಿಷಯಗಳ ಬಗ್ಗೆ ಸರ್ಕಾರ ಮೌನ ವಹಿಸಿರುವುದನ್ನು ಖಂಡಿಸಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ರಾಹುಲ್...

ಇರಾನಿನ ತೈಲ ಸಂಗ್ರಹಾಗಾರಗಳ ಮೇಲೆ ಇಸ್ರೇಲ್ ದಾಳಿ; ಅಮೆರಿಕಾ ಅಸಮಾಧಾನಗೊಂಡಿರುವುದಾಗಿ ವರದಿ

ವಾಷಿಂಗ್ಟನ್, ಡಿಸಿ: ಇರಾನಿನ ಇಂಧನ ಮೂಲಸೌಕರ್ಯವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದೊಡ್ಡ ಪ್ರಮಾಣದ ವೈಮಾನಿಕ ದಾಳಿಯ ಬಗ್ಗೆ ಅಮೆರಿಕ ಮತ್ತು ಇಸ್ರೇಲ್ ನಡುವೆ ಭಿನ್ನಾಭಿಪ್ರಾಯ ಹೊರಹೊಮ್ಮಿದೆ ಎಂದು ವರದಿಯಾಗಿದೆ. ಅಮೆರಿಕದ ಅಧಿಕಾರಿಗಳು ಕಾರ್ಯಾಚರಣೆಯ...

ಪಶ್ಚಿಮ ಏಷ್ಯಾ ಸಂಘರ್ಷ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಪಟ್ಟು : ಲೋಕಸಭೆ ಕಲಾಪ ಮುಂದೂಡಿಕೆ

ಲೋಕಸಭೆಯ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರ (ಮಾ.9) ಭಾರೀ ಗದ್ದಲದೊಂದಿಗೆ ಆರಂಭಗೊಂಡಿತು. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಚರ್ಚಿಸಲು ಆಗ್ರಹಿಸಿ ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆ, ಸ್ಪೀಕರ್...

Parliament Budget Session | ಇಂಧನ ಭದ್ರತೆ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರಸ್ತಾಪ : ರಾಜ್ಯಸಭೆಯಲ್ಲಿ ಗದ್ದಲ

ಸಂಸತ್ತಿನ 2026-27ನೇ ಸಾಲಿನ ಬಜೆಟ್ ಅಧಿವೇಶನದ ಎರಡನೇ ಹಂತದ ಕಾರ್ಯ ಕಲಾಪಗಳು ಸೋಮವಾರದಿಂದ (ಮಾ.9) ಪ್ರಾರಂಭಗೊಂಡಿವೆ. ಮೊದಲ ದಿನ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಅವರು...

ಯುದ್ಧದ ನಡುವೆಯೇ ಇರಾನ್‌ನ ನೂತನ ಸರ್ವೋಚ್ಚ ನಾಯಕನಾಗಿ ಖಮೇನಿ ಪುತ್ರ ಮೊಜ್ತಬಾ ನೇಮಕ

ಇರಾನ್‌ನ ತಜ್ಞರ ಸಭೆಯು ಮೊಜ್ತಾಬಾ ಖಮೇನಿ ಅವರನ್ನು ಅವರ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಸ್ಥಾನಕ್ಕೆ ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಘೋಷಿಸಿದೆ ಎಂದು ರಾಜ್ಯ ಮಾಧ್ಯಮ ಭಾನುವಾರ ವರದಿ ಮಾಡಿದೆ. "ತಜ್ಞರ...

‘ಮಧ್ಯಪ್ರಾಚ್ಯ ಉದ್ವಿಗ್ನತೆ’: ಸೌದಿ ವಸತಿ ಪ್ರದೇಶದ ಮೇಲಿನ ಕ್ಷಿಪಣಿ ದಾಳಿಯಲ್ಲಿ ಯಾವುದೇ ಭಾರತೀಯ ಸಾವನ್ನಪ್ಪಿಲ್ಲ; ರಿಯಾದ್‌ ರಾಯಭಾರ ಕಚೇರಿ

ಸೌದಿ ಅರೇಬಿಯಾದ ವಸತಿ ಸ್ಥಳದ ಮೇಲೆ ಭಾನುವಾರ ಶೆಲ್ ಬಿದ್ದ ಪರಿಣಾಮ ಯಾವುದೇ ಭಾರತೀಯ ಸಾವು ಸಂಭವಿಸಿಲ್ಲ ಎಂದು ರಿಯಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ದೃಢಪಡಿಸಿದೆ. ಸೌದಿ ಅರೇಬಿಯಾದ ಅಲ್-ಖಾರ್ಜ್ ಗವರ್ನರೇಟ್‌ನಲ್ಲಿರುವ ವಸತಿ ಪ್ರದೇಶದಲ್ಲಿ...