Homeಕರೋನಾ ತಲ್ಲಣಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ವಿಮಾ ಯೋಜನೆ ಕೈಬಿಟ್ಟ ಕೇಂದ್ರ!

ಅಂದಾಜು 22 ಲಕ್ಷ ಆರೋಗ್ಯ ಕಾರ್ಯಕರ್ತೆಯರಿಗೆ ಈ ವಿಮಾ ಸೌಕರ್ಯ ಒದಗಿಸಲಾಗುವುದು ಎಂದು ಸರ್ಕಾರ ಘೋಷಿಸಿತ್ತು

- Advertisement -
- Advertisement -

ದೇಶದಲ್ಲಿ ಕೊರೊನಾ ಸೋಂಕು ದಿನೇ ದಿನೇ ಉಲ್ಬಣವಾಗುತ್ತಿದೆ. ಈಗೀನ ಎರಡನೇ ಅಲೆ ತೀವ್ರ ಸ್ಪರೂಪದ್ದಾಗಿದ್ದು, ಅಧಿಕ ಸಾವುಗಳಿಗೆ ಕಾರಣವಾಗುತ್ತಿದೆ. ಇಂತಹ ಸಮಯದಲ್ಲಿ ಆರೋಗ್ಯ ಕಾರ್ಯಕರ್ತರು ತಮ್ಮ ಜೀವವನ್ನೇ ಪಣಕ್ಕಿಟ್ಟು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೊರೊನಾ ಸಂಕಚ್ಟದಲ್ಲಿ ಹಗಲು-ರಾತ್ರಿ ದುಡಿಯುತ್ತಿರುವ ಇವರಿಗೆ ಕೇಂದ್ರ ಸರ್ಕಾರ ಈಗ ಮತ್ತೊಂದು ಆಘಾತ ನೀಡಿದೆ.

ಕೊರೊನಾ ಸೋಂಕಿತರನ್ನು ನೋಡಿಕೊಳ್ಳುವ ಮೊದಲ ಸಾಲಿನಲ್ಲಿ ಬರುವ, ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ವಿಮಾ ಯೋಜನೆಯಡಿ ತಲಾ 50 ಲಕ್ಷ ರೂಪಾಯಿವರೆಗೆ ವಿಮಾ ಸೌಲಭ್ಯ ನೀಡುವುದಾಗಿ ಘೋಷಿಸಿತ್ತು.

ಕಳೆದ ವರ್ಷದ ಮಾರ್ಚ್‌‌ನಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಕೊರೊನಾ ಮೊದಲ ಅಲೆಯಲ್ಲಿ ಎಷ್ಟು ಜನರಿಗೆ ಈ ವಿಮೆಯ ಸೌಲಭ್ಯ ದೊರಕಿದೆಯೋ ಗೊತ್ತಿಲ್ಲ. ಆದರೆ ಈ ವರ್ಷದ ಮಾರ್ಚ್ 24 ರಂದು ಸರ್ಕಾರ ಸುತ್ತೊಲೆ ಹೊರಡಿಸಿ ಈ ವಿಮಾ ಯೋಜನೆಯನ್ನು ಅಂತ್ಯಗೊಳಿಸಿರುವುದಾಗಿ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಕೊರೊನಾ ವಾರಿಯರ್ಸ್‌ಗೆ ಸಲ್ಲಬೇಕಾದ ಪ್ರಶಂಸೆಯನ್ನು ಮೋದಿ ಕದಿಯುತ್ತಿದ್ದಾರೆ: ಚುನಾವಣಾ ಆಯೋಗಕ್ಕೆ TMC ದೂರು

ಕೊರೊನಾ ಎರಡನೇ ಅಲೆಯಲ್ಲಿ ಹೆಚ್ಚು ಆತಂಕಕ್ಕೆ ಒಳಗಾಗಿರುವ ವಲಯ ಆರೋಗ್ಯ ಕಾರ್ಯಕರ್ತರದ್ದು, ವಿಮಾ ಸೌಲಭ್ಯ ಎಷ್ಟು ದೊರಕಿದೆಯೋ ಇಲ್ಲವೋ ಮಾಹಿತಿಯಿಲ್ಲ. ಆದರೆ, ತಾವು ಕೊಂಚ ನೆಮ್ಮದಿಯಿಂದ ಕೆಲಸ ಮಾಡಲು ಈ ವಿಮಾ ಸೌಲಭ್ಯ ಒಂದು ಭದ್ರತೆ ಒದಗಿಸಿತ್ತು. ಅದನ್ನು ಈಗ ಕೇಂದ್ರ ಸರ್ಕಾರ ಅಂತ್ಯಗೊಳಿಸಿದೆ.

ಈಗೀನ ಸನ್ನಿವೇಶ ನಿಜಕ್ಕೂ ಗಂಭೀರ ಆಗುತ್ತಿರುವ ಹೊತ್ತಿನಲ್ಲಿ ಜನರ ಜೀವ ಉಳಿಸಲು ಹೆಣಗಾಡುತ್ತಿರುವ ವೈದ್ಯರು, ತಳಮಟ್ಟದ ಆಶಾ ಕಾರ್ಯಕರ್ತೆಯರು, ಆಂಬ್ಯುಲೆನ್ಸ್ ಚಾಲಕರು, ಆರೋಗ್ಯ ಸಿಬ್ಬಂದಿಗಳ ವಿಮಾ ಸೌಲಭ್ಯಕ್ಕೆ ಅಂತ್ಯ ಹಾಡಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಆರೋಗ್ಯ ರಕ್ಷಣಾ ಕೇಂದ್ರಗಳಲ್ಲಿ ದುಡಿಯುತ್ತಿರುವ ಆರೋಗ್ಯ ಕಾರ್ಯಕರ್ತರಿಗೆ ನೀಡಲಾಗಿತ್ತು.

ಸಫಾಯಿ ಕರ್ಮಚಾರಿಗಳು, ವಾರ್ಡ್ ಬಾಯ್ ಗಳು, ನರ್ಸ್ ಗಳು, ಆಶಾ ಕಾರ್ಯಕರ್ತೆಯರು, ಅರೆ ವೈದ್ಯಕೀಯ ಸಿಬ್ಬಂದಿ, ತಂತ್ರಜ್ಞರು, ವೈದ್ಯರು ಮತ್ತು ವಿಶೇಷ ತಜ್ಞರು ಹಾಗೂ ಇತರೆ ಆರೋಗ್ಯ ಕಾರ್ಯಕರ್ತರನ್ನು ವಿಶೇಷ ವಿಮಾ ಯೋಜನೆ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿತ್ತು.

ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವುದು, ಅವರನ್ನು ಭೇಟಿ ಮಾಡುವುದು ಮತ್ತಿತರ ಕಾರ್ಯಗಳಲ್ಲಿ ತೊಡಗಿದ್ದ ಯಾವುದೇ ಆರೋಗ್ಯ ವೃತ್ತಿಪರರು ಅವಘಡದಲ್ಲಿ ಸಿಲುಕಿ ಅವರು ಸಾವನ್ನಪ್ಪಿದರೆ ಅವರಿಗೆ 50 ಲಕ್ಷ ರೂಪಾಯಿವರೆಗೆ ವಿಮಾ ಪರಿಹಾರ ನೀಡಲಾಗುವುದು. ಅಂದಾಜು 22 ಲಕ್ಷ ಆರೋಗ್ಯ ಕಾರ್ಯಕರ್ತೆಯರಿಗೆ ಈ ವಿಮಾ ಸೌಕರ್ಯ ಒದಗಿಸಲಾಗುವುದು ಎಂದು ಹೇಳಲಾಗಿತ್ತು.


ಇದನ್ನೂ ಓದಿ: ಕುಂಭಮೇಳದಿಂದ ದೆಹಲಿಗೆ ಹಿಂದಿರುಗುವವರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...