Homeಕರ್ನಾಟಕಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

- Advertisement -
- Advertisement -

ಬುದ್ಧಿ ಇಲ್ಲದವರಿಗೆ ಬೌದ್ಧಧರ್ಮ ಅರ್ಥವಾಗುವುದಿಲ್ಲ, ಆದ್ದರಿಂದಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಂತಹ ಅನಾರೋಗ್ಯ ಮನಸ್ಸಿನವರು ಬೌದ್ಧ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಬುಧವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಬ್ರಾಹ್ಮಣ ಸಮಾಜದ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮದಿಂದ ಭಾರತಕ್ಕೆ ಅಪಾಯವಿತ್ತು ಎಂದು ಇನ್ನೊಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಮನಸ್ಸು ಅನಾರೋಗ್ಯದಿಂದ ತುಂಬಿ ತುಳುಕುತ್ತಿದೆ ಎಂದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಭಾರತಕ್ಕೆ ಅಪಾಯ: ಸಚಿವ ಸುಧಾಕರ್‌ 

“ಅರ್ಟಿಕಲ್ 15 ಪ್ರಕಾರ ಯಾವುದೇ ಧರ್ಮ, ಜಾತಿ, ವ್ಯಕ್ತಿಯನ್ನು  ನಿಂದಿಸುವುದು ಅಪರಾಧ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಇನ್ನೊಬ್ಬರನ್ನು ಮೆಚ್ಚಿಸಲು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆ ಪ್ರವಾಸದ ವೇಳೆ ‘ನಾನು ಬುದ್ಧನ ನಾಡಿನಿಂದ ಬಂದವರೆಂದು’ ಹೇಳುತ್ತಾರೆ. ಆದರೆ ಕರ್ನಾಟಕದ ಅನಾರೋಗ್ಯ ಮಂತ್ರಿ ಬುದ್ಧಿ ಇಲ್ಲದಂತೆ ಮಾತಾಡುತ್ತಾರೆ.
ಬೌದ್ಧ ಧರ್ಮ ಭಾರತದಲ್ಲಿ ಹುಟ್ಟಿ ಹೊರ ದೇಶದಲ್ಲಿ ವಿಶಾಲವಾಗಿ ಬೆಳೆದಿದೆ. ಬೌದ್ಧ ಧಮ್ಮದ ಸಾರ ಪ್ರೀತಿ, ಕರುಣೆ, ದಯೆ, ಸೌಹಾರ್ದತೆ ಹಾಗೂ ವೈಜ್ಞಾನಿಕ ತಳಹದಿಯಿಂದ ಕೂಡಿದೆ. ನಿಂದಿಸುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಚಿವ ಸುಧಾಕರ್ ಕ್ಷಮೆಯಾಚಿಸಲಿ

ಬುದ್ಧರು ಸ್ಥಾಪಿಸಿರುವ ಧಮ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ಸಚಿವ ಡಾ.ಕೆ.ಸುಧಾಕರ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗುತ್ತದೆಂದು ಧ್ರುವ ನಾರಾಯಣ ಅವರು ಎಚ್ಚರಿಕೆ ನೀಡಿದರು.

ವಿದೇಶಾಂಗ ಇಲಾಖೆ ವೈಫಲ್ಯ

ವಿದೇಶಾಂಗ ಇಲಾಖೆ ವೈಫಲ್ಯದಿಂದಲೇ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಉಕ್ರೇನ್ ರಷ್ಯಾ ಯುದ್ಧದಲ್ಲಿ ಮೃತಪಟ್ಟಿದ್ದಾರೆ ಎಂದು ಆರ್.ಧ್ರುವನಾರಾಯಣ ಆರೋಪಿಸಿದರು.

ಅರ್ಹತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ವಿದೇಶದಲ್ಲಿ ವ್ಯಾಸಂಗ ಮಾಡಲು ತೆರಳುತ್ತಾರೆ ಎಂಬ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಬಿಜೆಪಿ ನಾಯಕರು ಹೇಳಿಕೆ ಕೊಡುವುದರಲ್ಲಿ ನಿಸ್ಸಿಮ್ಮರು. ಬೆಂಕಿ ಹಚ್ಚುವುದು, ಮನೆ ಒಡೆಯುವುದು, ಹುಳಿ ಹಿಂಡುವುದೇ ಬಿಜೆಪಿಯವರ ವೃತ್ತಿ. ಇದನ್ನು ಬ್ರಿಟಿಷರಿಂದ ಕಲಿತುಕೊಂಡಿದ್ದಾರೆ” ಎಂದು ಕುಟುಕಿದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಅಪಾಯ ಎನ್ನುವ ಸಚಿವ ಸುಧಾಕರ್‌ ತಮ್ಮ ಹಳೆಯ ಹೇಳಿಕೆಗಳನ್ನೇ ಮರೆತರೆ? 

ಕಾಂಗ್ರೆಸ್‌ ಪಾದಯಾತ್ರೆಯನ್ನು ಮೇಕೆ ತಿನ್ನುವ ಪಾದಯಾತ್ರೆ ಎಂದಿರುವ ಶಾಸಕ ಸಿ.ಟಿ.ರವಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಸಿ.ಟಿ.ರವಿ ಅವರಿಗೆ ಧಮ್ ಇದ್ದರೆ, ತಾಕತ್ತಿದ್ದರೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿ. 2.5 ವರ್ಷದಿಂದ ಯೋಜನೆಗೆ ಯಾಕೆ ಅನುಮತಿ ಕೊಡಿಸಲಿಲ್ಲ. ಉಡಾಫೆ ಮತ್ತು ಬೇಜಾವಾಬ್ದಾರಿಯಿಂದ ಮಾತಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಇಬ್ಬಗೆ ನೀತಿ

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಇಡೀ ಸರ್ಕಾರವೇ ಖಂಡಿಸಿತು. ಅದೇ ಬೆಳ್ತಂಗಡಿಯ ಕನ್ಯಾಡಿ ಗ್ರಾಮದ ದಲಿತ ಯುವಕ ದಿನೇಶ್ ನಾಯಕ್ ಹತ್ಯೆಗೆ ಒಂದು ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಇದು ಬಿಜೆಪಿಯ ಇಬ್ಬಗೆ ನೀತಿಯನ್ನು ತೋರಿಸುತ್ತದೆ. ಇದು ಮನುವಾದಿ ಸಂಸ್ಕೃತಿ ದೋತ್ಯಕ. ಬಿಜೆಪಿಯ ಇಬ್ಬಗೆ ನೀತಿಯನ್ನು ಖಂಡಿಸುವುದಾಗಿ ತಿಳಿಸಿದರು.

ಎಸ್ಸಿ, ಎಸ್ಟಿ ದೌರ್ಜನ್ಯ ಹೆಚ್ಚಳ

ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ. ಕಳೆದ ವರ್ಷ 50291 ಪ್ರಕರಣ ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 36467 ಅತಿ ಹೆಚ್ಚು ಪ್ರಕರಣ ದಾಖಲಾಗಿವೆ. ಖಾವಿ ಧರಿಸಿದ ಮುಖ್ಯಮಂತ್ರಿ ಇರುವ ರಾಜ್ಯದಲ್ಲಿ ಯಾಕೆ ದೌರ್ಜನ್ಯ ಹೆಚ್ಚಳವಾಯಿತು? ಖಾವಿ ಶಾಂತಿಯ ಸಂಕೇತವಲ್ಲವೇ? 84% ಪ್ರಕರಣಗಳು ಬಾಕಿ ಉಳಿದಿವೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...