Homeಕರ್ನಾಟಕಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

ಆರೋಗ್ಯ ಸಚಿವರ ಮನಸ್ಸು ಅನಾರೋಗ್ಯ: ಕಾಂಗ್ರೆಸ್‌‌‌‌ ನಾಯಕ, ಮಾಜಿ ಸಂಸದ ಆರ್. ಧ್ರುವನಾರಾಯಣ ಕಿಡಿ

- Advertisement -
- Advertisement -

ಬುದ್ಧಿ ಇಲ್ಲದವರಿಗೆ ಬೌದ್ಧಧರ್ಮ ಅರ್ಥವಾಗುವುದಿಲ್ಲ, ಆದ್ದರಿಂದಲೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಂತಹ ಅನಾರೋಗ್ಯ ಮನಸ್ಸಿನವರು ಬೌದ್ಧ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್.ಧ್ರುವನಾರಾಯಣ ಬುಧವಾರ ಮೈಸೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಬಳ್ಳಾಪುರದಲ್ಲಿ ಬ್ರಾಹ್ಮಣ ಸಮಾಜದ ಕಾರ್ಯಕ್ರಮದಲ್ಲಿ ಬೌದ್ಧ ಧರ್ಮದಿಂದ ಭಾರತಕ್ಕೆ ಅಪಾಯವಿತ್ತು ಎಂದು ಇನ್ನೊಂದು ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಮನಸ್ಸು ಅನಾರೋಗ್ಯದಿಂದ ತುಂಬಿ ತುಳುಕುತ್ತಿದೆ ಎಂದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಭಾರತಕ್ಕೆ ಅಪಾಯ: ಸಚಿವ ಸುಧಾಕರ್‌ 

“ಅರ್ಟಿಕಲ್ 15 ಪ್ರಕಾರ ಯಾವುದೇ ಧರ್ಮ, ಜಾತಿ, ವ್ಯಕ್ತಿಯನ್ನು  ನಿಂದಿಸುವುದು ಅಪರಾಧ. ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವರು ಇನ್ನೊಬ್ಬರನ್ನು ಮೆಚ್ಚಿಸಲು ಅವಹೇಳನ ಮಾಡಿದ್ದಾರೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿಶ್ವಸಂಸ್ಥೆ ಪ್ರವಾಸದ ವೇಳೆ ‘ನಾನು ಬುದ್ಧನ ನಾಡಿನಿಂದ ಬಂದವರೆಂದು’ ಹೇಳುತ್ತಾರೆ. ಆದರೆ ಕರ್ನಾಟಕದ ಅನಾರೋಗ್ಯ ಮಂತ್ರಿ ಬುದ್ಧಿ ಇಲ್ಲದಂತೆ ಮಾತಾಡುತ್ತಾರೆ.
ಬೌದ್ಧ ಧರ್ಮ ಭಾರತದಲ್ಲಿ ಹುಟ್ಟಿ ಹೊರ ದೇಶದಲ್ಲಿ ವಿಶಾಲವಾಗಿ ಬೆಳೆದಿದೆ. ಬೌದ್ಧ ಧಮ್ಮದ ಸಾರ ಪ್ರೀತಿ, ಕರುಣೆ, ದಯೆ, ಸೌಹಾರ್ದತೆ ಹಾಗೂ ವೈಜ್ಞಾನಿಕ ತಳಹದಿಯಿಂದ ಕೂಡಿದೆ. ನಿಂದಿಸುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಸಚಿವ ಸುಧಾಕರ್ ಕ್ಷಮೆಯಾಚಿಸಲಿ

ಬುದ್ಧರು ಸ್ಥಾಪಿಸಿರುವ ಧಮ್ಮದ ಕುರಿತು ಅವಹೇಳನಕಾರಿಯಾಗಿ ಮಾತಾಡಿರುವ ಸಚಿವ ಡಾ.ಕೆ.ಸುಧಾಕರ್ ಕೂಡಲೇ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗುತ್ತದೆಂದು ಧ್ರುವ ನಾರಾಯಣ ಅವರು ಎಚ್ಚರಿಕೆ ನೀಡಿದರು.

ವಿದೇಶಾಂಗ ಇಲಾಖೆ ವೈಫಲ್ಯ

ವಿದೇಶಾಂಗ ಇಲಾಖೆ ವೈಫಲ್ಯದಿಂದಲೇ ಕರ್ನಾಟಕದ ನವೀನ್ ಎಂಬ ವಿದ್ಯಾರ್ಥಿ ಉಕ್ರೇನ್ ರಷ್ಯಾ ಯುದ್ಧದಲ್ಲಿ ಮೃತಪಟ್ಟಿದ್ದಾರೆ ಎಂದು ಆರ್.ಧ್ರುವನಾರಾಯಣ ಆರೋಪಿಸಿದರು.

ಅರ್ಹತಾ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ವಿದೇಶದಲ್ಲಿ ವ್ಯಾಸಂಗ ಮಾಡಲು ತೆರಳುತ್ತಾರೆ ಎಂಬ ಒಕ್ಕೂಟ ಸರ್ಕಾರದ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಬಿಜೆಪಿ ನಾಯಕರು ಹೇಳಿಕೆ ಕೊಡುವುದರಲ್ಲಿ ನಿಸ್ಸಿಮ್ಮರು. ಬೆಂಕಿ ಹಚ್ಚುವುದು, ಮನೆ ಒಡೆಯುವುದು, ಹುಳಿ ಹಿಂಡುವುದೇ ಬಿಜೆಪಿಯವರ ವೃತ್ತಿ. ಇದನ್ನು ಬ್ರಿಟಿಷರಿಂದ ಕಲಿತುಕೊಂಡಿದ್ದಾರೆ” ಎಂದು ಕುಟುಕಿದರು.

ಇದನ್ನೂ ಓದಿ: ಬೌದ್ಧಧರ್ಮದಿಂದ ಅಪಾಯ ಎನ್ನುವ ಸಚಿವ ಸುಧಾಕರ್‌ ತಮ್ಮ ಹಳೆಯ ಹೇಳಿಕೆಗಳನ್ನೇ ಮರೆತರೆ? 

ಕಾಂಗ್ರೆಸ್‌ ಪಾದಯಾತ್ರೆಯನ್ನು ಮೇಕೆ ತಿನ್ನುವ ಪಾದಯಾತ್ರೆ ಎಂದಿರುವ ಶಾಸಕ ಸಿ.ಟಿ.ರವಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಧ್ರುವನಾರಾಯಣ, “ಸಿ.ಟಿ.ರವಿ ಅವರಿಗೆ ಧಮ್ ಇದ್ದರೆ, ತಾಕತ್ತಿದ್ದರೆ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಲಿ. 2.5 ವರ್ಷದಿಂದ ಯೋಜನೆಗೆ ಯಾಕೆ ಅನುಮತಿ ಕೊಡಿಸಲಿಲ್ಲ. ಉಡಾಫೆ ಮತ್ತು ಬೇಜಾವಾಬ್ದಾರಿಯಿಂದ ಮಾತಾಡುವುದನ್ನು ನಿಲ್ಲಿಸಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಇಬ್ಬಗೆ ನೀತಿ

ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದಲ್ಲಿ ಇಡೀ ಸರ್ಕಾರವೇ ಖಂಡಿಸಿತು. ಅದೇ ಬೆಳ್ತಂಗಡಿಯ ಕನ್ಯಾಡಿ ಗ್ರಾಮದ ದಲಿತ ಯುವಕ ದಿನೇಶ್ ನಾಯಕ್ ಹತ್ಯೆಗೆ ಒಂದು ಪ್ರತಿಕ್ರಿಯೆಯನ್ನೂ ನೀಡಲಿಲ್ಲ. ಇದು ಬಿಜೆಪಿಯ ಇಬ್ಬಗೆ ನೀತಿಯನ್ನು ತೋರಿಸುತ್ತದೆ. ಇದು ಮನುವಾದಿ ಸಂಸ್ಕೃತಿ ದೋತ್ಯಕ. ಬಿಜೆಪಿಯ ಇಬ್ಬಗೆ ನೀತಿಯನ್ನು ಖಂಡಿಸುವುದಾಗಿ ತಿಳಿಸಿದರು.

ಎಸ್ಸಿ, ಎಸ್ಟಿ ದೌರ್ಜನ್ಯ ಹೆಚ್ಚಳ

ದೇಶದಲ್ಲಿ ಕಳೆದ ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಿವೆ. ಕಳೆದ ವರ್ಷ 50291 ಪ್ರಕರಣ ದಾಖಲಾಗಿವೆ. ಉತ್ತರ ಪ್ರದೇಶದಲ್ಲಿ 36467 ಅತಿ ಹೆಚ್ಚು ಪ್ರಕರಣ ದಾಖಲಾಗಿವೆ. ಖಾವಿ ಧರಿಸಿದ ಮುಖ್ಯಮಂತ್ರಿ ಇರುವ ರಾಜ್ಯದಲ್ಲಿ ಯಾಕೆ ದೌರ್ಜನ್ಯ ಹೆಚ್ಚಳವಾಯಿತು? ಖಾವಿ ಶಾಂತಿಯ ಸಂಕೇತವಲ್ಲವೇ? 84% ಪ್ರಕರಣಗಳು ಬಾಕಿ ಉಳಿದಿವೆ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಮಹಿಳೆಯರು ಜನ್ಮ ನೀಡಲು ಬಯಸುತ್ತಿಲ್ಲ, ಇದು ಒಳ್ಳೆಯದಲ್ಲ: ಸಚಿವ ಸುಧಾಕರ್‌ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...