Homeಕರ್ನಾಟಕಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

- Advertisement -
- Advertisement -

ಬುದ್ಧಿ ಇಲ್ಲದವರಿಗೆ ಬೌದ್ಧಧರ್ಮ ಅರ್ಥವಾಗುವುದಿಲ್ಲ, ಆದ್ದರಿಂದಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಂತಹ ಅನಾರೋಗ್ಯ ಮನಸ್ಸಿನವರು ಬೌದ್ಧ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಬುಧವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಬ್ರಾಹ್ಮಣ ಸಮಾಜದ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮದಿಂದ ಭಾರತಕ್ಕೆ ಅಪಾಯವಿತ್ತು ಎಂದು ಇನ್ನೊಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಮನಸ್ಸು ಅನಾರೋಗ್ಯದಿಂದ ತುಂಬಿ ತುಳುಕುತ್ತಿದೆ ಎಂದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಭಾರತಕ್ಕೆ ಅಪಾಯ: ಸಚಿವ ಸುಧಾಕರ್‌ 

“ಅರ್ಟಿಕಲ್ 15 ಪ್ರಕಾರ ಯಾವುದೇ ಧರ್ಮ, ಜಾತಿ, ವ್ಯಕ್ತಿಯನ್ನು  ನಿಂದಿಸುವುದು ಅಪರಾಧ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಇನ್ನೊಬ್ಬರನ್ನು ಮೆಚ್ಚಿಸಲು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆ ಪ್ರವಾಸದ ವೇಳೆ ‘ನಾನು ಬುದ್ಧನ ನಾಡಿನಿಂದ ಬಂದವರೆಂದು’ ಹೇಳುತ್ತಾರೆ. ಆದರೆ ಕರ್ನಾಟಕದ ಅನಾರೋಗ್ಯ ಮಂತ್ರಿ ಬುದ್ಧಿ ಇಲ್ಲದಂತೆ ಮಾತಾಡುತ್ತಾರೆ.
ಬೌದ್ಧ ಧರ್ಮ ಭಾರತದಲ್ಲಿ ಹುಟ್ಟಿ ಹೊರ ದೇಶದಲ್ಲಿ ವಿಶಾಲವಾಗಿ ಬೆಳೆದಿದೆ. ಬೌದ್ಧ ಧಮ್ಮದ ಸಾರ ಪ್ರೀತಿ, ಕರುಣೆ, ದಯೆ, ಸೌಹಾರ್ದತೆ ಹಾಗೂ ವೈಜ್ಞಾನಿಕ ತಳಹದಿಯಿಂದ ಕೂಡಿದೆ. ನಿಂದಿಸುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಚಿವ ಸುಧಾಕರ್ ಕ್ಷಮೆಯಾಚಿಸಲಿ

ಬುದ್ಧರು ಸ್ಥಾಪಿಸಿರುವ ಧಮ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ಸಚಿವ ಡಾ.ಕೆ.ಸುಧಾಕರ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗುತ್ತದೆಂದು ಧ್ರುವ ನಾರಾಯಣ ಅವರು ಎಚ್ಚರಿಕೆ ನೀಡಿದರು.

ವಿದೇಶಾಂಗ ಇಲಾಖೆ ವೈಫಲ್ಯ

ವಿದೇಶಾಂಗ ಇಲಾಖೆ ವೈಫಲ್ಯದಿಂದಲೇ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಉಕ್ರೇನ್ ರಷ್ಯಾ ಯುದ್ಧದಲ್ಲಿ ಮೃತಪಟ್ಟಿದ್ದಾರೆ ಎಂದು ಆರ್.ಧ್ರುವನಾರಾಯಣ ಆರೋಪಿಸಿದರು.

ಅರ್ಹತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ವಿದೇಶದಲ್ಲಿ ವ್ಯಾಸಂಗ ಮಾಡಲು ತೆರಳುತ್ತಾರೆ ಎಂಬ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಬಿಜೆಪಿ ನಾಯಕರು ಹೇಳಿಕೆ ಕೊಡುವುದರಲ್ಲಿ ನಿಸ್ಸಿಮ್ಮರು. ಬೆಂಕಿ ಹಚ್ಚುವುದು, ಮನೆ ಒಡೆಯುವುದು, ಹುಳಿ ಹಿಂಡುವುದೇ ಬಿಜೆಪಿಯವರ ವೃತ್ತಿ. ಇದನ್ನು ಬ್ರಿಟಿಷರಿಂದ ಕಲಿತುಕೊಂಡಿದ್ದಾರೆ” ಎಂದು ಕುಟುಕಿದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಅಪಾಯ ಎನ್ನುವ ಸಚಿವ ಸುಧಾಕರ್‌ ತಮ್ಮ ಹಳೆಯ ಹೇಳಿಕೆಗಳನ್ನೇ ಮರೆತರೆ? 

ಕಾಂಗ್ರೆಸ್‌ ಪಾದಯಾತ್ರೆಯನ್ನು ಮೇಕೆ ತಿನ್ನುವ ಪಾದಯಾತ್ರೆ ಎಂದಿರುವ ಶಾಸಕ ಸಿ.ಟಿ.ರವಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಸಿ.ಟಿ.ರವಿ ಅವರಿಗೆ ಧಮ್ ಇದ್ದರೆ, ತಾಕತ್ತಿದ್ದರೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿ. 2.5 ವರ್ಷದಿಂದ ಯೋಜನೆಗೆ ಯಾಕೆ ಅನುಮತಿ ಕೊಡಿಸಲಿಲ್ಲ. ಉಡಾಫೆ ಮತ್ತು ಬೇಜಾವಾಬ್ದಾರಿಯಿಂದ ಮಾತಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಇಬ್ಬಗೆ ನೀತಿ

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಇಡೀ ಸರ್ಕಾರವೇ ಖಂಡಿಸಿತು. ಅದೇ ಬೆಳ್ತಂಗಡಿಯ ಕನ್ಯಾಡಿ ಗ್ರಾಮದ ದಲಿತ ಯುವಕ ದಿನೇಶ್ ನಾಯಕ್ ಹತ್ಯೆಗೆ ಒಂದು ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಇದು ಬಿಜೆಪಿಯ ಇಬ್ಬಗೆ ನೀತಿಯನ್ನು ತೋರಿಸುತ್ತದೆ. ಇದು ಮನುವಾದಿ ಸಂಸ್ಕೃತಿ ದೋತ್ಯಕ. ಬಿಜೆಪಿಯ ಇಬ್ಬಗೆ ನೀತಿಯನ್ನು ಖಂಡಿಸುವುದಾಗಿ ತಿಳಿಸಿದರು.

ಎಸ್ಸಿ, ಎಸ್ಟಿ ದೌರ್ಜನ್ಯ ಹೆಚ್ಚಳ

ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ. ಕಳೆದ ವರ್ಷ 50291 ಪ್ರಕರಣ ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 36467 ಅತಿ ಹೆಚ್ಚು ಪ್ರಕರಣ ದಾಖಲಾಗಿವೆ. ಖಾವಿ ಧರಿಸಿದ ಮುಖ್ಯಮಂತ್ರಿ ಇರುವ ರಾಜ್ಯದಲ್ಲಿ ಯಾಕೆ ದೌರ್ಜನ್ಯ ಹೆಚ್ಚಳವಾಯಿತು? ಖಾವಿ ಶಾಂತಿಯ ಸಂಕೇತವಲ್ಲವೇ? 84% ಪ್ರಕರಣಗಳು ಬಾಕಿ ಉಳಿದಿವೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...