Homeಕರ್ನಾಟಕಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

- Advertisement -
- Advertisement -

ಬುದ್ಧಿ ಇಲ್ಲದವರಿಗೆ ಬೌದ್ಧಧರ್ಮ ಅರ್ಥವಾಗುವುದಿಲ್ಲ, ಆದ್ದರಿಂದಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಂತಹ ಅನಾರೋಗ್ಯ ಮನಸ್ಸಿನವರು ಬೌದ್ಧ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಬುಧವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಬ್ರಾಹ್ಮಣ ಸಮಾಜದ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮದಿಂದ ಭಾರತಕ್ಕೆ ಅಪಾಯವಿತ್ತು ಎಂದು ಇನ್ನೊಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಮನಸ್ಸು ಅನಾರೋಗ್ಯದಿಂದ ತುಂಬಿ ತುಳುಕುತ್ತಿದೆ ಎಂದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಭಾರತಕ್ಕೆ ಅಪಾಯ: ಸಚಿವ ಸುಧಾಕರ್‌ 

“ಅರ್ಟಿಕಲ್ 15 ಪ್ರಕಾರ ಯಾವುದೇ ಧರ್ಮ, ಜಾತಿ, ವ್ಯಕ್ತಿಯನ್ನು  ನಿಂದಿಸುವುದು ಅಪರಾಧ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಇನ್ನೊಬ್ಬರನ್ನು ಮೆಚ್ಚಿಸಲು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆ ಪ್ರವಾಸದ ವೇಳೆ ‘ನಾನು ಬುದ್ಧನ ನಾಡಿನಿಂದ ಬಂದವರೆಂದು’ ಹೇಳುತ್ತಾರೆ. ಆದರೆ ಕರ್ನಾಟಕದ ಅನಾರೋಗ್ಯ ಮಂತ್ರಿ ಬುದ್ಧಿ ಇಲ್ಲದಂತೆ ಮಾತಾಡುತ್ತಾರೆ.
ಬೌದ್ಧ ಧರ್ಮ ಭಾರತದಲ್ಲಿ ಹುಟ್ಟಿ ಹೊರ ದೇಶದಲ್ಲಿ ವಿಶಾಲವಾಗಿ ಬೆಳೆದಿದೆ. ಬೌದ್ಧ ಧಮ್ಮದ ಸಾರ ಪ್ರೀತಿ, ಕರುಣೆ, ದಯೆ, ಸೌಹಾರ್ದತೆ ಹಾಗೂ ವೈಜ್ಞಾನಿಕ ತಳಹದಿಯಿಂದ ಕೂಡಿದೆ. ನಿಂದಿಸುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಚಿವ ಸುಧಾಕರ್ ಕ್ಷಮೆಯಾಚಿಸಲಿ

ಬುದ್ಧರು ಸ್ಥಾಪಿಸಿರುವ ಧಮ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ಸಚಿವ ಡಾ.ಕೆ.ಸುಧಾಕರ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗುತ್ತದೆಂದು ಧ್ರುವ ನಾರಾಯಣ ಅವರು ಎಚ್ಚರಿಕೆ ನೀಡಿದರು.

ವಿದೇಶಾಂಗ ಇಲಾಖೆ ವೈಫಲ್ಯ

ವಿದೇಶಾಂಗ ಇಲಾಖೆ ವೈಫಲ್ಯದಿಂದಲೇ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಉಕ್ರೇನ್ ರಷ್ಯಾ ಯುದ್ಧದಲ್ಲಿ ಮೃತಪಟ್ಟಿದ್ದಾರೆ ಎಂದು ಆರ್.ಧ್ರುವನಾರಾಯಣ ಆರೋಪಿಸಿದರು.

ಅರ್ಹತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ವಿದೇಶದಲ್ಲಿ ವ್ಯಾಸಂಗ ಮಾಡಲು ತೆರಳುತ್ತಾರೆ ಎಂಬ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಬಿಜೆಪಿ ನಾಯಕರು ಹೇಳಿಕೆ ಕೊಡುವುದರಲ್ಲಿ ನಿಸ್ಸಿಮ್ಮರು. ಬೆಂಕಿ ಹಚ್ಚುವುದು, ಮನೆ ಒಡೆಯುವುದು, ಹುಳಿ ಹಿಂಡುವುದೇ ಬಿಜೆಪಿಯವರ ವೃತ್ತಿ. ಇದನ್ನು ಬ್ರಿಟಿಷರಿಂದ ಕಲಿತುಕೊಂಡಿದ್ದಾರೆ” ಎಂದು ಕುಟುಕಿದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಅಪಾಯ ಎನ್ನುವ ಸಚಿವ ಸುಧಾಕರ್‌ ತಮ್ಮ ಹಳೆಯ ಹೇಳಿಕೆಗಳನ್ನೇ ಮರೆತರೆ? 

ಕಾಂಗ್ರೆಸ್‌ ಪಾದಯಾತ್ರೆಯನ್ನು ಮೇಕೆ ತಿನ್ನುವ ಪಾದಯಾತ್ರೆ ಎಂದಿರುವ ಶಾಸಕ ಸಿ.ಟಿ.ರವಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಸಿ.ಟಿ.ರವಿ ಅವರಿಗೆ ಧಮ್ ಇದ್ದರೆ, ತಾಕತ್ತಿದ್ದರೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿ. 2.5 ವರ್ಷದಿಂದ ಯೋಜನೆಗೆ ಯಾಕೆ ಅನುಮತಿ ಕೊಡಿಸಲಿಲ್ಲ. ಉಡಾಫೆ ಮತ್ತು ಬೇಜಾವಾಬ್ದಾರಿಯಿಂದ ಮಾತಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಇಬ್ಬಗೆ ನೀತಿ

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಇಡೀ ಸರ್ಕಾರವೇ ಖಂಡಿಸಿತು. ಅದೇ ಬೆಳ್ತಂಗಡಿಯ ಕನ್ಯಾಡಿ ಗ್ರಾಮದ ದಲಿತ ಯುವಕ ದಿನೇಶ್ ನಾಯಕ್ ಹತ್ಯೆಗೆ ಒಂದು ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಇದು ಬಿಜೆಪಿಯ ಇಬ್ಬಗೆ ನೀತಿಯನ್ನು ತೋರಿಸುತ್ತದೆ. ಇದು ಮನುವಾದಿ ಸಂಸ್ಕೃತಿ ದೋತ್ಯಕ. ಬಿಜೆಪಿಯ ಇಬ್ಬಗೆ ನೀತಿಯನ್ನು ಖಂಡಿಸುವುದಾಗಿ ತಿಳಿಸಿದರು.

ಎಸ್ಸಿ, ಎಸ್ಟಿ ದೌರ್ಜನ್ಯ ಹೆಚ್ಚಳ

ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ. ಕಳೆದ ವರ್ಷ 50291 ಪ್ರಕರಣ ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 36467 ಅತಿ ಹೆಚ್ಚು ಪ್ರಕರಣ ದಾಖಲಾಗಿವೆ. ಖಾವಿ ಧರಿಸಿದ ಮುಖ್ಯಮಂತ್ರಿ ಇರುವ ರಾಜ್ಯದಲ್ಲಿ ಯಾಕೆ ದೌರ್ಜನ್ಯ ಹೆಚ್ಚಳವಾಯಿತು? ಖಾವಿ ಶಾಂತಿಯ ಸಂಕೇತವಲ್ಲವೇ? 84% ಪ್ರಕರಣಗಳು ಬಾಕಿ ಉಳಿದಿವೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...